Homeಅಂತರಾಷ್ಟ್ರೀಯಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, "ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ" ಎಂದಿದ್ದಾರೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಅವರಿಗೆ ಅಭಿನಂದನ ಪತ್ರ ಬರೆದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, “ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ನಾಯಕತ್ವದಲ್ಲಿ ಭಾರತವು ನಿಕಟ ಬಾಂಧವ್ಯವನ್ನು ಎದುರು ನೋಡುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೋನಿಯಾ ಗಾಂಧಿ ಬರೆದ ಪತ್ರದಲ್ಲಿ, “ಜೋ ಬೈಡೆನ್, ತಮ್ಮ ಪ್ರಚಾರದ ಸಮಾವೇಶಗಳಲ್ಲಿ ಅಳತೆಯ ಭಾಷಣಗಳ ಮೂಲಕ ಜನರನ್ನು ಒಗ್ಗೂಡಿಸುವ, ಲಿಂಗ ಮತ್ತು ಜನಾಂಗೀಯ ಸಮಾನತೆ, ಜಾಗತಿಕ ಸಹಕಾರ ಮತ್ತು ಎಲ್ಲಾ ದೇಶಗಳ ಸುಸ್ಥಿರ ಅಭಿವೃದ್ಧಿಯ ವಿಷಯವು ಬಹಳಷ್ಟು ಧೈರ್ಯ ತುಂಬಿದೆ ಮತ್ತು ಹೆಚ್ಚಿನ ಭರವಸೆ ನೀಡಿದೆ. ಹಾಗಾಗಿ ನಮಗೆ ಮತ್ತು ಇಡೀ ಜಗತ್ತಿನಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಬೈಡೆನ್ ಅವರಂತಹ ಬುದ್ಧಿವಂತ ಮತ್ತು ಪ್ರಭುದ್ಧ ನಾಯಕತ್ವದ ಅವಶ್ಯಕತೆಯಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಶ್ವೇತಭವನ ಕಚೇರಿಯ ಮೊದಲ ಮಹಿಳೆ ನಾನಾಗಿರಬಹುದು, ಆದರೆ ಕೊನೆಯವಳಲ್ಲ: ಕಮಲಾ ಹ್ಯಾರಿಸ್

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, ಚುನಾವಣೆಯಲ್ಲಿ ಅವರು ತೋರಿದ ಅಚಲ ಧೈರ್ಯವನ್ನು ಶ್ಲಾಘಿಸಿ, “ಮಿಸ್ ಹ್ಯಾರಿಸ್ ಅಮೆರಿಕಾ ಮತ್ತು ಭಾರತದ ನಡುವಿನ ಸ್ನೇಹವನ್ನು ಬಲಪಡಿಸುತ್ತಾರೆ. ಕಮಲಾ ಹ್ಯಾರಿಸ್ ಅವರ ಯಶಸ್ಸು ಕಪ್ಪು ಅಮೆರಿಕನ್ನರು ಮತ್ತು ಭಾರತೀಯ ಅಮೆರಿಕನ್ನರ ಯಶಸ್ಸು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಅಮೆರಿಕಾದ ಉಪಾಧ್ಯಕ್ಷರಾಗಿ ವಿಭಜಿತ ರಾಷ್ಟ್ರವನ್ನು ಒಗ್ಗೂಡಿಸಲು ಕಮಲಾ ಹ್ಯಾರಿಸ್ ಪ್ರಯತ್ನಪಡುತ್ತಾರೆ ಎನ್ನುವ ನಂಬಿಕೆಯಿದೆ. ಅವರು ಭಾರತದ ಸ್ನೇಹ ಸಂಬಂಧವನ್ನು ಬಲಪಡಿಸಿ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮಾನವ ಹಕ್ಕುಗಳನ್ನು ಬೆಂಬಲಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಮೋದಿ ಘೋರವಾಗಿ ಸಾಯುತ್ತಾರೆ; ಕರ್ನಾಟಕ ವಿಭಜನೆಯಾತ್ತದೆ: ಬ್ರಹ್ಮಾಂಡ ಗುರೂಜಿ

“ಭಾರತಕ್ಕೆ ನಿಮ್ಮನ್ನು ಸ್ವಾಗತಿಸಲು ನಮಗೆ ಶೀಘ್ರದಲ್ಲೇ ಅವಕಾಶ ಸಿಗಲಿದೆ ಎಂದು ನಾವು ಭಾವಿಸುತ್ತೇವೆ. ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದರು.

ಕಠಿಣ ಪೈಪೋಟಿಯ ನಡುವೆ ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಆಯ್ಕೆಯಾಗಿದ್ದಾರೆ. ಕಮಲಾ ಹ್ಯಾರಿಸ್ ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿದ್ದಾರೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...