Homeಮುಖಪುಟಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

- Advertisement -
- Advertisement -

ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಮಹಿಳೆಯೊಬ್ಬರು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ (ಜಿಎಚ್‌ಎಂಸಿ) ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತೆಲುಗು ಪತ್ರಿಕೆಯೊಂದು ವರದಿ ಮಾಡಿದ ನಂತರ, ಅವರನ್ನು ಜಿಎಚ್‌ಎಂಸಿಯಲ್ಲಿ ಸಹಾಯಕ ಕೀಟಶಾಸ್ತ್ರಜ್ಞರಾಗಿ ನೇಮಕ ಮಾಡಲಾಗಿದೆ.

ಪತ್ರಿಕೆಯು ಮಹಿಳೆಯ ಬಗ್ಗೆ ವಿಶೇಷ ವರದಿ ಮಾಡಿದ ನಂತರ ಅವರಿಗೆ ಈ ಅವಕಾಶ ಒದಗಿಬಂದಿದೆ. ತೆಲಂಗಾಣದ ಪೌರಾಡಳಿತ ಸಚಿವ ಕೆಟಿ ರಾಮರಾವ್ ಅವರು ಸೆಪ್ಟೆಂಬರ್ 20 ರ ಸೋಮವಾರದಂದು ಹೊರಗುತ್ತಿಗೆ ಆಧಾರದ ಮೇಲೆ ಮಹಿಳೆಯನ್ನು ಸಹಾಯಕ ಕೀಟಶಾಸ್ತ್ರಜ್ಞರಾಗಿ ನೇಮಕ ಮಾಡಿದ್ದಾರೆ.

ಇದನ್ನೂ ಓದಿ: ದಿನಕ್ಕೆ 3-4 ಡ್ರೆಸ್‌ ಹಾಕಿ ಚೆನ್ನಾಗಿ ಕಾಣುವುದೇ ಮೋದಿ ಸಾಧನೆ: ಕುಮಾರಸ್ವಾಮಿ

ಜೈವಿಕ ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಹೊಂದಿರುವ ರಜನಿ, ಜಿಎಚ್‌ಎಂಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ವಾರಂಗಲ್ ಜಿಲ್ಲೆಯವರಾದ ರಜನಿ ಕೃಷಿಕೂಲಿ ಕುಟುಂಬದಲ್ಲಿ ಜನಿಸಿದ್ದರು. ಹಣಕಾಸಿನ ಸಮಸ್ಯೆಗಳ ಹೊರತಾಗಿಯೂ, ತನ್ನ ಹೆತ್ತವರ ಬೆಂಬಲದೊಂದಿಗೆ ರಜನಿ ತನ್ನ ಅಧ್ಯಯನವನ್ನು ಮುಂದುವರಿಸಿದ್ದರು.

ರಜನಿ, 2013 ರಲ್ಲಿ ಪ್ರಥಮ ದರ್ಜೆಯೊಂದಿಗೆ ಎಂಎಸ್ಸಿ ಸಾವಯವ ರಸಾಯನಶಾಸ್ತ್ರದಲ್ಲಿ ಉತ್ತೀರ್ಣರಾಗಿದ್ದರು. ಜೊತೆಗೆ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಪಿಎಚ್‌ಡಿಗೂ ಅರ್ಹರಾಗಿದ್ದರು, ಆದರೆ ಈ ಮಧ್ಯೆ ಅವರ ವಿವಾಹವಾಗಿದ್ದರಿಂದ, ಅವರು ಹೈದರಾಬಾದ್‌ಗೆ ಸ್ಥಳಾಂತರಗೊಂಡಿದ್ದರು. ಇಬ್ಬರು ಹೆಣ್ಣು ಮಕ್ಕಳ ತಾಯಿಯಾದ ನಂತರ ಕೂಡಾ ರಜನಿ ಅವರು ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದನ್ನು ಮುಂದುವರಿಸಿದ್ದರು.

ಈ ನಡುವೆ ಅವರ ಪತಿ ಹೃದಯ ಸಮಸ್ಯೆಯಿಂದ ಹಾಸಿಗೆ ಹಿಡಿದ ನಂತರ, ಕುಟುಂಬವು ಬಿಕ್ಕಟ್ಟಿಗೆ ಸಿಲುಕಿತ್ತು. ಆದರೆ, ಅತ್ತೆಯನ್ನು ಒಳಗೊಂಡಂತೆ ಐದು ಜನರ ಕುಟುಂಬವನ್ನು ನಡೆಸಲು ರಜನಿ ಅವರು ತರಕಾರಿ ಅಂಗಡಿಯೊಂದನ್ನು ಪ್ರಾರಂಭಿಸಿದ್ದರು. ಈ ಅಂಗಡಿ ಸಾಕಷ್ಟು ಲಾಭ ಗಳಿಸದ ಕಾರಣ, ನಂತರ ರಜನಿ ಅವರು ಜಿಎಚ್‌ಎಂಸಿಯಲ್ಲಿ 10 ಸಾವಿರಕ್ಕೆ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದಾರೆ.

ಇದನ್ನೂ ಓದಿ: ಸರಸ್ವತಿ ಪೂಜೆ ವಿರೋಧಿಸಿ ’ಜೀವಮಾನ ಸಾಧನೆ ಪ್ರಶಸ್ತಿ’ ತಿರಸ್ಕರಿಸಿದ ಮರಾಠಿ ಕವಿ ಯಶ್ವಂತ್‌ ಮನೋಹರ್‌

ರಜನಿ ಅವರ ಸಂಕಷ್ಟವನ್ನು ತೆಲುಗು ಭಾಷೆಯ ಪ್ರಮುಖ ದಿನಪತ್ರಿಕೆ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ್ದ ಜಿಎಚ್‌ಎಂಸಿಯ ಅಧಿಕಾರಿಗಳು ಅವರನ್ನು ಪೌರಾಡಳಿತ ಸಚಿವ ಕೆಟಿ ರಾಮರಾವ್ ಅವರ ಬಳಿ ಕರೆದೊಯ್ದು ಅವರಿಗೆ ಉದ್ಯೋಗ ನೇಮಕಾತಿ ಆಗುವಂತೆ ಮಾಡಿದ್ದಾರೆ. ರಜನಿ ಅವರ ದಾಖಲೆಗಳನ್ನು ಪರಿಶೀಲಿಸಿದ ನಂತರ ಅವರನ್ನು ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೇಮಕಾತಿ ಮಾಡಲಾಗಿದೆ ಎಂದು ನಗರಾಭಿವೃದ್ದಿ ವಿಶೇಷ ಕಾರ್ಯದರ್ಶಿ ಅರವಿಂದ್ ಕುಮಾರ್‌ ಹೇಳಿದ್ದಾರೆ.

ರಜನಿ ಅವರನ್ನು ಜಿಎಚ್‌ಎಂಸಿಯ ಮುಖ್ಯ ಕೀಟಶಾಸ್ತ್ರಜ್ಞರ ಕಚೇರಿಗೆ ನಿಯೋಜಿಸಲಾಗಿದ್ದು, ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...