Homeಸಿನಿಮಾಕ್ರೀಡೆಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅದ್ಯಾವುದೂ ಅವರ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ.

- Advertisement -
- Advertisement -

ಉಸೇನ್ ಬೋಲ್ಟ್ ಅಂದರೆ ಕಣ್ಣಮುಂದೆ ಬರೋದು ಆತ ಗೆದ್ದ ಪ್ರಶಸ್ತಿಗಳು, ಪರಿಶ್ರಮವನ್ನು ಸಾರಿ ಸಾರಿ ಹೇಳುವ ಸಾಲುಸಾಲು ದಾಖಲೆಗಳು. ಆದರೆ ಈಗ ಅಮೆರಿಕದ 33 ವರ್ಷದ ಮಹಿಳಾ ಓಟಗಾರ್ತಿ ಅಲ್ಲಿಸನ್ ಫೆಲಿಕ್ಸ್, ಉಸೇನ್ ಬೋಲ್ಟ್ ಅವರ ಎಲ್ಲ ದಾಖಲೆಗಳನ್ನು ಹಿಂದಿಕ್ಕುವ ಮೂಲಕ ಶೇಷ್ಠ ಸಾಧನೆಗೈದಿದ್ದಾರೆ.

ಕತಾರ್‌ನ ದೋಹಾದಲ್ಲಿ ನಡೆದ ಐಎಎಫ್ ವಲ್ರ್ಡ್ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ 4*400 ಮೀಟರ್ ರಿಲೆ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕಕ್ಕೆ ಫೆಲಿಕ್ಸ್ ಕೊರಳೊಡ್ಡಿದ್ದಾರೆ. ಫೆಲಿಕ್ಸ್ 12ನೇ ವಿಶ್ವ ಚಾಂಪಿಯನ್‍ಶಿಪ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಉಸೇನ್ ಬೋಲ್ಟ್ ಅವರನ್ನು ಹಿಂದಿಕ್ಕಿದರು. ಟೂರ್ನಮೆಂಟ್‍ನ ಕೊನೆಯ ದಿನ ಮತ್ತೊಂದು ಚಿನ್ನವನ್ನು ಗೆಲ್ಲುವುದರೊಂದಿಗೆ ಅವರ ಹೆಸರಿಗೆ 13ನೇ ಚಿನ್ನವನ್ನು ಸೇರಿಸಿದರು. ಈಗಾಗಲೇ ಫೆಲಿಕ್ಸ್, ಹಲವು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದು, ನಾಲ್ಕು ಒಲಿಂಪಿಕ್ ಸ್ಪರ್ಧೆಯಲ್ಲಿ ಒಂಭತ್ತು ಪದಕ ಗೆದ್ದ ಸಾಧನೆ ಅವರದ್ದು.

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯ ವೇಳೆ ಸಾಕಷ್ಟು ತೊಂದರೆ ಅನುಭವಿಸಿದ್ದರು ಕೂಡ. ಆದರೆ ಅದ್ಯಾವುದೂ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ. ಆದರೆ ಸಾಧಕಿ ಫೆಲಿಕ್ಸ್‍ಗೆ ಕ್ರೀಡಾಜಗತ್ತಿನಲ್ಲಿ ತಾವು ಕಂಡು, ಅನುಭವಿಸಿದ ತಾರತಮ್ಯ ನೀತಿ ಇನ್ನಿಲ್ಲದಂತೆ ಕಾಡುತ್ತಿತ್ತು. ಸಾಹಸಿ ಮಹಿಳಾ ಆಟಗಾರ್ತಿಯರಿಗೆ ವೇತನ ತಾರತಮ್ಯ ಮಾಡುತ್ತಿರುವ ವಿಷಯ ಹಿಂಸಿಸುತ್ತಿತ್ತು. ಇದನ್ನು ಸ್ವತಃ ಅನುಭವಿಸಿದ್ದ ಫೆಲಿಕ್ಸ್, ವಿಶ್ವದ ಮಹಿಳಾ ಕ್ರೀಡಾಪಟುಗಳಿಗಾಗಿ ಆಗಸ್ಟ್‍ನಲ್ಲಿ ಹೋರಾಟ ನಡೆಸಿದ್ದರು.

ಪ್ರಸಿದ್ಧ ನೈಕ್ ಸಂಸ್ಥೆ, ಗರ್ಭಿಣಿ ಕ್ರೀಡಾಪಟುಗಳು ಮತ್ತು ಹೊಸ ತಾಯಂದಿರಿಗೆ ಅವರ ಸಹವರ್ತಿಗಳಿಗಿಂತ ಕಡಿಮೆ ಸಂಬಳ ನೀಡುತ್ತಿರುವುದನ್ನು ಮನಗಂಡಿದ್ದರು. ನೈಕ್ ಕಂಪನಿಯ ನಿಯಮಾವಳಿಯಂತೆ ಗರ್ಭಿಣಿ ಆಟಗಾರ್ತಿಯರು ಮತ್ತು ತಾಯಂದಿರಿಗೆ ಶೇಕಡಾ 70ಕ್ಕಿಂತ ಕಡಿಮೆ ಹಣ ಪಾವತಿಸಲಾಗುತ್ತದೆ. ನೈಕ್ ಕಂಪನಿಯ ಪ್ರಾಯೋಜಕರಾಗಿದ್ದ ಫೆಲಿಕ್ಸ್, ತಾಯಿಯಾಗಿದ್ದರಿಂದ ಶೇ. 70ಕ್ಕಿಂತ ಕಡಿಮೆ ಸಂಬಳ ಪಾವತಿ ಮಾಡಲಾಗಿತ್ತು. ಈ ಬಗ್ಗೆ ಇತರೆ ಮಹಿಳಾ ಕ್ರೀಡಾಪಟುಗಳ ಗುಂಪಿನೊಂದಿಗೆ ಫೆಲಿಕ್ಸ್ ಚರ್ಚಿಸಿದ್ದರು. ನೈಕ್ ನೀತಿ ಗರ್ಭಧಾರಣೆ ನಂತರ ಕನಿಷ್ಠ 18 ತಿಂಗಳವರೆಗೆ ಪ್ರಾಯೋಜಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರುವುದಿಲ್ಲ ಎಂದು ಹೊಸ ನೀತಿ ಹೇಳುತ್ತದೆ ಎಂಬುದನ್ನು ಖಚಿತಪಡಿಸಿಕೊಂಡರು. ನಂತರ ನೈಕ್ ನಿಯಮಾವಳಿಯ ವಿರುದ್ಧ ವೇತನ ತಾರತಮ್ಯದ ವಿರುದ್ಧ ಹೋರಾಟ ಆರಂಭಿಸಿದರು.

ಮಹಿಳಾ ಕ್ರೀಡಾಪಟುಗಳಿಗೆ ಆಗುತ್ತಿರುವ ಅನ್ಯಾಯ ಹಾಗೂ ತಾರತಮ್ಯ ಹೋಗಲಾಡಿಸಲು ಮತ್ತು ಸಮಾನ ವೇತನಕ್ಕಾಗಿ ಹೋರಾಟಗಳು ನಡೆಯುತ್ತಲೇ ಇವೆ. ಇದರಲ್ಲಿ ಮೇಗನ್ ರಾಪಿನೋ ತಂಡ, 2019ರಲ್ಲಿ ನಡೆದ ವಿಶ್ವಕಪ್ ಪ್ರಶಸ್ತಿಯ ಮೊದಲು ಮತ್ತು ನಂತರದ ಸಮಯದಲ್ಲಿ ಪುರುಷರು ಮತ್ತು ಮಹಿಳೆಯರ ಫುಟ್ಬಾಲ್ ತಂಡದ ನಡುವೆ ನಡೆದ ವೇತನ ತಾರತಮ್ಯದ ಮೇಲೆ ಬೆಳಕು ಚೆಲ್ಲುತ್ತದೆ. ಮಹಿಳಾ ಮತ್ತು ಪುರುಷ ಸಹವರ್ತಿ ಕ್ರೀಡಾಪಟುಗಳ ವೇತನದಲ್ಲಿ ತಾರತಮ್ಯ ಮಾಡುತ್ತಿರುವ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ವೇತನ ತಾರತಮ್ಯ ಎಲ್ಲಾ ಕ್ಷೇತ್ರಗಳಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಆದರೆ ಅದು ಕ್ರೀಡಾಜಗತ್ತಿಗೂ ಅಂಟಿಕೊಂಡಿರುವುದು ಶೋಚನೀಯ. ಅದರಲ್ಲೂ ಗರ್ಭಿಣಿ ಹಾಗೂ ತಾಯಂದಿರಾದ ನಂತರ ಕೆಲಸ ಮಾಡುವ ಮಹಿಳೆಯರು, ಕೆಲಸಕ್ಕೆ ಯೋಗ್ಯರಾಗಿರುವುದಿಲ್ಲ ಎಂದೇ ಯೋಚಿಸಲಾಗುತ್ತದೆ. ಆದರೆ ಅಲ್ಲಿಸನ್ ಫೆಲಿಕ್ಸ್ ಇದೆಲ್ಲವನ್ನೂ ಸುಳ್ಳಾಗಿಸಿ ಬಿಟ್ಟರು. ದೋಹಾದಲ್ಲಿ ನಡೆದ ಒಲಿಂಪಿಕ್‍ನಲ್ಲಿ ಗೆಲುವು ಸಾಧಿಸುವ ಮೂಲಕ ತಾಯಿಯಾದ ಬಳಿಕವೂ ಮಹಿಳೆಯರು ಸ್ಟ್ರಾಂಗ್ ಮತ್ತು ಹೆಲ್ತಿ ಅಂಡ್ ಫಿಟ್ ಆಗಿರುತ್ತಾರೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಈಗ ಸಮಾನ ವೇತನಕ್ಕಾಗಿ ನೈಕ್ ಸಂಸ್ಥೆಯ ನಿಯಮಾವಳಿ ವಿರುದ್ಧ ನಡೆಸಿದ ಫೆಲಿಕ್ಸ್ ಹೋರಾಟ ಸಫಲವಾಗಿದ್ದು, ಎಲ್ಲ ಆಟಗಾರ್ತಿ ತಾಯಂದಿರಲ್ಲಿ ಸಂತಸ ತಂದಿದೆ. ಫೆಲಿಕ್ಸ್ ಓಟ ಮತ್ತು ಹೋರಾಟದಲ್ಲಿ ವಿಜಯಿಯಾಗಿದ್ದಾರೆ. ನೈಕ್ ಜಗತ್ತಿನ ಎಲ್ಲ ಮಹಿಳೆಯರಿಗೆ ಭರವಸೆ ನೀಡಿದೆ. ಇನ್ನು ಫೆಲಿಕ್ಸ್ ಈಗ 2020ರ ಬೇಸಿಗೆಯಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್‍ಗಾಗಿ ತಯಾರಿ ನಡೆಸುತ್ತಿದ್ದಾರೆ. 2020ರಲ್ಲೂ ಚಿನ್ನವನ್ನು ತನ್ನದಾಗಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ಮೂಡಿಸಿದ್ದಾರೆ. ಫೆಲಿಕ್ಸ್ ಒಬ್ಬ ಪ್ರತಿಭಾವಂತ ಆಟಗಾರ್ತಿ. ತನ್ನ 18ನೇ ವರ್ಷ ವಯಸ್ಸಿನಲ್ಲೇ ಒಲಿಂಪಿಕ್ ಪದಕ ತಮ್ಮದಾಗಿಸಿಕೊಂಡಿದ್ದರು. ಈಗ ಟೋಕಿಯೋ ಒಲಿಂಪಿಕ್‍ನತ್ತ ಚಿತ್ತ ನೆಟ್ಟಿದ್ದಾರೆ. ಈಗ ಫೆಲಿಕ್ಸ್ ಹೋರಾಟ, ಪ್ರತಿಭೆ ಮತ್ತು ಕ್ರಿಯಾಶೀಲ ಮಹಿಳೆಯರ ದೃಢ ಹೆಜ್ಜೆಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...