Homeಮುಖಪುಟಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

- Advertisement -
- Advertisement -

ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಮಹಿಳೆಯೊಬ್ಬರು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ (ಜಿಎಚ್‌ಎಂಸಿ) ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತೆಲುಗು ಪತ್ರಿಕೆಯೊಂದು ವರದಿ ಮಾಡಿದ ನಂತರ, ಅವರನ್ನು ಜಿಎಚ್‌ಎಂಸಿಯಲ್ಲಿ ಸಹಾಯಕ ಕೀಟಶಾಸ್ತ್ರಜ್ಞರಾಗಿ ನೇಮಕ ಮಾಡಲಾಗಿದೆ.

ಪತ್ರಿಕೆಯು ಮಹಿಳೆಯ ಬಗ್ಗೆ ವಿಶೇಷ ವರದಿ ಮಾಡಿದ ನಂತರ ಅವರಿಗೆ ಈ ಅವಕಾಶ ಒದಗಿಬಂದಿದೆ. ತೆಲಂಗಾಣದ ಪೌರಾಡಳಿತ ಸಚಿವ ಕೆಟಿ ರಾಮರಾವ್ ಅವರು ಸೆಪ್ಟೆಂಬರ್ 20 ರ ಸೋಮವಾರದಂದು ಹೊರಗುತ್ತಿಗೆ ಆಧಾರದ ಮೇಲೆ ಮಹಿಳೆಯನ್ನು ಸಹಾಯಕ ಕೀಟಶಾಸ್ತ್ರಜ್ಞರಾಗಿ ನೇಮಕ ಮಾಡಿದ್ದಾರೆ.

ಇದನ್ನೂ ಓದಿ: ದಿನಕ್ಕೆ 3-4 ಡ್ರೆಸ್‌ ಹಾಕಿ ಚೆನ್ನಾಗಿ ಕಾಣುವುದೇ ಮೋದಿ ಸಾಧನೆ: ಕುಮಾರಸ್ವಾಮಿ

ಜೈವಿಕ ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಹೊಂದಿರುವ ರಜನಿ, ಜಿಎಚ್‌ಎಂಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ವಾರಂಗಲ್ ಜಿಲ್ಲೆಯವರಾದ ರಜನಿ ಕೃಷಿಕೂಲಿ ಕುಟುಂಬದಲ್ಲಿ ಜನಿಸಿದ್ದರು. ಹಣಕಾಸಿನ ಸಮಸ್ಯೆಗಳ ಹೊರತಾಗಿಯೂ, ತನ್ನ ಹೆತ್ತವರ ಬೆಂಬಲದೊಂದಿಗೆ ರಜನಿ ತನ್ನ ಅಧ್ಯಯನವನ್ನು ಮುಂದುವರಿಸಿದ್ದರು.

ರಜನಿ, 2013 ರಲ್ಲಿ ಪ್ರಥಮ ದರ್ಜೆಯೊಂದಿಗೆ ಎಂಎಸ್ಸಿ ಸಾವಯವ ರಸಾಯನಶಾಸ್ತ್ರದಲ್ಲಿ ಉತ್ತೀರ್ಣರಾಗಿದ್ದರು. ಜೊತೆಗೆ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಪಿಎಚ್‌ಡಿಗೂ ಅರ್ಹರಾಗಿದ್ದರು, ಆದರೆ ಈ ಮಧ್ಯೆ ಅವರ ವಿವಾಹವಾಗಿದ್ದರಿಂದ, ಅವರು ಹೈದರಾಬಾದ್‌ಗೆ ಸ್ಥಳಾಂತರಗೊಂಡಿದ್ದರು. ಇಬ್ಬರು ಹೆಣ್ಣು ಮಕ್ಕಳ ತಾಯಿಯಾದ ನಂತರ ಕೂಡಾ ರಜನಿ ಅವರು ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದನ್ನು ಮುಂದುವರಿಸಿದ್ದರು.

ಈ ನಡುವೆ ಅವರ ಪತಿ ಹೃದಯ ಸಮಸ್ಯೆಯಿಂದ ಹಾಸಿಗೆ ಹಿಡಿದ ನಂತರ, ಕುಟುಂಬವು ಬಿಕ್ಕಟ್ಟಿಗೆ ಸಿಲುಕಿತ್ತು. ಆದರೆ, ಅತ್ತೆಯನ್ನು ಒಳಗೊಂಡಂತೆ ಐದು ಜನರ ಕುಟುಂಬವನ್ನು ನಡೆಸಲು ರಜನಿ ಅವರು ತರಕಾರಿ ಅಂಗಡಿಯೊಂದನ್ನು ಪ್ರಾರಂಭಿಸಿದ್ದರು. ಈ ಅಂಗಡಿ ಸಾಕಷ್ಟು ಲಾಭ ಗಳಿಸದ ಕಾರಣ, ನಂತರ ರಜನಿ ಅವರು ಜಿಎಚ್‌ಎಂಸಿಯಲ್ಲಿ 10 ಸಾವಿರಕ್ಕೆ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದಾರೆ.

ಇದನ್ನೂ ಓದಿ: ಸರಸ್ವತಿ ಪೂಜೆ ವಿರೋಧಿಸಿ ’ಜೀವಮಾನ ಸಾಧನೆ ಪ್ರಶಸ್ತಿ’ ತಿರಸ್ಕರಿಸಿದ ಮರಾಠಿ ಕವಿ ಯಶ್ವಂತ್‌ ಮನೋಹರ್‌

ರಜನಿ ಅವರ ಸಂಕಷ್ಟವನ್ನು ತೆಲುಗು ಭಾಷೆಯ ಪ್ರಮುಖ ದಿನಪತ್ರಿಕೆ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ್ದ ಜಿಎಚ್‌ಎಂಸಿಯ ಅಧಿಕಾರಿಗಳು ಅವರನ್ನು ಪೌರಾಡಳಿತ ಸಚಿವ ಕೆಟಿ ರಾಮರಾವ್ ಅವರ ಬಳಿ ಕರೆದೊಯ್ದು ಅವರಿಗೆ ಉದ್ಯೋಗ ನೇಮಕಾತಿ ಆಗುವಂತೆ ಮಾಡಿದ್ದಾರೆ. ರಜನಿ ಅವರ ದಾಖಲೆಗಳನ್ನು ಪರಿಶೀಲಿಸಿದ ನಂತರ ಅವರನ್ನು ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೇಮಕಾತಿ ಮಾಡಲಾಗಿದೆ ಎಂದು ನಗರಾಭಿವೃದ್ದಿ ವಿಶೇಷ ಕಾರ್ಯದರ್ಶಿ ಅರವಿಂದ್ ಕುಮಾರ್‌ ಹೇಳಿದ್ದಾರೆ.

ರಜನಿ ಅವರನ್ನು ಜಿಎಚ್‌ಎಂಸಿಯ ಮುಖ್ಯ ಕೀಟಶಾಸ್ತ್ರಜ್ಞರ ಕಚೇರಿಗೆ ನಿಯೋಜಿಸಲಾಗಿದ್ದು, ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....