Homeಮುಖಪುಟಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

- Advertisement -
- Advertisement -

ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಮಹಿಳೆಯೊಬ್ಬರು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ (ಜಿಎಚ್‌ಎಂಸಿ) ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತೆಲುಗು ಪತ್ರಿಕೆಯೊಂದು ವರದಿ ಮಾಡಿದ ನಂತರ, ಅವರನ್ನು ಜಿಎಚ್‌ಎಂಸಿಯಲ್ಲಿ ಸಹಾಯಕ ಕೀಟಶಾಸ್ತ್ರಜ್ಞರಾಗಿ ನೇಮಕ ಮಾಡಲಾಗಿದೆ.

ಪತ್ರಿಕೆಯು ಮಹಿಳೆಯ ಬಗ್ಗೆ ವಿಶೇಷ ವರದಿ ಮಾಡಿದ ನಂತರ ಅವರಿಗೆ ಈ ಅವಕಾಶ ಒದಗಿಬಂದಿದೆ. ತೆಲಂಗಾಣದ ಪೌರಾಡಳಿತ ಸಚಿವ ಕೆಟಿ ರಾಮರಾವ್ ಅವರು ಸೆಪ್ಟೆಂಬರ್ 20 ರ ಸೋಮವಾರದಂದು ಹೊರಗುತ್ತಿಗೆ ಆಧಾರದ ಮೇಲೆ ಮಹಿಳೆಯನ್ನು ಸಹಾಯಕ ಕೀಟಶಾಸ್ತ್ರಜ್ಞರಾಗಿ ನೇಮಕ ಮಾಡಿದ್ದಾರೆ.

ಇದನ್ನೂ ಓದಿ: ದಿನಕ್ಕೆ 3-4 ಡ್ರೆಸ್‌ ಹಾಕಿ ಚೆನ್ನಾಗಿ ಕಾಣುವುದೇ ಮೋದಿ ಸಾಧನೆ: ಕುಮಾರಸ್ವಾಮಿ

ಜೈವಿಕ ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಹೊಂದಿರುವ ರಜನಿ, ಜಿಎಚ್‌ಎಂಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ವಾರಂಗಲ್ ಜಿಲ್ಲೆಯವರಾದ ರಜನಿ ಕೃಷಿಕೂಲಿ ಕುಟುಂಬದಲ್ಲಿ ಜನಿಸಿದ್ದರು. ಹಣಕಾಸಿನ ಸಮಸ್ಯೆಗಳ ಹೊರತಾಗಿಯೂ, ತನ್ನ ಹೆತ್ತವರ ಬೆಂಬಲದೊಂದಿಗೆ ರಜನಿ ತನ್ನ ಅಧ್ಯಯನವನ್ನು ಮುಂದುವರಿಸಿದ್ದರು.

ರಜನಿ, 2013 ರಲ್ಲಿ ಪ್ರಥಮ ದರ್ಜೆಯೊಂದಿಗೆ ಎಂಎಸ್ಸಿ ಸಾವಯವ ರಸಾಯನಶಾಸ್ತ್ರದಲ್ಲಿ ಉತ್ತೀರ್ಣರಾಗಿದ್ದರು. ಜೊತೆಗೆ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಪಿಎಚ್‌ಡಿಗೂ ಅರ್ಹರಾಗಿದ್ದರು, ಆದರೆ ಈ ಮಧ್ಯೆ ಅವರ ವಿವಾಹವಾಗಿದ್ದರಿಂದ, ಅವರು ಹೈದರಾಬಾದ್‌ಗೆ ಸ್ಥಳಾಂತರಗೊಂಡಿದ್ದರು. ಇಬ್ಬರು ಹೆಣ್ಣು ಮಕ್ಕಳ ತಾಯಿಯಾದ ನಂತರ ಕೂಡಾ ರಜನಿ ಅವರು ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದನ್ನು ಮುಂದುವರಿಸಿದ್ದರು.

ಈ ನಡುವೆ ಅವರ ಪತಿ ಹೃದಯ ಸಮಸ್ಯೆಯಿಂದ ಹಾಸಿಗೆ ಹಿಡಿದ ನಂತರ, ಕುಟುಂಬವು ಬಿಕ್ಕಟ್ಟಿಗೆ ಸಿಲುಕಿತ್ತು. ಆದರೆ, ಅತ್ತೆಯನ್ನು ಒಳಗೊಂಡಂತೆ ಐದು ಜನರ ಕುಟುಂಬವನ್ನು ನಡೆಸಲು ರಜನಿ ಅವರು ತರಕಾರಿ ಅಂಗಡಿಯೊಂದನ್ನು ಪ್ರಾರಂಭಿಸಿದ್ದರು. ಈ ಅಂಗಡಿ ಸಾಕಷ್ಟು ಲಾಭ ಗಳಿಸದ ಕಾರಣ, ನಂತರ ರಜನಿ ಅವರು ಜಿಎಚ್‌ಎಂಸಿಯಲ್ಲಿ 10 ಸಾವಿರಕ್ಕೆ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದಾರೆ.

ಇದನ್ನೂ ಓದಿ: ಸರಸ್ವತಿ ಪೂಜೆ ವಿರೋಧಿಸಿ ’ಜೀವಮಾನ ಸಾಧನೆ ಪ್ರಶಸ್ತಿ’ ತಿರಸ್ಕರಿಸಿದ ಮರಾಠಿ ಕವಿ ಯಶ್ವಂತ್‌ ಮನೋಹರ್‌

ರಜನಿ ಅವರ ಸಂಕಷ್ಟವನ್ನು ತೆಲುಗು ಭಾಷೆಯ ಪ್ರಮುಖ ದಿನಪತ್ರಿಕೆ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ್ದ ಜಿಎಚ್‌ಎಂಸಿಯ ಅಧಿಕಾರಿಗಳು ಅವರನ್ನು ಪೌರಾಡಳಿತ ಸಚಿವ ಕೆಟಿ ರಾಮರಾವ್ ಅವರ ಬಳಿ ಕರೆದೊಯ್ದು ಅವರಿಗೆ ಉದ್ಯೋಗ ನೇಮಕಾತಿ ಆಗುವಂತೆ ಮಾಡಿದ್ದಾರೆ. ರಜನಿ ಅವರ ದಾಖಲೆಗಳನ್ನು ಪರಿಶೀಲಿಸಿದ ನಂತರ ಅವರನ್ನು ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೇಮಕಾತಿ ಮಾಡಲಾಗಿದೆ ಎಂದು ನಗರಾಭಿವೃದ್ದಿ ವಿಶೇಷ ಕಾರ್ಯದರ್ಶಿ ಅರವಿಂದ್ ಕುಮಾರ್‌ ಹೇಳಿದ್ದಾರೆ.

ರಜನಿ ಅವರನ್ನು ಜಿಎಚ್‌ಎಂಸಿಯ ಮುಖ್ಯ ಕೀಟಶಾಸ್ತ್ರಜ್ಞರ ಕಚೇರಿಗೆ ನಿಯೋಜಿಸಲಾಗಿದ್ದು, ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...