Homeಮುಖಪುಟಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

- Advertisement -
- Advertisement -

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ ಅಡ್ಡಗಾಲು ಹಾಕಿದೆ ಎಂದು ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಆರೋಪಿಸುತ್ತಿವೆ.

ವಾಸ್ತವದಲ್ಲಿ, ದೇಶದ ಸಂಸತ್ತು ಮತ್ತು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಮಸೂದೆ ಸೆಪ್ಟೆಂಬರ್ 2023ರಲ್ಲೇ ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದೊಂದಿಗೆ ಅಂಗೀಕಾರಗೊಂಡಿದೆ. ಅಂದಿನಿಂದ ಇದು ಕಾನೂನಾಗಿ ಮಾರ್ಪಟ್ಟಿದೆ.

ಸೆಪ್ಟೆಂಬರ್ 19, 2023ರಂದು ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಸೆಪ್ಟೆಂಬರ್ 20, 2023ರಂದು ಅದು ಭಾರಿ ಬಹುಮತದೊಂದಿಗೆ (454 ಪರ, 2 ವಿರೋಧ) ಪಾಸಾಯಿತು. ಸೆಪ್ಟೆಂಬರ್ 21, 2023ರಂದು ರಾಜ್ಯಸಭೆಯಲ್ಲೂ ಸರ್ವಾನುಮತದಿಂದ ಅಂಗೀಕಾರಗೊಂಡಿತು. 2023ರ ಸೆಪ್ಟೆಂಬರ್ 28ರಂದು ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದರು. ರಾಷ್ಟ್ರಪತಿಯ ಅಂಕಿತದ ನಂತರ, ಸೆಪ್ಟೆಂಬರ್ 29, 2023ರಂದು ಅಧಿಕೃತ ಗೆಜೆಟ್‌ನಲ್ಲಿ ಇದನ್ನು ಪ್ರಕಟಿಸಲಾಯಿತು.

ಏಪ್ರಿಲ್ 17ರಂದು ಲೋಕಸಭೆಯಲ್ಲಿ ಸೋತಿರುವುದು ಕೇಂದ್ರ ಸರ್ಕಾರ ಮಂಡಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಯಾಗಿದೆ. ಈ ಮಸೂದೆ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಅಗತ್ಯವಿಲ್ಲ. ಇದು ಕ್ಷೇತ್ರಗಳ ಮರುವಿಂಗಡನೆ ಬೇಕಾಗಿದೆ. ಪ್ರಸ್ತುತ ಇರುವ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ಸಂವಿಧಾನದ 131ನೇ ತಿದ್ದುಪಡಿ ಅಗತ್ಯವಿದೆ. ಹಾಗಾಗಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಮಹಿಳಾ ಮೀಸಲು ಮಸೂದೆ ಅಂಗೀಕಾರಕ್ಕೆ ವಿಪಕ್ಷಗಳು ಅಡ್ಡಿಯಾಗಿವೆ ಎಂದು ಹೇಳುತ್ತಿರುವುದು ಹಸಿ ಸುಳ್ಳಾಗಿದೆ.

ದಕ್ಷಿಣ ಭಾರತಕ್ಕೆ ತಾರತಮ್ಯ ಎಸಗುವ ಕ್ಷೇತ್ರ ಮರುವಿಂಗಡನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮಹಿಳಾ ಮೀಸಲು ಮಸೂದೆಯನ್ನು ರಕ್ಷಾ ಕವಚವಾಗಿ ಬಳಸಿಕೊಂಡಿತ್ತು. ಆದರೆ, ಕೇಂದ್ರದ ಈ ಪ್ರಯತ್ನ ಫಲ ಕೊಟ್ಟಿಲ್ಲ. ಆದ್ದರಿಂದ ಈಗ ಸೋತಿರುವುದು ಮೋದಿ ಸರ್ಕಾರವೇ ಹೊರತು ಮಹಿಳಾ ಮೀಸಲು ಮಸೂದೆಯಲ್ಲ, ಅದು 2023ರಲ್ಲೇ ಗೆದ್ದಿದೆ.

ದಕ್ಷಿಣ ಭಾರತಕ್ಕೆ ಅನ್ಯಾಯ ಎಸಗುವ ಕ್ಷೇತ್ರ ಮರು ವಿಂಗಡನೆಯನ್ನು ವಿಪಕ್ಷಗಳು ತೀವ್ರವಾಗಿ ವಿರೋಧಿಸಿದ್ದವು. ಆದರೆ, ಕೇಂದ್ರ ಸರ್ಕಾರ ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ತನ್ನ ಕಾರ್ಯ ಮುಂದುವರಿಸಿತ್ತು. ಲೋಕಸಭಾ ಕ್ಷೇತ್ರಗಳನ್ನು ಹೆಚ್ಚಿಸಲು ಅವಕಾಶ ಮಾಡಿಕೊಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು. ಅದಕ್ಕೆ ಸೋಲಾಗಿರುವುದರಿಂದ, ಇದರ ಜೊತೆಗೆ ಲೋಕಸಭೆಯಲ್ಲಿ ಮಂಡಿಸಿರುವ ಇನ್ನೆರಡು ಮಸೂದೆಗಳಾದ ಕ್ಷೇತ್ರ ಮರು ವಿಂಗಡಣೆ ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆಯನ್ನು ಮತಕ್ಕೆ ಹಾಕದೆ ಸುಮ್ಮನಾಗಿದೆ.

ಸಂವಿಧಾನದ 131ನೇ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದರೆ, ಹೊಸದಾಗಿ ‘ಕ್ಷೇತ್ರ ಮರು ವಿಂಗಡಣೆ ಆಯೋಗ’ವನ್ನು ಸ್ಥಾಪಿಸುವ ಕ್ಷೇತ್ರ ಮರು ವಿಂಗಡಣೆ ಮಸೂದೆ ಮತ್ತು ಮಹಿಳಾ ಮೀಸಲಾತಿಯನ್ನು ಕೇಂದ್ರಾಡಳಿತ ಪ್ರದೇಶಗಳಿಗೂ ವಿಸ್ತರಿಸುವ ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆಯೂ ಅಂಗೀಕಾಗೊಳ್ಳುತ್ತಿತ್ತು.

ಪ್ರಸ್ತುತ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಾಧ್ಯವಿಲ್ಲವೇ?

ಲೋಕಸಭೆಯಲ್ಲಿ ಪ್ರಸ್ತುತ ಇರುವ 543 ಕ್ಷೇತ್ರಗಳಲ್ಲೇ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡಲು ಸಾಧ್ಯವಿದೆ. ಆದರೆ, 2023ರಲ್ಲಿ ಅಂಗೀಕಾರಗೊಂಡ ‘ನಾರಿ ಶಕ್ತಿ ವಂದನ್ ಅಧಿನಿಯಮ’ (ಸಂವಿಧಾನದ 106ನೇ ತಿದ್ದುಪಡಿ ಕಾಯ್ದೆ) ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಎರಡು ಪ್ರಮುಖ ಷರತ್ತುಗಳನ್ನು ವಿಧಿಸಿದೆ.

ಅವುಗಳೆಂದರೆ, ಕಾಯ್ದೆ ಜಾರಿಗೆ ಬಂದ ನಂತರ ನಡೆಯುವ ಮೊದಲ ಜನಗಣತಿಯ ಅಂಕಿಅಂಶಗಳು ಪ್ರಕಟವಾಗಬೇಕು. ಆ ಜನಗಣತಿಯ ಆಧಾರದ ಮೇಲೆ ಲೋಕಸಭೆ ಮತ್ತು ವಿಧಾನಸಭೆಗಳ ಕ್ಷೇತ್ರಗಳ ಮರು ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಈ ಪ್ರಕ್ರಿಯೆಗಳು ಮುಗಿದ ನಂತರವಷ್ಟೇ ಮಹಿಳಾ ಮೀಸಲಾತಿ ಅಧಿಕೃತವಾಗಿ ಜಾರಿಗೆ ಬರುತ್ತದೆ ಎಂದು ಕಾಯ್ದೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಹಾಗಾಗಿ 2023ರ ಕಾಯ್ದೆ ಪ್ರಕಾರ, ಪ್ರಸ್ತುತ ಇರುವ ಲೋಕಸಭಾ ಸ್ಥಾನಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ತಾಂತ್ರಿಕವಾಗಿ ಸಾಧ್ಯವಿಲ್ಲ. ಈ ಷರತ್ತುಗಳು ಇಲ್ಲದಿದ್ದರೆ ಈಗ ಇರುವ ಸ್ಥಾನಗಳಲ್ಲೇ ಮಹಿಳಾ ಮೀಸಲಾತಿ ನೀಡಲು ಸಾಧ್ಯವಿದೆ. ಹಾಗಾಗಿ, ಈ ಷರತ್ತುಗಳನ್ನು ತೆಗೆದು ಹಾಕಲು ವಿಪಕ್ಷಗಳು ಹೋರಾಡಬೇಕಿದೆ.

ಕೇಂದ್ರ ಸರ್ಕಾರ 2023ರ ಕಾಯ್ದೆಯಲ್ಲಿ ಹೊಸ ಜನಗಣತಿಯ ಅಂಕಿ ಅಂಶಗಳ ಷರತ್ತುಗಳನ್ನು ವಿಧಿಸಿದ್ದರೂ, ಅದು ತುಂಬಾ ವಿಳಂಬವಾಗುತ್ತದೆ. ಹಾಗಾಗಿ, 2011ರ ಜನಗಣತಿಯ ಅಂಕಿ ಅಂಶಗಳ ಮೇಲೆಯೇ ಮೀಸಲಾತಿ ನೀಡುತ್ತೇವೆ. ಹೀಗೆ ಮೀಸಲಾತಿ ನೀಡಲು ಕ್ಷೇತ್ರಗಳ ಮರುವಿಂಗಡನೆ ಅಗತ್ಯವಿದೆ. ಈ ಮರುವಿಂಗಡನೆಗೆ ಸಂವಿಧಾನದ 131ನೇ ತಿದ್ದುಪಡಿ ಅಗತ್ಯವಿದೆ ಎನ್ನುತ್ತಿದೆ. ವಾಸ್ತವಾಗಿ, ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ತರಲು ಕ್ಷೇತ್ರ ಮರುವಿಂಗಡನೆಯ ಅಗತ್ಯವೇ ಇಲ್ಲ. 2023ರ ಕಾಯ್ದೆಯಲ್ಲಿ ಷರತ್ತುಗಳಿದ್ದರೂ, ಅದನ್ನು ತಿದ್ದುಪಡಿ ತಂದು ತೆಗೆದು ಹಾಕಿದರಾಯಿತು. ಈಗ ಇರುವ ಸ್ಥಾನಗಳಲ್ಲೇ ಮಹಿಳಾ ಮೀಸಲಾತಿ ನೀಡಬಹುದು.

ವಿಪಕ್ಷಗಳು ಸಂವಿಧಾನದ 131ನೇ ತಿದ್ದುಪಡಿ ಮಸೂದೆ ವಿರೋಧಿಸಿದ್ದೇಕೆ?

ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನದ 131ನೇ ತಿದ್ದುಪಡಿ ಅಗತ್ಯ ಎಂದು ಕೇಂದ್ರ ಸರ್ಕಾರ ಹೇಳಿದರೂ, ಅದರ ಮುಖ್ಯ ಉದ್ದೇಶ ಕ್ಷೇತ್ರ ಮರು ವಿಂಗಡನೆಯಾಗಿದೆ.

ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರಗಳನ್ನು ಮರುಹಂಚಿಕೆ ಮಾಡಿದರೆ, ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ತೆಲಂಗಾಣದಂತಹ ದಕ್ಷಿಣದ ರಾಜ್ಯಗಳು ತಮ್ಮ ಲೋಕಸಭಾ ಸ್ಥಾನಗಳ ಅನುಪಾತವನ್ನು ಕಳೆದುಕೊಳ್ಳುತ್ತವೆ.

ಇದಕ್ಕೆ ಪ್ರತಿಯಾಗಿ, ಜನಸಂಖ್ಯೆ ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಸೀಟುಗಳು ಸಿಗುತ್ತವೆ. ಇದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತದೆ ಎಂದು ವಿರೋಧ ಪಕ್ಷಗಳು ವಾದಿಸಿವೆ.

ವಿರೋಧ ಪಕ್ಷಗಳ ಪ್ರಕಾರ, ಸರ್ಕಾರವು ಮಹಿಳಾ ಮೀಸಲಾತಿಯನ್ನು “ಗುರಾಣಿ”ಯಾಗಿ ಬಳಸಿಕೊಂಡು ಕ್ಷೇತ್ರ ಮರು ವಿಂಗಡಣೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ. 

ಮಹಿಳೆಯರಿಗೆ ಮೀಸಲಾತಿ ನೀಡಲು ನಮ್ಮ ವಿರೋಧವಿಲ್ಲ, ಆದರೆ ಅದನ್ನು ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವ ಪ್ರಕ್ರಿಯೆಯೊಂದಿಗೆ ಬೆಸೆಯುವುದು ಸರಿಯಲ್ಲ ಎಂದು ವಿಪಕ್ಷಗಳು ಹೇಳಿವೆ.

ಈಗಿರುವ 543 ಸೀಟುಗಳಲ್ಲೇ ತಕ್ಷಣವೇ ಶೇಕಡ 33 ಮೀಸಲಾತಿ ಜಾರಿಗೊಳಿಸಲು ಸಾಧ್ಯವಿರುವಾಗ, 2029ರವರೆಗೆ ಕಾಯುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿವೆ.

ಜಾತಿ ಆಧಾರಿತ ಜನಗಣತಿಯ ಬೇಡಿಕೆ

ಮಹಿಳಾ ಮೀಸಲಾತಿಯೊಳಗೆ ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಒಳಮೀಸಲಾತಿ ಇರಬೇಕು ಎಂದು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದಂತಹ ಪಕ್ಷಗಳು ಒತ್ತಾಯಿಸಿದ್ದವು. ಜಾತಿ ಗಣತಿ ನಡೆಸದೆ ಈ ಮೀಸಲಾತಿ ಜಾರಿಗೊಳಿಸುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದುದು ಎಂಬುದು ಅವರ ನಿಲುವು.

ಸರ್ಕಾರವು 2011ರ ಹಳೆಯ ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳನ್ನು ಮರು ವಿಂಗಡನೆ ಮಾಡಲು ಹೊರಟಿರುವುದನ್ನು ವಿರೋಧ ಪಕ್ಷಗಳು ಪ್ರಶ್ನಿಸಿವೆ. ಸದ್ಯ ಹೊಸ ಜನಗಣತಿ ಪ್ರಕ್ರಿಯೆ ನಡೆಯುತ್ತಿರುವಾಗ, ಅವಸರವಸರವಾಗಿ ಹಳೆಯ ದತ್ತಾಂಶ ಬಳಸುವುದು ವೈಜ್ಞಾನಿಕವಲ್ಲ ಎಂದು ಅವರು ವಾದಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈ ಮಸೂದೆಯನ್ನು “ಭಾರತದ ಚುನಾವಣಾ ಭೂಪಟವನ್ನು ಬದಲಿಸುವ ಮತ್ತು ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ” ಎಂದು ಕರೆದಿದ್ದಾರೆ. ಇದು ಪ್ರಾದೇಶಿಕ ಪ್ರಾತಿನಿಧ್ಯವನ್ನು ದುರ್ಬಲಗೊಳಿಸುತ್ತದೆ ಎಂಬುದು ಅವರ ಪ್ರಬಲ ಆರೋಪವಾಗಿತ್ತು.

ಒಟ್ಟಾರೆಯಾಗಿ, ಲೋಕಸಭೆಯಲ್ಲಿ ಸೋಲಾಗಿದ್ದು ಕ್ಷೇತ್ರ ಮರುವಿಂಗಡನೆಗೆ ಅನುವು ಮಾಡಿಕೊಡುವ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗಾಗಿದೆ. ಮಹಿಳಾ ಮೀಸಲಾತಿ ಮಸೂದೆ 2023ರಲ್ಲೇ ಕಾನೂನಾಗಿದೆ. ಅದನ್ನು ಜಾರಿಗೊಳಿಸಲು ಕ್ಷೇತ್ರ ಮರುವಿಂಗಡನೆಯ ಅಗತ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...