Homeಮುಖಪುಟ’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದೆ.

- Advertisement -
- Advertisement -

ನಿರ್ಭೀತ ಹಾಗೂ ಗುಣಮಟ್ಟದ ಪತ್ರಿಕೋದ್ಯಮಕ್ಕೆ ಹೆಸರಾದ, ಅಭಿವ್ಯಕ್ತಿಯ ಗಟ್ಟಿ ದನಿಯಾಗಿ, ಹಣಕಾಸು ಲಾಭದಾಯಕ ಗುರಿಗಳಿಲ್ಲದೆ ಪತ್ರಿಕೋದ್ಯಮದಲ್ಲಿ ಹೊಸ ಭಾಷ್ಯ ಬರೆದಿರುವ ಭಾರತದ “ದಿ ವೈರ್‌” ಸುದ್ದಿ ಜಾಲತಾಣವು, ಅಂತಾರಾಷ್ಟ್ರೀಯ ಪತ್ರಿಕಾ ಸಂಸ್ಥೆ (ಐಪಿಐ) ನೀಡುವ “2021 ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ”ಗೆ ಭಾಜನವಾಗಿದೆ.

ಒಂದು ದೇಶ ಅಥವಾ ಪ್ರದೇಶದಲ್ಲಿ ಸ್ವತಂತ್ರವಾಗಿ ಪತ್ರಿಕೋದ್ಯಮ ನಡೆಸುತ್ತಾ, ಜನರಿಗೆ ನಿಖರ ಸುದ್ದಿಗಳನ್ನು ನೀಡುತ್ತಿರುವ ಸಂಸ್ಥೆಗಳನ್ನು ಗುರುತಿಸಲೆಂದು 1996ರಲ್ಲಿ ಐಪಿಐ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿಯನ್ನು ಕೋಪೆನ್‌ಹೆಗನ್‌ ಮೂಲದ ಇಂಟರ್‌ ನ್ಯಾಷನಲ್‌ ಮೀಡಿಯಾ ಸಪೋರ್ಟ್ (ಐಎಂಎಸ್‌) ಸಹಭಾಗಿತ್ವದಲ್ಲಿ ನೀಡಲಾಗುತ್ತಿದೆ.

ಆಸ್ಟ್ರೇಲಿಯದ ವಿಯೆನ್ನದಲ್ಲಿ ಐಪಿಐ ವಾರ್ಷಿಕ ಮಹೋತ್ಸವ (ವರ್ಡ್ ಕಾಂಗ್ರೆಸ್) ಸೆ.16ರಂದು ನಡೆಯಲಿದ್ದು, ಈ ಬಾರಿಯ ಪೊಯೊನೀರ್‌ ಪ್ರಶಸ್ತಿಯನ್ನು ಐಪಿಎಸ್‌ನ ವರ್ಡ್ ಫ್ರೀಡಮ್‌ ಹಿರೋ ಪ್ರಶಸ್ತಿಯೊಂದಿಗೆ ಪ್ರದಾನ ಮಾಡುತ್ತಿರುವುದು ವಿಶೇಷ.

“ದಿ ವೈರ್‌” ಹುಟ್ಟಿದ ಬಗೆ

ವಿಶೇಷ ಪ್ರಶಸ್ತಿಗೆ ಭಾಜನವಾಗಿರುವ “ದಿ ವೈರ್‌” 2015ರಲ್ಲಿ ಸ್ಥಾಪನೆಯಾಯಿತು. ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಪಳಗಿದ್ದ ಸಿದ್ಧಾರ್ಥ್ ವರದರಾಜನ್‌, ಎಂ.ಕೆ.ವೇಣು ಮತ್ತು ಸಿದ್ಧಾರ್ಥ್ ಭಾಟಿಯಾ ದಿ ವೈರ್‌ನ ಸಂಸ್ಥಾಪಕರು. ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿತು. ಬದ್ಧತೆಗೆ ಎಂದಿಗೂ ಓದುಗರು ಬೆಲೆ ಕೊಡುತ್ತಾರೆ ಎಂಬುದನ್ನು ದಿ ವೈರ್‌ ಸಾಬೀತು ಮಾಡಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದ್ದು ದಿ ವೈರ್..

“ಉತ್ತಮ ಪತ್ರಿಕೋದ್ಯಮ ಎಂದಿಗೂ ಉಳಿಯುತ್ತದೆ ಮತ್ತು ಜನರು ಅದನ್ನು ಬೆಳೆಸುತ್ತಾರೆ. ಸಂಪಾದಕೀಯ ನೀತಿ ಮತ್ತು ಆರ್ಥಿಕ ನೀತಿ ಸ್ವತಂತ್ರವಾಗಿದ್ದಾಗ ಮಾತ್ರ ಇದು ಸಾಧ್ಯ. ಉತ್ತಮ ಪತ್ರಿಕೋದ್ಯಮವಲ್ಲದೇ ಬೇರೆ ಯಾವುದೇ ಉದ್ದೇಶವಿಲ್ಲದ ಪತ್ರಿಕೋದ್ಯಮವನ್ನು ಓದುಗರು ಹಾಗೂ ನಾಗರಿಕರು ಬೆಳೆಸುತ್ತಾರೆ. ಇದು ವೈರ್‌ ನೀಡಿರುವ ಸಂಸ್ಥಾಪನಾ ಪ್ರಮಾಣ” ಎಂದು ಸಂಸ್ಥೆಯ ಸಂಸ್ಥಾಪಕ ಸಂಪಾದಕರು ನೆನಪಿಸಿದ್ದಾರೆ.

ದಿ ವೈರ್‌ ಇಂಗ್ಲಿಷ್‌, ಹಿಂದಿ, ಉರ್ದು ಮತ್ತು ಮರಾಠಿ ಭಾಷೆಯಲ್ಲಿ ವರದಿಗಳನ್ನು ಮಾಡುತ್ತಿದ್ದು, ಅತಿದೊಡ್ಡ ಸಂಸ್ಥೆಯಾಗಿ ಬೆಳೆದುನಿಂತಿದೆ. ಅಧಿಕಾರಶಾಹಿಯ ನೀತಿಗಳು ಹೇಗೆ ದೇಶದ ಜನಜೀವನದ ಮೇಲೆ ದಿನೇದಿನೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿವೆ ಎಂಬುದನ್ನು ದಿ ವೈರ್‌ ಸೂಕ್ಷ್ಮವಾಗಿ ಬಿತ್ತರಿಸಿ, ಪತ್ರಿಕೋದ್ಯಮದಲ್ಲಿನ ದೊಡ್ಡ ಕೊರತೆಯನ್ನು ತುಂಬುತ್ತಿದೆ. ದಿ ವೈರ್‌ನ ಯೂಟ್ಯೂಬ್‌ ಚಾನೆಲ್‌ 35 ಲಕ್ಷ ಚಂದಾದಾರರನ್ನು ಹೊಂದಿದ್ದು, ಪ್ರತಿ ತಿಂಗಳು 2 ಕೋಟಿಗೂ ಅಧಿಕ ವೀಕ್ಷಣೆ ಪಡೆಯುತ್ತಿರುವುದು ದಾಖಲೆಯೇ ಸರಿ.

ಭಾರತದ ಪತ್ರಿಕೋದ್ಯಮ ಕುಸಿಯುತ್ತಿರುವ ಕಾಲದಲ್ಲಿ ದಿ ವೈರ್‌, ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಡುತ್ತಿದೆ. ಮತ್ತೊಂದೆದೆ ಸರ್ಕಾರದ ಕಿರುಕುಳವನ್ನೂ ಸಹಿಸಿಕೊಳ್ಳಬೇಕಾಗಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆಯ ಸಂಬಂಧದ ವರದಿಗಾರಿಕೆ ಒಳಗೊಂಡಂತೆ ಕಳೆದ ವರ್ಷ ಮೂರು ಪ್ರಕರಣಗಳನ್ನು ದಿ ವೈರ್‌ ವರದಿಗಾರರ ಮೇಲೆ ದಾಖಲಿಸಲಾಗಿತ್ತು. ಧಾರ್ಮಿಕ ಮುಖಂಡರು ಕೋವಿಡ್‌ 19 ನಿಯಮಗಳನ್ನು ಉಲ್ಲಂಘಿಸಿದ ಕುರಿತು ವರದಿ ಮಾಡಿದ್ದಕ್ಕಾಗಿ ದಿ ವೈರ್‌ ಮತ್ತು ವರದರಾಜನ್‌ ಅವರ ಮೇಲೆ “ಭೀತಿ ಹರಡುವಿಕೆ’ಯ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ 14 ಮಾನನಷ್ಟ ಮೊಕದ್ದಮೆಗಳನ್ನು ದಿ ವೈರ್‌ ಎದುರಿಸಿದ್ದು, ಆಡಳಿತ ಪಕ್ಷ 1.4 ಬಿಲಿಯನ್‌ ಡಾಲರ್‌ಗಳಷ್ಟು ಪರಿಹಾರವನ್ನು ನೀಡಬೇಕೆಂದು ಬೇಡಿಕೆ ಇಟ್ಟಿತ್ತು.

ಸರ್ಕಾರದ ಹದ್ದಿನ ಕಣ್ಣು ದಿ ವೈರ್‌ ಮೇಲೆ ಇತ್ತೆಂಬುದನ್ನು ಪೆಗಾಗಸ್‌ ಪ್ರಕರಣ ಬಹಿರಂಗ ಮಾಡಿತ್ತು. ವರದರಾಜನ್‌ ಮತ್ತು ವೇಣು ಅವರ ಮೊಬೈಲ್‌ನಲ್ಲಿ ಇಸ್ರೇಲಿ ಮೂಲದ ಸ್ಪೈವೇರ್‌ ಸ್ಥಾಪಿಸಲಾಗಿತ್ತು. ನಂತರ ದಿ ವೈರ್‌ ಫಾರ್‍ಬಿಡನ್‌ ಸ್ಟೋರಿಸ್‌ನೊಂದಿಗೆ ಸೇರಿ ಫೆಗಾಸಸ್‌ ದಾಳಿಯ ಸಂಭಾವಿತ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.


ಇದನ್ನೂ ಓದಿ; ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...