Homeಸಿನಿಮಾಕ್ರೀಡೆಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅದ್ಯಾವುದೂ ಅವರ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ.

- Advertisement -
- Advertisement -

ಉಸೇನ್ ಬೋಲ್ಟ್ ಅಂದರೆ ಕಣ್ಣಮುಂದೆ ಬರೋದು ಆತ ಗೆದ್ದ ಪ್ರಶಸ್ತಿಗಳು, ಪರಿಶ್ರಮವನ್ನು ಸಾರಿ ಸಾರಿ ಹೇಳುವ ಸಾಲುಸಾಲು ದಾಖಲೆಗಳು. ಆದರೆ ಈಗ ಅಮೆರಿಕದ 33 ವರ್ಷದ ಮಹಿಳಾ ಓಟಗಾರ್ತಿ ಅಲ್ಲಿಸನ್ ಫೆಲಿಕ್ಸ್, ಉಸೇನ್ ಬೋಲ್ಟ್ ಅವರ ಎಲ್ಲ ದಾಖಲೆಗಳನ್ನು ಹಿಂದಿಕ್ಕುವ ಮೂಲಕ ಶೇಷ್ಠ ಸಾಧನೆಗೈದಿದ್ದಾರೆ.

ಕತಾರ್‌ನ ದೋಹಾದಲ್ಲಿ ನಡೆದ ಐಎಎಫ್ ವಲ್ರ್ಡ್ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ 4*400 ಮೀಟರ್ ರಿಲೆ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕಕ್ಕೆ ಫೆಲಿಕ್ಸ್ ಕೊರಳೊಡ್ಡಿದ್ದಾರೆ. ಫೆಲಿಕ್ಸ್ 12ನೇ ವಿಶ್ವ ಚಾಂಪಿಯನ್‍ಶಿಪ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಉಸೇನ್ ಬೋಲ್ಟ್ ಅವರನ್ನು ಹಿಂದಿಕ್ಕಿದರು. ಟೂರ್ನಮೆಂಟ್‍ನ ಕೊನೆಯ ದಿನ ಮತ್ತೊಂದು ಚಿನ್ನವನ್ನು ಗೆಲ್ಲುವುದರೊಂದಿಗೆ ಅವರ ಹೆಸರಿಗೆ 13ನೇ ಚಿನ್ನವನ್ನು ಸೇರಿಸಿದರು. ಈಗಾಗಲೇ ಫೆಲಿಕ್ಸ್, ಹಲವು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದು, ನಾಲ್ಕು ಒಲಿಂಪಿಕ್ ಸ್ಪರ್ಧೆಯಲ್ಲಿ ಒಂಭತ್ತು ಪದಕ ಗೆದ್ದ ಸಾಧನೆ ಅವರದ್ದು.

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯ ವೇಳೆ ಸಾಕಷ್ಟು ತೊಂದರೆ ಅನುಭವಿಸಿದ್ದರು ಕೂಡ. ಆದರೆ ಅದ್ಯಾವುದೂ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ. ಆದರೆ ಸಾಧಕಿ ಫೆಲಿಕ್ಸ್‍ಗೆ ಕ್ರೀಡಾಜಗತ್ತಿನಲ್ಲಿ ತಾವು ಕಂಡು, ಅನುಭವಿಸಿದ ತಾರತಮ್ಯ ನೀತಿ ಇನ್ನಿಲ್ಲದಂತೆ ಕಾಡುತ್ತಿತ್ತು. ಸಾಹಸಿ ಮಹಿಳಾ ಆಟಗಾರ್ತಿಯರಿಗೆ ವೇತನ ತಾರತಮ್ಯ ಮಾಡುತ್ತಿರುವ ವಿಷಯ ಹಿಂಸಿಸುತ್ತಿತ್ತು. ಇದನ್ನು ಸ್ವತಃ ಅನುಭವಿಸಿದ್ದ ಫೆಲಿಕ್ಸ್, ವಿಶ್ವದ ಮಹಿಳಾ ಕ್ರೀಡಾಪಟುಗಳಿಗಾಗಿ ಆಗಸ್ಟ್‍ನಲ್ಲಿ ಹೋರಾಟ ನಡೆಸಿದ್ದರು.

ಪ್ರಸಿದ್ಧ ನೈಕ್ ಸಂಸ್ಥೆ, ಗರ್ಭಿಣಿ ಕ್ರೀಡಾಪಟುಗಳು ಮತ್ತು ಹೊಸ ತಾಯಂದಿರಿಗೆ ಅವರ ಸಹವರ್ತಿಗಳಿಗಿಂತ ಕಡಿಮೆ ಸಂಬಳ ನೀಡುತ್ತಿರುವುದನ್ನು ಮನಗಂಡಿದ್ದರು. ನೈಕ್ ಕಂಪನಿಯ ನಿಯಮಾವಳಿಯಂತೆ ಗರ್ಭಿಣಿ ಆಟಗಾರ್ತಿಯರು ಮತ್ತು ತಾಯಂದಿರಿಗೆ ಶೇಕಡಾ 70ಕ್ಕಿಂತ ಕಡಿಮೆ ಹಣ ಪಾವತಿಸಲಾಗುತ್ತದೆ. ನೈಕ್ ಕಂಪನಿಯ ಪ್ರಾಯೋಜಕರಾಗಿದ್ದ ಫೆಲಿಕ್ಸ್, ತಾಯಿಯಾಗಿದ್ದರಿಂದ ಶೇ. 70ಕ್ಕಿಂತ ಕಡಿಮೆ ಸಂಬಳ ಪಾವತಿ ಮಾಡಲಾಗಿತ್ತು. ಈ ಬಗ್ಗೆ ಇತರೆ ಮಹಿಳಾ ಕ್ರೀಡಾಪಟುಗಳ ಗುಂಪಿನೊಂದಿಗೆ ಫೆಲಿಕ್ಸ್ ಚರ್ಚಿಸಿದ್ದರು. ನೈಕ್ ನೀತಿ ಗರ್ಭಧಾರಣೆ ನಂತರ ಕನಿಷ್ಠ 18 ತಿಂಗಳವರೆಗೆ ಪ್ರಾಯೋಜಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರುವುದಿಲ್ಲ ಎಂದು ಹೊಸ ನೀತಿ ಹೇಳುತ್ತದೆ ಎಂಬುದನ್ನು ಖಚಿತಪಡಿಸಿಕೊಂಡರು. ನಂತರ ನೈಕ್ ನಿಯಮಾವಳಿಯ ವಿರುದ್ಧ ವೇತನ ತಾರತಮ್ಯದ ವಿರುದ್ಧ ಹೋರಾಟ ಆರಂಭಿಸಿದರು.

ಮಹಿಳಾ ಕ್ರೀಡಾಪಟುಗಳಿಗೆ ಆಗುತ್ತಿರುವ ಅನ್ಯಾಯ ಹಾಗೂ ತಾರತಮ್ಯ ಹೋಗಲಾಡಿಸಲು ಮತ್ತು ಸಮಾನ ವೇತನಕ್ಕಾಗಿ ಹೋರಾಟಗಳು ನಡೆಯುತ್ತಲೇ ಇವೆ. ಇದರಲ್ಲಿ ಮೇಗನ್ ರಾಪಿನೋ ತಂಡ, 2019ರಲ್ಲಿ ನಡೆದ ವಿಶ್ವಕಪ್ ಪ್ರಶಸ್ತಿಯ ಮೊದಲು ಮತ್ತು ನಂತರದ ಸಮಯದಲ್ಲಿ ಪುರುಷರು ಮತ್ತು ಮಹಿಳೆಯರ ಫುಟ್ಬಾಲ್ ತಂಡದ ನಡುವೆ ನಡೆದ ವೇತನ ತಾರತಮ್ಯದ ಮೇಲೆ ಬೆಳಕು ಚೆಲ್ಲುತ್ತದೆ. ಮಹಿಳಾ ಮತ್ತು ಪುರುಷ ಸಹವರ್ತಿ ಕ್ರೀಡಾಪಟುಗಳ ವೇತನದಲ್ಲಿ ತಾರತಮ್ಯ ಮಾಡುತ್ತಿರುವ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ವೇತನ ತಾರತಮ್ಯ ಎಲ್ಲಾ ಕ್ಷೇತ್ರಗಳಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಆದರೆ ಅದು ಕ್ರೀಡಾಜಗತ್ತಿಗೂ ಅಂಟಿಕೊಂಡಿರುವುದು ಶೋಚನೀಯ. ಅದರಲ್ಲೂ ಗರ್ಭಿಣಿ ಹಾಗೂ ತಾಯಂದಿರಾದ ನಂತರ ಕೆಲಸ ಮಾಡುವ ಮಹಿಳೆಯರು, ಕೆಲಸಕ್ಕೆ ಯೋಗ್ಯರಾಗಿರುವುದಿಲ್ಲ ಎಂದೇ ಯೋಚಿಸಲಾಗುತ್ತದೆ. ಆದರೆ ಅಲ್ಲಿಸನ್ ಫೆಲಿಕ್ಸ್ ಇದೆಲ್ಲವನ್ನೂ ಸುಳ್ಳಾಗಿಸಿ ಬಿಟ್ಟರು. ದೋಹಾದಲ್ಲಿ ನಡೆದ ಒಲಿಂಪಿಕ್‍ನಲ್ಲಿ ಗೆಲುವು ಸಾಧಿಸುವ ಮೂಲಕ ತಾಯಿಯಾದ ಬಳಿಕವೂ ಮಹಿಳೆಯರು ಸ್ಟ್ರಾಂಗ್ ಮತ್ತು ಹೆಲ್ತಿ ಅಂಡ್ ಫಿಟ್ ಆಗಿರುತ್ತಾರೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಈಗ ಸಮಾನ ವೇತನಕ್ಕಾಗಿ ನೈಕ್ ಸಂಸ್ಥೆಯ ನಿಯಮಾವಳಿ ವಿರುದ್ಧ ನಡೆಸಿದ ಫೆಲಿಕ್ಸ್ ಹೋರಾಟ ಸಫಲವಾಗಿದ್ದು, ಎಲ್ಲ ಆಟಗಾರ್ತಿ ತಾಯಂದಿರಲ್ಲಿ ಸಂತಸ ತಂದಿದೆ. ಫೆಲಿಕ್ಸ್ ಓಟ ಮತ್ತು ಹೋರಾಟದಲ್ಲಿ ವಿಜಯಿಯಾಗಿದ್ದಾರೆ. ನೈಕ್ ಜಗತ್ತಿನ ಎಲ್ಲ ಮಹಿಳೆಯರಿಗೆ ಭರವಸೆ ನೀಡಿದೆ. ಇನ್ನು ಫೆಲಿಕ್ಸ್ ಈಗ 2020ರ ಬೇಸಿಗೆಯಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್‍ಗಾಗಿ ತಯಾರಿ ನಡೆಸುತ್ತಿದ್ದಾರೆ. 2020ರಲ್ಲೂ ಚಿನ್ನವನ್ನು ತನ್ನದಾಗಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ಮೂಡಿಸಿದ್ದಾರೆ. ಫೆಲಿಕ್ಸ್ ಒಬ್ಬ ಪ್ರತಿಭಾವಂತ ಆಟಗಾರ್ತಿ. ತನ್ನ 18ನೇ ವರ್ಷ ವಯಸ್ಸಿನಲ್ಲೇ ಒಲಿಂಪಿಕ್ ಪದಕ ತಮ್ಮದಾಗಿಸಿಕೊಂಡಿದ್ದರು. ಈಗ ಟೋಕಿಯೋ ಒಲಿಂಪಿಕ್‍ನತ್ತ ಚಿತ್ತ ನೆಟ್ಟಿದ್ದಾರೆ. ಈಗ ಫೆಲಿಕ್ಸ್ ಹೋರಾಟ, ಪ್ರತಿಭೆ ಮತ್ತು ಕ್ರಿಯಾಶೀಲ ಮಹಿಳೆಯರ ದೃಢ ಹೆಜ್ಜೆಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...