Homeಕರ್ನಾಟಕವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

ವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

ತಮ್ಮ ಕೆಲಸಗಳೇ ಹೆಚ್ಚು ನಡೆಯಬೇಕು ಎಂಬ ಗುತ್ತಿಗೆ ಏಜನ್ಸಿಗಳ ಆಂತರಿಕ ಪೈಪೋಟಿ ಕೂಡಾ ಈ ಸಮಸ್ಯೆಗೆ ಕಾರಣವಾಗಿದ್ದು, ಈಗ ಪ್ರಕರಣವನ್ನು ನಮ್ಮ ತಲೆಗೆ ಕಟ್ಟುತ್ತಿದ್ದಾರೆ ಎಂದು SFI ರಾಜ್ಯ ಕಾರ್ಯದರ್ಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ದಾಂಧಲೆ ಪ್ರಕರಣದಲ್ಲಿ ವಿದ್ಯಾರ್ಥಿ ಸಂಘಟನೆ SFI ಯ ರಾಜ್ಯ ಸಮಿತಿ ಸದಸ್ಯ ಹಾಗೂ ಕೋಲಾರ ತಾಲೂಕು ಅಧ್ಯಕ್ಷರೂ ಆಗಿರುವ ಶ್ರೀಕಾಂತ್ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿಸೆಂಬರ್‌ 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದುವರೆಗೂ ಸುಮಾರು 160 ಜನರನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸಂಘಟನೆಯ ರಾಜ್ಯ ಸಮಿತಿ ಸದಸ್ಯನ ಬಂಧನವನ್ನು ವಿರೋಧಿಸಿರುವ SFI ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ, ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅವರು, “ಕಂಪೆನಿಯ ಏಜೆನ್ಸಿಯು ಕಾರ್ಮಿಕ ಕಾನೂನನ್ನು ಉಲ್ಲಂಘಿಸಿ ಕಾರ್ಮಿಕರನ್ನು ನಡೆಸಿಕೊಂಡಿರುವ ರೀತಿಯಿಂದ ಬೇಸತ್ತ ಕಾರಣಕ್ಕೆ ಈ ಘಟನೆ ನಡೆದಿದೆ. ಕಾರ್ಮಿಕ ಕಾನೂನುಗಳು ಉಲ್ಲಂಘನೆಯಾಗುತ್ತಿದೆ ಎಂದು ಅಲ್ಲಿನ ಕಾರ್ಮಿಕರು ಪದೆ ಪದೆ ಕಾರ್ಮಿಕ ಇಲಾಖೆಗೆ ದೂರಿಕೊಂಡಿದ್ದರು. ಆದರೆ ಇದನ್ನು ಸರಿಪಡಿಸಲು ಜಿಲ್ಲಾಡಳಿತವಾಗಲಿ, ಕಾರ್ಮಿಕ ಇಲಾಖೆಯಾಗಲಿ ಕೆಲಸ ಮಾಡದೆ ನಿರ್ಲಕ್ಷ್ಯ ಮಾಡಿ ಕಾರ್ಮಿಕರ ಕೋಪ ಸ್ಪೋಟಗೊಳ್ಳುವಂತೆ ಮಾಡಿದೆ”

“ಅಷ್ಟೇ ಅಲ್ಲದೆ ತಮ್ಮ ಕೆಲಸಗಳೇ ಹೆಚ್ಚು ನಡೆಯಬೇಕು ಎಂಬ ಗುತ್ತಿಗೆ ಏಜನ್ಸಿಗಳ ಆಂತರಿಕ ಪೈಪೋಟಿ ಕೂಡಾ ಈ ಸಮಸ್ಯೆಗೆ ಕಾರಣವಾಗಿದೆ. ಆದರೆ ಈಗ ಪ್ರಕರಣವನ್ನು ನಮ್ಮ ತಲೆಗೆ ಕಟ್ಟುತ್ತಿದ್ದಾರೆ. ಇದು ಖಂಡನಾರ್ಹ” ಎಂದು ವಾಸುದೇವ ರೆಡ್ಡಿ ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಸಂಸದ ಮುನಿಸ್ವಾಮಿ, SFI ಸಂಘಟನೆ ಹೊರರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆ ಸಂಘಟಿಸಿದ್ದು, SFI ಕಾರ್ಯಕರ್ತರು ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿ ದಾಂಧಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಸಂಸದರ ಆರೋಪವನ್ನು ನಿರಾಕರಿಸಿದ್ದ SFI ರಾಜ್ಯ ಘಟಕ, ವಿಸ್ಟ್ರಾನ್‌ ಘಟನೆಗೂ SFI ಗೂ ಯಾವುದೇ ಸಂಬಂಧವಿಲ್ಲ. ಸಂಸದರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...