Homeಮುಖಪುಟ’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದೆ.

- Advertisement -
- Advertisement -

ನಿರ್ಭೀತ ಹಾಗೂ ಗುಣಮಟ್ಟದ ಪತ್ರಿಕೋದ್ಯಮಕ್ಕೆ ಹೆಸರಾದ, ಅಭಿವ್ಯಕ್ತಿಯ ಗಟ್ಟಿ ದನಿಯಾಗಿ, ಹಣಕಾಸು ಲಾಭದಾಯಕ ಗುರಿಗಳಿಲ್ಲದೆ ಪತ್ರಿಕೋದ್ಯಮದಲ್ಲಿ ಹೊಸ ಭಾಷ್ಯ ಬರೆದಿರುವ ಭಾರತದ “ದಿ ವೈರ್‌” ಸುದ್ದಿ ಜಾಲತಾಣವು, ಅಂತಾರಾಷ್ಟ್ರೀಯ ಪತ್ರಿಕಾ ಸಂಸ್ಥೆ (ಐಪಿಐ) ನೀಡುವ “2021 ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ”ಗೆ ಭಾಜನವಾಗಿದೆ.

ಒಂದು ದೇಶ ಅಥವಾ ಪ್ರದೇಶದಲ್ಲಿ ಸ್ವತಂತ್ರವಾಗಿ ಪತ್ರಿಕೋದ್ಯಮ ನಡೆಸುತ್ತಾ, ಜನರಿಗೆ ನಿಖರ ಸುದ್ದಿಗಳನ್ನು ನೀಡುತ್ತಿರುವ ಸಂಸ್ಥೆಗಳನ್ನು ಗುರುತಿಸಲೆಂದು 1996ರಲ್ಲಿ ಐಪಿಐ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿಯನ್ನು ಕೋಪೆನ್‌ಹೆಗನ್‌ ಮೂಲದ ಇಂಟರ್‌ ನ್ಯಾಷನಲ್‌ ಮೀಡಿಯಾ ಸಪೋರ್ಟ್ (ಐಎಂಎಸ್‌) ಸಹಭಾಗಿತ್ವದಲ್ಲಿ ನೀಡಲಾಗುತ್ತಿದೆ.

ಆಸ್ಟ್ರೇಲಿಯದ ವಿಯೆನ್ನದಲ್ಲಿ ಐಪಿಐ ವಾರ್ಷಿಕ ಮಹೋತ್ಸವ (ವರ್ಡ್ ಕಾಂಗ್ರೆಸ್) ಸೆ.16ರಂದು ನಡೆಯಲಿದ್ದು, ಈ ಬಾರಿಯ ಪೊಯೊನೀರ್‌ ಪ್ರಶಸ್ತಿಯನ್ನು ಐಪಿಎಸ್‌ನ ವರ್ಡ್ ಫ್ರೀಡಮ್‌ ಹಿರೋ ಪ್ರಶಸ್ತಿಯೊಂದಿಗೆ ಪ್ರದಾನ ಮಾಡುತ್ತಿರುವುದು ವಿಶೇಷ.

“ದಿ ವೈರ್‌” ಹುಟ್ಟಿದ ಬಗೆ

ವಿಶೇಷ ಪ್ರಶಸ್ತಿಗೆ ಭಾಜನವಾಗಿರುವ “ದಿ ವೈರ್‌” 2015ರಲ್ಲಿ ಸ್ಥಾಪನೆಯಾಯಿತು. ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಪಳಗಿದ್ದ ಸಿದ್ಧಾರ್ಥ್ ವರದರಾಜನ್‌, ಎಂ.ಕೆ.ವೇಣು ಮತ್ತು ಸಿದ್ಧಾರ್ಥ್ ಭಾಟಿಯಾ ದಿ ವೈರ್‌ನ ಸಂಸ್ಥಾಪಕರು. ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿತು. ಬದ್ಧತೆಗೆ ಎಂದಿಗೂ ಓದುಗರು ಬೆಲೆ ಕೊಡುತ್ತಾರೆ ಎಂಬುದನ್ನು ದಿ ವೈರ್‌ ಸಾಬೀತು ಮಾಡಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದ್ದು ದಿ ವೈರ್..

“ಉತ್ತಮ ಪತ್ರಿಕೋದ್ಯಮ ಎಂದಿಗೂ ಉಳಿಯುತ್ತದೆ ಮತ್ತು ಜನರು ಅದನ್ನು ಬೆಳೆಸುತ್ತಾರೆ. ಸಂಪಾದಕೀಯ ನೀತಿ ಮತ್ತು ಆರ್ಥಿಕ ನೀತಿ ಸ್ವತಂತ್ರವಾಗಿದ್ದಾಗ ಮಾತ್ರ ಇದು ಸಾಧ್ಯ. ಉತ್ತಮ ಪತ್ರಿಕೋದ್ಯಮವಲ್ಲದೇ ಬೇರೆ ಯಾವುದೇ ಉದ್ದೇಶವಿಲ್ಲದ ಪತ್ರಿಕೋದ್ಯಮವನ್ನು ಓದುಗರು ಹಾಗೂ ನಾಗರಿಕರು ಬೆಳೆಸುತ್ತಾರೆ. ಇದು ವೈರ್‌ ನೀಡಿರುವ ಸಂಸ್ಥಾಪನಾ ಪ್ರಮಾಣ” ಎಂದು ಸಂಸ್ಥೆಯ ಸಂಸ್ಥಾಪಕ ಸಂಪಾದಕರು ನೆನಪಿಸಿದ್ದಾರೆ.

ದಿ ವೈರ್‌ ಇಂಗ್ಲಿಷ್‌, ಹಿಂದಿ, ಉರ್ದು ಮತ್ತು ಮರಾಠಿ ಭಾಷೆಯಲ್ಲಿ ವರದಿಗಳನ್ನು ಮಾಡುತ್ತಿದ್ದು, ಅತಿದೊಡ್ಡ ಸಂಸ್ಥೆಯಾಗಿ ಬೆಳೆದುನಿಂತಿದೆ. ಅಧಿಕಾರಶಾಹಿಯ ನೀತಿಗಳು ಹೇಗೆ ದೇಶದ ಜನಜೀವನದ ಮೇಲೆ ದಿನೇದಿನೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿವೆ ಎಂಬುದನ್ನು ದಿ ವೈರ್‌ ಸೂಕ್ಷ್ಮವಾಗಿ ಬಿತ್ತರಿಸಿ, ಪತ್ರಿಕೋದ್ಯಮದಲ್ಲಿನ ದೊಡ್ಡ ಕೊರತೆಯನ್ನು ತುಂಬುತ್ತಿದೆ. ದಿ ವೈರ್‌ನ ಯೂಟ್ಯೂಬ್‌ ಚಾನೆಲ್‌ 35 ಲಕ್ಷ ಚಂದಾದಾರರನ್ನು ಹೊಂದಿದ್ದು, ಪ್ರತಿ ತಿಂಗಳು 2 ಕೋಟಿಗೂ ಅಧಿಕ ವೀಕ್ಷಣೆ ಪಡೆಯುತ್ತಿರುವುದು ದಾಖಲೆಯೇ ಸರಿ.

ಭಾರತದ ಪತ್ರಿಕೋದ್ಯಮ ಕುಸಿಯುತ್ತಿರುವ ಕಾಲದಲ್ಲಿ ದಿ ವೈರ್‌, ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಡುತ್ತಿದೆ. ಮತ್ತೊಂದೆದೆ ಸರ್ಕಾರದ ಕಿರುಕುಳವನ್ನೂ ಸಹಿಸಿಕೊಳ್ಳಬೇಕಾಗಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆಯ ಸಂಬಂಧದ ವರದಿಗಾರಿಕೆ ಒಳಗೊಂಡಂತೆ ಕಳೆದ ವರ್ಷ ಮೂರು ಪ್ರಕರಣಗಳನ್ನು ದಿ ವೈರ್‌ ವರದಿಗಾರರ ಮೇಲೆ ದಾಖಲಿಸಲಾಗಿತ್ತು. ಧಾರ್ಮಿಕ ಮುಖಂಡರು ಕೋವಿಡ್‌ 19 ನಿಯಮಗಳನ್ನು ಉಲ್ಲಂಘಿಸಿದ ಕುರಿತು ವರದಿ ಮಾಡಿದ್ದಕ್ಕಾಗಿ ದಿ ವೈರ್‌ ಮತ್ತು ವರದರಾಜನ್‌ ಅವರ ಮೇಲೆ “ಭೀತಿ ಹರಡುವಿಕೆ’ಯ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ 14 ಮಾನನಷ್ಟ ಮೊಕದ್ದಮೆಗಳನ್ನು ದಿ ವೈರ್‌ ಎದುರಿಸಿದ್ದು, ಆಡಳಿತ ಪಕ್ಷ 1.4 ಬಿಲಿಯನ್‌ ಡಾಲರ್‌ಗಳಷ್ಟು ಪರಿಹಾರವನ್ನು ನೀಡಬೇಕೆಂದು ಬೇಡಿಕೆ ಇಟ್ಟಿತ್ತು.

ಸರ್ಕಾರದ ಹದ್ದಿನ ಕಣ್ಣು ದಿ ವೈರ್‌ ಮೇಲೆ ಇತ್ತೆಂಬುದನ್ನು ಪೆಗಾಗಸ್‌ ಪ್ರಕರಣ ಬಹಿರಂಗ ಮಾಡಿತ್ತು. ವರದರಾಜನ್‌ ಮತ್ತು ವೇಣು ಅವರ ಮೊಬೈಲ್‌ನಲ್ಲಿ ಇಸ್ರೇಲಿ ಮೂಲದ ಸ್ಪೈವೇರ್‌ ಸ್ಥಾಪಿಸಲಾಗಿತ್ತು. ನಂತರ ದಿ ವೈರ್‌ ಫಾರ್‍ಬಿಡನ್‌ ಸ್ಟೋರಿಸ್‌ನೊಂದಿಗೆ ಸೇರಿ ಫೆಗಾಸಸ್‌ ದಾಳಿಯ ಸಂಭಾವಿತ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.


ಇದನ್ನೂ ಓದಿ; ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...