Homeಮುಖಪುಟಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

- Advertisement -
- Advertisement -

ಭಾರತದ 75ನೇ ಸ್ವಾತಂತ್ರ್ಯ ದಿನ ಕೆಂಪು ಕೋಟೆಯಿಂದ ಭಾಷಣ ಮಾಡಿದ ಮೋದಿ ಮಹಿಳಾ ಶಕ್ತಿ ಅಥವಾ ‘ನಾರಿ ಶಕ್ತಿ’ಯ ಬಲವರ್ಧನೆಗೆ ಕರೆ ನೀಡಿದ್ದರು ಮತ್ತು ಮಹಿಳೆಯರನ್ನು ಅವಮಾನಿಸುವ ಪ್ರತಿಯೊಂದು ನಡವಳಿಕೆ, ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಹೇಳಿದ್ದರು. ಆಗಸ್ಟ್ 15 ರಂದು ಪ್ರಧಾನ ಮಂತ್ರಿಗಳು ಕೆಂಪುಕೋಟೆಯಲ್ಲಿ ನಿಂತು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರಿಗೆ ಗೌರವದ ಬಗ್ಗೆ ಮಾತನಾಡುತ್ತಿದ್ದಾಗ, ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಿ 2002ರ ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಿ ಆದೇಶಿಸಿತ್ತು.

ಬಿಲ್ಕಿಸ್ ‘ಇದು ನ್ಯಾಯದ ಅಂತ್ಯವೇ’ ಎಂಬ ಪ್ರಶ್ನೆಯನ್ನು ಕೇಳಿದ್ದರು. ಈ ಪ್ರಶ್ನೆ ನನ್ನನ್ನು ಮತ್ತು ನನ್ನಂತಹ ಅನೇಕರನ್ನು ಬೆಚ್ಚಿಬೀಳಿಸಿದೆ ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ ಅವರು ಹೇಳಿದ್ದಾರೆ. ಸುಭಾಷಿಣಿ ಅಲಿ, ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಮತ್ತು ಪತ್ರಕರ್ತೆ ರೇವತಿ ಲಾಲ್ ಅವರು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದರು. ತೀರ್ಪು ಬಂದಾಗ ನಾವು ಏನು ಮಾಡಬಹುದೆಂದು ಯೋಚಿಸುತ್ತಿದ್ದೆವು, ಸೂಕ್ತ ಸಮಯದಲ್ಲೇ  ಕಪಿಲ್ ಸಿಬಲ್ ಮತ್ತು ಅಪರ್ಣಾ ಭಟ್ ಮತ್ತು ಇತರ ವಕೀಲರು ಮುಂದೆ ಬಂದಿರುವುದು ತುಂಬಾ ಅದೃಷ್ಟವಾಗಿತ್ತು ಎಂದು ಅಲಿ ಹೇಳಿದರು.

ಜನವರಿ 8ರಂದು ಸುಪ್ರೀಂಕೋರ್ಟ್ ತನ್ನ ಅದೇಶದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್‌ ಸರಕಾರದ ಆದೇಶವನ್ನು ರದ್ದುಗಳಿಸಿದೆ ಮತ್ತು ಎರಡು ವಾರಗಳಲ್ಲಿ ಜೈಲಿಗೆ ಮರಳಲು ಅಪರಾಧಿಗಳಿಗೆ ಸೂಚಿಸಲಾಗಿದೆ. ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಸಹಕಾರ ನೀಡಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರ ಪೀಠವುದ ತೀರ್ಪು ದೇಶದ ಜನರಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಲಕ್ನೋ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಈ ಕುರಿತು ಪ್ರತಿಕ್ರಿಯಿಸಿದ್ದು, ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಳ್ಳುವ ಮೊದಲೇ ಪ್ರಧಾನಿಯವರು ಕ್ಷಮಾಧಾನಕ್ಕೆ ಅನುಮತಿ ನೀಡಿದ್ದರು. ಅದು ಕ್ರೂರ ಹಾಸ್ಯವಾಗಿತ್ತು. ನಂತರ ತನ್ನ ಕೆಲವು ಸ್ನೇಹಿತರು ಮತ್ತು ಸಹವರ್ತಿಗಳೊಂದಿಗೆ ಬೆಳವಣಿಗೆಗಳ ಬಗ್ಗೆ ಚರ್ಚಿಸಿದೆ ಆ ಸಮಯದಲ್ಲಿ ನ್ಯಾಯಾಲಯಗಳನ್ನು ಹೆಚ್ಚು ಭರವಸೆಯಿಂದ ನೋಡದಿರಲು ನಮ್ಮಲ್ಲಿ ಸಾಕಷ್ಟು ಉದಾಹರಣೆಗಳಿದ್ದರೂ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಹೊರತುಪಡಿಸಿ ನಮಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತೆ ರೇವತಿ ಲಾಲ್ ಅವರು ಈ ವಿಚಾರದಲ್ಲಿ ಅರ್ಜಿದಾರರಾಗಿದ್ದಾರೆ. ಅವರು ಮೂರನೇ ಮಹಿಳಾ ಅರ್ಜಿದಾರರನ್ನು ಹುಡುಕುತ್ತಿದ್ದರು. ಅದಕ್ಕೆ ನಾನು ಸಮ್ಮತಿಸಿದೆ. ಬಳಿಕ ವಕೀಲರಾದ ಇಂದಿರಾ ಜೈಸಿಂಗ್ ಮೂಲಕ ತೃಣಮೂಲ ಕಾಂಗ್ರೆಸ್‌ನಿಂದ ಉಚ್ಛಾಟಿತರಾಗಿರುವ ಲೋಕಸಭಾ ಸಂಸದ ಮಹುವಾ ಮೊಯಿತ್ರಾ ಅವರು ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.  ಸೆಪ್ಟೆಂಬರ್ 2022ರಲ್ಲಿ ಮಾಜಿ IPS ಅಧಿಕಾರಿ ಮೀರನ್ ಚಡಾ ಬೋರ್ವಾಂಕರ್ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು. ಅವರ ತಂಡದಲ್ಲಿ ಜಗದೀಪ್ ಚೋಖರ್ ಮತ್ತು ಮಧು ಭಂಡಾರಿ ಕೂಡ ಇದ್ದರು. ನಾನು ಪ್ರಕರಣವನ್ನು ನಿಕಟವಾಗಿ ಗಮನಿಸುತ್ತಿದ್ದೆ ಮತ್ತು ಬಿಲ್ಕಿಸ್ ಬಾನು ಅವರು ಮೊದಲು ಸರಕಾರದ ಆದೇಶವನ್ನು ಪ್ರಶ್ನಿಸಲು ಮುಂದೆ ಬಂದಿಲ್ಲ ಎಂದು ಅರಿತುಕೊಂಡ ಬಳಿಕ ನಾನು ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಆದರೆ ತಡವಾಗಿ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರೊಫೆಸರ್ ರೂಪ್ ರೇಖಾ ವರ್ಮಾ ಹೇಳಿದ್ದಾರೆ.

11 ಅಪರಾಧಿಗಳನ್ನು ಈಗ ಜೈಲಿಗೆ ಮರಳುವಂತೆ ನ್ಯಾಯಾಲಯವು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ, ಮೊಯಿತ್ರಾ ಅವರನ್ನು ಪ್ರತಿನಿಧಿಸಿರುವ ಜೈಸಿಂಗ್ ಅವರು ತೀರ್ಪು ಅಸಾಮಾನ್ಯವಾದುದು ಎಂದು ಹೇಳಿದರು ಏಕೆಂದರೆ ಸುಪ್ರೀಂ ಕೋರ್ಟ್ ಅತ್ಯಂತ ಅಪರೂಪವಾಗಿ ತನ್ನದೇ ಆದ ತೀರ್ಪನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸುತ್ತದೆ. ಇದು ನಿಮಗೆ ನ್ಯಾಯದ ಮಾರ್ಗಸೂಚಿಯನ್ನು ಸಹ ನೀಡುತ್ತದೆ. ಅವರು ಮಹಾರಾಷ್ಟ್ರ ಕೋರ್ಟ್‌ಗೆ ಹೋಗುತ್ತಾರೆ ಎಂದು ನನಗೆ ತಿಳಿದಿದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ ಆದರೆ ತೀರ್ಪು ನ್ಯಾಯದ ಹಾದಿಯಲ್ಲಿ ಒಂದು ಮೈಲಿಗಲ್ಲು ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ನಂಬಿಕೆ ಕಡಿಮೆಯಾದ ಸಮಯದಲ್ಲಿ ಈ ತೀರ್ಪು ಬಂದಿದೆ. ಈ ತೀರ್ಪು ನನಗೆ ಅನೇಕ ವಿಧಗಳಲ್ಲಿ ಅಮೂಲ್ಯವಾಗಿದೆ. ಸುಪ್ರೀಂಕೋರ್ಟ್ ಮತ್ತು ಇತರ ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯು ಆ ಸಮಯದಲ್ಲಿ ಕುಸಿಯುತ್ತಿರುವಾಗ ಅಂತಹ ತೀರ್ಪು ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯನ್ನು ಸ್ವಲ್ಪವಾದರೂ ಹೆಚ್ಚಿಸುತ್ತದೆ. ಇದು ನನಗೆ ವೈಯಕ್ತಿಕವಾಗಿ ಮಾತ್ರವಲ್ಲದೆ ದೇಶಕ್ಕೂ ಅರ್ಥವಾಗಿದೆ ಎಂದು ವರ್ಮಾ ಹೇಳಿದ್ದಾರೆ.

ನಮ್ಮ ಅರ್ಜಿಗಳನ್ನು ಪ್ರಶ್ನಿಸಿ ಅಪರಾಧಿಯೋರ್ವ ಸಲ್ಲಿಸಿದ ಅರ್ಜಿಯ ಬಳಿಕ ಬಿಲ್ಕಿಸ್‌ ಬಾನು ಅವರು ನವೆಂಬರ್ 2022ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಿಗೆ ಯಾವುದೇ ಸ್ಥಾನವಿಲ್ಲ ಮತ್ತು ಈ ವಿಷಯದಲ್ಲಿ ಸಂಪೂರ್ಣ ಅಪರಿಚಿತರು ಎಂದು ಅಪರಾಧಿ ಬಿಡುಗಡೆ ಪ್ರಶ್ನಿಸಿದ್ದ ನಮ್ಮ ಅರ್ಜಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿಗಳ ನಿರ್ವಹಣೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ನಂತರ ಬಾನು ಅರ್ಜಿದಾರರಾಗಬೇಕಾಯಿತು ಎಂದು ಬಿಲ್ಕಿಸ್‌ ಬಾನು ಪರ ವಕೀಲೆ ಶೋಭಾ ಗುಪ್ತಾ ಹೇಳಿದ್ದಾರೆ.

ಈ ಬಗ್ಗೆ ವಕೀಲೆ ಶೋಭಾ ಗುಪ್ತಾ ಮತನಾಡುತ್ತಾ, ಅವಳು ಮಾತ್ರ ಏಕೆ ಮುಂದೆ ಬರಬೇಕು? ಇದು ವೈಯಕ್ತಿಕ ಅಪರಾಧವಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ಅಪರಾಧದ ಅನಾಗರಿಕ ಸ್ವರೂಪದ್ದಾಗಿತ್ತು. ಅದನ್ನು ಸಮಾಜವೇ ನಿರ್ಧರಿಸಬೇಕು. ಅದಕ್ಕಾಗಿಯೇ ಅವಳು ಮೊದಲು ಅರ್ಜಿ ಸಲ್ಲಿಸಬೇಕೆಂದು ನಾನು ಭಾವಿಸುವುದಿಲ್ಲ ಅವಳು ತನ್ನ ಸಮಯವನ್ನು ತೆಗೆದುಕೊಂಡಿದ್ದಕ್ಕೆ ನನಗೆ ಖುಷಿಯಾಗಿದೆ. ಈ ಮಧ್ಯೆ ಸರಿಯಾದ ಸಮಯದಲ್ಲಿ ಇತರರು ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು  ಹೇಳಿದ್ದಾರೆ.

2002ರಲ್ಲಿ ನಡೆದ ಗಲಭೆಯ ನಂತರದ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ವಕೀಲರಾಗಿ ನನ್ನನ್ನು ನೇಮಿಸಿದ ಬಳಿಕ ತಾನು ಈ ವಿಷಯದಲ್ಲಿ ಒಂದು ಪೈಸೆಯನ್ನೂ ವಿಧಿಸಿಲ್ಲ. ನಾನು ವೃತ್ತಿಗೆ ಬಂದು ಕೇವಲ ಐದು ವರ್ಷವಾಗಿತ್ತು. ವಕೀಲರಿಗೆ ಪಾವತಿಸಲು ನಮ್ಮ ಬಳಿ ಸಾಕಷ್ಟು ಹಣವಿದೆ ಎಂದು ಎನ್‌ಎಚ್‌ಆರ್‌ಸಿ ನನಗೆ ಹೇಳಿತ್ತು. ಆದರೆ ನಾನು ಈ ವಿಷಯದಲ್ಲಿ ಕಾಗದದ ಕೆಲಸಕ್ಕೂ  ಒಂದು ರೂ. ಕೂಡ ಬೇಡ ಎಂದು ಹೇಳಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...