Homeಮುಖಪುಟಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

- Advertisement -
- Advertisement -

ಭಾರತದ 75ನೇ ಸ್ವಾತಂತ್ರ್ಯ ದಿನ ಕೆಂಪು ಕೋಟೆಯಿಂದ ಭಾಷಣ ಮಾಡಿದ ಮೋದಿ ಮಹಿಳಾ ಶಕ್ತಿ ಅಥವಾ ‘ನಾರಿ ಶಕ್ತಿ’ಯ ಬಲವರ್ಧನೆಗೆ ಕರೆ ನೀಡಿದ್ದರು ಮತ್ತು ಮಹಿಳೆಯರನ್ನು ಅವಮಾನಿಸುವ ಪ್ರತಿಯೊಂದು ನಡವಳಿಕೆ, ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಹೇಳಿದ್ದರು. ಆಗಸ್ಟ್ 15 ರಂದು ಪ್ರಧಾನ ಮಂತ್ರಿಗಳು ಕೆಂಪುಕೋಟೆಯಲ್ಲಿ ನಿಂತು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರಿಗೆ ಗೌರವದ ಬಗ್ಗೆ ಮಾತನಾಡುತ್ತಿದ್ದಾಗ, ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಿ 2002ರ ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಿ ಆದೇಶಿಸಿತ್ತು.

ಬಿಲ್ಕಿಸ್ ‘ಇದು ನ್ಯಾಯದ ಅಂತ್ಯವೇ’ ಎಂಬ ಪ್ರಶ್ನೆಯನ್ನು ಕೇಳಿದ್ದರು. ಈ ಪ್ರಶ್ನೆ ನನ್ನನ್ನು ಮತ್ತು ನನ್ನಂತಹ ಅನೇಕರನ್ನು ಬೆಚ್ಚಿಬೀಳಿಸಿದೆ ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ ಅವರು ಹೇಳಿದ್ದಾರೆ. ಸುಭಾಷಿಣಿ ಅಲಿ, ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಮತ್ತು ಪತ್ರಕರ್ತೆ ರೇವತಿ ಲಾಲ್ ಅವರು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದರು. ತೀರ್ಪು ಬಂದಾಗ ನಾವು ಏನು ಮಾಡಬಹುದೆಂದು ಯೋಚಿಸುತ್ತಿದ್ದೆವು, ಸೂಕ್ತ ಸಮಯದಲ್ಲೇ  ಕಪಿಲ್ ಸಿಬಲ್ ಮತ್ತು ಅಪರ್ಣಾ ಭಟ್ ಮತ್ತು ಇತರ ವಕೀಲರು ಮುಂದೆ ಬಂದಿರುವುದು ತುಂಬಾ ಅದೃಷ್ಟವಾಗಿತ್ತು ಎಂದು ಅಲಿ ಹೇಳಿದರು.

ಜನವರಿ 8ರಂದು ಸುಪ್ರೀಂಕೋರ್ಟ್ ತನ್ನ ಅದೇಶದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್‌ ಸರಕಾರದ ಆದೇಶವನ್ನು ರದ್ದುಗಳಿಸಿದೆ ಮತ್ತು ಎರಡು ವಾರಗಳಲ್ಲಿ ಜೈಲಿಗೆ ಮರಳಲು ಅಪರಾಧಿಗಳಿಗೆ ಸೂಚಿಸಲಾಗಿದೆ. ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಸಹಕಾರ ನೀಡಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರ ಪೀಠವುದ ತೀರ್ಪು ದೇಶದ ಜನರಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಲಕ್ನೋ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ರೂಪ್ ರೇಖಾ ವರ್ಮಾ ಈ ಕುರಿತು ಪ್ರತಿಕ್ರಿಯಿಸಿದ್ದು, ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಳ್ಳುವ ಮೊದಲೇ ಪ್ರಧಾನಿಯವರು ಕ್ಷಮಾಧಾನಕ್ಕೆ ಅನುಮತಿ ನೀಡಿದ್ದರು. ಅದು ಕ್ರೂರ ಹಾಸ್ಯವಾಗಿತ್ತು. ನಂತರ ತನ್ನ ಕೆಲವು ಸ್ನೇಹಿತರು ಮತ್ತು ಸಹವರ್ತಿಗಳೊಂದಿಗೆ ಬೆಳವಣಿಗೆಗಳ ಬಗ್ಗೆ ಚರ್ಚಿಸಿದೆ ಆ ಸಮಯದಲ್ಲಿ ನ್ಯಾಯಾಲಯಗಳನ್ನು ಹೆಚ್ಚು ಭರವಸೆಯಿಂದ ನೋಡದಿರಲು ನಮ್ಮಲ್ಲಿ ಸಾಕಷ್ಟು ಉದಾಹರಣೆಗಳಿದ್ದರೂ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಹೊರತುಪಡಿಸಿ ನಮಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

ಪತ್ರಕರ್ತೆ ರೇವತಿ ಲಾಲ್ ಅವರು ಈ ವಿಚಾರದಲ್ಲಿ ಅರ್ಜಿದಾರರಾಗಿದ್ದಾರೆ. ಅವರು ಮೂರನೇ ಮಹಿಳಾ ಅರ್ಜಿದಾರರನ್ನು ಹುಡುಕುತ್ತಿದ್ದರು. ಅದಕ್ಕೆ ನಾನು ಸಮ್ಮತಿಸಿದೆ. ಬಳಿಕ ವಕೀಲರಾದ ಇಂದಿರಾ ಜೈಸಿಂಗ್ ಮೂಲಕ ತೃಣಮೂಲ ಕಾಂಗ್ರೆಸ್‌ನಿಂದ ಉಚ್ಛಾಟಿತರಾಗಿರುವ ಲೋಕಸಭಾ ಸಂಸದ ಮಹುವಾ ಮೊಯಿತ್ರಾ ಅವರು ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.  ಸೆಪ್ಟೆಂಬರ್ 2022ರಲ್ಲಿ ಮಾಜಿ IPS ಅಧಿಕಾರಿ ಮೀರನ್ ಚಡಾ ಬೋರ್ವಾಂಕರ್ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು. ಅವರ ತಂಡದಲ್ಲಿ ಜಗದೀಪ್ ಚೋಖರ್ ಮತ್ತು ಮಧು ಭಂಡಾರಿ ಕೂಡ ಇದ್ದರು. ನಾನು ಪ್ರಕರಣವನ್ನು ನಿಕಟವಾಗಿ ಗಮನಿಸುತ್ತಿದ್ದೆ ಮತ್ತು ಬಿಲ್ಕಿಸ್ ಬಾನು ಅವರು ಮೊದಲು ಸರಕಾರದ ಆದೇಶವನ್ನು ಪ್ರಶ್ನಿಸಲು ಮುಂದೆ ಬಂದಿಲ್ಲ ಎಂದು ಅರಿತುಕೊಂಡ ಬಳಿಕ ನಾನು ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಆದರೆ ತಡವಾಗಿ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರೊಫೆಸರ್ ರೂಪ್ ರೇಖಾ ವರ್ಮಾ ಹೇಳಿದ್ದಾರೆ.

11 ಅಪರಾಧಿಗಳನ್ನು ಈಗ ಜೈಲಿಗೆ ಮರಳುವಂತೆ ನ್ಯಾಯಾಲಯವು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ, ಮೊಯಿತ್ರಾ ಅವರನ್ನು ಪ್ರತಿನಿಧಿಸಿರುವ ಜೈಸಿಂಗ್ ಅವರು ತೀರ್ಪು ಅಸಾಮಾನ್ಯವಾದುದು ಎಂದು ಹೇಳಿದರು ಏಕೆಂದರೆ ಸುಪ್ರೀಂ ಕೋರ್ಟ್ ಅತ್ಯಂತ ಅಪರೂಪವಾಗಿ ತನ್ನದೇ ಆದ ತೀರ್ಪನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸುತ್ತದೆ. ಇದು ನಿಮಗೆ ನ್ಯಾಯದ ಮಾರ್ಗಸೂಚಿಯನ್ನು ಸಹ ನೀಡುತ್ತದೆ. ಅವರು ಮಹಾರಾಷ್ಟ್ರ ಕೋರ್ಟ್‌ಗೆ ಹೋಗುತ್ತಾರೆ ಎಂದು ನನಗೆ ತಿಳಿದಿದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ ಆದರೆ ತೀರ್ಪು ನ್ಯಾಯದ ಹಾದಿಯಲ್ಲಿ ಒಂದು ಮೈಲಿಗಲ್ಲು ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ನಂಬಿಕೆ ಕಡಿಮೆಯಾದ ಸಮಯದಲ್ಲಿ ಈ ತೀರ್ಪು ಬಂದಿದೆ. ಈ ತೀರ್ಪು ನನಗೆ ಅನೇಕ ವಿಧಗಳಲ್ಲಿ ಅಮೂಲ್ಯವಾಗಿದೆ. ಸುಪ್ರೀಂಕೋರ್ಟ್ ಮತ್ತು ಇತರ ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯು ಆ ಸಮಯದಲ್ಲಿ ಕುಸಿಯುತ್ತಿರುವಾಗ ಅಂತಹ ತೀರ್ಪು ನ್ಯಾಯಾಲಯಗಳ ಮೇಲಿನ ನಮ್ಮ ನಂಬಿಕೆಯನ್ನು ಸ್ವಲ್ಪವಾದರೂ ಹೆಚ್ಚಿಸುತ್ತದೆ. ಇದು ನನಗೆ ವೈಯಕ್ತಿಕವಾಗಿ ಮಾತ್ರವಲ್ಲದೆ ದೇಶಕ್ಕೂ ಅರ್ಥವಾಗಿದೆ ಎಂದು ವರ್ಮಾ ಹೇಳಿದ್ದಾರೆ.

ನಮ್ಮ ಅರ್ಜಿಗಳನ್ನು ಪ್ರಶ್ನಿಸಿ ಅಪರಾಧಿಯೋರ್ವ ಸಲ್ಲಿಸಿದ ಅರ್ಜಿಯ ಬಳಿಕ ಬಿಲ್ಕಿಸ್‌ ಬಾನು ಅವರು ನವೆಂಬರ್ 2022ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಿಗೆ ಯಾವುದೇ ಸ್ಥಾನವಿಲ್ಲ ಮತ್ತು ಈ ವಿಷಯದಲ್ಲಿ ಸಂಪೂರ್ಣ ಅಪರಿಚಿತರು ಎಂದು ಅಪರಾಧಿ ಬಿಡುಗಡೆ ಪ್ರಶ್ನಿಸಿದ್ದ ನಮ್ಮ ಅರ್ಜಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿಗಳ ನಿರ್ವಹಣೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ನಂತರ ಬಾನು ಅರ್ಜಿದಾರರಾಗಬೇಕಾಯಿತು ಎಂದು ಬಿಲ್ಕಿಸ್‌ ಬಾನು ಪರ ವಕೀಲೆ ಶೋಭಾ ಗುಪ್ತಾ ಹೇಳಿದ್ದಾರೆ.

ಈ ಬಗ್ಗೆ ವಕೀಲೆ ಶೋಭಾ ಗುಪ್ತಾ ಮತನಾಡುತ್ತಾ, ಅವಳು ಮಾತ್ರ ಏಕೆ ಮುಂದೆ ಬರಬೇಕು? ಇದು ವೈಯಕ್ತಿಕ ಅಪರಾಧವಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧ ಮತ್ತು ಅಪರಾಧದ ಅನಾಗರಿಕ ಸ್ವರೂಪದ್ದಾಗಿತ್ತು. ಅದನ್ನು ಸಮಾಜವೇ ನಿರ್ಧರಿಸಬೇಕು. ಅದಕ್ಕಾಗಿಯೇ ಅವಳು ಮೊದಲು ಅರ್ಜಿ ಸಲ್ಲಿಸಬೇಕೆಂದು ನಾನು ಭಾವಿಸುವುದಿಲ್ಲ ಅವಳು ತನ್ನ ಸಮಯವನ್ನು ತೆಗೆದುಕೊಂಡಿದ್ದಕ್ಕೆ ನನಗೆ ಖುಷಿಯಾಗಿದೆ. ಈ ಮಧ್ಯೆ ಸರಿಯಾದ ಸಮಯದಲ್ಲಿ ಇತರರು ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು  ಹೇಳಿದ್ದಾರೆ.

2002ರಲ್ಲಿ ನಡೆದ ಗಲಭೆಯ ನಂತರದ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ವಕೀಲರಾಗಿ ನನ್ನನ್ನು ನೇಮಿಸಿದ ಬಳಿಕ ತಾನು ಈ ವಿಷಯದಲ್ಲಿ ಒಂದು ಪೈಸೆಯನ್ನೂ ವಿಧಿಸಿಲ್ಲ. ನಾನು ವೃತ್ತಿಗೆ ಬಂದು ಕೇವಲ ಐದು ವರ್ಷವಾಗಿತ್ತು. ವಕೀಲರಿಗೆ ಪಾವತಿಸಲು ನಮ್ಮ ಬಳಿ ಸಾಕಷ್ಟು ಹಣವಿದೆ ಎಂದು ಎನ್‌ಎಚ್‌ಆರ್‌ಸಿ ನನಗೆ ಹೇಳಿತ್ತು. ಆದರೆ ನಾನು ಈ ವಿಷಯದಲ್ಲಿ ಕಾಗದದ ಕೆಲಸಕ್ಕೂ  ಒಂದು ರೂ. ಕೂಡ ಬೇಡ ಎಂದು ಹೇಳಿದೆ ಎಂದು ಶೋಭಾ ಗುಪ್ತಾ ಹೇಳಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...