Homeಕರ್ನಾಟಕ'ಟೋಬಿ' ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

- Advertisement -
- Advertisement -

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಚಿತ್ರ ವೀಕ್ಷಿಸಿ ಚಿತ್ರಮಂದಿರದಿಂದ ಮಹಿಳೆಯೊಬ್ಬರು ಯುಟ್ಯೂಬ್ ಚಾನೆಲ್ ಒಂದಕ್ಕೆ ಪ್ರತಿಕ್ರಿಸುವಾಗ ‘ಚಿತ್ರ ಚೆನ್ನಾಗಿಲ್ಲ’ ಎಂದು ಹೇಳಿದ್ದಾರೆ. ಅದನ್ನು ಕೇಳಿಸಿಕೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಯಾವುದೇ ಚಿತ್ರ ಬಿಡುಗಡೆಯಾದ ದಿನ ಚಿತ್ರಮಂದಿರದ ಮುಂದೆ ಮಾಧ್ಯಮ ಪ್ರತಿನಿಧಿಗಳು ಬಂದು ಚಿತ್ರ ಹೇಗಿದೆ ಎಂದು ಪ್ರೇಕ್ಷಕರ ಅಭಿಪ್ರಾಯಗಳನ್ನು ಕೇಳುವುದು ಸಹಜವಾಗಿದೆ. ಅದೇ ರೀತಿ ಟೋಬಿ ಚಿತ್ರಕ್ಕೂ ಸಹ ಚಿತ್ರ ಹೇಗಿದೆ ಹೇಳಿ ಎಂದು ಯುಟ್ಯೂಬ್ ಚಾನೆಲ್ ಪ್ರತಿನಿಧಿಯೊಬ್ಬರು ಚಿತ್ರ ವೀಕ್ಷಿಸಿ ಹೊರಬಂದ ಮಹಿಳೆಯನ್ನು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಅವರು ಚೆನ್ನಾಗಿಲ್ಲ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ ಅಲ್ಲಿದ್ದ ವ್ಯಕ್ತಿಯೊಬ್ಬ ಆ ಮಹಿಳೆಯನ್ನು ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾನೆ.

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ ಮುಗಿದ ಬಳಿಕ ಮಾತನಾಡಿದ್ದ ಈ ಮಹಿಳೆ ಚಿತ್ರ ಚೆನ್ನಾಗಿಲ್ಲ ಎಂದು ನೇರವಾಗಿ ಕ್ಯಾಮೆರಾ ಮುಂದೆ ನಿಂತು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಅವಾಚ್ಯ ಪದಗಳನ್ನು ಬಳಸಿ ಆಕೆಯನ್ನು ನೂರಾರು ಜನರ ಮುಂದೆ ನಿಂದಿಸಿದ್ದಾನೆ.

ಚಿತ್ರ ಚೆನ್ನಾಗಿಲ್ಲ ಅನ್ನೋಕೆ ನೀನ್ಯಾರು, ಚಿತ್ರ ಚೆನ್ನಾಗಿದೆ, ಚಿತ್ರ ನೋಡಿ ಹೇಗಿದೆ ಎಂದು ಹೇಳಲು ನಿನಗೆ ಯಾರು ಹೇಳಿದ್ರು? ಎಂದೆಲ್ಲಾ ಜೋರು ದನಿಯಲ್ಲಿ ಮಾತನಾಡಿದ್ದಾನೆ. ಕನ್ನಡ ಚಿತ್ರವೊಂದನ್ನು ನೋಡಲು ಬಂದ ಮಹಿಳೆಗೆ ವ್ಯಕ್ತಿಯೊಬ್ಬ ಅತಿ ಕೆಟ್ಟ ಪದ ಬಳಕೆ ಮಾಡುತ್ತಿದ್ದರೂ ಅಲ್ಲಿ ನೆರೆದಿದ್ದ ಪ್ರತಿಯೊಬ್ಬರೂ ಸಹ ಆಕೆಯದ್ದೆ ತಪ್ಪು, ಚಿತ್ರ ಚೆನ್ನಾಗಿಲ್ಲ ಎಂದಿದ್ದೇ ತಪ್ಪು ಎಂದಿದ್ದಾರೆ.

ಮಹಿಳೆಯನ್ನು ನಿಂದಿಸಿ, ಆಕೆಯ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿ ಚಿತ್ರ ತಂಡಕ್ಕೆ ಸಂಬಂಧಿಸಿದವರೋ ಅಲ್ಲವೋ ಎನ್ನುವ ಬಗ್ಗೆ ತಿಳಿದುಬಂದಿಲ್ಲ.

ಈ ಘಟನೆ ನಡೆಯುತ್ತಿದ್ದಾಗ ಮಧ್ಯ ಪ್ರವೇಶಿಸಿದ ಚಿತ್ರಮಂದಿರದ ಮ್ಯಾನೇಜರ್, ಆ ಮಹಿಳೆಯನ್ನು ಅಲ್ಲಿಂದ ಕಳುಹಿಸಿದ್ದಾರೆ. ಆನಂತರ ಮಾಧ್ಯಮದ ಎದುರು ಮಾತನಾಡಿದ ಅವರು, ”ಆಕೆ ಡ್ರಗ್ ಅಡಿಕ್ಟ್ ಅನಿಸುತ್ತೆ, ಯಾರೋ ಚಿತ್ರ ಚೆನ್ನಾಗಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ ಅನಿಸುತ್ತದೆ. ನಾನು ಚಿತ್ರ ನೋಡಿದೆ, ಆಕೆ ಹೇಳುವ ಹಾಗಿಲ್ಲ” ಎಂದು ಮಹಿಳೆಯ ವಿರುದ್ಧವೇ ಮಾತನಾಡಿದ್ದಾರೆ.

ಚಿತ್ರಮಂದಿರದ ಅಂಗಳದಲ್ಲಿ ತನ್ನ ಪರ ಯಾರೊಬ್ಬರೂ ಮಾತನಾಡದೇ ಇದ್ದಾಗ ಆ ಮಹಿಳೆ ಅಲ್ಲಿಂದ ನೋವಿನಿಂದಲೇ ಹೊರನಡೆದಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಅನೇಕರು ಚಿತ್ರ ಚೆನ್ನಾಗಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, ಚಿತ್ರಮಂದಿರಕ್ಕೆ ಚಿತ್ರಗಳನ್ನು ವೀಕ್ಷಿಸುವ ಪ್ರೇಕ್ಷಕರು ಚಿತ್ರ ಸೂಪರ್ ಎಂದು ಹೇಳಲೇಬೇಕಾ? ಎಂಬ ಪ್ರಶ್ನೆ ಮಾಡಿದ್ದಾರೆ.

”ನಮ್ಮ ಸ್ವಂತ ಹಣದಿಂದ ಟಿಕೆಟ್ ಖರೀದಿಸಿ ಚಿತ್ರ ನೋಡಿರುತ್ತೇವೆ. ಚಿತ್ರ ಹೇಗಿದೆ ಎಂದು ಹೇಳುವ ಎಲ್ಲಾ ರೀತಿಯ ಹಕ್ಕು ನಮಗೆ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ” ಎಂದು ಆಕ್ರೋಶದ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಟೋಬಿ ಚಿತ್ರ ಬೃಹತ್ ನಿರೀಕ್ಷೆಯೊಂದಿಗೆ ಚಿತ್ರಮಂದಿರಗಳ ಅಂಗಳಕ್ಕೆ ಬಂದಿದೆ. ಆದರೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಕೆಲವರು ಚಿತ್ರ ಮಾಸ್ಟರ್‌ಪೀಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರೆ, ಇನ್ನೂ ಕೆಲವರು ಚಿತ್ರ ನಿರೀಕ್ಷಿಸಿದ ರೇಂಜ್‌ಗೇನೂ ಇಲ್ಲ, ಒಮ್ಮೆ ನೋಡಬಹುದು ಎಂಬ ಟ್ವೀಟ್‌ಗಳನ್ನು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...