Homeಮುಖಪುಟ’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದೆ.

- Advertisement -
- Advertisement -

ನಿರ್ಭೀತ ಹಾಗೂ ಗುಣಮಟ್ಟದ ಪತ್ರಿಕೋದ್ಯಮಕ್ಕೆ ಹೆಸರಾದ, ಅಭಿವ್ಯಕ್ತಿಯ ಗಟ್ಟಿ ದನಿಯಾಗಿ, ಹಣಕಾಸು ಲಾಭದಾಯಕ ಗುರಿಗಳಿಲ್ಲದೆ ಪತ್ರಿಕೋದ್ಯಮದಲ್ಲಿ ಹೊಸ ಭಾಷ್ಯ ಬರೆದಿರುವ ಭಾರತದ “ದಿ ವೈರ್‌” ಸುದ್ದಿ ಜಾಲತಾಣವು, ಅಂತಾರಾಷ್ಟ್ರೀಯ ಪತ್ರಿಕಾ ಸಂಸ್ಥೆ (ಐಪಿಐ) ನೀಡುವ “2021 ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ”ಗೆ ಭಾಜನವಾಗಿದೆ.

ಒಂದು ದೇಶ ಅಥವಾ ಪ್ರದೇಶದಲ್ಲಿ ಸ್ವತಂತ್ರವಾಗಿ ಪತ್ರಿಕೋದ್ಯಮ ನಡೆಸುತ್ತಾ, ಜನರಿಗೆ ನಿಖರ ಸುದ್ದಿಗಳನ್ನು ನೀಡುತ್ತಿರುವ ಸಂಸ್ಥೆಗಳನ್ನು ಗುರುತಿಸಲೆಂದು 1996ರಲ್ಲಿ ಐಪಿಐ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿಯನ್ನು ಕೋಪೆನ್‌ಹೆಗನ್‌ ಮೂಲದ ಇಂಟರ್‌ ನ್ಯಾಷನಲ್‌ ಮೀಡಿಯಾ ಸಪೋರ್ಟ್ (ಐಎಂಎಸ್‌) ಸಹಭಾಗಿತ್ವದಲ್ಲಿ ನೀಡಲಾಗುತ್ತಿದೆ.

ಆಸ್ಟ್ರೇಲಿಯದ ವಿಯೆನ್ನದಲ್ಲಿ ಐಪಿಐ ವಾರ್ಷಿಕ ಮಹೋತ್ಸವ (ವರ್ಡ್ ಕಾಂಗ್ರೆಸ್) ಸೆ.16ರಂದು ನಡೆಯಲಿದ್ದು, ಈ ಬಾರಿಯ ಪೊಯೊನೀರ್‌ ಪ್ರಶಸ್ತಿಯನ್ನು ಐಪಿಎಸ್‌ನ ವರ್ಡ್ ಫ್ರೀಡಮ್‌ ಹಿರೋ ಪ್ರಶಸ್ತಿಯೊಂದಿಗೆ ಪ್ರದಾನ ಮಾಡುತ್ತಿರುವುದು ವಿಶೇಷ.

“ದಿ ವೈರ್‌” ಹುಟ್ಟಿದ ಬಗೆ

ವಿಶೇಷ ಪ್ರಶಸ್ತಿಗೆ ಭಾಜನವಾಗಿರುವ “ದಿ ವೈರ್‌” 2015ರಲ್ಲಿ ಸ್ಥಾಪನೆಯಾಯಿತು. ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಪಳಗಿದ್ದ ಸಿದ್ಧಾರ್ಥ್ ವರದರಾಜನ್‌, ಎಂ.ಕೆ.ವೇಣು ಮತ್ತು ಸಿದ್ಧಾರ್ಥ್ ಭಾಟಿಯಾ ದಿ ವೈರ್‌ನ ಸಂಸ್ಥಾಪಕರು. ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿತು. ಬದ್ಧತೆಗೆ ಎಂದಿಗೂ ಓದುಗರು ಬೆಲೆ ಕೊಡುತ್ತಾರೆ ಎಂಬುದನ್ನು ದಿ ವೈರ್‌ ಸಾಬೀತು ಮಾಡಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದ್ದು ದಿ ವೈರ್..

“ಉತ್ತಮ ಪತ್ರಿಕೋದ್ಯಮ ಎಂದಿಗೂ ಉಳಿಯುತ್ತದೆ ಮತ್ತು ಜನರು ಅದನ್ನು ಬೆಳೆಸುತ್ತಾರೆ. ಸಂಪಾದಕೀಯ ನೀತಿ ಮತ್ತು ಆರ್ಥಿಕ ನೀತಿ ಸ್ವತಂತ್ರವಾಗಿದ್ದಾಗ ಮಾತ್ರ ಇದು ಸಾಧ್ಯ. ಉತ್ತಮ ಪತ್ರಿಕೋದ್ಯಮವಲ್ಲದೇ ಬೇರೆ ಯಾವುದೇ ಉದ್ದೇಶವಿಲ್ಲದ ಪತ್ರಿಕೋದ್ಯಮವನ್ನು ಓದುಗರು ಹಾಗೂ ನಾಗರಿಕರು ಬೆಳೆಸುತ್ತಾರೆ. ಇದು ವೈರ್‌ ನೀಡಿರುವ ಸಂಸ್ಥಾಪನಾ ಪ್ರಮಾಣ” ಎಂದು ಸಂಸ್ಥೆಯ ಸಂಸ್ಥಾಪಕ ಸಂಪಾದಕರು ನೆನಪಿಸಿದ್ದಾರೆ.

ದಿ ವೈರ್‌ ಇಂಗ್ಲಿಷ್‌, ಹಿಂದಿ, ಉರ್ದು ಮತ್ತು ಮರಾಠಿ ಭಾಷೆಯಲ್ಲಿ ವರದಿಗಳನ್ನು ಮಾಡುತ್ತಿದ್ದು, ಅತಿದೊಡ್ಡ ಸಂಸ್ಥೆಯಾಗಿ ಬೆಳೆದುನಿಂತಿದೆ. ಅಧಿಕಾರಶಾಹಿಯ ನೀತಿಗಳು ಹೇಗೆ ದೇಶದ ಜನಜೀವನದ ಮೇಲೆ ದಿನೇದಿನೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿವೆ ಎಂಬುದನ್ನು ದಿ ವೈರ್‌ ಸೂಕ್ಷ್ಮವಾಗಿ ಬಿತ್ತರಿಸಿ, ಪತ್ರಿಕೋದ್ಯಮದಲ್ಲಿನ ದೊಡ್ಡ ಕೊರತೆಯನ್ನು ತುಂಬುತ್ತಿದೆ. ದಿ ವೈರ್‌ನ ಯೂಟ್ಯೂಬ್‌ ಚಾನೆಲ್‌ 35 ಲಕ್ಷ ಚಂದಾದಾರರನ್ನು ಹೊಂದಿದ್ದು, ಪ್ರತಿ ತಿಂಗಳು 2 ಕೋಟಿಗೂ ಅಧಿಕ ವೀಕ್ಷಣೆ ಪಡೆಯುತ್ತಿರುವುದು ದಾಖಲೆಯೇ ಸರಿ.

ಭಾರತದ ಪತ್ರಿಕೋದ್ಯಮ ಕುಸಿಯುತ್ತಿರುವ ಕಾಲದಲ್ಲಿ ದಿ ವೈರ್‌, ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಡುತ್ತಿದೆ. ಮತ್ತೊಂದೆದೆ ಸರ್ಕಾರದ ಕಿರುಕುಳವನ್ನೂ ಸಹಿಸಿಕೊಳ್ಳಬೇಕಾಗಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆಯ ಸಂಬಂಧದ ವರದಿಗಾರಿಕೆ ಒಳಗೊಂಡಂತೆ ಕಳೆದ ವರ್ಷ ಮೂರು ಪ್ರಕರಣಗಳನ್ನು ದಿ ವೈರ್‌ ವರದಿಗಾರರ ಮೇಲೆ ದಾಖಲಿಸಲಾಗಿತ್ತು. ಧಾರ್ಮಿಕ ಮುಖಂಡರು ಕೋವಿಡ್‌ 19 ನಿಯಮಗಳನ್ನು ಉಲ್ಲಂಘಿಸಿದ ಕುರಿತು ವರದಿ ಮಾಡಿದ್ದಕ್ಕಾಗಿ ದಿ ವೈರ್‌ ಮತ್ತು ವರದರಾಜನ್‌ ಅವರ ಮೇಲೆ “ಭೀತಿ ಹರಡುವಿಕೆ’ಯ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ 14 ಮಾನನಷ್ಟ ಮೊಕದ್ದಮೆಗಳನ್ನು ದಿ ವೈರ್‌ ಎದುರಿಸಿದ್ದು, ಆಡಳಿತ ಪಕ್ಷ 1.4 ಬಿಲಿಯನ್‌ ಡಾಲರ್‌ಗಳಷ್ಟು ಪರಿಹಾರವನ್ನು ನೀಡಬೇಕೆಂದು ಬೇಡಿಕೆ ಇಟ್ಟಿತ್ತು.

ಸರ್ಕಾರದ ಹದ್ದಿನ ಕಣ್ಣು ದಿ ವೈರ್‌ ಮೇಲೆ ಇತ್ತೆಂಬುದನ್ನು ಪೆಗಾಗಸ್‌ ಪ್ರಕರಣ ಬಹಿರಂಗ ಮಾಡಿತ್ತು. ವರದರಾಜನ್‌ ಮತ್ತು ವೇಣು ಅವರ ಮೊಬೈಲ್‌ನಲ್ಲಿ ಇಸ್ರೇಲಿ ಮೂಲದ ಸ್ಪೈವೇರ್‌ ಸ್ಥಾಪಿಸಲಾಗಿತ್ತು. ನಂತರ ದಿ ವೈರ್‌ ಫಾರ್‍ಬಿಡನ್‌ ಸ್ಟೋರಿಸ್‌ನೊಂದಿಗೆ ಸೇರಿ ಫೆಗಾಸಸ್‌ ದಾಳಿಯ ಸಂಭಾವಿತ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.


ಇದನ್ನೂ ಓದಿ; ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...