Homeಮುಖಪುಟ’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

’ದಿ ವೈರ್‌’ಗೆ ಅಂತಾರಾಷ್ಟ್ರೀಯ ಮಟ್ಟದ ಗೌರವ; 2021ರ ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ

ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದೆ.

- Advertisement -
- Advertisement -

ನಿರ್ಭೀತ ಹಾಗೂ ಗುಣಮಟ್ಟದ ಪತ್ರಿಕೋದ್ಯಮಕ್ಕೆ ಹೆಸರಾದ, ಅಭಿವ್ಯಕ್ತಿಯ ಗಟ್ಟಿ ದನಿಯಾಗಿ, ಹಣಕಾಸು ಲಾಭದಾಯಕ ಗುರಿಗಳಿಲ್ಲದೆ ಪತ್ರಿಕೋದ್ಯಮದಲ್ಲಿ ಹೊಸ ಭಾಷ್ಯ ಬರೆದಿರುವ ಭಾರತದ “ದಿ ವೈರ್‌” ಸುದ್ದಿ ಜಾಲತಾಣವು, ಅಂತಾರಾಷ್ಟ್ರೀಯ ಪತ್ರಿಕಾ ಸಂಸ್ಥೆ (ಐಪಿಐ) ನೀಡುವ “2021 ಫ್ರೀ ಮೀಡಿಯಾ ಪೊಯೊನೀರ್‌ ಪ್ರಶಸ್ತಿ”ಗೆ ಭಾಜನವಾಗಿದೆ.

ಒಂದು ದೇಶ ಅಥವಾ ಪ್ರದೇಶದಲ್ಲಿ ಸ್ವತಂತ್ರವಾಗಿ ಪತ್ರಿಕೋದ್ಯಮ ನಡೆಸುತ್ತಾ, ಜನರಿಗೆ ನಿಖರ ಸುದ್ದಿಗಳನ್ನು ನೀಡುತ್ತಿರುವ ಸಂಸ್ಥೆಗಳನ್ನು ಗುರುತಿಸಲೆಂದು 1996ರಲ್ಲಿ ಐಪಿಐ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿಯನ್ನು ಕೋಪೆನ್‌ಹೆಗನ್‌ ಮೂಲದ ಇಂಟರ್‌ ನ್ಯಾಷನಲ್‌ ಮೀಡಿಯಾ ಸಪೋರ್ಟ್ (ಐಎಂಎಸ್‌) ಸಹಭಾಗಿತ್ವದಲ್ಲಿ ನೀಡಲಾಗುತ್ತಿದೆ.

ಆಸ್ಟ್ರೇಲಿಯದ ವಿಯೆನ್ನದಲ್ಲಿ ಐಪಿಐ ವಾರ್ಷಿಕ ಮಹೋತ್ಸವ (ವರ್ಡ್ ಕಾಂಗ್ರೆಸ್) ಸೆ.16ರಂದು ನಡೆಯಲಿದ್ದು, ಈ ಬಾರಿಯ ಪೊಯೊನೀರ್‌ ಪ್ರಶಸ್ತಿಯನ್ನು ಐಪಿಎಸ್‌ನ ವರ್ಡ್ ಫ್ರೀಡಮ್‌ ಹಿರೋ ಪ್ರಶಸ್ತಿಯೊಂದಿಗೆ ಪ್ರದಾನ ಮಾಡುತ್ತಿರುವುದು ವಿಶೇಷ.

“ದಿ ವೈರ್‌” ಹುಟ್ಟಿದ ಬಗೆ

ವಿಶೇಷ ಪ್ರಶಸ್ತಿಗೆ ಭಾಜನವಾಗಿರುವ “ದಿ ವೈರ್‌” 2015ರಲ್ಲಿ ಸ್ಥಾಪನೆಯಾಯಿತು. ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಪಳಗಿದ್ದ ಸಿದ್ಧಾರ್ಥ್ ವರದರಾಜನ್‌, ಎಂ.ಕೆ.ವೇಣು ಮತ್ತು ಸಿದ್ಧಾರ್ಥ್ ಭಾಟಿಯಾ ದಿ ವೈರ್‌ನ ಸಂಸ್ಥಾಪಕರು. ಕಾರ್ಪೊರೇಟ್‌ ಪ್ರಧಾನ ಸಾಂಪ್ರದಾಯಿಕ ಮಾದರಿಯನ್ನು ಒಡೆದು, ಓದುಗ ಕೇಂದ್ರಿತ ಪತ್ರಿಕೋದ್ಯಮದತ್ತ ದಿ ವೈರ್‌ ಹೆಜ್ಜೆ ಇಟ್ಟಿತು. ಬದ್ಧತೆಗೆ ಎಂದಿಗೂ ಓದುಗರು ಬೆಲೆ ಕೊಡುತ್ತಾರೆ ಎಂಬುದನ್ನು ದಿ ವೈರ್‌ ಸಾಬೀತು ಮಾಡಿದೆ. ಇತ್ತೀಚೆಗೆ ಪೆಗಾಸಸ್ ಗೂಢಾಚರ್ಯೆನ್ನು ಬಹಿರಂಗಗೊಳಿಸಿದ್ದು ದಿ ವೈರ್..

“ಉತ್ತಮ ಪತ್ರಿಕೋದ್ಯಮ ಎಂದಿಗೂ ಉಳಿಯುತ್ತದೆ ಮತ್ತು ಜನರು ಅದನ್ನು ಬೆಳೆಸುತ್ತಾರೆ. ಸಂಪಾದಕೀಯ ನೀತಿ ಮತ್ತು ಆರ್ಥಿಕ ನೀತಿ ಸ್ವತಂತ್ರವಾಗಿದ್ದಾಗ ಮಾತ್ರ ಇದು ಸಾಧ್ಯ. ಉತ್ತಮ ಪತ್ರಿಕೋದ್ಯಮವಲ್ಲದೇ ಬೇರೆ ಯಾವುದೇ ಉದ್ದೇಶವಿಲ್ಲದ ಪತ್ರಿಕೋದ್ಯಮವನ್ನು ಓದುಗರು ಹಾಗೂ ನಾಗರಿಕರು ಬೆಳೆಸುತ್ತಾರೆ. ಇದು ವೈರ್‌ ನೀಡಿರುವ ಸಂಸ್ಥಾಪನಾ ಪ್ರಮಾಣ” ಎಂದು ಸಂಸ್ಥೆಯ ಸಂಸ್ಥಾಪಕ ಸಂಪಾದಕರು ನೆನಪಿಸಿದ್ದಾರೆ.

ದಿ ವೈರ್‌ ಇಂಗ್ಲಿಷ್‌, ಹಿಂದಿ, ಉರ್ದು ಮತ್ತು ಮರಾಠಿ ಭಾಷೆಯಲ್ಲಿ ವರದಿಗಳನ್ನು ಮಾಡುತ್ತಿದ್ದು, ಅತಿದೊಡ್ಡ ಸಂಸ್ಥೆಯಾಗಿ ಬೆಳೆದುನಿಂತಿದೆ. ಅಧಿಕಾರಶಾಹಿಯ ನೀತಿಗಳು ಹೇಗೆ ದೇಶದ ಜನಜೀವನದ ಮೇಲೆ ದಿನೇದಿನೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿವೆ ಎಂಬುದನ್ನು ದಿ ವೈರ್‌ ಸೂಕ್ಷ್ಮವಾಗಿ ಬಿತ್ತರಿಸಿ, ಪತ್ರಿಕೋದ್ಯಮದಲ್ಲಿನ ದೊಡ್ಡ ಕೊರತೆಯನ್ನು ತುಂಬುತ್ತಿದೆ. ದಿ ವೈರ್‌ನ ಯೂಟ್ಯೂಬ್‌ ಚಾನೆಲ್‌ 35 ಲಕ್ಷ ಚಂದಾದಾರರನ್ನು ಹೊಂದಿದ್ದು, ಪ್ರತಿ ತಿಂಗಳು 2 ಕೋಟಿಗೂ ಅಧಿಕ ವೀಕ್ಷಣೆ ಪಡೆಯುತ್ತಿರುವುದು ದಾಖಲೆಯೇ ಸರಿ.

ಭಾರತದ ಪತ್ರಿಕೋದ್ಯಮ ಕುಸಿಯುತ್ತಿರುವ ಕಾಲದಲ್ಲಿ ದಿ ವೈರ್‌, ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಡುತ್ತಿದೆ. ಮತ್ತೊಂದೆದೆ ಸರ್ಕಾರದ ಕಿರುಕುಳವನ್ನೂ ಸಹಿಸಿಕೊಳ್ಳಬೇಕಾಗಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆಯ ಸಂಬಂಧದ ವರದಿಗಾರಿಕೆ ಒಳಗೊಂಡಂತೆ ಕಳೆದ ವರ್ಷ ಮೂರು ಪ್ರಕರಣಗಳನ್ನು ದಿ ವೈರ್‌ ವರದಿಗಾರರ ಮೇಲೆ ದಾಖಲಿಸಲಾಗಿತ್ತು. ಧಾರ್ಮಿಕ ಮುಖಂಡರು ಕೋವಿಡ್‌ 19 ನಿಯಮಗಳನ್ನು ಉಲ್ಲಂಘಿಸಿದ ಕುರಿತು ವರದಿ ಮಾಡಿದ್ದಕ್ಕಾಗಿ ದಿ ವೈರ್‌ ಮತ್ತು ವರದರಾಜನ್‌ ಅವರ ಮೇಲೆ “ಭೀತಿ ಹರಡುವಿಕೆ’ಯ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ 14 ಮಾನನಷ್ಟ ಮೊಕದ್ದಮೆಗಳನ್ನು ದಿ ವೈರ್‌ ಎದುರಿಸಿದ್ದು, ಆಡಳಿತ ಪಕ್ಷ 1.4 ಬಿಲಿಯನ್‌ ಡಾಲರ್‌ಗಳಷ್ಟು ಪರಿಹಾರವನ್ನು ನೀಡಬೇಕೆಂದು ಬೇಡಿಕೆ ಇಟ್ಟಿತ್ತು.

ಸರ್ಕಾರದ ಹದ್ದಿನ ಕಣ್ಣು ದಿ ವೈರ್‌ ಮೇಲೆ ಇತ್ತೆಂಬುದನ್ನು ಪೆಗಾಗಸ್‌ ಪ್ರಕರಣ ಬಹಿರಂಗ ಮಾಡಿತ್ತು. ವರದರಾಜನ್‌ ಮತ್ತು ವೇಣು ಅವರ ಮೊಬೈಲ್‌ನಲ್ಲಿ ಇಸ್ರೇಲಿ ಮೂಲದ ಸ್ಪೈವೇರ್‌ ಸ್ಥಾಪಿಸಲಾಗಿತ್ತು. ನಂತರ ದಿ ವೈರ್‌ ಫಾರ್‍ಬಿಡನ್‌ ಸ್ಟೋರಿಸ್‌ನೊಂದಿಗೆ ಸೇರಿ ಫೆಗಾಸಸ್‌ ದಾಳಿಯ ಸಂಭಾವಿತ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.


ಇದನ್ನೂ ಓದಿ; ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...