Homeಕರ್ನಾಟಕ'ಟೋಬಿ' ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

- Advertisement -
- Advertisement -

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಚಿತ್ರ ವೀಕ್ಷಿಸಿ ಚಿತ್ರಮಂದಿರದಿಂದ ಮಹಿಳೆಯೊಬ್ಬರು ಯುಟ್ಯೂಬ್ ಚಾನೆಲ್ ಒಂದಕ್ಕೆ ಪ್ರತಿಕ್ರಿಸುವಾಗ ‘ಚಿತ್ರ ಚೆನ್ನಾಗಿಲ್ಲ’ ಎಂದು ಹೇಳಿದ್ದಾರೆ. ಅದನ್ನು ಕೇಳಿಸಿಕೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಯಾವುದೇ ಚಿತ್ರ ಬಿಡುಗಡೆಯಾದ ದಿನ ಚಿತ್ರಮಂದಿರದ ಮುಂದೆ ಮಾಧ್ಯಮ ಪ್ರತಿನಿಧಿಗಳು ಬಂದು ಚಿತ್ರ ಹೇಗಿದೆ ಎಂದು ಪ್ರೇಕ್ಷಕರ ಅಭಿಪ್ರಾಯಗಳನ್ನು ಕೇಳುವುದು ಸಹಜವಾಗಿದೆ. ಅದೇ ರೀತಿ ಟೋಬಿ ಚಿತ್ರಕ್ಕೂ ಸಹ ಚಿತ್ರ ಹೇಗಿದೆ ಹೇಳಿ ಎಂದು ಯುಟ್ಯೂಬ್ ಚಾನೆಲ್ ಪ್ರತಿನಿಧಿಯೊಬ್ಬರು ಚಿತ್ರ ವೀಕ್ಷಿಸಿ ಹೊರಬಂದ ಮಹಿಳೆಯನ್ನು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಅವರು ಚೆನ್ನಾಗಿಲ್ಲ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ ಅಲ್ಲಿದ್ದ ವ್ಯಕ್ತಿಯೊಬ್ಬ ಆ ಮಹಿಳೆಯನ್ನು ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾನೆ.

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ ಮುಗಿದ ಬಳಿಕ ಮಾತನಾಡಿದ್ದ ಈ ಮಹಿಳೆ ಚಿತ್ರ ಚೆನ್ನಾಗಿಲ್ಲ ಎಂದು ನೇರವಾಗಿ ಕ್ಯಾಮೆರಾ ಮುಂದೆ ನಿಂತು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಅವಾಚ್ಯ ಪದಗಳನ್ನು ಬಳಸಿ ಆಕೆಯನ್ನು ನೂರಾರು ಜನರ ಮುಂದೆ ನಿಂದಿಸಿದ್ದಾನೆ.

ಚಿತ್ರ ಚೆನ್ನಾಗಿಲ್ಲ ಅನ್ನೋಕೆ ನೀನ್ಯಾರು, ಚಿತ್ರ ಚೆನ್ನಾಗಿದೆ, ಚಿತ್ರ ನೋಡಿ ಹೇಗಿದೆ ಎಂದು ಹೇಳಲು ನಿನಗೆ ಯಾರು ಹೇಳಿದ್ರು? ಎಂದೆಲ್ಲಾ ಜೋರು ದನಿಯಲ್ಲಿ ಮಾತನಾಡಿದ್ದಾನೆ. ಕನ್ನಡ ಚಿತ್ರವೊಂದನ್ನು ನೋಡಲು ಬಂದ ಮಹಿಳೆಗೆ ವ್ಯಕ್ತಿಯೊಬ್ಬ ಅತಿ ಕೆಟ್ಟ ಪದ ಬಳಕೆ ಮಾಡುತ್ತಿದ್ದರೂ ಅಲ್ಲಿ ನೆರೆದಿದ್ದ ಪ್ರತಿಯೊಬ್ಬರೂ ಸಹ ಆಕೆಯದ್ದೆ ತಪ್ಪು, ಚಿತ್ರ ಚೆನ್ನಾಗಿಲ್ಲ ಎಂದಿದ್ದೇ ತಪ್ಪು ಎಂದಿದ್ದಾರೆ.

ಮಹಿಳೆಯನ್ನು ನಿಂದಿಸಿ, ಆಕೆಯ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿ ಚಿತ್ರ ತಂಡಕ್ಕೆ ಸಂಬಂಧಿಸಿದವರೋ ಅಲ್ಲವೋ ಎನ್ನುವ ಬಗ್ಗೆ ತಿಳಿದುಬಂದಿಲ್ಲ.

ಈ ಘಟನೆ ನಡೆಯುತ್ತಿದ್ದಾಗ ಮಧ್ಯ ಪ್ರವೇಶಿಸಿದ ಚಿತ್ರಮಂದಿರದ ಮ್ಯಾನೇಜರ್, ಆ ಮಹಿಳೆಯನ್ನು ಅಲ್ಲಿಂದ ಕಳುಹಿಸಿದ್ದಾರೆ. ಆನಂತರ ಮಾಧ್ಯಮದ ಎದುರು ಮಾತನಾಡಿದ ಅವರು, ”ಆಕೆ ಡ್ರಗ್ ಅಡಿಕ್ಟ್ ಅನಿಸುತ್ತೆ, ಯಾರೋ ಚಿತ್ರ ಚೆನ್ನಾಗಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ ಅನಿಸುತ್ತದೆ. ನಾನು ಚಿತ್ರ ನೋಡಿದೆ, ಆಕೆ ಹೇಳುವ ಹಾಗಿಲ್ಲ” ಎಂದು ಮಹಿಳೆಯ ವಿರುದ್ಧವೇ ಮಾತನಾಡಿದ್ದಾರೆ.

ಚಿತ್ರಮಂದಿರದ ಅಂಗಳದಲ್ಲಿ ತನ್ನ ಪರ ಯಾರೊಬ್ಬರೂ ಮಾತನಾಡದೇ ಇದ್ದಾಗ ಆ ಮಹಿಳೆ ಅಲ್ಲಿಂದ ನೋವಿನಿಂದಲೇ ಹೊರನಡೆದಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಅನೇಕರು ಚಿತ್ರ ಚೆನ್ನಾಗಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, ಚಿತ್ರಮಂದಿರಕ್ಕೆ ಚಿತ್ರಗಳನ್ನು ವೀಕ್ಷಿಸುವ ಪ್ರೇಕ್ಷಕರು ಚಿತ್ರ ಸೂಪರ್ ಎಂದು ಹೇಳಲೇಬೇಕಾ? ಎಂಬ ಪ್ರಶ್ನೆ ಮಾಡಿದ್ದಾರೆ.

”ನಮ್ಮ ಸ್ವಂತ ಹಣದಿಂದ ಟಿಕೆಟ್ ಖರೀದಿಸಿ ಚಿತ್ರ ನೋಡಿರುತ್ತೇವೆ. ಚಿತ್ರ ಹೇಗಿದೆ ಎಂದು ಹೇಳುವ ಎಲ್ಲಾ ರೀತಿಯ ಹಕ್ಕು ನಮಗೆ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ” ಎಂದು ಆಕ್ರೋಶದ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಟೋಬಿ ಚಿತ್ರ ಬೃಹತ್ ನಿರೀಕ್ಷೆಯೊಂದಿಗೆ ಚಿತ್ರಮಂದಿರಗಳ ಅಂಗಳಕ್ಕೆ ಬಂದಿದೆ. ಆದರೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಕೆಲವರು ಚಿತ್ರ ಮಾಸ್ಟರ್‌ಪೀಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರೆ, ಇನ್ನೂ ಕೆಲವರು ಚಿತ್ರ ನಿರೀಕ್ಷಿಸಿದ ರೇಂಜ್‌ಗೇನೂ ಇಲ್ಲ, ಒಮ್ಮೆ ನೋಡಬಹುದು ಎಂಬ ಟ್ವೀಟ್‌ಗಳನ್ನು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...