Homeಮುಖಪುಟಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

- Advertisement -
- Advertisement -

ಭಾರತದ 75ನೇ ಸ್ವಾತಂತ್ರ್ಯ ದಿನ ಕೆಂಪು ಕೋಟೆಯಿಂದ ಭಾಷಣ ಮಾಡಿದ ಮೋದಿ ಮಹಿಳಾ ಶಕ್ತಿ ಅಥವಾ ‘ನಾರಿ ಶಕ್ತಿ’ಯ ಬಲವರ್ಧನೆಗೆ ಕರೆ ನೀಡಿದ್ದರು ಮತ್ತು ಮಹಿಳೆಯರನ್ನು ಅವಮಾನಿಸುವ ಪ್ರತಿಯೊಂದು ನಡವಳಿಕೆ, ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಹೇಳಿದ್ದರು. ಆಗಸ್ಟ್ 15 ರಂದು ಪ್ರಧಾನ ಮಂತ್ರಿಗಳು ಕೆಂಪುಕೋಟೆಯಲ್ಲಿ ನಿಂತು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರಿಗೆ ಗೌರವದ ಬಗ್ಗೆ ಮಾತನಾಡುತ್ತಿದ್ದಾಗ, ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಿ 2002ರ ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಿ ಆದೇಶಿಸಿತ್ತು.

ಬಿಲ್ಕಿಸ್ ‘ಇದು ನ್ಯಾಯದ ಅಂತ್ಯವೇ’ ಎಂಬ ಪ್ರಶ್ನೆಯನ್ನು ಕೇಳಿದ್ದರು. ಈ ಪ್ರಶ್ನೆ ನನ್ನನ್ನು ಮತ್ತು ನನ್ನಂತಹ ಅನೇಕರನ್ನು ಬೆಚ್ಚಿಬೀಳಿಸಿದೆ ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ ಅವರು ಹೇಳಿದ್ದಾರೆ. ಸುಭಾಷಿಣಿ ಅಲಿ, ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಮತ್ತು ಪತ್ರಕರ್ತೆ ರೇವತಿ ಲಾಲ್ ಅವರು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದರು. ತೀರ್ಪು ಬಂದಾಗ ನಾವು ಏನು ಮಾಡಬಹುದೆಂದು ಯೋಚಿಸುತ್ತಿದ್ದೆವು, ಸೂಕ್ತ ಸಮಯದಲ್ಲೇ  ಕಪಿಲ್ ಸಿಬಲ್ ಮತ್ತು ಅಪರ್ಣಾ ಭಟ್ ಮತ್ತು ಇತರ ವಕೀಲರು ಮುಂದೆ ಬಂದಿರುವುದು ತುಂಬಾ ಅದೃಷ್ಟವಾಗಿತ್ತು ಎಂದು ಅಲಿ ಹೇಳಿದರು.

ಜನವರಿ 8ರಂದು ಸುಪ್ರೀಂಕೋರ್ಟ್ ತನ್ನ ಅದೇಶದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್‌ ಸರಕಾರದ ಆದೇಶವನ್ನು ರದ್ದುಗಳಿಸಿದೆ ಮತ್ತು ಎರಡು ವಾರಗಳಲ್ಲಿ ಜೈಲಿಗೆ ಮರಳಲು ಅಪರಾಧಿಗಳಿಗೆ ಸೂಚಿಸಲಾಗಿದೆ. ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಸಹಕಾರ ನೀಡಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರ ಪೀಠವುದ ತೀರ್ಪು ದೇಶದ ಜನರಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಲಕ್ನೋ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಈ ಕುರಿತು ಪ್ರತಿಕ್ರಿಯಿಸಿದ್ದು, ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಳ್ಳುವ ಮೊದಲೇ ಪ್ರಧಾನಿಯವರು ಕ್ಷಮಾಧಾನಕ್ಕೆ ಅನುಮತಿ ನೀಡಿದ್ದರು. ಅದು ಕ್ರೂರ ಹಾಸ್ಯವಾಗಿತ್ತು. ನಂತರ ತನ್ನ ಕೆಲವು ಸ್ನೇಹಿತರು ಮತ್ತು ಸಹವರ್ತಿಗಳೊಂದಿಗೆ ಬೆಳವಣಿಗೆಗಳ ಬಗ್ಗೆ ಚರ್ಚಿಸಿದೆ ಆ ಸಮಯದಲ್ಲಿ ನ್ಯಾಯಾಲಯಗಳನ್ನು ಹೆಚ್ಚು ಭರವಸೆಯಿಂದ ನೋಡದಿರಲು ನಮ್ಮಲ್ಲಿ ಸಾಕಷ್ಟು ಉದಾಹರಣೆಗಳಿದ್ದರೂ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಹೊರತುಪಡಿಸಿ ನಮಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತೆ ರೇವತಿ ಲಾಲ್ ಅವರು ಈ ವಿಚಾರದಲ್ಲಿ ಅರ್ಜಿದಾರರಾಗಿದ್ದಾರೆ. ಅವರು ಮೂರನೇ ಮಹಿಳಾ ಅರ್ಜಿದಾರರನ್ನು ಹುಡುಕುತ್ತಿದ್ದರು. ಅದಕ್ಕೆ ನಾನು ಸಮ್ಮತಿಸಿದೆ. ಬಳಿಕ ವಕೀಲರಾದ ಇಂದಿರಾ ಜೈಸಿಂಗ್ ಮೂಲಕ ತೃಣಮೂಲ ಕಾಂಗ್ರೆಸ್‌ನಿಂದ ಉಚ್ಛಾಟಿತರಾಗಿರುವ ಲೋಕಸಭಾ ಸಂಸದ ಮಹುವಾ ಮೊಯಿತ್ರಾ ಅವರು ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.  ಸೆಪ್ಟೆಂಬರ್ 2022ರಲ್ಲಿ ಮಾಜಿ IPS ಅಧಿಕಾರಿ ಮೀರನ್ ಚಡಾ ಬೋರ್ವಾಂಕರ್ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು. ಅವರ ತಂಡದಲ್ಲಿ ಜಗದೀಪ್ ಚೋಖರ್ ಮತ್ತು ಮಧು ಭಂಡಾರಿ ಕೂಡ ಇದ್ದರು. ನಾನು ಪ್ರಕರಣವನ್ನು ನಿಕಟವಾಗಿ ಗಮನಿಸುತ್ತಿದ್ದೆ ಮತ್ತು ಬಿಲ್ಕಿಸ್ ಬಾನು ಅವರು ಮೊದಲು ಸರಕಾರದ ಆದೇಶವನ್ನು ಪ್ರಶ್ನಿಸಲು ಮುಂದೆ ಬಂದಿಲ್ಲ ಎಂದು ಅರಿತುಕೊಂಡ ಬಳಿಕ ನಾನು ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಆದರೆ ತಡವಾಗಿ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರೊಫೆಸರ್ ರೂಪ್ ರೇಖಾ ವರ್ಮಾ ಹೇಳಿದ್ದಾರೆ.

11 ಅಪರಾಧಿಗಳನ್ನು ಈಗ ಜೈಲಿಗೆ ಮರಳುವಂತೆ ನ್ಯಾಯಾಲಯವು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ, ಮೊಯಿತ್ರಾ ಅವರನ್ನು ಪ್ರತಿನಿಧಿಸಿರುವ ಜೈಸಿಂಗ್ ಅವರು ತೀರ್ಪು ಅಸಾಮಾನ್ಯವಾದುದು ಎಂದು ಹೇಳಿದರು ಏಕೆಂದರೆ ಸುಪ್ರೀಂ ಕೋರ್ಟ್ ಅತ್ಯಂತ ಅಪರೂಪವಾಗಿ ತನ್ನದೇ ಆದ ತೀರ್ಪನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸುತ್ತದೆ. ಇದು ನಿಮಗೆ ನ್ಯಾಯದ ಮಾರ್ಗಸೂಚಿಯನ್ನು ಸಹ ನೀಡುತ್ತದೆ. ಅವರು ಮಹಾರಾಷ್ಟ್ರ ಕೋರ್ಟ್‌ಗೆ ಹೋಗುತ್ತಾರೆ ಎಂದು ನನಗೆ ತಿಳಿದಿದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ ಆದರೆ ತೀರ್ಪು ನ್ಯಾಯದ ಹಾದಿಯಲ್ಲಿ ಒಂದು ಮೈಲಿಗಲ್ಲು ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ನಂಬಿಕೆ ಕಡಿಮೆಯಾದ ಸಮಯದಲ್ಲಿ ಈ ತೀರ್ಪು ಬಂದಿದೆ. ಈ ತೀರ್ಪು ನನಗೆ ಅನೇಕ ವಿಧಗಳಲ್ಲಿ ಅಮೂಲ್ಯವಾಗಿದೆ. ಸುಪ್ರೀಂಕೋರ್ಟ್ ಮತ್ತು ಇತರ ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯು ಆ ಸಮಯದಲ್ಲಿ ಕುಸಿಯುತ್ತಿರುವಾಗ ಅಂತಹ ತೀರ್ಪು ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯನ್ನು ಸ್ವಲ್ಪವಾದರೂ ಹೆಚ್ಚಿಸುತ್ತದೆ. ಇದು ನನಗೆ ವೈಯಕ್ತಿಕವಾಗಿ ಮಾತ್ರವಲ್ಲದೆ ದೇಶಕ್ಕೂ ಅರ್ಥವಾಗಿದೆ ಎಂದು ವರ್ಮಾ ಹೇಳಿದ್ದಾರೆ.

ನಮ್ಮ ಅರ್ಜಿಗಳನ್ನು ಪ್ರಶ್ನಿಸಿ ಅಪರಾಧಿಯೋರ್ವ ಸಲ್ಲಿಸಿದ ಅರ್ಜಿಯ ಬಳಿಕ ಬಿಲ್ಕಿಸ್‌ ಬಾನು ಅವರು ನವೆಂಬರ್ 2022ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಿಗೆ ಯಾವುದೇ ಸ್ಥಾನವಿಲ್ಲ ಮತ್ತು ಈ ವಿಷಯದಲ್ಲಿ ಸಂಪೂರ್ಣ ಅಪರಿಚಿತರು ಎಂದು ಅಪರಾಧಿ ಬಿಡುಗಡೆ ಪ್ರಶ್ನಿಸಿದ್ದ ನಮ್ಮ ಅರ್ಜಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿಗಳ ನಿರ್ವಹಣೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ನಂತರ ಬಾನು ಅರ್ಜಿದಾರರಾಗಬೇಕಾಯಿತು ಎಂದು ಬಿಲ್ಕಿಸ್‌ ಬಾನು ಪರ ವಕೀಲೆ ಶೋಭಾ ಗುಪ್ತಾ ಹೇಳಿದ್ದಾರೆ.

ಈ ಬಗ್ಗೆ ವಕೀಲೆ ಶೋಭಾ ಗುಪ್ತಾ ಮತನಾಡುತ್ತಾ, ಅವಳು ಮಾತ್ರ ಏಕೆ ಮುಂದೆ ಬರಬೇಕು? ಇದು ವೈಯಕ್ತಿಕ ಅಪರಾಧವಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ಅಪರಾಧದ ಅನಾಗರಿಕ ಸ್ವರೂಪದ್ದಾಗಿತ್ತು. ಅದನ್ನು ಸಮಾಜವೇ ನಿರ್ಧರಿಸಬೇಕು. ಅದಕ್ಕಾಗಿಯೇ ಅವಳು ಮೊದಲು ಅರ್ಜಿ ಸಲ್ಲಿಸಬೇಕೆಂದು ನಾನು ಭಾವಿಸುವುದಿಲ್ಲ ಅವಳು ತನ್ನ ಸಮಯವನ್ನು ತೆಗೆದುಕೊಂಡಿದ್ದಕ್ಕೆ ನನಗೆ ಖುಷಿಯಾಗಿದೆ. ಈ ಮಧ್ಯೆ ಸರಿಯಾದ ಸಮಯದಲ್ಲಿ ಇತರರು ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು  ಹೇಳಿದ್ದಾರೆ.

2002ರಲ್ಲಿ ನಡೆದ ಗಲಭೆಯ ನಂತರದ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ವಕೀಲರಾಗಿ ನನ್ನನ್ನು ನೇಮಿಸಿದ ಬಳಿಕ ತಾನು ಈ ವಿಷಯದಲ್ಲಿ ಒಂದು ಪೈಸೆಯನ್ನೂ ವಿಧಿಸಿಲ್ಲ. ನಾನು ವೃತ್ತಿಗೆ ಬಂದು ಕೇವಲ ಐದು ವರ್ಷವಾಗಿತ್ತು. ವಕೀಲರಿಗೆ ಪಾವತಿಸಲು ನಮ್ಮ ಬಳಿ ಸಾಕಷ್ಟು ಹಣವಿದೆ ಎಂದು ಎನ್‌ಎಚ್‌ಆರ್‌ಸಿ ನನಗೆ ಹೇಳಿತ್ತು. ಆದರೆ ನಾನು ಈ ವಿಷಯದಲ್ಲಿ ಕಾಗದದ ಕೆಲಸಕ್ಕೂ  ಒಂದು ರೂ. ಕೂಡ ಬೇಡ ಎಂದು ಹೇಳಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...