Homeಕರ್ನಾಟಕ'ಟೋಬಿ' ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

- Advertisement -
- Advertisement -

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಚಿತ್ರ ವೀಕ್ಷಿಸಿ ಚಿತ್ರಮಂದಿರದಿಂದ ಮಹಿಳೆಯೊಬ್ಬರು ಯುಟ್ಯೂಬ್ ಚಾನೆಲ್ ಒಂದಕ್ಕೆ ಪ್ರತಿಕ್ರಿಸುವಾಗ ‘ಚಿತ್ರ ಚೆನ್ನಾಗಿಲ್ಲ’ ಎಂದು ಹೇಳಿದ್ದಾರೆ. ಅದನ್ನು ಕೇಳಿಸಿಕೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಯಾವುದೇ ಚಿತ್ರ ಬಿಡುಗಡೆಯಾದ ದಿನ ಚಿತ್ರಮಂದಿರದ ಮುಂದೆ ಮಾಧ್ಯಮ ಪ್ರತಿನಿಧಿಗಳು ಬಂದು ಚಿತ್ರ ಹೇಗಿದೆ ಎಂದು ಪ್ರೇಕ್ಷಕರ ಅಭಿಪ್ರಾಯಗಳನ್ನು ಕೇಳುವುದು ಸಹಜವಾಗಿದೆ. ಅದೇ ರೀತಿ ಟೋಬಿ ಚಿತ್ರಕ್ಕೂ ಸಹ ಚಿತ್ರ ಹೇಗಿದೆ ಹೇಳಿ ಎಂದು ಯುಟ್ಯೂಬ್ ಚಾನೆಲ್ ಪ್ರತಿನಿಧಿಯೊಬ್ಬರು ಚಿತ್ರ ವೀಕ್ಷಿಸಿ ಹೊರಬಂದ ಮಹಿಳೆಯನ್ನು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಅವರು ಚೆನ್ನಾಗಿಲ್ಲ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ ಅಲ್ಲಿದ್ದ ವ್ಯಕ್ತಿಯೊಬ್ಬ ಆ ಮಹಿಳೆಯನ್ನು ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾನೆ.

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ ಮುಗಿದ ಬಳಿಕ ಮಾತನಾಡಿದ್ದ ಈ ಮಹಿಳೆ ಚಿತ್ರ ಚೆನ್ನಾಗಿಲ್ಲ ಎಂದು ನೇರವಾಗಿ ಕ್ಯಾಮೆರಾ ಮುಂದೆ ನಿಂತು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಅವಾಚ್ಯ ಪದಗಳನ್ನು ಬಳಸಿ ಆಕೆಯನ್ನು ನೂರಾರು ಜನರ ಮುಂದೆ ನಿಂದಿಸಿದ್ದಾನೆ.

ಚಿತ್ರ ಚೆನ್ನಾಗಿಲ್ಲ ಅನ್ನೋಕೆ ನೀನ್ಯಾರು, ಚಿತ್ರ ಚೆನ್ನಾಗಿದೆ, ಚಿತ್ರ ನೋಡಿ ಹೇಗಿದೆ ಎಂದು ಹೇಳಲು ನಿನಗೆ ಯಾರು ಹೇಳಿದ್ರು? ಎಂದೆಲ್ಲಾ ಜೋರು ದನಿಯಲ್ಲಿ ಮಾತನಾಡಿದ್ದಾನೆ. ಕನ್ನಡ ಚಿತ್ರವೊಂದನ್ನು ನೋಡಲು ಬಂದ ಮಹಿಳೆಗೆ ವ್ಯಕ್ತಿಯೊಬ್ಬ ಅತಿ ಕೆಟ್ಟ ಪದ ಬಳಕೆ ಮಾಡುತ್ತಿದ್ದರೂ ಅಲ್ಲಿ ನೆರೆದಿದ್ದ ಪ್ರತಿಯೊಬ್ಬರೂ ಸಹ ಆಕೆಯದ್ದೆ ತಪ್ಪು, ಚಿತ್ರ ಚೆನ್ನಾಗಿಲ್ಲ ಎಂದಿದ್ದೇ ತಪ್ಪು ಎಂದಿದ್ದಾರೆ.

ಮಹಿಳೆಯನ್ನು ನಿಂದಿಸಿ, ಆಕೆಯ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿ ಚಿತ್ರ ತಂಡಕ್ಕೆ ಸಂಬಂಧಿಸಿದವರೋ ಅಲ್ಲವೋ ಎನ್ನುವ ಬಗ್ಗೆ ತಿಳಿದುಬಂದಿಲ್ಲ.

ಈ ಘಟನೆ ನಡೆಯುತ್ತಿದ್ದಾಗ ಮಧ್ಯ ಪ್ರವೇಶಿಸಿದ ಚಿತ್ರಮಂದಿರದ ಮ್ಯಾನೇಜರ್, ಆ ಮಹಿಳೆಯನ್ನು ಅಲ್ಲಿಂದ ಕಳುಹಿಸಿದ್ದಾರೆ. ಆನಂತರ ಮಾಧ್ಯಮದ ಎದುರು ಮಾತನಾಡಿದ ಅವರು, ”ಆಕೆ ಡ್ರಗ್ ಅಡಿಕ್ಟ್ ಅನಿಸುತ್ತೆ, ಯಾರೋ ಚಿತ್ರ ಚೆನ್ನಾಗಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ ಅನಿಸುತ್ತದೆ. ನಾನು ಚಿತ್ರ ನೋಡಿದೆ, ಆಕೆ ಹೇಳುವ ಹಾಗಿಲ್ಲ” ಎಂದು ಮಹಿಳೆಯ ವಿರುದ್ಧವೇ ಮಾತನಾಡಿದ್ದಾರೆ.

ಚಿತ್ರಮಂದಿರದ ಅಂಗಳದಲ್ಲಿ ತನ್ನ ಪರ ಯಾರೊಬ್ಬರೂ ಮಾತನಾಡದೇ ಇದ್ದಾಗ ಆ ಮಹಿಳೆ ಅಲ್ಲಿಂದ ನೋವಿನಿಂದಲೇ ಹೊರನಡೆದಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಅನೇಕರು ಚಿತ್ರ ಚೆನ್ನಾಗಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, ಚಿತ್ರಮಂದಿರಕ್ಕೆ ಚಿತ್ರಗಳನ್ನು ವೀಕ್ಷಿಸುವ ಪ್ರೇಕ್ಷಕರು ಚಿತ್ರ ಸೂಪರ್ ಎಂದು ಹೇಳಲೇಬೇಕಾ? ಎಂಬ ಪ್ರಶ್ನೆ ಮಾಡಿದ್ದಾರೆ.

”ನಮ್ಮ ಸ್ವಂತ ಹಣದಿಂದ ಟಿಕೆಟ್ ಖರೀದಿಸಿ ಚಿತ್ರ ನೋಡಿರುತ್ತೇವೆ. ಚಿತ್ರ ಹೇಗಿದೆ ಎಂದು ಹೇಳುವ ಎಲ್ಲಾ ರೀತಿಯ ಹಕ್ಕು ನಮಗೆ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ” ಎಂದು ಆಕ್ರೋಶದ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಟೋಬಿ ಚಿತ್ರ ಬೃಹತ್ ನಿರೀಕ್ಷೆಯೊಂದಿಗೆ ಚಿತ್ರಮಂದಿರಗಳ ಅಂಗಳಕ್ಕೆ ಬಂದಿದೆ. ಆದರೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಕೆಲವರು ಚಿತ್ರ ಮಾಸ್ಟರ್‌ಪೀಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರೆ, ಇನ್ನೂ ಕೆಲವರು ಚಿತ್ರ ನಿರೀಕ್ಷಿಸಿದ ರೇಂಜ್‌ಗೇನೂ ಇಲ್ಲ, ಒಮ್ಮೆ ನೋಡಬಹುದು ಎಂಬ ಟ್ವೀಟ್‌ಗಳನ್ನು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...