Homeಚಳವಳಿಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

- Advertisement -
- Advertisement -

ಗುರುಗಾಂವ್‌‌ನಲ್ಲಿರುವ ‘ಅರ್ಬನ್ ಕಂಪನಿ’ಯ ಪ್ರಧಾನ ಕಛೇರಿಯ ಮುಂದೆ ಅದರ ಮಹಿಳಾ ಕಾರ್ಮಿಕರು ಕಂಪೆನಿ ಪರಿಚಯಿಸಿರುವ ಹೊಸ ಬದಲಾವಣೆಯನ್ನು ವಿರೋಧಿಸಿ ಸೋಮವಾರದಂದು ಪ್ರತಿಭಟನೆ ನಡೆಸಿದ್ದಾರೆ. ಅರ್ಬನ್ ಕಂಪೆನಿಯು ಮನೆ-ಮನೆಗಳಿಗೆ ತೆರಳಿ ಸೇವೆ ನೀಡುವ ಆಪ್‌ ಆಧಾರಿತ ಕಂಪನಿಯಾಗಿದೆ. ಈ ಕಂಪನಿಯಲ್ಲಿ ಬ್ಯುಟೀಷಿಯನ್‌ಗಳು, ಮನೆ ಶುಚಿಗೊಳಿಸುವವರು, ಉಪಕರಣಗಳ ದುರಸ್ತಿ ಮಾಡುವವರು, ಪೈಂಟಿಂಗ್‌ ಸೇರಿದಂತೆ ಹಲವಾರು ಸೇವೆಗಳನ್ನು ನೀಡುವ ತರಬೇತಿ ಪಡೆದ ಕಾರ್ಮಿಕರು ಇರುತ್ತಾರೆ. ಅವರು ಮನೆಗಳಿಗೆ ತೆರಳಿ ತಮ್ಮ ಸೇವೆಯನ್ನು ನೀಡುತ್ತಾರೆ.

ಕಂಪೆನಿಯ ಬ್ಯುಟಿ ವಿಭಾಗದಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರು ಕಂಪೆನಿಯು ಅಪ್ಲಿಕೇಶನ್‌ನಲ್ಲಿ ಪ್ರಸ್ತಾಪಿಸಿದ ನೀತಿ ಬದಲಾವಣೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಕಂಪೆನಿ ಮಾಡಿರುವ ಈ ಬದಲಾವಣೆಗಳು ತಮ್ಮ ಗಳಿಕೆ ಮತ್ತು ಗೌರವಯುತ ವೇತನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

ಅರ್ಬನ್ ಕಂಪನಿಯ ಪ್ರಸ್ತಾಪಿಸಿದ ನೀತಿ ಬದಲಾವಣೆಯಿಂದ ಮಹಿಳಾ ಕಾರ್ಮಿಕರು ತಮ್ಮ ಕೈಯ್ಯಿಂದಲೇ ಪಾವತಿಸಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ. ಕಂಪೆನಿಯಯು ಹೊಸ ನೀತಿಯನ್ನು ಕೈಬಿಡುವವರೆಗೂ ಪ್ರತಿಭಟನೆಯನ್ನು ವಾಪಾಸುಪಡೆಯುವುದಿಲ್ಲ ಎಂದು ಹೇಳಿದ್ದು, ಕೊರೆಯುವ ಚಳಿಯಿದ್ದರೂ ರಾತ್ರಿ ಪೂರ್ತಿ ಪ್ರತಿಭಟನೆ ನಡೆಸಿದ್ದಾರೆ.

‘ಅಖಿಲ ಭಾರತ ಗಿಗ್ ವರ್ಕರ್ಸ್ ಯೂನಿಯನ್’ ಮುಷ್ಕರ ಹೂಡಿರುವ ಮಹಿಳೆಯರಿಗೆ ಬೆಂಬಲ ವ್ಯಕ್ತಪಡಿಸಿದೆ. ಆಪ್ ಆಧಾರಿತ ಸೇವೆ ನೀಡುವ ಕಾರ್ಮಿಕರನ್ನು ಉದ್ಯೋಗಿಗಳಾಗಿ ವರ್ಗೀಕರಿಸುವ ತಕ್ಷಣದ ಅವಶ್ಯಕತೆಯಿದೆ. ಹೀಗಾಗದರೆ ಅವರು ಕಾನೂನು ಮತ್ತು ಕಂಪೆನಿಯ ಮೂಲಸೌಕರ್ಯದಿಂದ ಪ್ರಯೋಜನ ಪಡೆಯಬಹುದು ಎಂದು ಯೂನಿಯನ್ ಹೇಳಿದೆ.

ಆಪ್‌ ಆಧಾರಿತ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಕಂಪನಿಗಳು ಕಾರ್ಮಿಕರು ಎಂಬ ನೆಲೆಯಲ್ಲಿ ನೇಮಿಸುವುದರ ಬದಲಿಗೆ ಕಂಪೆನಿಯ ಪಾಲುದಾರರು ಎಂಬ ನೆಲೆಯಲ್ಲಿ ನೇಮಿಸುತ್ತದೆ. ಇದರಿಂದಾಗಿ ಕಾರ್ಮಿಕರಿಗೆ ಕಾರ್ಮಿಕ ಕಾನೂನಿನ ಲಾಭಗಳು ಲಭ್ಯವಾಗುವುದಿಲ್ಲ.

ಇದನ್ನೂ ಓದಿ:ಸೋಂಕು ಹೆಚ್ಚಾದಂತೆ ವ್ಯವಸ್ಥೆಯ ಅಮಾನವೀಯತೆಗೆ ಗುರಿಯಾಗುತ್ತಿರುವ ಬೆಂಗಳೂರಿನ ಸ್ಮಶಾನ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...