Homeಸಿನಿಮಾಕ್ರೀಡೆಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅದ್ಯಾವುದೂ ಅವರ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ.

- Advertisement -
- Advertisement -

ಉಸೇನ್ ಬೋಲ್ಟ್ ಅಂದರೆ ಕಣ್ಣಮುಂದೆ ಬರೋದು ಆತ ಗೆದ್ದ ಪ್ರಶಸ್ತಿಗಳು, ಪರಿಶ್ರಮವನ್ನು ಸಾರಿ ಸಾರಿ ಹೇಳುವ ಸಾಲುಸಾಲು ದಾಖಲೆಗಳು. ಆದರೆ ಈಗ ಅಮೆರಿಕದ 33 ವರ್ಷದ ಮಹಿಳಾ ಓಟಗಾರ್ತಿ ಅಲ್ಲಿಸನ್ ಫೆಲಿಕ್ಸ್, ಉಸೇನ್ ಬೋಲ್ಟ್ ಅವರ ಎಲ್ಲ ದಾಖಲೆಗಳನ್ನು ಹಿಂದಿಕ್ಕುವ ಮೂಲಕ ಶೇಷ್ಠ ಸಾಧನೆಗೈದಿದ್ದಾರೆ.

ಕತಾರ್‌ನ ದೋಹಾದಲ್ಲಿ ನಡೆದ ಐಎಎಫ್ ವಲ್ರ್ಡ್ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ 4*400 ಮೀಟರ್ ರಿಲೆ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕಕ್ಕೆ ಫೆಲಿಕ್ಸ್ ಕೊರಳೊಡ್ಡಿದ್ದಾರೆ. ಫೆಲಿಕ್ಸ್ 12ನೇ ವಿಶ್ವ ಚಾಂಪಿಯನ್‍ಶಿಪ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಉಸೇನ್ ಬೋಲ್ಟ್ ಅವರನ್ನು ಹಿಂದಿಕ್ಕಿದರು. ಟೂರ್ನಮೆಂಟ್‍ನ ಕೊನೆಯ ದಿನ ಮತ್ತೊಂದು ಚಿನ್ನವನ್ನು ಗೆಲ್ಲುವುದರೊಂದಿಗೆ ಅವರ ಹೆಸರಿಗೆ 13ನೇ ಚಿನ್ನವನ್ನು ಸೇರಿಸಿದರು. ಈಗಾಗಲೇ ಫೆಲಿಕ್ಸ್, ಹಲವು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದು, ನಾಲ್ಕು ಒಲಿಂಪಿಕ್ ಸ್ಪರ್ಧೆಯಲ್ಲಿ ಒಂಭತ್ತು ಪದಕ ಗೆದ್ದ ಸಾಧನೆ ಅವರದ್ದು.

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯ ವೇಳೆ ಸಾಕಷ್ಟು ತೊಂದರೆ ಅನುಭವಿಸಿದ್ದರು ಕೂಡ. ಆದರೆ ಅದ್ಯಾವುದೂ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ. ಆದರೆ ಸಾಧಕಿ ಫೆಲಿಕ್ಸ್‍ಗೆ ಕ್ರೀಡಾಜಗತ್ತಿನಲ್ಲಿ ತಾವು ಕಂಡು, ಅನುಭವಿಸಿದ ತಾರತಮ್ಯ ನೀತಿ ಇನ್ನಿಲ್ಲದಂತೆ ಕಾಡುತ್ತಿತ್ತು. ಸಾಹಸಿ ಮಹಿಳಾ ಆಟಗಾರ್ತಿಯರಿಗೆ ವೇತನ ತಾರತಮ್ಯ ಮಾಡುತ್ತಿರುವ ವಿಷಯ ಹಿಂಸಿಸುತ್ತಿತ್ತು. ಇದನ್ನು ಸ್ವತಃ ಅನುಭವಿಸಿದ್ದ ಫೆಲಿಕ್ಸ್, ವಿಶ್ವದ ಮಹಿಳಾ ಕ್ರೀಡಾಪಟುಗಳಿಗಾಗಿ ಆಗಸ್ಟ್‍ನಲ್ಲಿ ಹೋರಾಟ ನಡೆಸಿದ್ದರು.

ಪ್ರಸಿದ್ಧ ನೈಕ್ ಸಂಸ್ಥೆ, ಗರ್ಭಿಣಿ ಕ್ರೀಡಾಪಟುಗಳು ಮತ್ತು ಹೊಸ ತಾಯಂದಿರಿಗೆ ಅವರ ಸಹವರ್ತಿಗಳಿಗಿಂತ ಕಡಿಮೆ ಸಂಬಳ ನೀಡುತ್ತಿರುವುದನ್ನು ಮನಗಂಡಿದ್ದರು. ನೈಕ್ ಕಂಪನಿಯ ನಿಯಮಾವಳಿಯಂತೆ ಗರ್ಭಿಣಿ ಆಟಗಾರ್ತಿಯರು ಮತ್ತು ತಾಯಂದಿರಿಗೆ ಶೇಕಡಾ 70ಕ್ಕಿಂತ ಕಡಿಮೆ ಹಣ ಪಾವತಿಸಲಾಗುತ್ತದೆ. ನೈಕ್ ಕಂಪನಿಯ ಪ್ರಾಯೋಜಕರಾಗಿದ್ದ ಫೆಲಿಕ್ಸ್, ತಾಯಿಯಾಗಿದ್ದರಿಂದ ಶೇ. 70ಕ್ಕಿಂತ ಕಡಿಮೆ ಸಂಬಳ ಪಾವತಿ ಮಾಡಲಾಗಿತ್ತು. ಈ ಬಗ್ಗೆ ಇತರೆ ಮಹಿಳಾ ಕ್ರೀಡಾಪಟುಗಳ ಗುಂಪಿನೊಂದಿಗೆ ಫೆಲಿಕ್ಸ್ ಚರ್ಚಿಸಿದ್ದರು. ನೈಕ್ ನೀತಿ ಗರ್ಭಧಾರಣೆ ನಂತರ ಕನಿಷ್ಠ 18 ತಿಂಗಳವರೆಗೆ ಪ್ರಾಯೋಜಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರುವುದಿಲ್ಲ ಎಂದು ಹೊಸ ನೀತಿ ಹೇಳುತ್ತದೆ ಎಂಬುದನ್ನು ಖಚಿತಪಡಿಸಿಕೊಂಡರು. ನಂತರ ನೈಕ್ ನಿಯಮಾವಳಿಯ ವಿರುದ್ಧ ವೇತನ ತಾರತಮ್ಯದ ವಿರುದ್ಧ ಹೋರಾಟ ಆರಂಭಿಸಿದರು.

ಮಹಿಳಾ ಕ್ರೀಡಾಪಟುಗಳಿಗೆ ಆಗುತ್ತಿರುವ ಅನ್ಯಾಯ ಹಾಗೂ ತಾರತಮ್ಯ ಹೋಗಲಾಡಿಸಲು ಮತ್ತು ಸಮಾನ ವೇತನಕ್ಕಾಗಿ ಹೋರಾಟಗಳು ನಡೆಯುತ್ತಲೇ ಇವೆ. ಇದರಲ್ಲಿ ಮೇಗನ್ ರಾಪಿನೋ ತಂಡ, 2019ರಲ್ಲಿ ನಡೆದ ವಿಶ್ವಕಪ್ ಪ್ರಶಸ್ತಿಯ ಮೊದಲು ಮತ್ತು ನಂತರದ ಸಮಯದಲ್ಲಿ ಪುರುಷರು ಮತ್ತು ಮಹಿಳೆಯರ ಫುಟ್ಬಾಲ್ ತಂಡದ ನಡುವೆ ನಡೆದ ವೇತನ ತಾರತಮ್ಯದ ಮೇಲೆ ಬೆಳಕು ಚೆಲ್ಲುತ್ತದೆ. ಮಹಿಳಾ ಮತ್ತು ಪುರುಷ ಸಹವರ್ತಿ ಕ್ರೀಡಾಪಟುಗಳ ವೇತನದಲ್ಲಿ ತಾರತಮ್ಯ ಮಾಡುತ್ತಿರುವ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ವೇತನ ತಾರತಮ್ಯ ಎಲ್ಲಾ ಕ್ಷೇತ್ರಗಳಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಆದರೆ ಅದು ಕ್ರೀಡಾಜಗತ್ತಿಗೂ ಅಂಟಿಕೊಂಡಿರುವುದು ಶೋಚನೀಯ. ಅದರಲ್ಲೂ ಗರ್ಭಿಣಿ ಹಾಗೂ ತಾಯಂದಿರಾದ ನಂತರ ಕೆಲಸ ಮಾಡುವ ಮಹಿಳೆಯರು, ಕೆಲಸಕ್ಕೆ ಯೋಗ್ಯರಾಗಿರುವುದಿಲ್ಲ ಎಂದೇ ಯೋಚಿಸಲಾಗುತ್ತದೆ. ಆದರೆ ಅಲ್ಲಿಸನ್ ಫೆಲಿಕ್ಸ್ ಇದೆಲ್ಲವನ್ನೂ ಸುಳ್ಳಾಗಿಸಿ ಬಿಟ್ಟರು. ದೋಹಾದಲ್ಲಿ ನಡೆದ ಒಲಿಂಪಿಕ್‍ನಲ್ಲಿ ಗೆಲುವು ಸಾಧಿಸುವ ಮೂಲಕ ತಾಯಿಯಾದ ಬಳಿಕವೂ ಮಹಿಳೆಯರು ಸ್ಟ್ರಾಂಗ್ ಮತ್ತು ಹೆಲ್ತಿ ಅಂಡ್ ಫಿಟ್ ಆಗಿರುತ್ತಾರೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಈಗ ಸಮಾನ ವೇತನಕ್ಕಾಗಿ ನೈಕ್ ಸಂಸ್ಥೆಯ ನಿಯಮಾವಳಿ ವಿರುದ್ಧ ನಡೆಸಿದ ಫೆಲಿಕ್ಸ್ ಹೋರಾಟ ಸಫಲವಾಗಿದ್ದು, ಎಲ್ಲ ಆಟಗಾರ್ತಿ ತಾಯಂದಿರಲ್ಲಿ ಸಂತಸ ತಂದಿದೆ. ಫೆಲಿಕ್ಸ್ ಓಟ ಮತ್ತು ಹೋರಾಟದಲ್ಲಿ ವಿಜಯಿಯಾಗಿದ್ದಾರೆ. ನೈಕ್ ಜಗತ್ತಿನ ಎಲ್ಲ ಮಹಿಳೆಯರಿಗೆ ಭರವಸೆ ನೀಡಿದೆ. ಇನ್ನು ಫೆಲಿಕ್ಸ್ ಈಗ 2020ರ ಬೇಸಿಗೆಯಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್‍ಗಾಗಿ ತಯಾರಿ ನಡೆಸುತ್ತಿದ್ದಾರೆ. 2020ರಲ್ಲೂ ಚಿನ್ನವನ್ನು ತನ್ನದಾಗಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ಮೂಡಿಸಿದ್ದಾರೆ. ಫೆಲಿಕ್ಸ್ ಒಬ್ಬ ಪ್ರತಿಭಾವಂತ ಆಟಗಾರ್ತಿ. ತನ್ನ 18ನೇ ವರ್ಷ ವಯಸ್ಸಿನಲ್ಲೇ ಒಲಿಂಪಿಕ್ ಪದಕ ತಮ್ಮದಾಗಿಸಿಕೊಂಡಿದ್ದರು. ಈಗ ಟೋಕಿಯೋ ಒಲಿಂಪಿಕ್‍ನತ್ತ ಚಿತ್ತ ನೆಟ್ಟಿದ್ದಾರೆ. ಈಗ ಫೆಲಿಕ್ಸ್ ಹೋರಾಟ, ಪ್ರತಿಭೆ ಮತ್ತು ಕ್ರಿಯಾಶೀಲ ಮಹಿಳೆಯರ ದೃಢ ಹೆಜ್ಜೆಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...