Homeಮುಖಪುಟಭಾರತ ಯೋಚಿಸುತ್ತಿರುವುದೇನೆಂದು ತಿಳಿಯಲು ಜಗತ್ತು ಬಯಸುತ್ತಿದೆ; ಮೂರು ದೇಶ ಸುತ್ತಿ ಬಂದು ಮೋದಿ ಹೇಳಿದ್ದಿಷ್ಟು

ಭಾರತ ಯೋಚಿಸುತ್ತಿರುವುದೇನೆಂದು ತಿಳಿಯಲು ಜಗತ್ತು ಬಯಸುತ್ತಿದೆ; ಮೂರು ದೇಶ ಸುತ್ತಿ ಬಂದು ಮೋದಿ ಹೇಳಿದ್ದಿಷ್ಟು

- Advertisement -
- Advertisement -

ಭಾರತ ಯೋಚಿಸುತ್ತಿರುವುದು ಏನನ್ನು ಎಂದು ತಿಳಿಯಲು ಇಡೀ ಜಗತ್ತು ಬಯಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಿಳಿಸಿದ್ದಾರೆ.

ಮೂರು ದೇಶಗಳ ಪ್ರವಾಸವನ್ನು ಮುಗಿಸಿರುವ ಅವರು ಗುರುವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದರು. ಮೋದಿಯವರನ್ನು ಸ್ವಾಗತಿಸಲು ನೆರೆದಿದ್ದ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

“ಜಗತ್ತಿಗೆ ವ್ಯಾಕ್ಸಿನ್‌ಗಳನ್ನು ಕಳಿಸಿದ್ದೇಕೆ ಎಂದು ಇಲ್ಲಿನ ಜನರು ನನ್ನನ್ನು ಕೇಳಿದರು. ಇದು ಬುದ್ಧ ಮತ್ತು ಗಾಂಧಿಯ ನಾಡು ಎಂದು ಹೇಳಬಯಸುತ್ತೇನೆ. ನಾವು ನಮ್ಮ ಶತ್ರುಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ಇಂದು ಭಾರತ ಏನು ಯೋಚಿಸುತ್ತಿದೆ ಎಂದು ತಿಳಿಯಲು ಜಗತ್ತು ಬಯಸುತ್ತದೆ” ಎಂದು ಮೋದಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಿಡ್ನಿಯಲ್ಲಿ ನಡೆದ ಅನಿವಾಸಿ ಭಾರತೀಯರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿಯವರು ‘ಪ್ರಜಾಪ್ರಭುತ್ವದ ವಾತಾವರಣ’ದ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದರು. ಆಸ್ಟ್ರೇಲಿಯಾದ ಪ್ರಧಾನಿ ಮತ್ತು ಆಡಳಿತ ಪಕ್ಷದ ನಾಯಕರು ಮಾತ್ರವಲ್ಲದೆ ಮಾಜಿ ಪ್ರಧಾನಿ, ವಿರೋಧ ಪಕ್ಷದ ಸದಸ್ಯರೂ ಹಾಜರಿದ್ದರು.

20 ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಿದ ಹಿನ್ನಲೆಯಲ್ಲಿ ಮೋದಿಯವರ ಹೇಳಿಕೆಗಳು ಹೊರಬಿದ್ದಿದೆ. ಕೇಂದ್ರ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗೆ ಸರಿಸಿದೆ ಮತ್ತು ರಾಷ್ಟ್ರಪತಿಗಳ ಉನ್ನತ ಸ್ಥಾನವನ್ನು ಕಡೆಗಣಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ. ಆದರೆ, ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಈ ಬಗ್ಗೆ ನೇರವಾಗಿ ಉಲ್ಲೇಖ ಮಾಡಿಲ್ಲ.

“ದೇಶದ ಸಂಸ್ಕೃತಿಯ ಬಗ್ಗೆ ಮಾತನಾಡುವಾಗ ಪ್ರಪಂಚದ ಕಣ್ಣುಗಳನ್ನು ನೇರವಾಗಿ ನೋಡಬಹುದು. ಭಾರತದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲು ಜನರು ಸಹಾಯ ಮಾಡಿದ್ದಾರೆ. ಇಲ್ಲಿಗೆ ಬಂದವರು ಭಾರತವನ್ನು ಪ್ರೀತಿಸುವ ಜನರೇ ಹೊರತು, ಪ್ರಧಾನಿ ಮೋದಿಯನ್ನಲ್ಲ” ಎಂದು ಅವರು ಹೇಳಿದ್ದರು.

ಪಪುವಾ ನ್ಯೂಗಿನಿಯಾದಲ್ಲಿ ‘ತಿರುಕ್ಕುರಲ್’ ಪುಸ್ತಕದ ಅನುವಾದ ಕೃತಿಯಾದ ‘ಟೋಕ್ ಪಿಸಿನ್’ ಬಿಡುಗಡೆ ಮಾಡುವ ಕುರಿತು ಮಾತನಾಡಿದ ಪ್ರಧಾನಿ ಮೋದಿ, “ತಮಿಳು ಭಾಷೆ ನಮ್ಮ ಭಾಷೆ. ಇದು ಪ್ರತಿಯೊಬ್ಬ ಭಾರತೀಯನ ಭಾಷೆ. ಇದು ಪ್ರಪಂಚದ ಅತ್ಯಂತ ಹಳೆಯ ಭಾಷೆಯಾಗಿದೆ. ‘ತಿರುಕ್ಕುರಳ್’ ಪುಸ್ತಕದ ಭಾಷಾಂತರವಾದ ‘ಟೋಕ್ ಪಿಸಿನ್’ ಬಿಡುಗಡೆ ಮಾಡುವ ಅವಕಾಶ ಪಪುವಾ ನ್ಯೂಗಿನಿಯಾದಲ್ಲಿ ನನಗೆ ಸಿಕ್ಕಿತು”’ ಎಂದಿದ್ದರು.

ಇದನ್ನೂ ಓದಿರಿ: ಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

ಪ್ರಧಾನಿ ಮೋದಿ ಇತ್ತೀಚೆಗೆ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ- ಈ ಮೂರು ರಾಷ್ಟ್ರಗಳಿಗೆ ಭೇಟಿ ನೀಡಿದ್ದರು.

ಗುರುವಾರ, ಮೋದಿ ಅವರು ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು, ಅಲ್ಲಿ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಇತರ ಸದಸ್ಯರು ಸ್ವಾಗತಿಸಿದರು.

ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, “ನಿಮ್ಮ ಆಡಳಿತ ಮಾದರಿಯನ್ನು ಜಗತ್ತು ಮೆಚ್ಚುತ್ತದೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ನಿಮ್ಮ ಹಸ್ತಾಕ್ಷರವನ್ನು ಕೇಳಿದರು, ನಿಮ್ಮ ನಾಯಕತ್ವದಲ್ಲಿ ಭಾರತವನ್ನು ಜಗತ್ತು ಹೇಗೆ ನೋಡುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಪಪುವಾ ನ್ಯೂಗಿನಿಯಾದ ಪ್ರಧಾನಿ ನಿಮ್ಮ ಪಾದಗಳನ್ನು ಮುಟ್ಟಿದ ರೀತಿ, ಅಲ್ಲಿ ನಿಮಗೆ ಎಷ್ಟು ಗೌರವವಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ಪ್ರಧಾನಿಯನ್ನು ಈ ರೀತಿ ಸ್ವಾಗತಿಸುತ್ತಿರುವುದನ್ನು ಕಂಡಾಗ ಭಾರತದ ಜನತೆ ಹೆಮ್ಮೆ ಪಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...