Homeಮುಖಪುಟಭಾರತ ಯೋಚಿಸುತ್ತಿರುವುದೇನೆಂದು ತಿಳಿಯಲು ಜಗತ್ತು ಬಯಸುತ್ತಿದೆ; ಮೂರು ದೇಶ ಸುತ್ತಿ ಬಂದು ಮೋದಿ ಹೇಳಿದ್ದಿಷ್ಟು

ಭಾರತ ಯೋಚಿಸುತ್ತಿರುವುದೇನೆಂದು ತಿಳಿಯಲು ಜಗತ್ತು ಬಯಸುತ್ತಿದೆ; ಮೂರು ದೇಶ ಸುತ್ತಿ ಬಂದು ಮೋದಿ ಹೇಳಿದ್ದಿಷ್ಟು

- Advertisement -
- Advertisement -

ಭಾರತ ಯೋಚಿಸುತ್ತಿರುವುದು ಏನನ್ನು ಎಂದು ತಿಳಿಯಲು ಇಡೀ ಜಗತ್ತು ಬಯಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಿಳಿಸಿದ್ದಾರೆ.

ಮೂರು ದೇಶಗಳ ಪ್ರವಾಸವನ್ನು ಮುಗಿಸಿರುವ ಅವರು ಗುರುವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದರು. ಮೋದಿಯವರನ್ನು ಸ್ವಾಗತಿಸಲು ನೆರೆದಿದ್ದ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

“ಜಗತ್ತಿಗೆ ವ್ಯಾಕ್ಸಿನ್‌ಗಳನ್ನು ಕಳಿಸಿದ್ದೇಕೆ ಎಂದು ಇಲ್ಲಿನ ಜನರು ನನ್ನನ್ನು ಕೇಳಿದರು. ಇದು ಬುದ್ಧ ಮತ್ತು ಗಾಂಧಿಯ ನಾಡು ಎಂದು ಹೇಳಬಯಸುತ್ತೇನೆ. ನಾವು ನಮ್ಮ ಶತ್ರುಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ಇಂದು ಭಾರತ ಏನು ಯೋಚಿಸುತ್ತಿದೆ ಎಂದು ತಿಳಿಯಲು ಜಗತ್ತು ಬಯಸುತ್ತದೆ” ಎಂದು ಮೋದಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಿಡ್ನಿಯಲ್ಲಿ ನಡೆದ ಅನಿವಾಸಿ ಭಾರತೀಯರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿಯವರು ‘ಪ್ರಜಾಪ್ರಭುತ್ವದ ವಾತಾವರಣ’ದ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದರು. ಆಸ್ಟ್ರೇಲಿಯಾದ ಪ್ರಧಾನಿ ಮತ್ತು ಆಡಳಿತ ಪಕ್ಷದ ನಾಯಕರು ಮಾತ್ರವಲ್ಲದೆ ಮಾಜಿ ಪ್ರಧಾನಿ, ವಿರೋಧ ಪಕ್ಷದ ಸದಸ್ಯರೂ ಹಾಜರಿದ್ದರು.

20 ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಿದ ಹಿನ್ನಲೆಯಲ್ಲಿ ಮೋದಿಯವರ ಹೇಳಿಕೆಗಳು ಹೊರಬಿದ್ದಿದೆ. ಕೇಂದ್ರ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗೆ ಸರಿಸಿದೆ ಮತ್ತು ರಾಷ್ಟ್ರಪತಿಗಳ ಉನ್ನತ ಸ್ಥಾನವನ್ನು ಕಡೆಗಣಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ. ಆದರೆ, ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಈ ಬಗ್ಗೆ ನೇರವಾಗಿ ಉಲ್ಲೇಖ ಮಾಡಿಲ್ಲ.

“ದೇಶದ ಸಂಸ್ಕೃತಿಯ ಬಗ್ಗೆ ಮಾತನಾಡುವಾಗ ಪ್ರಪಂಚದ ಕಣ್ಣುಗಳನ್ನು ನೇರವಾಗಿ ನೋಡಬಹುದು. ಭಾರತದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲು ಜನರು ಸಹಾಯ ಮಾಡಿದ್ದಾರೆ. ಇಲ್ಲಿಗೆ ಬಂದವರು ಭಾರತವನ್ನು ಪ್ರೀತಿಸುವ ಜನರೇ ಹೊರತು, ಪ್ರಧಾನಿ ಮೋದಿಯನ್ನಲ್ಲ” ಎಂದು ಅವರು ಹೇಳಿದ್ದರು.

ಪಪುವಾ ನ್ಯೂಗಿನಿಯಾದಲ್ಲಿ ‘ತಿರುಕ್ಕುರಲ್’ ಪುಸ್ತಕದ ಅನುವಾದ ಕೃತಿಯಾದ ‘ಟೋಕ್ ಪಿಸಿನ್’ ಬಿಡುಗಡೆ ಮಾಡುವ ಕುರಿತು ಮಾತನಾಡಿದ ಪ್ರಧಾನಿ ಮೋದಿ, “ತಮಿಳು ಭಾಷೆ ನಮ್ಮ ಭಾಷೆ. ಇದು ಪ್ರತಿಯೊಬ್ಬ ಭಾರತೀಯನ ಭಾಷೆ. ಇದು ಪ್ರಪಂಚದ ಅತ್ಯಂತ ಹಳೆಯ ಭಾಷೆಯಾಗಿದೆ. ‘ತಿರುಕ್ಕುರಳ್’ ಪುಸ್ತಕದ ಭಾಷಾಂತರವಾದ ‘ಟೋಕ್ ಪಿಸಿನ್’ ಬಿಡುಗಡೆ ಮಾಡುವ ಅವಕಾಶ ಪಪುವಾ ನ್ಯೂಗಿನಿಯಾದಲ್ಲಿ ನನಗೆ ಸಿಕ್ಕಿತು”’ ಎಂದಿದ್ದರು.

ಇದನ್ನೂ ಓದಿರಿ: ಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

ಪ್ರಧಾನಿ ಮೋದಿ ಇತ್ತೀಚೆಗೆ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ- ಈ ಮೂರು ರಾಷ್ಟ್ರಗಳಿಗೆ ಭೇಟಿ ನೀಡಿದ್ದರು.

ಗುರುವಾರ, ಮೋದಿ ಅವರು ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು, ಅಲ್ಲಿ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಇತರ ಸದಸ್ಯರು ಸ್ವಾಗತಿಸಿದರು.

ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, “ನಿಮ್ಮ ಆಡಳಿತ ಮಾದರಿಯನ್ನು ಜಗತ್ತು ಮೆಚ್ಚುತ್ತದೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ನಿಮ್ಮ ಹಸ್ತಾಕ್ಷರವನ್ನು ಕೇಳಿದರು, ನಿಮ್ಮ ನಾಯಕತ್ವದಲ್ಲಿ ಭಾರತವನ್ನು ಜಗತ್ತು ಹೇಗೆ ನೋಡುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಪಪುವಾ ನ್ಯೂಗಿನಿಯಾದ ಪ್ರಧಾನಿ ನಿಮ್ಮ ಪಾದಗಳನ್ನು ಮುಟ್ಟಿದ ರೀತಿ, ಅಲ್ಲಿ ನಿಮಗೆ ಎಷ್ಟು ಗೌರವವಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ಪ್ರಧಾನಿಯನ್ನು ಈ ರೀತಿ ಸ್ವಾಗತಿಸುತ್ತಿರುವುದನ್ನು ಕಂಡಾಗ ಭಾರತದ ಜನತೆ ಹೆಮ್ಮೆ ಪಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....