Homeಮುಖಪುಟಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

- Advertisement -
- Advertisement -

ಭಾರತದ 75ನೇ ಸ್ವಾತಂತ್ರ್ಯ ದಿನ ಕೆಂಪು ಕೋಟೆಯಿಂದ ಭಾಷಣ ಮಾಡಿದ ಮೋದಿ ಮಹಿಳಾ ಶಕ್ತಿ ಅಥವಾ ‘ನಾರಿ ಶಕ್ತಿ’ಯ ಬಲವರ್ಧನೆಗೆ ಕರೆ ನೀಡಿದ್ದರು ಮತ್ತು ಮಹಿಳೆಯರನ್ನು ಅವಮಾನಿಸುವ ಪ್ರತಿಯೊಂದು ನಡವಳಿಕೆ, ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಹೇಳಿದ್ದರು. ಆಗಸ್ಟ್ 15 ರಂದು ಪ್ರಧಾನ ಮಂತ್ರಿಗಳು ಕೆಂಪುಕೋಟೆಯಲ್ಲಿ ನಿಂತು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರಿಗೆ ಗೌರವದ ಬಗ್ಗೆ ಮಾತನಾಡುತ್ತಿದ್ದಾಗ, ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಿ 2002ರ ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಿ ಆದೇಶಿಸಿತ್ತು.

ಬಿಲ್ಕಿಸ್ ‘ಇದು ನ್ಯಾಯದ ಅಂತ್ಯವೇ’ ಎಂಬ ಪ್ರಶ್ನೆಯನ್ನು ಕೇಳಿದ್ದರು. ಈ ಪ್ರಶ್ನೆ ನನ್ನನ್ನು ಮತ್ತು ನನ್ನಂತಹ ಅನೇಕರನ್ನು ಬೆಚ್ಚಿಬೀಳಿಸಿದೆ ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ ಅವರು ಹೇಳಿದ್ದಾರೆ. ಸುಭಾಷಿಣಿ ಅಲಿ, ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಮತ್ತು ಪತ್ರಕರ್ತೆ ರೇವತಿ ಲಾಲ್ ಅವರು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದರು. ತೀರ್ಪು ಬಂದಾಗ ನಾವು ಏನು ಮಾಡಬಹುದೆಂದು ಯೋಚಿಸುತ್ತಿದ್ದೆವು, ಸೂಕ್ತ ಸಮಯದಲ್ಲೇ  ಕಪಿಲ್ ಸಿಬಲ್ ಮತ್ತು ಅಪರ್ಣಾ ಭಟ್ ಮತ್ತು ಇತರ ವಕೀಲರು ಮುಂದೆ ಬಂದಿರುವುದು ತುಂಬಾ ಅದೃಷ್ಟವಾಗಿತ್ತು ಎಂದು ಅಲಿ ಹೇಳಿದರು.

ಜನವರಿ 8ರಂದು ಸುಪ್ರೀಂಕೋರ್ಟ್ ತನ್ನ ಅದೇಶದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್‌ ಸರಕಾರದ ಆದೇಶವನ್ನು ರದ್ದುಗಳಿಸಿದೆ ಮತ್ತು ಎರಡು ವಾರಗಳಲ್ಲಿ ಜೈಲಿಗೆ ಮರಳಲು ಅಪರಾಧಿಗಳಿಗೆ ಸೂಚಿಸಲಾಗಿದೆ. ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಸಹಕಾರ ನೀಡಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರ ಪೀಠವುದ ತೀರ್ಪು ದೇಶದ ಜನರಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಲಕ್ನೋ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಈ ಕುರಿತು ಪ್ರತಿಕ್ರಿಯಿಸಿದ್ದು, ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಳ್ಳುವ ಮೊದಲೇ ಪ್ರಧಾನಿಯವರು ಕ್ಷಮಾಧಾನಕ್ಕೆ ಅನುಮತಿ ನೀಡಿದ್ದರು. ಅದು ಕ್ರೂರ ಹಾಸ್ಯವಾಗಿತ್ತು. ನಂತರ ತನ್ನ ಕೆಲವು ಸ್ನೇಹಿತರು ಮತ್ತು ಸಹವರ್ತಿಗಳೊಂದಿಗೆ ಬೆಳವಣಿಗೆಗಳ ಬಗ್ಗೆ ಚರ್ಚಿಸಿದೆ ಆ ಸಮಯದಲ್ಲಿ ನ್ಯಾಯಾಲಯಗಳನ್ನು ಹೆಚ್ಚು ಭರವಸೆಯಿಂದ ನೋಡದಿರಲು ನಮ್ಮಲ್ಲಿ ಸಾಕಷ್ಟು ಉದಾಹರಣೆಗಳಿದ್ದರೂ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಹೊರತುಪಡಿಸಿ ನಮಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತೆ ರೇವತಿ ಲಾಲ್ ಅವರು ಈ ವಿಚಾರದಲ್ಲಿ ಅರ್ಜಿದಾರರಾಗಿದ್ದಾರೆ. ಅವರು ಮೂರನೇ ಮಹಿಳಾ ಅರ್ಜಿದಾರರನ್ನು ಹುಡುಕುತ್ತಿದ್ದರು. ಅದಕ್ಕೆ ನಾನು ಸಮ್ಮತಿಸಿದೆ. ಬಳಿಕ ವಕೀಲರಾದ ಇಂದಿರಾ ಜೈಸಿಂಗ್ ಮೂಲಕ ತೃಣಮೂಲ ಕಾಂಗ್ರೆಸ್‌ನಿಂದ ಉಚ್ಛಾಟಿತರಾಗಿರುವ ಲೋಕಸಭಾ ಸಂಸದ ಮಹುವಾ ಮೊಯಿತ್ರಾ ಅವರು ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.  ಸೆಪ್ಟೆಂಬರ್ 2022ರಲ್ಲಿ ಮಾಜಿ IPS ಅಧಿಕಾರಿ ಮೀರನ್ ಚಡಾ ಬೋರ್ವಾಂಕರ್ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು. ಅವರ ತಂಡದಲ್ಲಿ ಜಗದೀಪ್ ಚೋಖರ್ ಮತ್ತು ಮಧು ಭಂಡಾರಿ ಕೂಡ ಇದ್ದರು. ನಾನು ಪ್ರಕರಣವನ್ನು ನಿಕಟವಾಗಿ ಗಮನಿಸುತ್ತಿದ್ದೆ ಮತ್ತು ಬಿಲ್ಕಿಸ್ ಬಾನು ಅವರು ಮೊದಲು ಸರಕಾರದ ಆದೇಶವನ್ನು ಪ್ರಶ್ನಿಸಲು ಮುಂದೆ ಬಂದಿಲ್ಲ ಎಂದು ಅರಿತುಕೊಂಡ ಬಳಿಕ ನಾನು ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಆದರೆ ತಡವಾಗಿ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರೊಫೆಸರ್ ರೂಪ್ ರೇಖಾ ವರ್ಮಾ ಹೇಳಿದ್ದಾರೆ.

11 ಅಪರಾಧಿಗಳನ್ನು ಈಗ ಜೈಲಿಗೆ ಮರಳುವಂತೆ ನ್ಯಾಯಾಲಯವು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ, ಮೊಯಿತ್ರಾ ಅವರನ್ನು ಪ್ರತಿನಿಧಿಸಿರುವ ಜೈಸಿಂಗ್ ಅವರು ತೀರ್ಪು ಅಸಾಮಾನ್ಯವಾದುದು ಎಂದು ಹೇಳಿದರು ಏಕೆಂದರೆ ಸುಪ್ರೀಂ ಕೋರ್ಟ್ ಅತ್ಯಂತ ಅಪರೂಪವಾಗಿ ತನ್ನದೇ ಆದ ತೀರ್ಪನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸುತ್ತದೆ. ಇದು ನಿಮಗೆ ನ್ಯಾಯದ ಮಾರ್ಗಸೂಚಿಯನ್ನು ಸಹ ನೀಡುತ್ತದೆ. ಅವರು ಮಹಾರಾಷ್ಟ್ರ ಕೋರ್ಟ್‌ಗೆ ಹೋಗುತ್ತಾರೆ ಎಂದು ನನಗೆ ತಿಳಿದಿದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ ಆದರೆ ತೀರ್ಪು ನ್ಯಾಯದ ಹಾದಿಯಲ್ಲಿ ಒಂದು ಮೈಲಿಗಲ್ಲು ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ನಂಬಿಕೆ ಕಡಿಮೆಯಾದ ಸಮಯದಲ್ಲಿ ಈ ತೀರ್ಪು ಬಂದಿದೆ. ಈ ತೀರ್ಪು ನನಗೆ ಅನೇಕ ವಿಧಗಳಲ್ಲಿ ಅಮೂಲ್ಯವಾಗಿದೆ. ಸುಪ್ರೀಂಕೋರ್ಟ್ ಮತ್ತು ಇತರ ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯು ಆ ಸಮಯದಲ್ಲಿ ಕುಸಿಯುತ್ತಿರುವಾಗ ಅಂತಹ ತೀರ್ಪು ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯನ್ನು ಸ್ವಲ್ಪವಾದರೂ ಹೆಚ್ಚಿಸುತ್ತದೆ. ಇದು ನನಗೆ ವೈಯಕ್ತಿಕವಾಗಿ ಮಾತ್ರವಲ್ಲದೆ ದೇಶಕ್ಕೂ ಅರ್ಥವಾಗಿದೆ ಎಂದು ವರ್ಮಾ ಹೇಳಿದ್ದಾರೆ.

ನಮ್ಮ ಅರ್ಜಿಗಳನ್ನು ಪ್ರಶ್ನಿಸಿ ಅಪರಾಧಿಯೋರ್ವ ಸಲ್ಲಿಸಿದ ಅರ್ಜಿಯ ಬಳಿಕ ಬಿಲ್ಕಿಸ್‌ ಬಾನು ಅವರು ನವೆಂಬರ್ 2022ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಿಗೆ ಯಾವುದೇ ಸ್ಥಾನವಿಲ್ಲ ಮತ್ತು ಈ ವಿಷಯದಲ್ಲಿ ಸಂಪೂರ್ಣ ಅಪರಿಚಿತರು ಎಂದು ಅಪರಾಧಿ ಬಿಡುಗಡೆ ಪ್ರಶ್ನಿಸಿದ್ದ ನಮ್ಮ ಅರ್ಜಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿಗಳ ನಿರ್ವಹಣೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ನಂತರ ಬಾನು ಅರ್ಜಿದಾರರಾಗಬೇಕಾಯಿತು ಎಂದು ಬಿಲ್ಕಿಸ್‌ ಬಾನು ಪರ ವಕೀಲೆ ಶೋಭಾ ಗುಪ್ತಾ ಹೇಳಿದ್ದಾರೆ.

ಈ ಬಗ್ಗೆ ವಕೀಲೆ ಶೋಭಾ ಗುಪ್ತಾ ಮತನಾಡುತ್ತಾ, ಅವಳು ಮಾತ್ರ ಏಕೆ ಮುಂದೆ ಬರಬೇಕು? ಇದು ವೈಯಕ್ತಿಕ ಅಪರಾಧವಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ಅಪರಾಧದ ಅನಾಗರಿಕ ಸ್ವರೂಪದ್ದಾಗಿತ್ತು. ಅದನ್ನು ಸಮಾಜವೇ ನಿರ್ಧರಿಸಬೇಕು. ಅದಕ್ಕಾಗಿಯೇ ಅವಳು ಮೊದಲು ಅರ್ಜಿ ಸಲ್ಲಿಸಬೇಕೆಂದು ನಾನು ಭಾವಿಸುವುದಿಲ್ಲ ಅವಳು ತನ್ನ ಸಮಯವನ್ನು ತೆಗೆದುಕೊಂಡಿದ್ದಕ್ಕೆ ನನಗೆ ಖುಷಿಯಾಗಿದೆ. ಈ ಮಧ್ಯೆ ಸರಿಯಾದ ಸಮಯದಲ್ಲಿ ಇತರರು ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು  ಹೇಳಿದ್ದಾರೆ.

2002ರಲ್ಲಿ ನಡೆದ ಗಲಭೆಯ ನಂತರದ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ವಕೀಲರಾಗಿ ನನ್ನನ್ನು ನೇಮಿಸಿದ ಬಳಿಕ ತಾನು ಈ ವಿಷಯದಲ್ಲಿ ಒಂದು ಪೈಸೆಯನ್ನೂ ವಿಧಿಸಿಲ್ಲ. ನಾನು ವೃತ್ತಿಗೆ ಬಂದು ಕೇವಲ ಐದು ವರ್ಷವಾಗಿತ್ತು. ವಕೀಲರಿಗೆ ಪಾವತಿಸಲು ನಮ್ಮ ಬಳಿ ಸಾಕಷ್ಟು ಹಣವಿದೆ ಎಂದು ಎನ್‌ಎಚ್‌ಆರ್‌ಸಿ ನನಗೆ ಹೇಳಿತ್ತು. ಆದರೆ ನಾನು ಈ ವಿಷಯದಲ್ಲಿ ಕಾಗದದ ಕೆಲಸಕ್ಕೂ  ಒಂದು ರೂ. ಕೂಡ ಬೇಡ ಎಂದು ಹೇಳಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...