Homeಸಿನಿಮಾಕ್ರೀಡೆಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಓಟ ಮತ್ತು ಹೋರಾಟದಲ್ಲಿ ಅಲ್ಲಿಸನ್ ಫೆಲಿಕ್ಸ್ ವಿಜಯಿ : ಉಸೇನ್ ಬೋಲ್ಟ್ ದಾಖಲೆ ಬ್ರೇಕ್

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅದ್ಯಾವುದೂ ಅವರ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ.

- Advertisement -
- Advertisement -

ಉಸೇನ್ ಬೋಲ್ಟ್ ಅಂದರೆ ಕಣ್ಣಮುಂದೆ ಬರೋದು ಆತ ಗೆದ್ದ ಪ್ರಶಸ್ತಿಗಳು, ಪರಿಶ್ರಮವನ್ನು ಸಾರಿ ಸಾರಿ ಹೇಳುವ ಸಾಲುಸಾಲು ದಾಖಲೆಗಳು. ಆದರೆ ಈಗ ಅಮೆರಿಕದ 33 ವರ್ಷದ ಮಹಿಳಾ ಓಟಗಾರ್ತಿ ಅಲ್ಲಿಸನ್ ಫೆಲಿಕ್ಸ್, ಉಸೇನ್ ಬೋಲ್ಟ್ ಅವರ ಎಲ್ಲ ದಾಖಲೆಗಳನ್ನು ಹಿಂದಿಕ್ಕುವ ಮೂಲಕ ಶೇಷ್ಠ ಸಾಧನೆಗೈದಿದ್ದಾರೆ.

ಕತಾರ್‌ನ ದೋಹಾದಲ್ಲಿ ನಡೆದ ಐಎಎಫ್ ವಲ್ರ್ಡ್ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ 4*400 ಮೀಟರ್ ರಿಲೆ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕಕ್ಕೆ ಫೆಲಿಕ್ಸ್ ಕೊರಳೊಡ್ಡಿದ್ದಾರೆ. ಫೆಲಿಕ್ಸ್ 12ನೇ ವಿಶ್ವ ಚಾಂಪಿಯನ್‍ಶಿಪ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಉಸೇನ್ ಬೋಲ್ಟ್ ಅವರನ್ನು ಹಿಂದಿಕ್ಕಿದರು. ಟೂರ್ನಮೆಂಟ್‍ನ ಕೊನೆಯ ದಿನ ಮತ್ತೊಂದು ಚಿನ್ನವನ್ನು ಗೆಲ್ಲುವುದರೊಂದಿಗೆ ಅವರ ಹೆಸರಿಗೆ 13ನೇ ಚಿನ್ನವನ್ನು ಸೇರಿಸಿದರು. ಈಗಾಗಲೇ ಫೆಲಿಕ್ಸ್, ಹಲವು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದು, ನಾಲ್ಕು ಒಲಿಂಪಿಕ್ ಸ್ಪರ್ಧೆಯಲ್ಲಿ ಒಂಭತ್ತು ಪದಕ ಗೆದ್ದ ಸಾಧನೆ ಅವರದ್ದು.

ಹತ್ತು ತಿಂಗಳ ಹಿಂದೆಯಷ್ಟೇ ಸಿಸೇರಿಯನ್‍ಗೆ ಒಳಗಾಗಿದ್ದ ಫೆಲಿಕ್ಸ್, ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯ ವೇಳೆ ಸಾಕಷ್ಟು ತೊಂದರೆ ಅನುಭವಿಸಿದ್ದರು ಕೂಡ. ಆದರೆ ಅದ್ಯಾವುದೂ ರೋಚಕ ಓಟಕ್ಕೆ ಅಡ್ಡಿಯಾಗಲಿಲ್ಲ. ಆದರೆ ಸಾಧಕಿ ಫೆಲಿಕ್ಸ್‍ಗೆ ಕ್ರೀಡಾಜಗತ್ತಿನಲ್ಲಿ ತಾವು ಕಂಡು, ಅನುಭವಿಸಿದ ತಾರತಮ್ಯ ನೀತಿ ಇನ್ನಿಲ್ಲದಂತೆ ಕಾಡುತ್ತಿತ್ತು. ಸಾಹಸಿ ಮಹಿಳಾ ಆಟಗಾರ್ತಿಯರಿಗೆ ವೇತನ ತಾರತಮ್ಯ ಮಾಡುತ್ತಿರುವ ವಿಷಯ ಹಿಂಸಿಸುತ್ತಿತ್ತು. ಇದನ್ನು ಸ್ವತಃ ಅನುಭವಿಸಿದ್ದ ಫೆಲಿಕ್ಸ್, ವಿಶ್ವದ ಮಹಿಳಾ ಕ್ರೀಡಾಪಟುಗಳಿಗಾಗಿ ಆಗಸ್ಟ್‍ನಲ್ಲಿ ಹೋರಾಟ ನಡೆಸಿದ್ದರು.

ಪ್ರಸಿದ್ಧ ನೈಕ್ ಸಂಸ್ಥೆ, ಗರ್ಭಿಣಿ ಕ್ರೀಡಾಪಟುಗಳು ಮತ್ತು ಹೊಸ ತಾಯಂದಿರಿಗೆ ಅವರ ಸಹವರ್ತಿಗಳಿಗಿಂತ ಕಡಿಮೆ ಸಂಬಳ ನೀಡುತ್ತಿರುವುದನ್ನು ಮನಗಂಡಿದ್ದರು. ನೈಕ್ ಕಂಪನಿಯ ನಿಯಮಾವಳಿಯಂತೆ ಗರ್ಭಿಣಿ ಆಟಗಾರ್ತಿಯರು ಮತ್ತು ತಾಯಂದಿರಿಗೆ ಶೇಕಡಾ 70ಕ್ಕಿಂತ ಕಡಿಮೆ ಹಣ ಪಾವತಿಸಲಾಗುತ್ತದೆ. ನೈಕ್ ಕಂಪನಿಯ ಪ್ರಾಯೋಜಕರಾಗಿದ್ದ ಫೆಲಿಕ್ಸ್, ತಾಯಿಯಾಗಿದ್ದರಿಂದ ಶೇ. 70ಕ್ಕಿಂತ ಕಡಿಮೆ ಸಂಬಳ ಪಾವತಿ ಮಾಡಲಾಗಿತ್ತು. ಈ ಬಗ್ಗೆ ಇತರೆ ಮಹಿಳಾ ಕ್ರೀಡಾಪಟುಗಳ ಗುಂಪಿನೊಂದಿಗೆ ಫೆಲಿಕ್ಸ್ ಚರ್ಚಿಸಿದ್ದರು. ನೈಕ್ ನೀತಿ ಗರ್ಭಧಾರಣೆ ನಂತರ ಕನಿಷ್ಠ 18 ತಿಂಗಳವರೆಗೆ ಪ್ರಾಯೋಜಕರ ಮೇಲೆ ಆರ್ಥಿಕವಾಗಿ ಪರಿಣಾಮ ಬೀರುವುದಿಲ್ಲ ಎಂದು ಹೊಸ ನೀತಿ ಹೇಳುತ್ತದೆ ಎಂಬುದನ್ನು ಖಚಿತಪಡಿಸಿಕೊಂಡರು. ನಂತರ ನೈಕ್ ನಿಯಮಾವಳಿಯ ವಿರುದ್ಧ ವೇತನ ತಾರತಮ್ಯದ ವಿರುದ್ಧ ಹೋರಾಟ ಆರಂಭಿಸಿದರು.

ಮಹಿಳಾ ಕ್ರೀಡಾಪಟುಗಳಿಗೆ ಆಗುತ್ತಿರುವ ಅನ್ಯಾಯ ಹಾಗೂ ತಾರತಮ್ಯ ಹೋಗಲಾಡಿಸಲು ಮತ್ತು ಸಮಾನ ವೇತನಕ್ಕಾಗಿ ಹೋರಾಟಗಳು ನಡೆಯುತ್ತಲೇ ಇವೆ. ಇದರಲ್ಲಿ ಮೇಗನ್ ರಾಪಿನೋ ತಂಡ, 2019ರಲ್ಲಿ ನಡೆದ ವಿಶ್ವಕಪ್ ಪ್ರಶಸ್ತಿಯ ಮೊದಲು ಮತ್ತು ನಂತರದ ಸಮಯದಲ್ಲಿ ಪುರುಷರು ಮತ್ತು ಮಹಿಳೆಯರ ಫುಟ್ಬಾಲ್ ತಂಡದ ನಡುವೆ ನಡೆದ ವೇತನ ತಾರತಮ್ಯದ ಮೇಲೆ ಬೆಳಕು ಚೆಲ್ಲುತ್ತದೆ. ಮಹಿಳಾ ಮತ್ತು ಪುರುಷ ಸಹವರ್ತಿ ಕ್ರೀಡಾಪಟುಗಳ ವೇತನದಲ್ಲಿ ತಾರತಮ್ಯ ಮಾಡುತ್ತಿರುವ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ವೇತನ ತಾರತಮ್ಯ ಎಲ್ಲಾ ಕ್ಷೇತ್ರಗಳಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಆದರೆ ಅದು ಕ್ರೀಡಾಜಗತ್ತಿಗೂ ಅಂಟಿಕೊಂಡಿರುವುದು ಶೋಚನೀಯ. ಅದರಲ್ಲೂ ಗರ್ಭಿಣಿ ಹಾಗೂ ತಾಯಂದಿರಾದ ನಂತರ ಕೆಲಸ ಮಾಡುವ ಮಹಿಳೆಯರು, ಕೆಲಸಕ್ಕೆ ಯೋಗ್ಯರಾಗಿರುವುದಿಲ್ಲ ಎಂದೇ ಯೋಚಿಸಲಾಗುತ್ತದೆ. ಆದರೆ ಅಲ್ಲಿಸನ್ ಫೆಲಿಕ್ಸ್ ಇದೆಲ್ಲವನ್ನೂ ಸುಳ್ಳಾಗಿಸಿ ಬಿಟ್ಟರು. ದೋಹಾದಲ್ಲಿ ನಡೆದ ಒಲಿಂಪಿಕ್‍ನಲ್ಲಿ ಗೆಲುವು ಸಾಧಿಸುವ ಮೂಲಕ ತಾಯಿಯಾದ ಬಳಿಕವೂ ಮಹಿಳೆಯರು ಸ್ಟ್ರಾಂಗ್ ಮತ್ತು ಹೆಲ್ತಿ ಅಂಡ್ ಫಿಟ್ ಆಗಿರುತ್ತಾರೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಈಗ ಸಮಾನ ವೇತನಕ್ಕಾಗಿ ನೈಕ್ ಸಂಸ್ಥೆಯ ನಿಯಮಾವಳಿ ವಿರುದ್ಧ ನಡೆಸಿದ ಫೆಲಿಕ್ಸ್ ಹೋರಾಟ ಸಫಲವಾಗಿದ್ದು, ಎಲ್ಲ ಆಟಗಾರ್ತಿ ತಾಯಂದಿರಲ್ಲಿ ಸಂತಸ ತಂದಿದೆ. ಫೆಲಿಕ್ಸ್ ಓಟ ಮತ್ತು ಹೋರಾಟದಲ್ಲಿ ವಿಜಯಿಯಾಗಿದ್ದಾರೆ. ನೈಕ್ ಜಗತ್ತಿನ ಎಲ್ಲ ಮಹಿಳೆಯರಿಗೆ ಭರವಸೆ ನೀಡಿದೆ. ಇನ್ನು ಫೆಲಿಕ್ಸ್ ಈಗ 2020ರ ಬೇಸಿಗೆಯಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್‍ಗಾಗಿ ತಯಾರಿ ನಡೆಸುತ್ತಿದ್ದಾರೆ. 2020ರಲ್ಲೂ ಚಿನ್ನವನ್ನು ತನ್ನದಾಗಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ಮೂಡಿಸಿದ್ದಾರೆ. ಫೆಲಿಕ್ಸ್ ಒಬ್ಬ ಪ್ರತಿಭಾವಂತ ಆಟಗಾರ್ತಿ. ತನ್ನ 18ನೇ ವರ್ಷ ವಯಸ್ಸಿನಲ್ಲೇ ಒಲಿಂಪಿಕ್ ಪದಕ ತಮ್ಮದಾಗಿಸಿಕೊಂಡಿದ್ದರು. ಈಗ ಟೋಕಿಯೋ ಒಲಿಂಪಿಕ್‍ನತ್ತ ಚಿತ್ತ ನೆಟ್ಟಿದ್ದಾರೆ. ಈಗ ಫೆಲಿಕ್ಸ್ ಹೋರಾಟ, ಪ್ರತಿಭೆ ಮತ್ತು ಕ್ರಿಯಾಶೀಲ ಮಹಿಳೆಯರ ದೃಢ ಹೆಜ್ಜೆಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...