Homeಮುಖಪುಟ’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದೆ.

- Advertisement -
- Advertisement -

ನಿರ್ಭೀತ ಹಾಗೂ ಗುಣಮಟ್ಟದ ಪತ್ರಿಕೋದ್ಯಮಕ್ಕೆ ಹೆಸರಾದ, ಅಭಿವ್ಯಕ್ತಿಯ ಗಟ್ಟಿ ದನಿಯಾಗಿ, ಹಣಕಾಸು ಲಾಭದಾಯಕ ಗುರಿಗಳಿಲ್ಲದೆ ಪತ್ರಿಕೋದ್ಯಮದಲ್ಲಿ ಹೊಸ ಭಾಷ್ಯ ಬರೆದಿರುವ ಭಾರತದ “ದಿ ವೈರ್‌” ಸುದ್ದಿ ಜಾಲತಾಣವು, ಅಂತಾರಾಷ್ಟ್ರೀಯ ಪತ್ರಿಕಾ ಸಂಸ್ಥೆ (ಐಪಿಐ) ನೀಡುವ “2021 ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ”ಗೆ ಭಾಜನವಾಗಿದೆ.

ಒಂದು ದೇಶ ಅಥವಾ ಪ್ರದೇಶದಲ್ಲಿ ಸ್ವತಂತ್ರವಾಗಿ ಪತ್ರಿಕೋದ್ಯಮ ನಡೆಸುತ್ತಾ, ಜನರಿಗೆ ನಿಖರ ಸುದ್ದಿಗಳನ್ನು ನೀಡುತ್ತಿರುವ ಸಂಸ್ಥೆಗಳನ್ನು ಗುರುತಿಸಲೆಂದು 1996ರಲ್ಲಿ ಐಪಿಐ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿಯನ್ನು ಕೋಪೆನ್‌ಹೆಗನ್‌ ಮೂಲದ ಇಂಟರ್‌ ನ್ಯಾಷನಲ್‌ ಮೀಡಿಯಾ ಸಪೋರ್ಟ್ (ಐಎಂಎಸ್‌) ಸಹಭಾಗಿತ್ವದಲ್ಲಿ ನೀಡಲಾಗುತ್ತಿದೆ.

ಆಸ್ಟ್ರೇಲಿಯದ ವಿಯೆನ್ನದಲ್ಲಿ ಐಪಿಐ ವಾರ್ಷಿಕ ಮಹೋತ್ಸವ (ವರ್ಡ್ ಕಾಂಗ್ರೆಸ್) ಸೆ.16ರಂದು ನಡೆಯಲಿದ್ದು, ಈ ಬಾರಿಯ ಪೊಯೊನೀರ್‌ ಪ್ರಶಸ್ತಿಯನ್ನು ಐಪಿಎಸ್‌ನ ವರ್ಡ್ ಫ್ರೀಡಮ್‌ ಹಿರೋ ಪ್ರಶಸ್ತಿಯೊಂದಿಗೆ ಪ್ರದಾನ ಮಾಡುತ್ತಿರುವುದು ವಿಶೇಷ.

“ದಿ ವೈರ್‌” ಹುಟ್ಟಿದ ಬಗೆ

ವಿಶೇಷ ಪ್ರಶಸ್ತಿಗೆ ಭಾಜನವಾಗಿರುವ “ದಿ ವೈರ್‌” 2015ರಲ್ಲಿ ಸ್ಥಾಪನೆಯಾಯಿತು. ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಪಳಗಿದ್ದ ಸಿದ್ಧಾರ್ಥ್ ವರದರಾಜನ್‌, ಎಂ.ಕೆ.ವೇಣು ಮತ್ತು ಸಿದ್ಧಾರ್ಥ್ ಭಾಟಿಯಾ ದಿ ವೈರ್‌ನ ಸಂಸ್ಥಾಪಕರು. ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿತು. ಬದ್ಧತೆಗೆ ಎಂದಿಗೂ ಓದುಗರು ಬೆಲೆ ಕೊಡುತ್ತಾರೆ ಎಂಬುದನ್ನು ದಿ ವೈರ್‌ ಸಾಬೀತು ಮಾಡಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದ್ದು ದಿ ವೈರ್..

“ಉತ್ತಮ ಪತ್ರಿಕೋದ್ಯಮ ಎಂದಿಗೂ ಉಳಿಯುತ್ತದೆ ಮತ್ತು ಜನರು ಅದನ್ನು ಬೆಳೆಸುತ್ತಾರೆ. ಸಂಪಾದಕೀಯ ನೀತಿ ಮತ್ತು ಆರ್ಥಿಕ ನೀತಿ ಸ್ವತಂತ್ರವಾಗಿದ್ದಾಗ ಮಾತ್ರ ಇದು ಸಾಧ್ಯ. ಉತ್ತಮ ಪತ್ರಿಕೋದ್ಯಮವಲ್ಲದೇ ಬೇರೆ ಯಾವುದೇ ಉದ್ದೇಶವಿಲ್ಲದ ಪತ್ರಿಕೋದ್ಯಮವನ್ನು ಓದುಗರು ಹಾಗೂ ನಾಗರಿಕರು ಬೆಳೆಸುತ್ತಾರೆ. ಇದು ವೈರ್‌ ನೀಡಿರುವ ಸಂಸ್ಥಾಪನಾ ಪ್ರಮಾಣ” ಎಂದು ಸಂಸ್ಥೆಯ ಸಂಸ್ಥಾಪಕ ಸಂಪಾದಕರು ನೆನಪಿಸಿದ್ದಾರೆ.

ದಿ ವೈರ್‌ ಇಂಗ್ಲಿಷ್‌, ಹಿಂದಿ, ಉರ್ದು ಮತ್ತು ಮರಾಠಿ ಭಾಷೆಯಲ್ಲಿ ವರದಿಗಳನ್ನು ಮಾಡುತ್ತಿದ್ದು, ಅತಿದೊಡ್ಡ ಸಂಸ್ಥೆಯಾಗಿ ಬೆಳೆದುನಿಂತಿದೆ. ಅಧಿಕಾರಶಾಹಿಯ ನೀತಿಗಳು ಹೇಗೆ ದೇಶದ ಜನಜೀವನದ ಮೇಲೆ ದಿನೇದಿನೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿವೆ ಎಂಬುದನ್ನು ದಿ ವೈರ್‌ ಸೂಕ್ಷ್ಮವಾಗಿ ಬಿತ್ತರಿಸಿ, ಪತ್ರಿಕೋದ್ಯಮದಲ್ಲಿನ ದೊಡ್ಡ ಕೊರತೆಯನ್ನು ತುಂಬುತ್ತಿದೆ. ದಿ ವೈರ್‌ನ ಯೂಟ್ಯೂಬ್‌ ಚಾನೆಲ್‌ 35 ಲಕ್ಷ ಚಂದಾದಾರರನ್ನು ಹೊಂದಿದ್ದು, ಪ್ರತಿ ತಿಂಗಳು 2 ಕೋಟಿಗೂ ಅಧಿಕ ವೀಕ್ಷಣೆ ಪಡೆಯುತ್ತಿರುವುದು ದಾಖಲೆಯೇ ಸರಿ.

ಭಾರತದ ಪತ್ರಿಕೋದ್ಯಮ ಕುಸಿಯುತ್ತಿರುವ ಕಾಲದಲ್ಲಿ ದಿ ವೈರ್‌, ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಡುತ್ತಿದೆ. ಮತ್ತೊಂದೆದೆ ಸರ್ಕಾರದ ಕಿರುಕುಳವನ್ನೂ ಸಹಿಸಿಕೊಳ್ಳಬೇಕಾಗಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆಯ ಸಂಬಂಧದ ವರದಿಗಾರಿಕೆ ಒಳಗೊಂಡಂತೆ ಕಳೆದ ವರ್ಷ ಮೂರು ಪ್ರಕರಣಗಳನ್ನು ದಿ ವೈರ್‌ ವರದಿಗಾರರ ಮೇಲೆ ದಾಖಲಿಸಲಾಗಿತ್ತು. ಧಾರ್ಮಿಕ ಮುಖಂಡರು ಕೋವಿಡ್‌ 19 ನಿಯಮಗಳನ್ನು ಉಲ್ಲಂಘಿಸಿದ ಕುರಿತು ವರದಿ ಮಾಡಿದ್ದಕ್ಕಾಗಿ ದಿ ವೈರ್‌ ಮತ್ತು ವರದರಾಜನ್‌ ಅವರ ಮೇಲೆ “ಭೀತಿ ಹರಡುವಿಕೆ’ಯ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ 14 ಮಾನನಷ್ಟ ಮೊಕದ್ದಮೆಗಳನ್ನು ದಿ ವೈರ್‌ ಎದುರಿಸಿದ್ದು, ಆಡಳಿತ ಪಕ್ಷ 1.4 ಬಿಲಿಯನ್‌ ಡಾಲರ್‌ಗಳಷ್ಟು ಪರಿಹಾರವನ್ನು ನೀಡಬೇಕೆಂದು ಬೇಡಿಕೆ ಇಟ್ಟಿತ್ತು.

ಸರ್ಕಾರದ ಹದ್ದಿನ ಕಣ್ಣು ದಿ ವೈರ್‌ ಮೇಲೆ ಇತ್ತೆಂಬುದನ್ನು ಪೆಗಾಗಸ್‌ ಪ್ರಕರಣ ಬಹಿರಂಗ ಮಾಡಿತ್ತು. ವರದರಾಜನ್‌ ಮತ್ತು ವೇಣು ಅವರ ಮೊಬೈಲ್‌ನಲ್ಲಿ ಇಸ್ರೇಲಿ ಮೂಲದ ಸ್ಪೈವೇರ್‌ ಸ್ಥಾಪಿಸಲಾಗಿತ್ತು. ನಂತರ ದಿ ವೈರ್‌ ಫಾರ್‍ಬಿಡನ್‌ ಸ್ಟೋರಿಸ್‌ನೊಂದಿಗೆ ಸೇರಿ ಫೆಗಾಸಸ್‌ ದಾಳಿಯ ಸಂಭಾವಿತ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.


ಇದನ್ನೂ ಓದಿ; ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...