Homeಅಂತರಾಷ್ಟ್ರೀಯಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, "ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ" ಎಂದಿದ್ದಾರೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಅವರಿಗೆ ಅಭಿನಂದನ ಪತ್ರ ಬರೆದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, “ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ನಾಯಕತ್ವದಲ್ಲಿ ಭಾರತವು ನಿಕಟ ಬಾಂಧವ್ಯವನ್ನು ಎದುರು ನೋಡುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೋನಿಯಾ ಗಾಂಧಿ ಬರೆದ ಪತ್ರದಲ್ಲಿ, “ಜೋ ಬೈಡೆನ್, ತಮ್ಮ ಪ್ರಚಾರದ ಸಮಾವೇಶಗಳಲ್ಲಿ ಅಳತೆಯ ಭಾಷಣಗಳ ಮೂಲಕ ಜನರನ್ನು ಒಗ್ಗೂಡಿಸುವ, ಲಿಂಗ ಮತ್ತು ಜನಾಂಗೀಯ ಸಮಾನತೆ, ಜಾಗತಿಕ ಸಹಕಾರ ಮತ್ತು ಎಲ್ಲಾ ದೇಶಗಳ ಸುಸ್ಥಿರ ಅಭಿವೃದ್ಧಿಯ ವಿಷಯವು ಬಹಳಷ್ಟು ಧೈರ್ಯ ತುಂಬಿದೆ ಮತ್ತು ಹೆಚ್ಚಿನ ಭರವಸೆ ನೀಡಿದೆ. ಹಾಗಾಗಿ ನಮಗೆ ಮತ್ತು ಇಡೀ ಜಗತ್ತಿನಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಬೈಡೆನ್ ಅವರಂತಹ ಬುದ್ಧಿವಂತ ಮತ್ತು ಪ್ರಭುದ್ಧ ನಾಯಕತ್ವದ ಅವಶ್ಯಕತೆಯಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಶ್ವೇತಭವನ ಕಚೇರಿಯ ಮೊದಲ ಮಹಿಳೆ ನಾನಾಗಿರಬಹುದು, ಆದರೆ ಕೊನೆಯವಳಲ್ಲ: ಕಮಲಾ ಹ್ಯಾರಿಸ್

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, ಚುನಾವಣೆಯಲ್ಲಿ ಅವರು ತೋರಿದ ಅಚಲ ಧೈರ್ಯವನ್ನು ಶ್ಲಾಘಿಸಿ, “ಮಿಸ್ ಹ್ಯಾರಿಸ್ ಅಮೆರಿಕಾ ಮತ್ತು ಭಾರತದ ನಡುವಿನ ಸ್ನೇಹವನ್ನು ಬಲಪಡಿಸುತ್ತಾರೆ. ಕಮಲಾ ಹ್ಯಾರಿಸ್ ಅವರ ಯಶಸ್ಸು ಕಪ್ಪು ಅಮೆರಿಕನ್ನರು ಮತ್ತು ಭಾರತೀಯ ಅಮೆರಿಕನ್ನರ ಯಶಸ್ಸು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಅಮೆರಿಕಾದ ಉಪಾಧ್ಯಕ್ಷರಾಗಿ ವಿಭಜಿತ ರಾಷ್ಟ್ರವನ್ನು ಒಗ್ಗೂಡಿಸಲು ಕಮಲಾ ಹ್ಯಾರಿಸ್ ಪ್ರಯತ್ನಪಡುತ್ತಾರೆ ಎನ್ನುವ ನಂಬಿಕೆಯಿದೆ. ಅವರು ಭಾರತದ ಸ್ನೇಹ ಸಂಬಂಧವನ್ನು ಬಲಪಡಿಸಿ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮಾನವ ಹಕ್ಕುಗಳನ್ನು ಬೆಂಬಲಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಮೋದಿ ಘೋರವಾಗಿ ಸಾಯುತ್ತಾರೆ; ಕರ್ನಾಟಕ ವಿಭಜನೆಯಾತ್ತದೆ: ಬ್ರಹ್ಮಾಂಡ ಗುರೂಜಿ

“ಭಾರತಕ್ಕೆ ನಿಮ್ಮನ್ನು ಸ್ವಾಗತಿಸಲು ನಮಗೆ ಶೀಘ್ರದಲ್ಲೇ ಅವಕಾಶ ಸಿಗಲಿದೆ ಎಂದು ನಾವು ಭಾವಿಸುತ್ತೇವೆ. ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದರು.

ಕಠಿಣ ಪೈಪೋಟಿಯ ನಡುವೆ ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಆಯ್ಕೆಯಾಗಿದ್ದಾರೆ. ಕಮಲಾ ಹ್ಯಾರಿಸ್ ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿದ್ದಾರೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...