Homeಸಿನಿಮಾಕ್ರೀಡೆಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅದ್ಯಾವುದೂ ಅವರ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ.

- Advertisement -
- Advertisement -

ಉಸೇನ್ ಬೋಲ್ಟ್ ಅಂದರೆ ಕಣ್ಣಮುಂದೆ ಬರೋದು ಆತ ಗೆದ್ದ ಪ್ರಶಸ್ತಿಗಳು, ಪರಿಶ್ರಮವನ್ನು ಸಾರಿ ಸಾರಿ ಹೇಳುವ ಸಾಲುಸಾಲು ದಾಖಲೆಗಳು. ಆದರೆ ಈಗ ಅಮೆರಿಕದ 33 ವರ್ಷದ ಮಹಿಳಾ ಓಟಗಾರ್ತಿ ಅಲ್ಲಿಸನ್ ಫೆಲಿಕ್ಸ್, ಉಸೇನ್ ಬೋಲ್ಟ್ ಅವರ ಎಲ್ಲ ದಾಖಲೆಗಳನ್ನು ಹಿಂದಿಕ್ಕುವ ಮೂಲಕ ಶೇಷ್ಠ ಸಾಧನೆಗೈದಿದ್ದಾರೆ.

ಕತಾರ್‌ನ ದೋಹಾದಲ್ಲಿ ನಡೆದ ಐಎಎಫ್ ವಲ್ರ್ಡ್ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ 4*400 ಮೀಟರ್ ರಿಲೆ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕಕ್ಕೆ ಫೆಲಿಕ್ಸ್ ಕೊರಳೊಡ್ಡಿದ್ದಾರೆ. ಫೆಲಿಕ್ಸ್ 12ನೇ ವಿಶ್ವ ಚಾಂಪಿಯನ್‍ಶಿಪ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಉಸೇನ್ ಬೋಲ್ಟ್ ಅವರನ್ನು ಹಿಂದಿಕ್ಕಿದರು. ಟೂರ್ನಮೆಂಟ್‍ನ ಕೊನೆಯ ದಿನ ಮತ್ತೊಂದು ಚಿನ್ನವನ್ನು ಗೆಲ್ಲುವುದರೊಂದಿಗೆ ಅವರ ಹೆಸರಿಗೆ 13ನೇ ಚಿನ್ನವನ್ನು ಸೇರಿಸಿದರು. ಈಗಾಗಲೇ ಫೆಲಿಕ್ಸ್, ಹಲವು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದು, ನಾಲ್ಕು ಒಲಿಂಪಿಕ್ ಸ್ಪರ್ಧೆಯಲ್ಲಿ ಒಂಭತ್ತು ಪದಕ ಗೆದ್ದ ಸಾಧನೆ ಅವರದ್ದು.

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯ ವೇಳೆ ಸಾಕಷ್ಟು ತೊಂದರೆ ಅನುಭವಿಸಿದ್ದರು ಕೂಡ. ಆದರೆ ಅದ್ಯಾವುದೂ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ. ಆದರೆ ಸಾಧಕಿ ಫೆಲಿಕ್ಸ್‍ಗೆ ಕ್ರೀಡಾಜಗತ್ತಿನಲ್ಲಿ ತಾವು ಕಂಡು, ಅನುಭವಿಸಿದ ತಾರತಮ್ಯ ನೀತಿ ಇನ್ನಿಲ್ಲದಂತೆ ಕಾಡುತ್ತಿತ್ತು. ಸಾಹಸಿ ಮಹಿಳಾ ಆಟಗಾರ್ತಿಯರಿಗೆ ವೇತನ ತಾರತಮ್ಯ ಮಾಡುತ್ತಿರುವ ವಿಷಯ ಹಿಂಸಿಸುತ್ತಿತ್ತು. ಇದನ್ನು ಸ್ವತಃ ಅನುಭವಿಸಿದ್ದ ಫೆಲಿಕ್ಸ್, ವಿಶ್ವದ ಮಹಿಳಾ ಕ್ರೀಡಾಪಟುಗಳಿಗಾಗಿ ಆಗಸ್ಟ್‍ನಲ್ಲಿ ಹೋರಾಟ ನಡೆಸಿದ್ದರು.

ಪ್ರಸಿದ್ಧ ನೈಕ್ ಸಂಸ್ಥೆ, ಗರ್ಭಿಣಿ ಕ್ರೀಡಾಪಟುಗಳು ಮತ್ತು ಹೊಸ ತಾಯಂದಿರಿಗೆ ಅವರ ಸಹವರ್ತಿಗಳಿಗಿಂತ ಕಡಿಮೆ ಸಂಬಳ ನೀಡುತ್ತಿರುವುದನ್ನು ಮನಗಂಡಿದ್ದರು. ನೈಕ್ ಕಂಪನಿಯ ನಿಯಮಾವಳಿಯಂತೆ ಗರ್ಭಿಣಿ ಆಟಗಾರ್ತಿಯರು ಮತ್ತು ತಾಯಂದಿರಿಗೆ ಶೇಕಡಾ 70ಕ್ಕಿಂತ ಕಡಿಮೆ ಹಣ ಪಾವತಿಸಲಾಗುತ್ತದೆ. ನೈಕ್ ಕಂಪನಿಯ ಪ್ರಾಯೋಜಕರಾಗಿದ್ದ ಫೆಲಿಕ್ಸ್, ತಾಯಿಯಾಗಿದ್ದರಿಂದ ಶೇ. 70ಕ್ಕಿಂತ ಕಡಿಮೆ ಸಂಬಳ ಪಾವತಿ ಮಾಡಲಾಗಿತ್ತು. ಈ ಬಗ್ಗೆ ಇತರೆ ಮಹಿಳಾ ಕ್ರೀಡಾಪಟುಗಳ ಗುಂಪಿನೊಂದಿಗೆ ಫೆಲಿಕ್ಸ್ ಚರ್ಚಿಸಿದ್ದರು. ನೈಕ್ ನೀತಿ ಗರ್ಭಧಾರಣೆ ನಂತರ ಕನಿಷ್ಠ 18 ತಿಂಗಳವರೆಗೆ ಪ್ರಾಯೋಜಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರುವುದಿಲ್ಲ ಎಂದು ಹೊಸ ನೀತಿ ಹೇಳುತ್ತದೆ ಎಂಬುದನ್ನು ಖಚಿತಪಡಿಸಿಕೊಂಡರು. ನಂತರ ನೈಕ್ ನಿಯಮಾವಳಿಯ ವಿರುದ್ಧ ವೇತನ ತಾರತಮ್ಯದ ವಿರುದ್ಧ ಹೋರಾಟ ಆರಂಭಿಸಿದರು.

ಮಹಿಳಾ ಕ್ರೀಡಾಪಟುಗಳಿಗೆ ಆಗುತ್ತಿರುವ ಅನ್ಯಾಯ ಹಾಗೂ ತಾರತಮ್ಯ ಹೋಗಲಾಡಿಸಲು ಮತ್ತು ಸಮಾನ ವೇತನಕ್ಕಾಗಿ ಹೋರಾಟಗಳು ನಡೆಯುತ್ತಲೇ ಇವೆ. ಇದರಲ್ಲಿ ಮೇಗನ್ ರಾಪಿನೋ ತಂಡ, 2019ರಲ್ಲಿ ನಡೆದ ವಿಶ್ವಕಪ್ ಪ್ರಶಸ್ತಿಯ ಮೊದಲು ಮತ್ತು ನಂತರದ ಸಮಯದಲ್ಲಿ ಪುರುಷರು ಮತ್ತು ಮಹಿಳೆಯರ ಫುಟ್ಬಾಲ್ ತಂಡದ ನಡುವೆ ನಡೆದ ವೇತನ ತಾರತಮ್ಯದ ಮೇಲೆ ಬೆಳಕು ಚೆಲ್ಲುತ್ತದೆ. ಮಹಿಳಾ ಮತ್ತು ಪುರುಷ ಸಹವರ್ತಿ ಕ್ರೀಡಾಪಟುಗಳ ವೇತನದಲ್ಲಿ ತಾರತಮ್ಯ ಮಾಡುತ್ತಿರುವ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ವೇತನ ತಾರತಮ್ಯ ಎಲ್ಲಾ ಕ್ಷೇತ್ರಗಳಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಆದರೆ ಅದು ಕ್ರೀಡಾಜಗತ್ತಿಗೂ ಅಂಟಿಕೊಂಡಿರುವುದು ಶೋಚನೀಯ. ಅದರಲ್ಲೂ ಗರ್ಭಿಣಿ ಹಾಗೂ ತಾಯಂದಿರಾದ ನಂತರ ಕೆಲಸ ಮಾಡುವ ಮಹಿಳೆಯರು, ಕೆಲಸಕ್ಕೆ ಯೋಗ್ಯರಾಗಿರುವುದಿಲ್ಲ ಎಂದೇ ಯೋಚಿಸಲಾಗುತ್ತದೆ. ಆದರೆ ಅಲ್ಲಿಸನ್ ಫೆಲಿಕ್ಸ್ ಇದೆಲ್ಲವನ್ನೂ ಸುಳ್ಳಾಗಿಸಿ ಬಿಟ್ಟರು. ದೋಹಾದಲ್ಲಿ ನಡೆದ ಒಲಿಂಪಿಕ್‍ನಲ್ಲಿ ಗೆಲುವು ಸಾಧಿಸುವ ಮೂಲಕ ತಾಯಿಯಾದ ಬಳಿಕವೂ ಮಹಿಳೆಯರು ಸ್ಟ್ರಾಂಗ್ ಮತ್ತು ಹೆಲ್ತಿ ಅಂಡ್ ಫಿಟ್ ಆಗಿರುತ್ತಾರೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಈಗ ಸಮಾನ ವೇತನಕ್ಕಾಗಿ ನೈಕ್ ಸಂಸ್ಥೆಯ ನಿಯಮಾವಳಿ ವಿರುದ್ಧ ನಡೆಸಿದ ಫೆಲಿಕ್ಸ್ ಹೋರಾಟ ಸಫಲವಾಗಿದ್ದು, ಎಲ್ಲ ಆಟಗಾರ್ತಿ ತಾಯಂದಿರಲ್ಲಿ ಸಂತಸ ತಂದಿದೆ. ಫೆಲಿಕ್ಸ್ ಓಟ ಮತ್ತು ಹೋರಾಟದಲ್ಲಿ ವಿಜಯಿಯಾಗಿದ್ದಾರೆ. ನೈಕ್ ಜಗತ್ತಿನ ಎಲ್ಲ ಮಹಿಳೆಯರಿಗೆ ಭರವಸೆ ನೀಡಿದೆ. ಇನ್ನು ಫೆಲಿಕ್ಸ್ ಈಗ 2020ರ ಬೇಸಿಗೆಯಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್‍ಗಾಗಿ ತಯಾರಿ ನಡೆಸುತ್ತಿದ್ದಾರೆ. 2020ರಲ್ಲೂ ಚಿನ್ನವನ್ನು ತನ್ನದಾಗಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ಮೂಡಿಸಿದ್ದಾರೆ. ಫೆಲಿಕ್ಸ್ ಒಬ್ಬ ಪ್ರತಿಭಾವಂತ ಆಟಗಾರ್ತಿ. ತನ್ನ 18ನೇ ವರ್ಷ ವಯಸ್ಸಿನಲ್ಲೇ ಒಲಿಂಪಿಕ್ ಪದಕ ತಮ್ಮದಾಗಿಸಿಕೊಂಡಿದ್ದರು. ಈಗ ಟೋಕಿಯೋ ಒಲಿಂಪಿಕ್‍ನತ್ತ ಚಿತ್ತ ನೆಟ್ಟಿದ್ದಾರೆ. ಈಗ ಫೆಲಿಕ್ಸ್ ಹೋರಾಟ, ಪ್ರತಿಭೆ ಮತ್ತು ಕ್ರಿಯಾಶೀಲ ಮಹಿಳೆಯರ ದೃಢ ಹೆಜ್ಜೆಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...