Homeಕರ್ನಾಟಕವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

ವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

ತಮ್ಮ ಕೆಲಸಗಳೇ ಹೆಚ್ಚು ನಡೆಯಬೇಕು ಎಂಬ ಗುತ್ತಿಗೆ ಏಜನ್ಸಿಗಳ ಆಂತರಿಕ ಪೈಪೋಟಿ ಕೂಡಾ ಈ ಸಮಸ್ಯೆಗೆ ಕಾರಣವಾಗಿದ್ದು, ಈಗ ಪ್ರಕರಣವನ್ನು ನಮ್ಮ ತಲೆಗೆ ಕಟ್ಟುತ್ತಿದ್ದಾರೆ ಎಂದು SFI ರಾಜ್ಯ ಕಾರ್ಯದರ್ಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ದಾಂಧಲೆ ಪ್ರಕರಣದಲ್ಲಿ ವಿದ್ಯಾರ್ಥಿ ಸಂಘಟನೆ SFI ಯ ರಾಜ್ಯ ಸಮಿತಿ ಸದಸ್ಯ ಹಾಗೂ ಕೋಲಾರ ತಾಲೂಕು ಅಧ್ಯಕ್ಷರೂ ಆಗಿರುವ ಶ್ರೀಕಾಂತ್ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿಸೆಂಬರ್‌ 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದುವರೆಗೂ ಸುಮಾರು 160 ಜನರನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸಂಘಟನೆಯ ರಾಜ್ಯ ಸಮಿತಿ ಸದಸ್ಯನ ಬಂಧನವನ್ನು ವಿರೋಧಿಸಿರುವ SFI ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ, ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅವರು, “ಕಂಪೆನಿಯ ಏಜೆನ್ಸಿಯು ಕಾರ್ಮಿಕ ಕಾನೂನನ್ನು ಉಲ್ಲಂಘಿಸಿ ಕಾರ್ಮಿಕರನ್ನು ನಡೆಸಿಕೊಂಡಿರುವ ರೀತಿಯಿಂದ ಬೇಸತ್ತ ಕಾರಣಕ್ಕೆ ಈ ಘಟನೆ ನಡೆದಿದೆ. ಕಾರ್ಮಿಕ ಕಾನೂನುಗಳು ಉಲ್ಲಂಘನೆಯಾಗುತ್ತಿದೆ ಎಂದು ಅಲ್ಲಿನ ಕಾರ್ಮಿಕರು ಪದೆ ಪದೆ ಕಾರ್ಮಿಕ ಇಲಾಖೆಗೆ ದೂರಿಕೊಂಡಿದ್ದರು. ಆದರೆ ಇದನ್ನು ಸರಿಪಡಿಸಲು ಜಿಲ್ಲಾಡಳಿತವಾಗಲಿ, ಕಾರ್ಮಿಕ ಇಲಾಖೆಯಾಗಲಿ ಕೆಲಸ ಮಾಡದೆ ನಿರ್ಲಕ್ಷ್ಯ ಮಾಡಿ ಕಾರ್ಮಿಕರ ಕೋಪ ಸ್ಪೋಟಗೊಳ್ಳುವಂತೆ ಮಾಡಿದೆ”

“ಅಷ್ಟೇ ಅಲ್ಲದೆ ತಮ್ಮ ಕೆಲಸಗಳೇ ಹೆಚ್ಚು ನಡೆಯಬೇಕು ಎಂಬ ಗುತ್ತಿಗೆ ಏಜನ್ಸಿಗಳ ಆಂತರಿಕ ಪೈಪೋಟಿ ಕೂಡಾ ಈ ಸಮಸ್ಯೆಗೆ ಕಾರಣವಾಗಿದೆ. ಆದರೆ ಈಗ ಪ್ರಕರಣವನ್ನು ನಮ್ಮ ತಲೆಗೆ ಕಟ್ಟುತ್ತಿದ್ದಾರೆ. ಇದು ಖಂಡನಾರ್ಹ” ಎಂದು ವಾಸುದೇವ ರೆಡ್ಡಿ ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಸಂಸದ ಮುನಿಸ್ವಾಮಿ, SFI ಸಂಘಟನೆ ಹೊರರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆ ಸಂಘಟಿಸಿದ್ದು, SFI ಕಾರ್ಯಕರ್ತರು ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿ ದಾಂಧಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಸಂಸದರ ಆರೋಪವನ್ನು ನಿರಾಕರಿಸಿದ್ದ SFI ರಾಜ್ಯ ಘಟಕ, ವಿಸ್ಟ್ರಾನ್‌ ಘಟನೆಗೂ SFI ಗೂ ಯಾವುದೇ ಸಂಬಂಧವಿಲ್ಲ. ಸಂಸದರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....