Homeಕರ್ನಾಟಕವಿಸ್ಟ್ರಾನ್ ಬಿಕ್ಕಟ್ಟು: ಕಾರ್ಮಿಕರ ಹೋರಾಟಕ್ಕೆ AILU ಉಚಿತ ಕಾನೂನು ನೆರವು

ವಿಸ್ಟ್ರಾನ್ ಬಿಕ್ಕಟ್ಟು: ಕಾರ್ಮಿಕರ ಹೋರಾಟಕ್ಕೆ AILU ಉಚಿತ ಕಾನೂನು ನೆರವು

ಪೊಲೀಸರು 700 ಎಫ್‌ಐಆರ್ ದಾಖಲಿಸಿದ್ದು ಇದುವರೆಗೂ 160 ಜನರನ್ನು ಬಂಧಿಸಿದ್ದಾರೆ.

- Advertisement -
- Advertisement -

ತೈವಾನ್ ಮೂಲದ ಆಪನ್ ಐಫೋನ್ ತಯಾರಿಕಾ ಕಂಪೆನಿ ವಿಸ್ಟ್ರಾನ್‌ನಲ್ಲಿ ಉಂಟಾದ ಬಿಕ್ಕಟ್ಟಿನ ಹಿನ್ನೆಯಲ್ಲಿ ಕಾರ್ಮಿಕ ಹೋರಾಟದ ಪರವಾಗಿ ಉಚಿತ ಕಾನೂನು ನೆರವು ನೀಡುವುದಾಗಿ ’ಆಲ್ ಇಂಡಿಯಾ ಲಾಯರ್ಸ್ ಯೂನಿಯನ್’ (AILU) ನಿರ್ಣಯ ಕೈಗೊಂಡಿದೆ.

ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ನಡೆದ ಅಖಿಲ ಭಾರತ ವಕೀಲರ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದೆ ಎಂದು AILU ಕರ್ನಾಟಕದ ಅಧ್ಯಕ್ಷರಾದ ಎಸ್‌. ಶಂಕರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ಈ ಬಗ್ಗೆ ಮಾತನಾಡಿದ ಅವರು, “ತಮ್ಮ ಪರವಾಗಿ ವಾದಿಸುವ ವಕೀಲರಿಗೆ‌ ಫೀಸ್ ಕಟ್ಟಲು ಬಡ ಕಾರ್ಮಿಕರಿಗೆ ಸಾಧ್ಯವಿಲ್ಲದಿದ್ದರಿಂದ, ತಮ್ಮ ಮೇಲೆ ದಾಖಲಾದ ಕೇಸ್‌ನಿಂದ ಜಾಮೀನು ಪಡೆಯುವುದು ಸೇರಿದಂತೆ ಇನ್ನಿತರ ಕಾನೂನು ನೆರವು ನೀಡಲು AILU ರಾಜ್ಯ ಸಮಿತಿ ತೀರ್ಮಾನಿಸಿದೆ” ಎಂದು ಹೇಳಿದ್ದಾರೆ.

ಕಾರ್ಮಿಕರ ಬಳಿ ಕ್ಷಮೆಯಾಚಿಸಿರುವ ವಿಸ್ಟ್ರಾನ್. ಕಂಪೆನಿ ಉಪಾಧ್ಯಕ್ಷನ ವಜಾ ಮಾಡಿದ ಹಿನ್ನಲೆಯಲ್ಲಿ SFI ಕಾರ್ಯದರ್ಶಿಯ ಮಾತು

ಕೋಲಾರದಲ್ಲಿನ ವಿಸ್ಟ್ರಾನ್ ಕಾರ್ಮಿಕರು, ಕಂಪೆನಿಯು ತಮ್ಮ ದುಡಿಮೆಯ ವೇತನ ಪಾವತಿಸಿಲ್ಲ ಎಂದು ಆರೋಪಿಸಿ ಹಲವು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು, ಡಿಸೆಂಬರ್‌ 12 ರಂದು ಆಕ್ರೋಶಗೊಂಡ ಗುಂಪೊಂದು ಘಟಕದ ಆಸ್ತಿಪಾಸ್ತಿಗೆ ಹಾನಿ ಮಾಡಿತ್ತು. ಈ ಹಿನ್ನಲೆಯಲ್ಲಿ ಕಂಪೆನಿಯು ಘಟನೆಯ ಬಗ್ಗೆ ತನಿಖೆ ನಡೆಸಿದ್ದು, ಕೆಲವು ಕಾರ್ಮಿಕರಿಗೆ ಸರಿಯಾಗಿ ಸಂಬಳ ನೀಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿತ್ತು. ಜೊತೆಗೆ ಭಾರತದ ವಿಸ್ಟ್ರಾನ್ ಕಂಪೆನಿಯ ಉಪಾಧ್ಯಕ್ಷನನ್ನು ವಜಾ ಮಾಡಿ, ಕಾರ್ಮಿಕರ ಕ್ಷಮೆ ಕೋರಿತ್ತು.

ಹಿಂಸಾಚಾರದಲ್ಲಿ 437.40 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಕಂಪನಿ ಹೇಳಿಕೊಂಡಿತ್ತಾದರೂ, ಕಾರ್ಮಿಕ ಸಂಘಟನೆಗಳ ಒಕ್ಕೂಟ ಇದನ್ನು ಅಲ್ಲಗೆಳೆದಿದೆ. ಅಲ್ಲದೆ ಪೊಲೀಸರು 700 ಎಫ್‌ಐಆರ್ ದಾಖಲಿಸಿದ್ದು ಇದುವರೆಗೂ 160 ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...