Homeಮುಖಪುಟರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; 'ದಿ ವೈರ್' ಸ್ಪಷ್ಟನೆ

ರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; ‘ದಿ ವೈರ್’ ಸ್ಪಷ್ಟನೆ

- Advertisement -
- Advertisement -

ಸೆನ್ಸಾರ್‌ಶಿಪ್ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಸಂಪರ್ಕಿಸಿದ ಸ್ವಲ್ಪ ಸಮಯದ ನಂತರ ತನ್ನ ವೆಬ್‌ಸೈಟ್ ಅನ್ನು ಅನ್‌ಬ್ಲಾಕ್ ಮಾಡಲಾಗಿದೆ ಎಂದು ದಿ ವೈರ್ ನ್ಯೂಸ್ ವೆಬ್‌ಸೈಟ್ ಶನಿವಾರ ತಿಳಿಸಿದೆ. ಸುದ್ದಿ ಪೋರ್ಟಲ್ ಪ್ರಕಾರ, ಬ್ಲಾಕ್ ಅನ್ನು ತೆರವುಗೊಳಿಸಲು ಷರತ್ತಿನಂತೆ ಸಿಎನ್‌ಎನ್ ವರದಿಯನ್ನು ಆಧರಿಸಿದ ಮಾಡಿದ್ದ ಲೇಖನವನ್ನು ತೆಗೆದುಹಾಕುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ತಿಳಿಸಿದೆ.

ರಫೇಲ್ ಜೆಟ್ ಬಗ್ಗೆ ಪ್ರಕಟಿಸಿದ ವರದಿಗೆ ಸಂಬಂಧಿಸಿದ ದೂರಿನ ನಂತರ ತಾಂತ್ರಿಕ ಮಿತಿಗಳನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರವು ಮೇ 9, ಶುಕ್ರವಾರ ದೇಶಾದ್ಯಂತ ದಿ ವೈರ್‌ನ ವೆಬ್‌ಸೈಟ್‌ ನಿರ್ಬಂಧಿಸಿದೆ.

ವೆಬ್‌ಸೈಟ್‌ ಬ್ಲಾಕ್ ಬಳಿಕ ವಿವಾದಿತ ತನಿಖಾ ವರದಿಯನ್ನು ಅಳಿಸಿದ ಬಳಿಕ ಅನ್‌ಬ್ಲಾಕ್ ತೆರವುಗೊಳಸಿಲಾಗಿದೆ. ಈ ಕ್ರಮವನ್ನು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ದಾಳಿ ಎಂದು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಖಂಡಿಸಿದ್ದಾರೆ.

ದಿ ವೈರ್ ಸೈಟ್ ಆಫ್‌ಲೈನ್‌ಗೆ ಹೋದ ನಂತರ, ಹಠಾತ್ ಬ್ಲಾಕ್‌ನ ಹಿಂದಿನ ಕಾರಣಗಳ ಬಗ್ಗೆ ವಿಚಾರಿಸಲು ವರದರಾಜನ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಎರಡನ್ನೂ ಸಂಪರ್ಕಿಸಿದರು.

ವೆಬ್‌ಸೈಟ್ ಈಗ ಮತ್ತೆ ಲಭ್ಯವಿದ್ದರೂ, ದೇಶದ ವಿವಿಧ ಭಾಗಗಳಿಂದ ಮತ್ತು ವಿವಿಧ ನೆಟ್‌ವರ್ಕ್‌ಗಳಾದ್ಯಂತ ಬಳಕೆದಾರರು ಸೈಟ್ ಅನ್ನು ಪ್ರವೇಶಿಸುವುದಕ್ಕೆ ಇನ್ನೂ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ದಿ ವೈರ್ ಶನಿವಾರ, ಮೇ 10 ರಂದು ಹೇಳಿದೆ.

ದಿ ವೈರ್‌ನ ಹೇಳಿಕೆಯ ಪ್ರಕಾರ, ಎಂಐಬಿ ಮೇ 9 ರಂದು ಪ್ರತಿಕ್ರಿಯಿಸಿ, ತಾಂತ್ರಿಕ ಮಿತಿಗಳು ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸುವಂತೆ ಒತ್ತಾಯಿಸಿವೆ ಎಂದು ಹೇಳಿಕೊಂಡಿದೆ.

ಎಚ್‌ಟಿಟಿಪಿಎಸ್‌ (HTTPS) ಪ್ರೋಟೋಕಾಲ್‌ಗಳ ಸ್ವರೂಪದಿಂದಾಗಿ, ಅವರು ಪ್ರತ್ಯೇಕ ವೆಬ್ ಪುಟಗಳನ್ನು ನಿರ್ಬಂಧಿಸಲು ಅಸಮರ್ಥರಾಗಿದ್ದಾರೆ. ಸಂಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು ಎಂದು ಸಚಿವಾಲಯ ವಿವರಿಸಿದೆ. “ಆ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸ ಬೇಕು” ಎಂದು ಎಂಐಬಿಯು ದಿ ವೈರ್ ಅನ್ನು ವಿನಂತಿಸಿತು, ಇದು ಸಚಿವಾಲಯವು ವೆಬ್‌ಸೈಟ್ ಅನ್ನು ಅನಿರ್ಬಂಧಿಸಲು ಅನುವು ಮಾಡಿಕೊಡುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ದಿ ವೈರ್ ಮೇ 9 ರಂದು ರಾತ್ರಿ 10:40 ಕ್ಕೆ ವಿವಾದಾತ್ಮಕ ವರದಿಯನ್ನು ತೆಗೆದುಹಾಕಿರುವುದಾಗಿ ಅಧಿಕಾರಿಗಳಿಗೆ ತಿಳಿಸಿತು. ತನ್ನ ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸುವುದು ತನ್ನ ಆದ್ಯತೆ ಎಂದು ಒತ್ತಿ ಹೇಳಿತು. ಈ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ; ಸೂಕ್ತ ಪರಿಹಾರಗಳನ್ನು ಪಡೆಯಲು ಭಾರತದ ಸಂವಿಧಾನದ ಅಡಿಯಲ್ಲಿ ನಮ್ಮ ಹಕ್ಕುಗಳನ್ನು ಕಾಯ್ದಿರಿಸಿದೆ ಎಂದು ಒತ್ತಿ ಹೇಳಿದರು.

ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ದಿ ವೈರಸ್ ವಾದಿಸಿತು. ಏಕೆಂದರೆ, ಎಂಐಬಿ ಪೂರ್ವ ಸೂಚನೆ ನೀಡಲು ಅಥವಾ ದಿ ವೈರ್‌ಗೆ ತನ್ನ ನಿಲುವನ್ನು ಮಂಡಿಸಲು ಅವಕಾಶವನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿದರು.

ದಿ ವೈರ್ ವರದಿಯನ್ನು ತೆಗೆದುಹಾಕುವಂತೆ ಅಂತರ-ಇಲಾಖೆಯ ಸಮಿತಿಯ ವಿನಂತಿಯನ್ನು ಅನುಸರಿಸಲು ನಿರಾಕರಿಸಿದ್ದರೆ ಮಾತ್ರ ನಿರ್ಬಂಧಿಸುವುದನ್ನು ಸಮರ್ಥಿಸಬಹುದಿತ್ತು ಎಂದು ಸಿದ್ಧಾರ್ಥ್ ವರದರಾಜನ್ ಗಮನಸೆಳೆದರು.

ವರದಿಯನ್ನು ಮೇ 8 ರಂದು ಪ್ರಕಟಿಸಲಾಗಿದೆ, ಅದರಲ್ಲಿರುವ ಮಾಹಿತಿಯು ಈಗಾಗಲೇ 12 ಗಂಟೆಗಳಿಗೂ ಹೆಚ್ಚು ಕಾಲ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಅವರು ಒತ್ತಿ ಹೇಳಿದರು. ಅದರಲ್ಲಿ ಭಾರತದಲ್ಲಿ ಇನ್ನೂ ಲಭ್ಯವಿರುವ ಸಿಎನ್‌ಎನ್‌ ವರದಿಯೂ ಸೇರಿದೆ. “ಸರ್ಕಾರವು ನಮ್ಮ ಸುದ್ದಿಯನ್ನು ಅಳಿಸಲು ಮತ್ತು ಪ್ರಕಟಣೆಯ ನಂತರ 24 ಗಂಟೆಗಳಿಗಿಂತ ಹೆಚ್ಚು ಕಾಲ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಏಕೆ ಬಯಸುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ, ನಮಗೆ ಯಾವುದೇ ಸೂಚನೆ ನೀಡಲಾಗಿಲ್ಲ, ನಮ್ಮ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿಲ್ಲ” ಎಂದು ಅವರು ಹೇಳಿದರು.

 ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ, ನಮ್ಮ ಸಶಸ್ತ್ರ ಪಡೆಗಳು ಪ್ರತಿಕ್ರಿಯಿಸಿವೆ: ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯಲ್ಲಿ ವಿಕ್ರಮ್ ಮಿಶ್ರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...