Homeಮುಖಪುಟಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

- Advertisement -
- Advertisement -

ಭಾರತದ 75ನೇ ಸ್ವಾತಂತ್ರ್ಯ ದಿನ ಕೆಂಪು ಕೋಟೆಯಿಂದ ಭಾಷಣ ಮಾಡಿದ ಮೋದಿ ಮಹಿಳಾ ಶಕ್ತಿ ಅಥವಾ ‘ನಾರಿ ಶಕ್ತಿ’ಯ ಬಲವರ್ಧನೆಗೆ ಕರೆ ನೀಡಿದ್ದರು ಮತ್ತು ಮಹಿಳೆಯರನ್ನು ಅವಮಾನಿಸುವ ಪ್ರತಿಯೊಂದು ನಡವಳಿಕೆ, ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಹೇಳಿದ್ದರು. ಆಗಸ್ಟ್ 15 ರಂದು ಪ್ರಧಾನ ಮಂತ್ರಿಗಳು ಕೆಂಪುಕೋಟೆಯಲ್ಲಿ ನಿಂತು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರಿಗೆ ಗೌರವದ ಬಗ್ಗೆ ಮಾತನಾಡುತ್ತಿದ್ದಾಗ, ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಿ 2002ರ ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಿ ಆದೇಶಿಸಿತ್ತು.

ಬಿಲ್ಕಿಸ್ ‘ಇದು ನ್ಯಾಯದ ಅಂತ್ಯವೇ’ ಎಂಬ ಪ್ರಶ್ನೆಯನ್ನು ಕೇಳಿದ್ದರು. ಈ ಪ್ರಶ್ನೆ ನನ್ನನ್ನು ಮತ್ತು ನನ್ನಂತಹ ಅನೇಕರನ್ನು ಬೆಚ್ಚಿಬೀಳಿಸಿದೆ ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ ಅವರು ಹೇಳಿದ್ದಾರೆ. ಸುಭಾಷಿಣಿ ಅಲಿ, ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಮತ್ತು ಪತ್ರಕರ್ತೆ ರೇವತಿ ಲಾಲ್ ಅವರು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದರು. ತೀರ್ಪು ಬಂದಾಗ ನಾವು ಏನು ಮಾಡಬಹುದೆಂದು ಯೋಚಿಸುತ್ತಿದ್ದೆವು, ಸೂಕ್ತ ಸಮಯದಲ್ಲೇ  ಕಪಿಲ್ ಸಿಬಲ್ ಮತ್ತು ಅಪರ್ಣಾ ಭಟ್ ಮತ್ತು ಇತರ ವಕೀಲರು ಮುಂದೆ ಬಂದಿರುವುದು ತುಂಬಾ ಅದೃಷ್ಟವಾಗಿತ್ತು ಎಂದು ಅಲಿ ಹೇಳಿದರು.

ಜನವರಿ 8ರಂದು ಸುಪ್ರೀಂಕೋರ್ಟ್ ತನ್ನ ಅದೇಶದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್‌ ಸರಕಾರದ ಆದೇಶವನ್ನು ರದ್ದುಗಳಿಸಿದೆ ಮತ್ತು ಎರಡು ವಾರಗಳಲ್ಲಿ ಜೈಲಿಗೆ ಮರಳಲು ಅಪರಾಧಿಗಳಿಗೆ ಸೂಚಿಸಲಾಗಿದೆ. ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಸಹಕಾರ ನೀಡಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರ ಪೀಠವುದ ತೀರ್ಪು ದೇಶದ ಜನರಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಲಕ್ನೋ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಈ ಕುರಿತು ಪ್ರತಿಕ್ರಿಯಿಸಿದ್ದು, ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಳ್ಳುವ ಮೊದಲೇ ಪ್ರಧಾನಿಯವರು ಕ್ಷಮಾಧಾನಕ್ಕೆ ಅನುಮತಿ ನೀಡಿದ್ದರು. ಅದು ಕ್ರೂರ ಹಾಸ್ಯವಾಗಿತ್ತು. ನಂತರ ತನ್ನ ಕೆಲವು ಸ್ನೇಹಿತರು ಮತ್ತು ಸಹವರ್ತಿಗಳೊಂದಿಗೆ ಬೆಳವಣಿಗೆಗಳ ಬಗ್ಗೆ ಚರ್ಚಿಸಿದೆ ಆ ಸಮಯದಲ್ಲಿ ನ್ಯಾಯಾಲಯಗಳನ್ನು ಹೆಚ್ಚು ಭರವಸೆಯಿಂದ ನೋಡದಿರಲು ನಮ್ಮಲ್ಲಿ ಸಾಕಷ್ಟು ಉದಾಹರಣೆಗಳಿದ್ದರೂ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಹೊರತುಪಡಿಸಿ ನಮಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತೆ ರೇವತಿ ಲಾಲ್ ಅವರು ಈ ವಿಚಾರದಲ್ಲಿ ಅರ್ಜಿದಾರರಾಗಿದ್ದಾರೆ. ಅವರು ಮೂರನೇ ಮಹಿಳಾ ಅರ್ಜಿದಾರರನ್ನು ಹುಡುಕುತ್ತಿದ್ದರು. ಅದಕ್ಕೆ ನಾನು ಸಮ್ಮತಿಸಿದೆ. ಬಳಿಕ ವಕೀಲರಾದ ಇಂದಿರಾ ಜೈಸಿಂಗ್ ಮೂಲಕ ತೃಣಮೂಲ ಕಾಂಗ್ರೆಸ್‌ನಿಂದ ಉಚ್ಛಾಟಿತರಾಗಿರುವ ಲೋಕಸಭಾ ಸಂಸದ ಮಹುವಾ ಮೊಯಿತ್ರಾ ಅವರು ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.  ಸೆಪ್ಟೆಂಬರ್ 2022ರಲ್ಲಿ ಮಾಜಿ IPS ಅಧಿಕಾರಿ ಮೀರನ್ ಚಡಾ ಬೋರ್ವಾಂಕರ್ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು. ಅವರ ತಂಡದಲ್ಲಿ ಜಗದೀಪ್ ಚೋಖರ್ ಮತ್ತು ಮಧು ಭಂಡಾರಿ ಕೂಡ ಇದ್ದರು. ನಾನು ಪ್ರಕರಣವನ್ನು ನಿಕಟವಾಗಿ ಗಮನಿಸುತ್ತಿದ್ದೆ ಮತ್ತು ಬಿಲ್ಕಿಸ್ ಬಾನು ಅವರು ಮೊದಲು ಸರಕಾರದ ಆದೇಶವನ್ನು ಪ್ರಶ್ನಿಸಲು ಮುಂದೆ ಬಂದಿಲ್ಲ ಎಂದು ಅರಿತುಕೊಂಡ ಬಳಿಕ ನಾನು ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಆದರೆ ತಡವಾಗಿ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರೊಫೆಸರ್ ರೂಪ್ ರೇಖಾ ವರ್ಮಾ ಹೇಳಿದ್ದಾರೆ.

11 ಅಪರಾಧಿಗಳನ್ನು ಈಗ ಜೈಲಿಗೆ ಮರಳುವಂತೆ ನ್ಯಾಯಾಲಯವು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ, ಮೊಯಿತ್ರಾ ಅವರನ್ನು ಪ್ರತಿನಿಧಿಸಿರುವ ಜೈಸಿಂಗ್ ಅವರು ತೀರ್ಪು ಅಸಾಮಾನ್ಯವಾದುದು ಎಂದು ಹೇಳಿದರು ಏಕೆಂದರೆ ಸುಪ್ರೀಂ ಕೋರ್ಟ್ ಅತ್ಯಂತ ಅಪರೂಪವಾಗಿ ತನ್ನದೇ ಆದ ತೀರ್ಪನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸುತ್ತದೆ. ಇದು ನಿಮಗೆ ನ್ಯಾಯದ ಮಾರ್ಗಸೂಚಿಯನ್ನು ಸಹ ನೀಡುತ್ತದೆ. ಅವರು ಮಹಾರಾಷ್ಟ್ರ ಕೋರ್ಟ್‌ಗೆ ಹೋಗುತ್ತಾರೆ ಎಂದು ನನಗೆ ತಿಳಿದಿದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ ಆದರೆ ತೀರ್ಪು ನ್ಯಾಯದ ಹಾದಿಯಲ್ಲಿ ಒಂದು ಮೈಲಿಗಲ್ಲು ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ನಂಬಿಕೆ ಕಡಿಮೆಯಾದ ಸಮಯದಲ್ಲಿ ಈ ತೀರ್ಪು ಬಂದಿದೆ. ಈ ತೀರ್ಪು ನನಗೆ ಅನೇಕ ವಿಧಗಳಲ್ಲಿ ಅಮೂಲ್ಯವಾಗಿದೆ. ಸುಪ್ರೀಂಕೋರ್ಟ್ ಮತ್ತು ಇತರ ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯು ಆ ಸಮಯದಲ್ಲಿ ಕುಸಿಯುತ್ತಿರುವಾಗ ಅಂತಹ ತೀರ್ಪು ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯನ್ನು ಸ್ವಲ್ಪವಾದರೂ ಹೆಚ್ಚಿಸುತ್ತದೆ. ಇದು ನನಗೆ ವೈಯಕ್ತಿಕವಾಗಿ ಮಾತ್ರವಲ್ಲದೆ ದೇಶಕ್ಕೂ ಅರ್ಥವಾಗಿದೆ ಎಂದು ವರ್ಮಾ ಹೇಳಿದ್ದಾರೆ.

ನಮ್ಮ ಅರ್ಜಿಗಳನ್ನು ಪ್ರಶ್ನಿಸಿ ಅಪರಾಧಿಯೋರ್ವ ಸಲ್ಲಿಸಿದ ಅರ್ಜಿಯ ಬಳಿಕ ಬಿಲ್ಕಿಸ್‌ ಬಾನು ಅವರು ನವೆಂಬರ್ 2022ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಿಗೆ ಯಾವುದೇ ಸ್ಥಾನವಿಲ್ಲ ಮತ್ತು ಈ ವಿಷಯದಲ್ಲಿ ಸಂಪೂರ್ಣ ಅಪರಿಚಿತರು ಎಂದು ಅಪರಾಧಿ ಬಿಡುಗಡೆ ಪ್ರಶ್ನಿಸಿದ್ದ ನಮ್ಮ ಅರ್ಜಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿಗಳ ನಿರ್ವಹಣೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ನಂತರ ಬಾನು ಅರ್ಜಿದಾರರಾಗಬೇಕಾಯಿತು ಎಂದು ಬಿಲ್ಕಿಸ್‌ ಬಾನು ಪರ ವಕೀಲೆ ಶೋಭಾ ಗುಪ್ತಾ ಹೇಳಿದ್ದಾರೆ.

ಈ ಬಗ್ಗೆ ವಕೀಲೆ ಶೋಭಾ ಗುಪ್ತಾ ಮತನಾಡುತ್ತಾ, ಅವಳು ಮಾತ್ರ ಏಕೆ ಮುಂದೆ ಬರಬೇಕು? ಇದು ವೈಯಕ್ತಿಕ ಅಪರಾಧವಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ಅಪರಾಧದ ಅನಾಗರಿಕ ಸ್ವರೂಪದ್ದಾಗಿತ್ತು. ಅದನ್ನು ಸಮಾಜವೇ ನಿರ್ಧರಿಸಬೇಕು. ಅದಕ್ಕಾಗಿಯೇ ಅವಳು ಮೊದಲು ಅರ್ಜಿ ಸಲ್ಲಿಸಬೇಕೆಂದು ನಾನು ಭಾವಿಸುವುದಿಲ್ಲ ಅವಳು ತನ್ನ ಸಮಯವನ್ನು ತೆಗೆದುಕೊಂಡಿದ್ದಕ್ಕೆ ನನಗೆ ಖುಷಿಯಾಗಿದೆ. ಈ ಮಧ್ಯೆ ಸರಿಯಾದ ಸಮಯದಲ್ಲಿ ಇತರರು ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು  ಹೇಳಿದ್ದಾರೆ.

2002ರಲ್ಲಿ ನಡೆದ ಗಲಭೆಯ ನಂತರದ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ವಕೀಲರಾಗಿ ನನ್ನನ್ನು ನೇಮಿಸಿದ ಬಳಿಕ ತಾನು ಈ ವಿಷಯದಲ್ಲಿ ಒಂದು ಪೈಸೆಯನ್ನೂ ವಿಧಿಸಿಲ್ಲ. ನಾನು ವೃತ್ತಿಗೆ ಬಂದು ಕೇವಲ ಐದು ವರ್ಷವಾಗಿತ್ತು. ವಕೀಲರಿಗೆ ಪಾವತಿಸಲು ನಮ್ಮ ಬಳಿ ಸಾಕಷ್ಟು ಹಣವಿದೆ ಎಂದು ಎನ್‌ಎಚ್‌ಆರ್‌ಸಿ ನನಗೆ ಹೇಳಿತ್ತು. ಆದರೆ ನಾನು ಈ ವಿಷಯದಲ್ಲಿ ಕಾಗದದ ಕೆಲಸಕ್ಕೂ  ಒಂದು ರೂ. ಕೂಡ ಬೇಡ ಎಂದು ಹೇಳಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...