Homeಅಂತರಾಷ್ಟ್ರೀಯಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, "ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ" ಎಂದಿದ್ದಾರೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಅವರಿಗೆ ಅಭಿನಂದನ ಪತ್ರ ಬರೆದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, “ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ನಾಯಕತ್ವದಲ್ಲಿ ಭಾರತವು ನಿಕಟ ಬಾಂಧವ್ಯವನ್ನು ಎದುರು ನೋಡುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೋನಿಯಾ ಗಾಂಧಿ ಬರೆದ ಪತ್ರದಲ್ಲಿ, “ಜೋ ಬೈಡೆನ್, ತಮ್ಮ ಪ್ರಚಾರದ ಸಮಾವೇಶಗಳಲ್ಲಿ ಅಳತೆಯ ಭಾಷಣಗಳ ಮೂಲಕ ಜನರನ್ನು ಒಗ್ಗೂಡಿಸುವ, ಲಿಂಗ ಮತ್ತು ಜನಾಂಗೀಯ ಸಮಾನತೆ, ಜಾಗತಿಕ ಸಹಕಾರ ಮತ್ತು ಎಲ್ಲಾ ದೇಶಗಳ ಸುಸ್ಥಿರ ಅಭಿವೃದ್ಧಿಯ ವಿಷಯವು ಬಹಳಷ್ಟು ಧೈರ್ಯ ತುಂಬಿದೆ ಮತ್ತು ಹೆಚ್ಚಿನ ಭರವಸೆ ನೀಡಿದೆ. ಹಾಗಾಗಿ ನಮಗೆ ಮತ್ತು ಇಡೀ ಜಗತ್ತಿನಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಬೈಡೆನ್ ಅವರಂತಹ ಬುದ್ಧಿವಂತ ಮತ್ತು ಪ್ರಭುದ್ಧ ನಾಯಕತ್ವದ ಅವಶ್ಯಕತೆಯಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಶ್ವೇತಭವನ ಕಚೇರಿಯ ಮೊದಲ ಮಹಿಳೆ ನಾನಾಗಿರಬಹುದು, ಆದರೆ ಕೊನೆಯವಳಲ್ಲ: ಕಮಲಾ ಹ್ಯಾರಿಸ್

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, ಚುನಾವಣೆಯಲ್ಲಿ ಅವರು ತೋರಿದ ಅಚಲ ಧೈರ್ಯವನ್ನು ಶ್ಲಾಘಿಸಿ, “ಮಿಸ್ ಹ್ಯಾರಿಸ್ ಅಮೆರಿಕಾ ಮತ್ತು ಭಾರತದ ನಡುವಿನ ಸ್ನೇಹವನ್ನು ಬಲಪಡಿಸುತ್ತಾರೆ. ಕಮಲಾ ಹ್ಯಾರಿಸ್ ಅವರ ಯಶಸ್ಸು ಕಪ್ಪು ಅಮೆರಿಕನ್ನರು ಮತ್ತು ಭಾರತೀಯ ಅಮೆರಿಕನ್ನರ ಯಶಸ್ಸು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಅಮೆರಿಕಾದ ಉಪಾಧ್ಯಕ್ಷರಾಗಿ ವಿಭಜಿತ ರಾಷ್ಟ್ರವನ್ನು ಒಗ್ಗೂಡಿಸಲು ಕಮಲಾ ಹ್ಯಾರಿಸ್ ಪ್ರಯತ್ನಪಡುತ್ತಾರೆ ಎನ್ನುವ ನಂಬಿಕೆಯಿದೆ. ಅವರು ಭಾರತದ ಸ್ನೇಹ ಸಂಬಂಧವನ್ನು ಬಲಪಡಿಸಿ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮಾನವ ಹಕ್ಕುಗಳನ್ನು ಬೆಂಬಲಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಮೋದಿ ಘೋರವಾಗಿ ಸಾಯುತ್ತಾರೆ; ಕರ್ನಾಟಕ ವಿಭಜನೆಯಾತ್ತದೆ: ಬ್ರಹ್ಮಾಂಡ ಗುರೂಜಿ

“ಭಾರತಕ್ಕೆ ನಿಮ್ಮನ್ನು ಸ್ವಾಗತಿಸಲು ನಮಗೆ ಶೀಘ್ರದಲ್ಲೇ ಅವಕಾಶ ಸಿಗಲಿದೆ ಎಂದು ನಾವು ಭಾವಿಸುತ್ತೇವೆ. ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದರು.

ಕಠಿಣ ಪೈಪೋಟಿಯ ನಡುವೆ ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಆಯ್ಕೆಯಾಗಿದ್ದಾರೆ. ಕಮಲಾ ಹ್ಯಾರಿಸ್ ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿದ್ದಾರೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...