Homeಮುಖಪುಟ’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದೆ.

- Advertisement -
- Advertisement -

ನಿರ್ಭೀತ ಹಾಗೂ ಗುಣಮಟ್ಟದ ಪತ್ರಿಕೋದ್ಯಮಕ್ಕೆ ಹೆಸರಾದ, ಅಭಿವ್ಯಕ್ತಿಯ ಗಟ್ಟಿ ದನಿಯಾಗಿ, ಹಣಕಾಸು ಲಾಭದಾಯಕ ಗುರಿಗಳಿಲ್ಲದೆ ಪತ್ರಿಕೋದ್ಯಮದಲ್ಲಿ ಹೊಸ ಭಾಷ್ಯ ಬರೆದಿರುವ ಭಾರತದ “ದಿ ವೈರ್‌” ಸುದ್ದಿ ಜಾಲತಾಣವು, ಅಂತಾರಾಷ್ಟ್ರೀಯ ಪತ್ರಿಕಾ ಸಂಸ್ಥೆ (ಐಪಿಐ) ನೀಡುವ “2021 ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ”ಗೆ ಭಾಜನವಾಗಿದೆ.

ಒಂದು ದೇಶ ಅಥವಾ ಪ್ರದೇಶದಲ್ಲಿ ಸ್ವತಂತ್ರವಾಗಿ ಪತ್ರಿಕೋದ್ಯಮ ನಡೆಸುತ್ತಾ, ಜನರಿಗೆ ನಿಖರ ಸುದ್ದಿಗಳನ್ನು ನೀಡುತ್ತಿರುವ ಸಂಸ್ಥೆಗಳನ್ನು ಗುರುತಿಸಲೆಂದು 1996ರಲ್ಲಿ ಐಪಿಐ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿಯನ್ನು ಕೋಪೆನ್‌ಹೆಗನ್‌ ಮೂಲದ ಇಂಟರ್‌ ನ್ಯಾಷನಲ್‌ ಮೀಡಿಯಾ ಸಪೋರ್ಟ್ (ಐಎಂಎಸ್‌) ಸಹಭಾಗಿತ್ವದಲ್ಲಿ ನೀಡಲಾಗುತ್ತಿದೆ.

ಆಸ್ಟ್ರೇಲಿಯದ ವಿಯೆನ್ನದಲ್ಲಿ ಐಪಿಐ ವಾರ್ಷಿಕ ಮಹೋತ್ಸವ (ವರ್ಡ್ ಕಾಂಗ್ರೆಸ್) ಸೆ.16ರಂದು ನಡೆಯಲಿದ್ದು, ಈ ಬಾರಿಯ ಪೊಯೊನೀರ್‌ ಪ್ರಶಸ್ತಿಯನ್ನು ಐಪಿಎಸ್‌ನ ವರ್ಡ್ ಫ್ರೀಡಮ್‌ ಹಿರೋ ಪ್ರಶಸ್ತಿಯೊಂದಿಗೆ ಪ್ರದಾನ ಮಾಡುತ್ತಿರುವುದು ವಿಶೇಷ.

“ದಿ ವೈರ್‌” ಹುಟ್ಟಿದ ಬಗೆ

ವಿಶೇಷ ಪ್ರಶಸ್ತಿಗೆ ಭಾಜನವಾಗಿರುವ “ದಿ ವೈರ್‌” 2015ರಲ್ಲಿ ಸ್ಥಾಪನೆಯಾಯಿತು. ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಪಳಗಿದ್ದ ಸಿದ್ಧಾರ್ಥ್ ವರದರಾಜನ್‌, ಎಂ.ಕೆ.ವೇಣು ಮತ್ತು ಸಿದ್ಧಾರ್ಥ್ ಭಾಟಿಯಾ ದಿ ವೈರ್‌ನ ಸಂಸ್ಥಾಪಕರು. ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿತು. ಬದ್ಧತೆಗೆ ಎಂದಿಗೂ ಓದುಗರು ಬೆಲೆ ಕೊಡುತ್ತಾರೆ ಎಂಬುದನ್ನು ದಿ ವೈರ್‌ ಸಾಬೀತು ಮಾಡಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದ್ದು ದಿ ವೈರ್..

“ಉತ್ತಮ ಪತ್ರಿಕೋದ್ಯಮ ಎಂದಿಗೂ ಉಳಿಯುತ್ತದೆ ಮತ್ತು ಜನರು ಅದನ್ನು ಬೆಳೆಸುತ್ತಾರೆ. ಸಂಪಾದಕೀಯ ನೀತಿ ಮತ್ತು ಆರ್ಥಿಕ ನೀತಿ ಸ್ವತಂತ್ರವಾಗಿದ್ದಾಗ ಮಾತ್ರ ಇದು ಸಾಧ್ಯ. ಉತ್ತಮ ಪತ್ರಿಕೋದ್ಯಮವಲ್ಲದೇ ಬೇರೆ ಯಾವುದೇ ಉದ್ದೇಶವಿಲ್ಲದ ಪತ್ರಿಕೋದ್ಯಮವನ್ನು ಓದುಗರು ಹಾಗೂ ನಾಗರಿಕರು ಬೆಳೆಸುತ್ತಾರೆ. ಇದು ವೈರ್‌ ನೀಡಿರುವ ಸಂಸ್ಥಾಪನಾ ಪ್ರಮಾಣ” ಎಂದು ಸಂಸ್ಥೆಯ ಸಂಸ್ಥಾಪಕ ಸಂಪಾದಕರು ನೆನಪಿಸಿದ್ದಾರೆ.

ದಿ ವೈರ್‌ ಇಂಗ್ಲಿಷ್‌, ಹಿಂದಿ, ಉರ್ದು ಮತ್ತು ಮರಾಠಿ ಭಾಷೆಯಲ್ಲಿ ವರದಿಗಳನ್ನು ಮಾಡುತ್ತಿದ್ದು, ಅತಿದೊಡ್ಡ ಸಂಸ್ಥೆಯಾಗಿ ಬೆಳೆದುನಿಂತಿದೆ. ಅಧಿಕಾರಶಾಹಿಯ ನೀತಿಗಳು ಹೇಗೆ ದೇಶದ ಜನಜೀವನದ ಮೇಲೆ ದಿನೇದಿನೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿವೆ ಎಂಬುದನ್ನು ದಿ ವೈರ್‌ ಸೂಕ್ಷ್ಮವಾಗಿ ಬಿತ್ತರಿಸಿ, ಪತ್ರಿಕೋದ್ಯಮದಲ್ಲಿನ ದೊಡ್ಡ ಕೊರತೆಯನ್ನು ತುಂಬುತ್ತಿದೆ. ದಿ ವೈರ್‌ನ ಯೂಟ್ಯೂಬ್‌ ಚಾನೆಲ್‌ 35 ಲಕ್ಷ ಚಂದಾದಾರರನ್ನು ಹೊಂದಿದ್ದು, ಪ್ರತಿ ತಿಂಗಳು 2 ಕೋಟಿಗೂ ಅಧಿಕ ವೀಕ್ಷಣೆ ಪಡೆಯುತ್ತಿರುವುದು ದಾಖಲೆಯೇ ಸರಿ.

ಭಾರತದ ಪತ್ರಿಕೋದ್ಯಮ ಕುಸಿಯುತ್ತಿರುವ ಕಾಲದಲ್ಲಿ ದಿ ವೈರ್‌, ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಡುತ್ತಿದೆ. ಮತ್ತೊಂದೆದೆ ಸರ್ಕಾರದ ಕಿರುಕುಳವನ್ನೂ ಸಹಿಸಿಕೊಳ್ಳಬೇಕಾಗಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆಯ ಸಂಬಂಧದ ವರದಿಗಾರಿಕೆ ಒಳಗೊಂಡಂತೆ ಕಳೆದ ವರ್ಷ ಮೂರು ಪ್ರಕರಣಗಳನ್ನು ದಿ ವೈರ್‌ ವರದಿಗಾರರ ಮೇಲೆ ದಾಖಲಿಸಲಾಗಿತ್ತು. ಧಾರ್ಮಿಕ ಮುಖಂಡರು ಕೋವಿಡ್‌ 19 ನಿಯಮಗಳನ್ನು ಉಲ್ಲಂಘಿಸಿದ ಕುರಿತು ವರದಿ ಮಾಡಿದ್ದಕ್ಕಾಗಿ ದಿ ವೈರ್‌ ಮತ್ತು ವರದರಾಜನ್‌ ಅವರ ಮೇಲೆ “ಭೀತಿ ಹರಡುವಿಕೆ’ಯ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ 14 ಮಾನನಷ್ಟ ಮೊಕದ್ದಮೆಗಳನ್ನು ದಿ ವೈರ್‌ ಎದುರಿಸಿದ್ದು, ಆಡಳಿತ ಪಕ್ಷ 1.4 ಬಿಲಿಯನ್‌ ಡಾಲರ್‌ಗಳಷ್ಟು ಪರಿಹಾರವನ್ನು ನೀಡಬೇಕೆಂದು ಬೇಡಿಕೆ ಇಟ್ಟಿತ್ತು.

ಸರ್ಕಾರದ ಹದ್ದಿನ ಕಣ್ಣು ದಿ ವೈರ್‌ ಮೇಲೆ ಇತ್ತೆಂಬುದನ್ನು ಪೆಗಾಗಸ್‌ ಪ್ರಕರಣ ಬಹಿರಂಗ ಮಾಡಿತ್ತು. ವರದರಾಜನ್‌ ಮತ್ತು ವೇಣು ಅವರ ಮೊಬೈಲ್‌ನಲ್ಲಿ ಇಸ್ರೇಲಿ ಮೂಲದ ಸ್ಪೈವೇರ್‌ ಸ್ಥಾಪಿಸಲಾಗಿತ್ತು. ನಂತರ ದಿ ವೈರ್‌ ಫಾರ್‍ಬಿಡನ್‌ ಸ್ಟೋರಿಸ್‌ನೊಂದಿಗೆ ಸೇರಿ ಫೆಗಾಸಸ್‌ ದಾಳಿಯ ಸಂಭಾವಿತ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.


ಇದನ್ನೂ ಓದಿ; ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...