Homeಮುಖಪುಟಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

- Advertisement -
- Advertisement -

ಭಾರತದ 75ನೇ ಸ್ವಾತಂತ್ರ್ಯ ದಿನ ಕೆಂಪು ಕೋಟೆಯಿಂದ ಭಾಷಣ ಮಾಡಿದ ಮೋದಿ ಮಹಿಳಾ ಶಕ್ತಿ ಅಥವಾ ‘ನಾರಿ ಶಕ್ತಿ’ಯ ಬಲವರ್ಧನೆಗೆ ಕರೆ ನೀಡಿದ್ದರು ಮತ್ತು ಮಹಿಳೆಯರನ್ನು ಅವಮಾನಿಸುವ ಪ್ರತಿಯೊಂದು ನಡವಳಿಕೆ, ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಹೇಳಿದ್ದರು. ಆಗಸ್ಟ್ 15 ರಂದು ಪ್ರಧಾನ ಮಂತ್ರಿಗಳು ಕೆಂಪುಕೋಟೆಯಲ್ಲಿ ನಿಂತು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರಿಗೆ ಗೌರವದ ಬಗ್ಗೆ ಮಾತನಾಡುತ್ತಿದ್ದಾಗ, ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಿ 2002ರ ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಿ ಆದೇಶಿಸಿತ್ತು.

ಬಿಲ್ಕಿಸ್ ‘ಇದು ನ್ಯಾಯದ ಅಂತ್ಯವೇ’ ಎಂಬ ಪ್ರಶ್ನೆಯನ್ನು ಕೇಳಿದ್ದರು. ಈ ಪ್ರಶ್ನೆ ನನ್ನನ್ನು ಮತ್ತು ನನ್ನಂತಹ ಅನೇಕರನ್ನು ಬೆಚ್ಚಿಬೀಳಿಸಿದೆ ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ ಅವರು ಹೇಳಿದ್ದಾರೆ. ಸುಭಾಷಿಣಿ ಅಲಿ, ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಮತ್ತು ಪತ್ರಕರ್ತೆ ರೇವತಿ ಲಾಲ್ ಅವರು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದರು. ತೀರ್ಪು ಬಂದಾಗ ನಾವು ಏನು ಮಾಡಬಹುದೆಂದು ಯೋಚಿಸುತ್ತಿದ್ದೆವು, ಸೂಕ್ತ ಸಮಯದಲ್ಲೇ  ಕಪಿಲ್ ಸಿಬಲ್ ಮತ್ತು ಅಪರ್ಣಾ ಭಟ್ ಮತ್ತು ಇತರ ವಕೀಲರು ಮುಂದೆ ಬಂದಿರುವುದು ತುಂಬಾ ಅದೃಷ್ಟವಾಗಿತ್ತು ಎಂದು ಅಲಿ ಹೇಳಿದರು.

ಜನವರಿ 8ರಂದು ಸುಪ್ರೀಂಕೋರ್ಟ್ ತನ್ನ ಅದೇಶದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್‌ ಸರಕಾರದ ಆದೇಶವನ್ನು ರದ್ದುಗಳಿಸಿದೆ ಮತ್ತು ಎರಡು ವಾರಗಳಲ್ಲಿ ಜೈಲಿಗೆ ಮರಳಲು ಅಪರಾಧಿಗಳಿಗೆ ಸೂಚಿಸಲಾಗಿದೆ. ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಸಹಕಾರ ನೀಡಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರ ಪೀಠವುದ ತೀರ್ಪು ದೇಶದ ಜನರಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಲಕ್ನೋ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಈ ಕುರಿತು ಪ್ರತಿಕ್ರಿಯಿಸಿದ್ದು, ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಳ್ಳುವ ಮೊದಲೇ ಪ್ರಧಾನಿಯವರು ಕ್ಷಮಾಧಾನಕ್ಕೆ ಅನುಮತಿ ನೀಡಿದ್ದರು. ಅದು ಕ್ರೂರ ಹಾಸ್ಯವಾಗಿತ್ತು. ನಂತರ ತನ್ನ ಕೆಲವು ಸ್ನೇಹಿತರು ಮತ್ತು ಸಹವರ್ತಿಗಳೊಂದಿಗೆ ಬೆಳವಣಿಗೆಗಳ ಬಗ್ಗೆ ಚರ್ಚಿಸಿದೆ ಆ ಸಮಯದಲ್ಲಿ ನ್ಯಾಯಾಲಯಗಳನ್ನು ಹೆಚ್ಚು ಭರವಸೆಯಿಂದ ನೋಡದಿರಲು ನಮ್ಮಲ್ಲಿ ಸಾಕಷ್ಟು ಉದಾಹರಣೆಗಳಿದ್ದರೂ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಹೊರತುಪಡಿಸಿ ನಮಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತೆ ರೇವತಿ ಲಾಲ್ ಅವರು ಈ ವಿಚಾರದಲ್ಲಿ ಅರ್ಜಿದಾರರಾಗಿದ್ದಾರೆ. ಅವರು ಮೂರನೇ ಮಹಿಳಾ ಅರ್ಜಿದಾರರನ್ನು ಹುಡುಕುತ್ತಿದ್ದರು. ಅದಕ್ಕೆ ನಾನು ಸಮ್ಮತಿಸಿದೆ. ಬಳಿಕ ವಕೀಲರಾದ ಇಂದಿರಾ ಜೈಸಿಂಗ್ ಮೂಲಕ ತೃಣಮೂಲ ಕಾಂಗ್ರೆಸ್‌ನಿಂದ ಉಚ್ಛಾಟಿತರಾಗಿರುವ ಲೋಕಸಭಾ ಸಂಸದ ಮಹುವಾ ಮೊಯಿತ್ರಾ ಅವರು ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.  ಸೆಪ್ಟೆಂಬರ್ 2022ರಲ್ಲಿ ಮಾಜಿ IPS ಅಧಿಕಾರಿ ಮೀರನ್ ಚಡಾ ಬೋರ್ವಾಂಕರ್ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು. ಅವರ ತಂಡದಲ್ಲಿ ಜಗದೀಪ್ ಚೋಖರ್ ಮತ್ತು ಮಧು ಭಂಡಾರಿ ಕೂಡ ಇದ್ದರು. ನಾನು ಪ್ರಕರಣವನ್ನು ನಿಕಟವಾಗಿ ಗಮನಿಸುತ್ತಿದ್ದೆ ಮತ್ತು ಬಿಲ್ಕಿಸ್ ಬಾನು ಅವರು ಮೊದಲು ಸರಕಾರದ ಆದೇಶವನ್ನು ಪ್ರಶ್ನಿಸಲು ಮುಂದೆ ಬಂದಿಲ್ಲ ಎಂದು ಅರಿತುಕೊಂಡ ಬಳಿಕ ನಾನು ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಆದರೆ ತಡವಾಗಿ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರೊಫೆಸರ್ ರೂಪ್ ರೇಖಾ ವರ್ಮಾ ಹೇಳಿದ್ದಾರೆ.

11 ಅಪರಾಧಿಗಳನ್ನು ಈಗ ಜೈಲಿಗೆ ಮರಳುವಂತೆ ನ್ಯಾಯಾಲಯವು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ, ಮೊಯಿತ್ರಾ ಅವರನ್ನು ಪ್ರತಿನಿಧಿಸಿರುವ ಜೈಸಿಂಗ್ ಅವರು ತೀರ್ಪು ಅಸಾಮಾನ್ಯವಾದುದು ಎಂದು ಹೇಳಿದರು ಏಕೆಂದರೆ ಸುಪ್ರೀಂ ಕೋರ್ಟ್ ಅತ್ಯಂತ ಅಪರೂಪವಾಗಿ ತನ್ನದೇ ಆದ ತೀರ್ಪನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸುತ್ತದೆ. ಇದು ನಿಮಗೆ ನ್ಯಾಯದ ಮಾರ್ಗಸೂಚಿಯನ್ನು ಸಹ ನೀಡುತ್ತದೆ. ಅವರು ಮಹಾರಾಷ್ಟ್ರ ಕೋರ್ಟ್‌ಗೆ ಹೋಗುತ್ತಾರೆ ಎಂದು ನನಗೆ ತಿಳಿದಿದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ ಆದರೆ ತೀರ್ಪು ನ್ಯಾಯದ ಹಾದಿಯಲ್ಲಿ ಒಂದು ಮೈಲಿಗಲ್ಲು ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ನಂಬಿಕೆ ಕಡಿಮೆಯಾದ ಸಮಯದಲ್ಲಿ ಈ ತೀರ್ಪು ಬಂದಿದೆ. ಈ ತೀರ್ಪು ನನಗೆ ಅನೇಕ ವಿಧಗಳಲ್ಲಿ ಅಮೂಲ್ಯವಾಗಿದೆ. ಸುಪ್ರೀಂಕೋರ್ಟ್ ಮತ್ತು ಇತರ ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯು ಆ ಸಮಯದಲ್ಲಿ ಕುಸಿಯುತ್ತಿರುವಾಗ ಅಂತಹ ತೀರ್ಪು ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯನ್ನು ಸ್ವಲ್ಪವಾದರೂ ಹೆಚ್ಚಿಸುತ್ತದೆ. ಇದು ನನಗೆ ವೈಯಕ್ತಿಕವಾಗಿ ಮಾತ್ರವಲ್ಲದೆ ದೇಶಕ್ಕೂ ಅರ್ಥವಾಗಿದೆ ಎಂದು ವರ್ಮಾ ಹೇಳಿದ್ದಾರೆ.

ನಮ್ಮ ಅರ್ಜಿಗಳನ್ನು ಪ್ರಶ್ನಿಸಿ ಅಪರಾಧಿಯೋರ್ವ ಸಲ್ಲಿಸಿದ ಅರ್ಜಿಯ ಬಳಿಕ ಬಿಲ್ಕಿಸ್‌ ಬಾನು ಅವರು ನವೆಂಬರ್ 2022ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಿಗೆ ಯಾವುದೇ ಸ್ಥಾನವಿಲ್ಲ ಮತ್ತು ಈ ವಿಷಯದಲ್ಲಿ ಸಂಪೂರ್ಣ ಅಪರಿಚಿತರು ಎಂದು ಅಪರಾಧಿ ಬಿಡುಗಡೆ ಪ್ರಶ್ನಿಸಿದ್ದ ನಮ್ಮ ಅರ್ಜಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿಗಳ ನಿರ್ವಹಣೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ನಂತರ ಬಾನು ಅರ್ಜಿದಾರರಾಗಬೇಕಾಯಿತು ಎಂದು ಬಿಲ್ಕಿಸ್‌ ಬಾನು ಪರ ವಕೀಲೆ ಶೋಭಾ ಗುಪ್ತಾ ಹೇಳಿದ್ದಾರೆ.

ಈ ಬಗ್ಗೆ ವಕೀಲೆ ಶೋಭಾ ಗುಪ್ತಾ ಮತನಾಡುತ್ತಾ, ಅವಳು ಮಾತ್ರ ಏಕೆ ಮುಂದೆ ಬರಬೇಕು? ಇದು ವೈಯಕ್ತಿಕ ಅಪರಾಧವಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ಅಪರಾಧದ ಅನಾಗರಿಕ ಸ್ವರೂಪದ್ದಾಗಿತ್ತು. ಅದನ್ನು ಸಮಾಜವೇ ನಿರ್ಧರಿಸಬೇಕು. ಅದಕ್ಕಾಗಿಯೇ ಅವಳು ಮೊದಲು ಅರ್ಜಿ ಸಲ್ಲಿಸಬೇಕೆಂದು ನಾನು ಭಾವಿಸುವುದಿಲ್ಲ ಅವಳು ತನ್ನ ಸಮಯವನ್ನು ತೆಗೆದುಕೊಂಡಿದ್ದಕ್ಕೆ ನನಗೆ ಖುಷಿಯಾಗಿದೆ. ಈ ಮಧ್ಯೆ ಸರಿಯಾದ ಸಮಯದಲ್ಲಿ ಇತರರು ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು  ಹೇಳಿದ್ದಾರೆ.

2002ರಲ್ಲಿ ನಡೆದ ಗಲಭೆಯ ನಂತರದ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ವಕೀಲರಾಗಿ ನನ್ನನ್ನು ನೇಮಿಸಿದ ಬಳಿಕ ತಾನು ಈ ವಿಷಯದಲ್ಲಿ ಒಂದು ಪೈಸೆಯನ್ನೂ ವಿಧಿಸಿಲ್ಲ. ನಾನು ವೃತ್ತಿಗೆ ಬಂದು ಕೇವಲ ಐದು ವರ್ಷವಾಗಿತ್ತು. ವಕೀಲರಿಗೆ ಪಾವತಿಸಲು ನಮ್ಮ ಬಳಿ ಸಾಕಷ್ಟು ಹಣವಿದೆ ಎಂದು ಎನ್‌ಎಚ್‌ಆರ್‌ಸಿ ನನಗೆ ಹೇಳಿತ್ತು. ಆದರೆ ನಾನು ಈ ವಿಷಯದಲ್ಲಿ ಕಾಗದದ ಕೆಲಸಕ್ಕೂ  ಒಂದು ರೂ. ಕೂಡ ಬೇಡ ಎಂದು ಹೇಳಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...