Homeಮುಖಪುಟರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; 'ದಿ ವೈರ್' ಸ್ಪಷ್ಟನೆ

ರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; ‘ದಿ ವೈರ್’ ಸ್ಪಷ್ಟನೆ

- Advertisement -
- Advertisement -

ಸೆನ್ಸಾರ್‌ಶಿಪ್ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಸಂಪರ್ಕಿಸಿದ ಸ್ವಲ್ಪ ಸಮಯದ ನಂತರ ತನ್ನ ವೆಬ್‌ಸೈಟ್ ಅನ್ನು ಅನ್‌ಬ್ಲಾಕ್ ಮಾಡಲಾಗಿದೆ ಎಂದು ದಿ ವೈರ್ ನ್ಯೂಸ್ ವೆಬ್‌ಸೈಟ್ ಶನಿವಾರ ತಿಳಿಸಿದೆ. ಸುದ್ದಿ ಪೋರ್ಟಲ್ ಪ್ರಕಾರ, ಬ್ಲಾಕ್ ಅನ್ನು ತೆರವುಗೊಳಿಸಲು ಷರತ್ತಿನಂತೆ ಸಿಎನ್‌ಎನ್ ವರದಿಯನ್ನು ಆಧರಿಸಿದ ಮಾಡಿದ್ದ ಲೇಖನವನ್ನು ತೆಗೆದುಹಾಕುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ತಿಳಿಸಿದೆ.

ರಫೇಲ್ ಜೆಟ್ ಬಗ್ಗೆ ಪ್ರಕಟಿಸಿದ ವರದಿಗೆ ಸಂಬಂಧಿಸಿದ ದೂರಿನ ನಂತರ ತಾಂತ್ರಿಕ ಮಿತಿಗಳನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರವು ಮೇ 9, ಶುಕ್ರವಾರ ದೇಶಾದ್ಯಂತ ದಿ ವೈರ್‌ನ ವೆಬ್‌ಸೈಟ್‌ ನಿರ್ಬಂಧಿಸಿದೆ.

ವೆಬ್‌ಸೈಟ್‌ ಬ್ಲಾಕ್ ಬಳಿಕ ವಿವಾದಿತ ತನಿಖಾ ವರದಿಯನ್ನು ಅಳಿಸಿದ ಬಳಿಕ ಅನ್‌ಬ್ಲಾಕ್ ತೆರವುಗೊಳಸಿಲಾಗಿದೆ. ಈ ಕ್ರಮವನ್ನು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ದಾಳಿ ಎಂದು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಖಂಡಿಸಿದ್ದಾರೆ.

ದಿ ವೈರ್ ಸೈಟ್ ಆಫ್‌ಲೈನ್‌ಗೆ ಹೋದ ನಂತರ, ಹಠಾತ್ ಬ್ಲಾಕ್‌ನ ಹಿಂದಿನ ಕಾರಣಗಳ ಬಗ್ಗೆ ವಿಚಾರಿಸಲು ವರದರಾಜನ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಎರಡನ್ನೂ ಸಂಪರ್ಕಿಸಿದರು.

ವೆಬ್‌ಸೈಟ್ ಈಗ ಮತ್ತೆ ಲಭ್ಯವಿದ್ದರೂ, ದೇಶದ ವಿವಿಧ ಭಾಗಗಳಿಂದ ಮತ್ತು ವಿವಿಧ ನೆಟ್‌ವರ್ಕ್‌ಗಳಾದ್ಯಂತ ಬಳಕೆದಾರರು ಸೈಟ್ ಅನ್ನು ಪ್ರವೇಶಿಸುವುದಕ್ಕೆ ಇನ್ನೂ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ದಿ ವೈರ್ ಶನಿವಾರ, ಮೇ 10 ರಂದು ಹೇಳಿದೆ.

ದಿ ವೈರ್‌ನ ಹೇಳಿಕೆಯ ಪ್ರಕಾರ, ಎಂಐಬಿ ಮೇ 9 ರಂದು ಪ್ರತಿಕ್ರಿಯಿಸಿ, ತಾಂತ್ರಿಕ ಮಿತಿಗಳು ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸುವಂತೆ ಒತ್ತಾಯಿಸಿವೆ ಎಂದು ಹೇಳಿಕೊಂಡಿದೆ.

ಎಚ್‌ಟಿಟಿಪಿಎಸ್‌ (HTTPS) ಪ್ರೋಟೋಕಾಲ್‌ಗಳ ಸ್ವರೂಪದಿಂದಾಗಿ, ಅವರು ಪ್ರತ್ಯೇಕ ವೆಬ್ ಪುಟಗಳನ್ನು ನಿರ್ಬಂಧಿಸಲು ಅಸಮರ್ಥರಾಗಿದ್ದಾರೆ. ಸಂಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು ಎಂದು ಸಚಿವಾಲಯ ವಿವರಿಸಿದೆ. “ಆ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸ ಬೇಕು” ಎಂದು ಎಂಐಬಿಯು ದಿ ವೈರ್ ಅನ್ನು ವಿನಂತಿಸಿತು, ಇದು ಸಚಿವಾಲಯವು ವೆಬ್‌ಸೈಟ್ ಅನ್ನು ಅನಿರ್ಬಂಧಿಸಲು ಅನುವು ಮಾಡಿಕೊಡುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ದಿ ವೈರ್ ಮೇ 9 ರಂದು ರಾತ್ರಿ 10:40 ಕ್ಕೆ ವಿವಾದಾತ್ಮಕ ವರದಿಯನ್ನು ತೆಗೆದುಹಾಕಿರುವುದಾಗಿ ಅಧಿಕಾರಿಗಳಿಗೆ ತಿಳಿಸಿತು. ತನ್ನ ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸುವುದು ತನ್ನ ಆದ್ಯತೆ ಎಂದು ಒತ್ತಿ ಹೇಳಿತು. ಈ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ; ಸೂಕ್ತ ಪರಿಹಾರಗಳನ್ನು ಪಡೆಯಲು ಭಾರತದ ಸಂವಿಧಾನದ ಅಡಿಯಲ್ಲಿ ನಮ್ಮ ಹಕ್ಕುಗಳನ್ನು ಕಾಯ್ದಿರಿಸಿದೆ ಎಂದು ಒತ್ತಿ ಹೇಳಿದರು.

ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ದಿ ವೈರಸ್ ವಾದಿಸಿತು. ಏಕೆಂದರೆ, ಎಂಐಬಿ ಪೂರ್ವ ಸೂಚನೆ ನೀಡಲು ಅಥವಾ ದಿ ವೈರ್‌ಗೆ ತನ್ನ ನಿಲುವನ್ನು ಮಂಡಿಸಲು ಅವಕಾಶವನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿದರು.

ದಿ ವೈರ್ ವರದಿಯನ್ನು ತೆಗೆದುಹಾಕುವಂತೆ ಅಂತರ-ಇಲಾಖೆಯ ಸಮಿತಿಯ ವಿನಂತಿಯನ್ನು ಅನುಸರಿಸಲು ನಿರಾಕರಿಸಿದ್ದರೆ ಮಾತ್ರ ನಿರ್ಬಂಧಿಸುವುದನ್ನು ಸಮರ್ಥಿಸಬಹುದಿತ್ತು ಎಂದು ಸಿದ್ಧಾರ್ಥ್ ವರದರಾಜನ್ ಗಮನಸೆಳೆದರು.

ವರದಿಯನ್ನು ಮೇ 8 ರಂದು ಪ್ರಕಟಿಸಲಾಗಿದೆ, ಅದರಲ್ಲಿರುವ ಮಾಹಿತಿಯು ಈಗಾಗಲೇ 12 ಗಂಟೆಗಳಿಗೂ ಹೆಚ್ಚು ಕಾಲ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಅವರು ಒತ್ತಿ ಹೇಳಿದರು. ಅದರಲ್ಲಿ ಭಾರತದಲ್ಲಿ ಇನ್ನೂ ಲಭ್ಯವಿರುವ ಸಿಎನ್‌ಎನ್‌ ವರದಿಯೂ ಸೇರಿದೆ. “ಸರ್ಕಾರವು ನಮ್ಮ ಸುದ್ದಿಯನ್ನು ಅಳಿಸಲು ಮತ್ತು ಪ್ರಕಟಣೆಯ ನಂತರ 24 ಗಂಟೆಗಳಿಗಿಂತ ಹೆಚ್ಚು ಕಾಲ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಏಕೆ ಬಯಸುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ, ನಮಗೆ ಯಾವುದೇ ಸೂಚನೆ ನೀಡಲಾಗಿಲ್ಲ, ನಮ್ಮ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿಲ್ಲ” ಎಂದು ಅವರು ಹೇಳಿದರು.

 ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ, ನಮ್ಮ ಸಶಸ್ತ್ರ ಪಡೆಗಳು ಪ್ರತಿಕ್ರಿಯಿಸಿವೆ: ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯಲ್ಲಿ ವಿಕ್ರಮ್ ಮಿಶ್ರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...