Homeಕರ್ನಾಟಕ'ಟೋಬಿ' ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

- Advertisement -
- Advertisement -

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಚಿತ್ರ ವೀಕ್ಷಿಸಿ ಚಿತ್ರಮಂದಿರದಿಂದ ಮಹಿಳೆಯೊಬ್ಬರು ಯುಟ್ಯೂಬ್ ಚಾನೆಲ್ ಒಂದಕ್ಕೆ ಪ್ರತಿಕ್ರಿಸುವಾಗ ‘ಚಿತ್ರ ಚೆನ್ನಾಗಿಲ್ಲ’ ಎಂದು ಹೇಳಿದ್ದಾರೆ. ಅದನ್ನು ಕೇಳಿಸಿಕೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಯಾವುದೇ ಚಿತ್ರ ಬಿಡುಗಡೆಯಾದ ದಿನ ಚಿತ್ರಮಂದಿರದ ಮುಂದೆ ಮಾಧ್ಯಮ ಪ್ರತಿನಿಧಿಗಳು ಬಂದು ಚಿತ್ರ ಹೇಗಿದೆ ಎಂದು ಪ್ರೇಕ್ಷಕರ ಅಭಿಪ್ರಾಯಗಳನ್ನು ಕೇಳುವುದು ಸಹಜವಾಗಿದೆ. ಅದೇ ರೀತಿ ಟೋಬಿ ಚಿತ್ರಕ್ಕೂ ಸಹ ಚಿತ್ರ ಹೇಗಿದೆ ಹೇಳಿ ಎಂದು ಯುಟ್ಯೂಬ್ ಚಾನೆಲ್ ಪ್ರತಿನಿಧಿಯೊಬ್ಬರು ಚಿತ್ರ ವೀಕ್ಷಿಸಿ ಹೊರಬಂದ ಮಹಿಳೆಯನ್ನು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಅವರು ಚೆನ್ನಾಗಿಲ್ಲ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ ಅಲ್ಲಿದ್ದ ವ್ಯಕ್ತಿಯೊಬ್ಬ ಆ ಮಹಿಳೆಯನ್ನು ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾನೆ.

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ ಮುಗಿದ ಬಳಿಕ ಮಾತನಾಡಿದ್ದ ಈ ಮಹಿಳೆ ಚಿತ್ರ ಚೆನ್ನಾಗಿಲ್ಲ ಎಂದು ನೇರವಾಗಿ ಕ್ಯಾಮೆರಾ ಮುಂದೆ ನಿಂತು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಅವಾಚ್ಯ ಪದಗಳನ್ನು ಬಳಸಿ ಆಕೆಯನ್ನು ನೂರಾರು ಜನರ ಮುಂದೆ ನಿಂದಿಸಿದ್ದಾನೆ.

ಚಿತ್ರ ಚೆನ್ನಾಗಿಲ್ಲ ಅನ್ನೋಕೆ ನೀನ್ಯಾರು, ಚಿತ್ರ ಚೆನ್ನಾಗಿದೆ, ಚಿತ್ರ ನೋಡಿ ಹೇಗಿದೆ ಎಂದು ಹೇಳಲು ನಿನಗೆ ಯಾರು ಹೇಳಿದ್ರು? ಎಂದೆಲ್ಲಾ ಜೋರು ದನಿಯಲ್ಲಿ ಮಾತನಾಡಿದ್ದಾನೆ. ಕನ್ನಡ ಚಿತ್ರವೊಂದನ್ನು ನೋಡಲು ಬಂದ ಮಹಿಳೆಗೆ ವ್ಯಕ್ತಿಯೊಬ್ಬ ಅತಿ ಕೆಟ್ಟ ಪದ ಬಳಕೆ ಮಾಡುತ್ತಿದ್ದರೂ ಅಲ್ಲಿ ನೆರೆದಿದ್ದ ಪ್ರತಿಯೊಬ್ಬರೂ ಸಹ ಆಕೆಯದ್ದೆ ತಪ್ಪು, ಚಿತ್ರ ಚೆನ್ನಾಗಿಲ್ಲ ಎಂದಿದ್ದೇ ತಪ್ಪು ಎಂದಿದ್ದಾರೆ.

ಮಹಿಳೆಯನ್ನು ನಿಂದಿಸಿ, ಆಕೆಯ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿ ಚಿತ್ರ ತಂಡಕ್ಕೆ ಸಂಬಂಧಿಸಿದವರೋ ಅಲ್ಲವೋ ಎನ್ನುವ ಬಗ್ಗೆ ತಿಳಿದುಬಂದಿಲ್ಲ.

ಈ ಘಟನೆ ನಡೆಯುತ್ತಿದ್ದಾಗ ಮಧ್ಯ ಪ್ರವೇಶಿಸಿದ ಚಿತ್ರಮಂದಿರದ ಮ್ಯಾನೇಜರ್, ಆ ಮಹಿಳೆಯನ್ನು ಅಲ್ಲಿಂದ ಕಳುಹಿಸಿದ್ದಾರೆ. ಆನಂತರ ಮಾಧ್ಯಮದ ಎದುರು ಮಾತನಾಡಿದ ಅವರು, ”ಆಕೆ ಡ್ರಗ್ ಅಡಿಕ್ಟ್ ಅನಿಸುತ್ತೆ, ಯಾರೋ ಚಿತ್ರ ಚೆನ್ನಾಗಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ ಅನಿಸುತ್ತದೆ. ನಾನು ಚಿತ್ರ ನೋಡಿದೆ, ಆಕೆ ಹೇಳುವ ಹಾಗಿಲ್ಲ” ಎಂದು ಮಹಿಳೆಯ ವಿರುದ್ಧವೇ ಮಾತನಾಡಿದ್ದಾರೆ.

ಚಿತ್ರಮಂದಿರದ ಅಂಗಳದಲ್ಲಿ ತನ್ನ ಪರ ಯಾರೊಬ್ಬರೂ ಮಾತನಾಡದೇ ಇದ್ದಾಗ ಆ ಮಹಿಳೆ ಅಲ್ಲಿಂದ ನೋವಿನಿಂದಲೇ ಹೊರನಡೆದಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಅನೇಕರು ಚಿತ್ರ ಚೆನ್ನಾಗಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, ಚಿತ್ರಮಂದಿರಕ್ಕೆ ಚಿತ್ರಗಳನ್ನು ವೀಕ್ಷಿಸುವ ಪ್ರೇಕ್ಷಕರು ಚಿತ್ರ ಸೂಪರ್ ಎಂದು ಹೇಳಲೇಬೇಕಾ? ಎಂಬ ಪ್ರಶ್ನೆ ಮಾಡಿದ್ದಾರೆ.

”ನಮ್ಮ ಸ್ವಂತ ಹಣದಿಂದ ಟಿಕೆಟ್ ಖರೀದಿಸಿ ಚಿತ್ರ ನೋಡಿರುತ್ತೇವೆ. ಚಿತ್ರ ಹೇಗಿದೆ ಎಂದು ಹೇಳುವ ಎಲ್ಲಾ ರೀತಿಯ ಹಕ್ಕು ನಮಗೆ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ” ಎಂದು ಆಕ್ರೋಶದ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಟೋಬಿ ಚಿತ್ರ ಬೃಹತ್ ನಿರೀಕ್ಷೆಯೊಂದಿಗೆ ಚಿತ್ರಮಂದಿರಗಳ ಅಂಗಳಕ್ಕೆ ಬಂದಿದೆ. ಆದರೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಕೆಲವರು ಚಿತ್ರ ಮಾಸ್ಟರ್‌ಪೀಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರೆ, ಇನ್ನೂ ಕೆಲವರು ಚಿತ್ರ ನಿರೀಕ್ಷಿಸಿದ ರೇಂಜ್‌ಗೇನೂ ಇಲ್ಲ, ಒಮ್ಮೆ ನೋಡಬಹುದು ಎಂಬ ಟ್ವೀಟ್‌ಗಳನ್ನು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...