Homeಮುಖಪುಟ’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದೆ.

- Advertisement -
- Advertisement -

ನಿರ್ಭೀತ ಹಾಗೂ ಗುಣಮಟ್ಟದ ಪತ್ರಿಕೋದ್ಯಮಕ್ಕೆ ಹೆಸರಾದ, ಅಭಿವ್ಯಕ್ತಿಯ ಗಟ್ಟಿ ದನಿಯಾಗಿ, ಹಣಕಾಸು ಲಾಭದಾಯಕ ಗುರಿಗಳಿಲ್ಲದೆ ಪತ್ರಿಕೋದ್ಯಮದಲ್ಲಿ ಹೊಸ ಭಾಷ್ಯ ಬರೆದಿರುವ ಭಾರತದ “ದಿ ವೈರ್‌” ಸುದ್ದಿ ಜಾಲತಾಣವು, ಅಂತಾರಾಷ್ಟ್ರೀಯ ಪತ್ರಿಕಾ ಸಂಸ್ಥೆ (ಐಪಿಐ) ನೀಡುವ “2021 ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ”ಗೆ ಭಾಜನವಾಗಿದೆ.

ಒಂದು ದೇಶ ಅಥವಾ ಪ್ರದೇಶದಲ್ಲಿ ಸ್ವತಂತ್ರವಾಗಿ ಪತ್ರಿಕೋದ್ಯಮ ನಡೆಸುತ್ತಾ, ಜನರಿಗೆ ನಿಖರ ಸುದ್ದಿಗಳನ್ನು ನೀಡುತ್ತಿರುವ ಸಂಸ್ಥೆಗಳನ್ನು ಗುರುತಿಸಲೆಂದು 1996ರಲ್ಲಿ ಐಪಿಐ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿಯನ್ನು ಕೋಪೆನ್‌ಹೆಗನ್‌ ಮೂಲದ ಇಂಟರ್‌ ನ್ಯಾಷನಲ್‌ ಮೀಡಿಯಾ ಸಪೋರ್ಟ್ (ಐಎಂಎಸ್‌) ಸಹಭಾಗಿತ್ವದಲ್ಲಿ ನೀಡಲಾಗುತ್ತಿದೆ.

ಆಸ್ಟ್ರೇಲಿಯದ ವಿಯೆನ್ನದಲ್ಲಿ ಐಪಿಐ ವಾರ್ಷಿಕ ಮಹೋತ್ಸವ (ವರ್ಡ್ ಕಾಂಗ್ರೆಸ್) ಸೆ.16ರಂದು ನಡೆಯಲಿದ್ದು, ಈ ಬಾರಿಯ ಪೊಯೊನೀರ್‌ ಪ್ರಶಸ್ತಿಯನ್ನು ಐಪಿಎಸ್‌ನ ವರ್ಡ್ ಫ್ರೀಡಮ್‌ ಹಿರೋ ಪ್ರಶಸ್ತಿಯೊಂದಿಗೆ ಪ್ರದಾನ ಮಾಡುತ್ತಿರುವುದು ವಿಶೇಷ.

“ದಿ ವೈರ್‌” ಹುಟ್ಟಿದ ಬಗೆ

ವಿಶೇಷ ಪ್ರಶಸ್ತಿಗೆ ಭಾಜನವಾಗಿರುವ “ದಿ ವೈರ್‌” 2015ರಲ್ಲಿ ಸ್ಥಾಪನೆಯಾಯಿತು. ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಪಳಗಿದ್ದ ಸಿದ್ಧಾರ್ಥ್ ವರದರಾಜನ್‌, ಎಂ.ಕೆ.ವೇಣು ಮತ್ತು ಸಿದ್ಧಾರ್ಥ್ ಭಾಟಿಯಾ ದಿ ವೈರ್‌ನ ಸಂಸ್ಥಾಪಕರು. ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿತು. ಬದ್ಧತೆಗೆ ಎಂದಿಗೂ ಓದುಗರು ಬೆಲೆ ಕೊಡುತ್ತಾರೆ ಎಂಬುದನ್ನು ದಿ ವೈರ್‌ ಸಾಬೀತು ಮಾಡಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದ್ದು ದಿ ವೈರ್..

“ಉತ್ತಮ ಪತ್ರಿಕೋದ್ಯಮ ಎಂದಿಗೂ ಉಳಿಯುತ್ತದೆ ಮತ್ತು ಜನರು ಅದನ್ನು ಬೆಳೆಸುತ್ತಾರೆ. ಸಂಪಾದಕೀಯ ನೀತಿ ಮತ್ತು ಆರ್ಥಿಕ ನೀತಿ ಸ್ವತಂತ್ರವಾಗಿದ್ದಾಗ ಮಾತ್ರ ಇದು ಸಾಧ್ಯ. ಉತ್ತಮ ಪತ್ರಿಕೋದ್ಯಮವಲ್ಲದೇ ಬೇರೆ ಯಾವುದೇ ಉದ್ದೇಶವಿಲ್ಲದ ಪತ್ರಿಕೋದ್ಯಮವನ್ನು ಓದುಗರು ಹಾಗೂ ನಾಗರಿಕರು ಬೆಳೆಸುತ್ತಾರೆ. ಇದು ವೈರ್‌ ನೀಡಿರುವ ಸಂಸ್ಥಾಪನಾ ಪ್ರಮಾಣ” ಎಂದು ಸಂಸ್ಥೆಯ ಸಂಸ್ಥಾಪಕ ಸಂಪಾದಕರು ನೆನಪಿಸಿದ್ದಾರೆ.

ದಿ ವೈರ್‌ ಇಂಗ್ಲಿಷ್‌, ಹಿಂದಿ, ಉರ್ದು ಮತ್ತು ಮರಾಠಿ ಭಾಷೆಯಲ್ಲಿ ವರದಿಗಳನ್ನು ಮಾಡುತ್ತಿದ್ದು, ಅತಿದೊಡ್ಡ ಸಂಸ್ಥೆಯಾಗಿ ಬೆಳೆದುನಿಂತಿದೆ. ಅಧಿಕಾರಶಾಹಿಯ ನೀತಿಗಳು ಹೇಗೆ ದೇಶದ ಜನಜೀವನದ ಮೇಲೆ ದಿನೇದಿನೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿವೆ ಎಂಬುದನ್ನು ದಿ ವೈರ್‌ ಸೂಕ್ಷ್ಮವಾಗಿ ಬಿತ್ತರಿಸಿ, ಪತ್ರಿಕೋದ್ಯಮದಲ್ಲಿನ ದೊಡ್ಡ ಕೊರತೆಯನ್ನು ತುಂಬುತ್ತಿದೆ. ದಿ ವೈರ್‌ನ ಯೂಟ್ಯೂಬ್‌ ಚಾನೆಲ್‌ 35 ಲಕ್ಷ ಚಂದಾದಾರರನ್ನು ಹೊಂದಿದ್ದು, ಪ್ರತಿ ತಿಂಗಳು 2 ಕೋಟಿಗೂ ಅಧಿಕ ವೀಕ್ಷಣೆ ಪಡೆಯುತ್ತಿರುವುದು ದಾಖಲೆಯೇ ಸರಿ.

ಭಾರತದ ಪತ್ರಿಕೋದ್ಯಮ ಕುಸಿಯುತ್ತಿರುವ ಕಾಲದಲ್ಲಿ ದಿ ವೈರ್‌, ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಡುತ್ತಿದೆ. ಮತ್ತೊಂದೆದೆ ಸರ್ಕಾರದ ಕಿರುಕುಳವನ್ನೂ ಸಹಿಸಿಕೊಳ್ಳಬೇಕಾಗಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆಯ ಸಂಬಂಧದ ವರದಿಗಾರಿಕೆ ಒಳಗೊಂಡಂತೆ ಕಳೆದ ವರ್ಷ ಮೂರು ಪ್ರಕರಣಗಳನ್ನು ದಿ ವೈರ್‌ ವರದಿಗಾರರ ಮೇಲೆ ದಾಖಲಿಸಲಾಗಿತ್ತು. ಧಾರ್ಮಿಕ ಮುಖಂಡರು ಕೋವಿಡ್‌ 19 ನಿಯಮಗಳನ್ನು ಉಲ್ಲಂಘಿಸಿದ ಕುರಿತು ವರದಿ ಮಾಡಿದ್ದಕ್ಕಾಗಿ ದಿ ವೈರ್‌ ಮತ್ತು ವರದರಾಜನ್‌ ಅವರ ಮೇಲೆ “ಭೀತಿ ಹರಡುವಿಕೆ’ಯ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ 14 ಮಾನನಷ್ಟ ಮೊಕದ್ದಮೆಗಳನ್ನು ದಿ ವೈರ್‌ ಎದುರಿಸಿದ್ದು, ಆಡಳಿತ ಪಕ್ಷ 1.4 ಬಿಲಿಯನ್‌ ಡಾಲರ್‌ಗಳಷ್ಟು ಪರಿಹಾರವನ್ನು ನೀಡಬೇಕೆಂದು ಬೇಡಿಕೆ ಇಟ್ಟಿತ್ತು.

ಸರ್ಕಾರದ ಹದ್ದಿನ ಕಣ್ಣು ದಿ ವೈರ್‌ ಮೇಲೆ ಇತ್ತೆಂಬುದನ್ನು ಪೆಗಾಗಸ್‌ ಪ್ರಕರಣ ಬಹಿರಂಗ ಮಾಡಿತ್ತು. ವರದರಾಜನ್‌ ಮತ್ತು ವೇಣು ಅವರ ಮೊಬೈಲ್‌ನಲ್ಲಿ ಇಸ್ರೇಲಿ ಮೂಲದ ಸ್ಪೈವೇರ್‌ ಸ್ಥಾಪಿಸಲಾಗಿತ್ತು. ನಂತರ ದಿ ವೈರ್‌ ಫಾರ್‍ಬಿಡನ್‌ ಸ್ಟೋರಿಸ್‌ನೊಂದಿಗೆ ಸೇರಿ ಫೆಗಾಸಸ್‌ ದಾಳಿಯ ಸಂಭಾವಿತ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.


ಇದನ್ನೂ ಓದಿ; ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...