Homeಕರ್ನಾಟಕವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

ವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

ತಮ್ಮ ಕೆಲಸಗಳೇ ಹೆಚ್ಚು ನಡೆಯಬೇಕು ಎಂಬ ಗುತ್ತಿಗೆ ಏಜನ್ಸಿಗಳ ಆಂತರಿಕ ಪೈಪೋಟಿ ಕೂಡಾ ಈ ಸಮಸ್ಯೆಗೆ ಕಾರಣವಾಗಿದ್ದು, ಈಗ ಪ್ರಕರಣವನ್ನು ನಮ್ಮ ತಲೆಗೆ ಕಟ್ಟುತ್ತಿದ್ದಾರೆ ಎಂದು SFI ರಾಜ್ಯ ಕಾರ್ಯದರ್ಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ದಾಂಧಲೆ ಪ್ರಕರಣದಲ್ಲಿ ವಿದ್ಯಾರ್ಥಿ ಸಂಘಟನೆ SFI ಯ ರಾಜ್ಯ ಸಮಿತಿ ಸದಸ್ಯ ಹಾಗೂ ಕೋಲಾರ ತಾಲೂಕು ಅಧ್ಯಕ್ಷರೂ ಆಗಿರುವ ಶ್ರೀಕಾಂತ್ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿಸೆಂಬರ್‌ 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದುವರೆಗೂ ಸುಮಾರು 160 ಜನರನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸಂಘಟನೆಯ ರಾಜ್ಯ ಸಮಿತಿ ಸದಸ್ಯನ ಬಂಧನವನ್ನು ವಿರೋಧಿಸಿರುವ SFI ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ, ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅವರು, “ಕಂಪೆನಿಯ ಏಜೆನ್ಸಿಯು ಕಾರ್ಮಿಕ ಕಾನೂನನ್ನು ಉಲ್ಲಂಘಿಸಿ ಕಾರ್ಮಿಕರನ್ನು ನಡೆಸಿಕೊಂಡಿರುವ ರೀತಿಯಿಂದ ಬೇಸತ್ತ ಕಾರಣಕ್ಕೆ ಈ ಘಟನೆ ನಡೆದಿದೆ. ಕಾರ್ಮಿಕ ಕಾನೂನುಗಳು ಉಲ್ಲಂಘನೆಯಾಗುತ್ತಿದೆ ಎಂದು ಅಲ್ಲಿನ ಕಾರ್ಮಿಕರು ಪದೆ ಪದೆ ಕಾರ್ಮಿಕ ಇಲಾಖೆಗೆ ದೂರಿಕೊಂಡಿದ್ದರು. ಆದರೆ ಇದನ್ನು ಸರಿಪಡಿಸಲು ಜಿಲ್ಲಾಡಳಿತವಾಗಲಿ, ಕಾರ್ಮಿಕ ಇಲಾಖೆಯಾಗಲಿ ಕೆಲಸ ಮಾಡದೆ ನಿರ್ಲಕ್ಷ್ಯ ಮಾಡಿ ಕಾರ್ಮಿಕರ ಕೋಪ ಸ್ಪೋಟಗೊಳ್ಳುವಂತೆ ಮಾಡಿದೆ”

“ಅಷ್ಟೇ ಅಲ್ಲದೆ ತಮ್ಮ ಕೆಲಸಗಳೇ ಹೆಚ್ಚು ನಡೆಯಬೇಕು ಎಂಬ ಗುತ್ತಿಗೆ ಏಜನ್ಸಿಗಳ ಆಂತರಿಕ ಪೈಪೋಟಿ ಕೂಡಾ ಈ ಸಮಸ್ಯೆಗೆ ಕಾರಣವಾಗಿದೆ. ಆದರೆ ಈಗ ಪ್ರಕರಣವನ್ನು ನಮ್ಮ ತಲೆಗೆ ಕಟ್ಟುತ್ತಿದ್ದಾರೆ. ಇದು ಖಂಡನಾರ್ಹ” ಎಂದು ವಾಸುದೇವ ರೆಡ್ಡಿ ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಸಂಸದ ಮುನಿಸ್ವಾಮಿ, SFI ಸಂಘಟನೆ ಹೊರರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆ ಸಂಘಟಿಸಿದ್ದು, SFI ಕಾರ್ಯಕರ್ತರು ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿ ದಾಂಧಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಸಂಸದರ ಆರೋಪವನ್ನು ನಿರಾಕರಿಸಿದ್ದ SFI ರಾಜ್ಯ ಘಟಕ, ವಿಸ್ಟ್ರಾನ್‌ ಘಟನೆಗೂ SFI ಗೂ ಯಾವುದೇ ಸಂಬಂಧವಿಲ್ಲ. ಸಂಸದರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...