Homeಅಂತರಾಷ್ಟ್ರೀಯಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, "ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ" ಎಂದಿದ್ದಾರೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಅವರಿಗೆ ಅಭಿನಂದನ ಪತ್ರ ಬರೆದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, “ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ನಾಯಕತ್ವದಲ್ಲಿ ಭಾರತವು ನಿಕಟ ಬಾಂಧವ್ಯವನ್ನು ಎದುರು ನೋಡುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೋನಿಯಾ ಗಾಂಧಿ ಬರೆದ ಪತ್ರದಲ್ಲಿ, “ಜೋ ಬೈಡೆನ್, ತಮ್ಮ ಪ್ರಚಾರದ ಸಮಾವೇಶಗಳಲ್ಲಿ ಅಳತೆಯ ಭಾಷಣಗಳ ಮೂಲಕ ಜನರನ್ನು ಒಗ್ಗೂಡಿಸುವ, ಲಿಂಗ ಮತ್ತು ಜನಾಂಗೀಯ ಸಮಾನತೆ, ಜಾಗತಿಕ ಸಹಕಾರ ಮತ್ತು ಎಲ್ಲಾ ದೇಶಗಳ ಸುಸ್ಥಿರ ಅಭಿವೃದ್ಧಿಯ ವಿಷಯವು ಬಹಳಷ್ಟು ಧೈರ್ಯ ತುಂಬಿದೆ ಮತ್ತು ಹೆಚ್ಚಿನ ಭರವಸೆ ನೀಡಿದೆ. ಹಾಗಾಗಿ ನಮಗೆ ಮತ್ತು ಇಡೀ ಜಗತ್ತಿನಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಬೈಡೆನ್ ಅವರಂತಹ ಬುದ್ಧಿವಂತ ಮತ್ತು ಪ್ರಭುದ್ಧ ನಾಯಕತ್ವದ ಅವಶ್ಯಕತೆಯಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಶ್ವೇತಭವನ ಕಚೇರಿಯ ಮೊದಲ ಮಹಿಳೆ ನಾನಾಗಿರಬಹುದು, ಆದರೆ ಕೊನೆಯವಳಲ್ಲ: ಕಮಲಾ ಹ್ಯಾರಿಸ್

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, ಚುನಾವಣೆಯಲ್ಲಿ ಅವರು ತೋರಿದ ಅಚಲ ಧೈರ್ಯವನ್ನು ಶ್ಲಾಘಿಸಿ, “ಮಿಸ್ ಹ್ಯಾರಿಸ್ ಅಮೆರಿಕಾ ಮತ್ತು ಭಾರತದ ನಡುವಿನ ಸ್ನೇಹವನ್ನು ಬಲಪಡಿಸುತ್ತಾರೆ. ಕಮಲಾ ಹ್ಯಾರಿಸ್ ಅವರ ಯಶಸ್ಸು ಕಪ್ಪು ಅಮೆರಿಕನ್ನರು ಮತ್ತು ಭಾರತೀಯ ಅಮೆರಿಕನ್ನರ ಯಶಸ್ಸು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಅಮೆರಿಕಾದ ಉಪಾಧ್ಯಕ್ಷರಾಗಿ ವಿಭಜಿತ ರಾಷ್ಟ್ರವನ್ನು ಒಗ್ಗೂಡಿಸಲು ಕಮಲಾ ಹ್ಯಾರಿಸ್ ಪ್ರಯತ್ನಪಡುತ್ತಾರೆ ಎನ್ನುವ ನಂಬಿಕೆಯಿದೆ. ಅವರು ಭಾರತದ ಸ್ನೇಹ ಸಂಬಂಧವನ್ನು ಬಲಪಡಿಸಿ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮಾನವ ಹಕ್ಕುಗಳನ್ನು ಬೆಂಬಲಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಮೋದಿ ಘೋರವಾಗಿ ಸಾಯುತ್ತಾರೆ; ಕರ್ನಾಟಕ ವಿಭಜನೆಯಾತ್ತದೆ: ಬ್ರಹ್ಮಾಂಡ ಗುರೂಜಿ

“ಭಾರತಕ್ಕೆ ನಿಮ್ಮನ್ನು ಸ್ವಾಗತಿಸಲು ನಮಗೆ ಶೀಘ್ರದಲ್ಲೇ ಅವಕಾಶ ಸಿಗಲಿದೆ ಎಂದು ನಾವು ಭಾವಿಸುತ್ತೇವೆ. ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದರು.

ಕಠಿಣ ಪೈಪೋಟಿಯ ನಡುವೆ ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಆಯ್ಕೆಯಾಗಿದ್ದಾರೆ. ಕಮಲಾ ಹ್ಯಾರಿಸ್ ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿದ್ದಾರೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...