Homeಮುಖಪುಟಕಾರ್ಮಿಕ ಕಾನೂನುಗಳ ಅಮಾನತು ತಪ್ಪು ನಿರ್ಧಾರ: ಅಜೀಮ್ ಪ್ರೇಮ್‌ಜಿ

ಕಾರ್ಮಿಕ ಕಾನೂನುಗಳ ಅಮಾನತು ತಪ್ಪು ನಿರ್ಧಾರ: ಅಜೀಮ್ ಪ್ರೇಮ್‌ಜಿ

ಕನಿಷ್ಠ 3 ತಿಂಗಳವರೆಗೆ ತಿಂಗಳಿಗೆ 7,000 ರೂ.ಗಳ ತುರ್ತು ನಗದು ಪರಿಹಾರವನ್ನು ಪ್ರತಿ ಬಡವರ ಮನೆಗೆ ಹಾಗೂ ವಲಸೆ ಕಾರ್ಮಿಕರಿಗೆ ನೀಡಬೇಕು ಎಂದು ಅಜೀಮ್ ಪ್ರೇಮ್‌ಜಿ ಸಲಹೆ ನೀಡಿದ್ದಾರೆ.

- Advertisement -
- Advertisement -

ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುವುದು ತಪ್ಪು ಆಯ್ಕೆಯಾಗಿದೆ ಎಂದು ವಿಪ್ರೋದ ಸಂಸ್ಥಾಪಕ ಅಜೀಮ್ ಪ್ರೇಮ್‌ಜಿ ತಿಳಿಸಿದ್ದಾರೆ. ಅವರು ಎಕನಾಮಿಕ್ಸ್ ಟೈಮ್ಸ್‌ಗೆ ಬರೆದ ಲೇಖನದಲ್ಲಿ ಇದನ್ನು ಪ್ರಸ್ತಾಪಿಸಿದ್ದಾರೆ.

ಕಳೆದ ವಾರ ರೈಲು ಹರಿದು ಹದಿನಾರು ವಲಸೆ ಕಾರ್ಮಿಕರ ಸಾವು ‘ಕ್ಷಮಿಸಲಾಗದ ದುರಂತ’ ಎಂದಿರುವ ಅವರು, ಈ ದುರಂತವು ದೇಶದ ದುರ್ಬಲ ಮತ್ತು ಬಡವರು ಎದುರಿಸುತ್ತಿರುವ ಭೀಕರ ದುಃಖದ ಗುರುತುಗಳಲ್ಲಿ ಒಂದಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾರ್ಮಿಕರ ಕಾಯ್ದೆಗಳ ತಿದ್ದುಪಡಿ, ಕೆಲಸದ ಅವಧಿ ಹೆಚ್ಚಳ, ಕೈಗಾರಿಕಾ ವಿವಾದಗಳು, ಔದ್ಯೋಗಿಕ ಸುರಕ್ಷತೆ, ಕೆಲಸದ ಪರಿಸ್ಥಿತಿಗಳು, ಕಾರ್ಮಿಕ ಸಂಘಗಳು, ವಲಸೆ ಕಾರ್ಮಿಕರು, ಕನಿಷ್ಠ ವೇತನ ಇತ್ಯಾದಿಗಳಿಗೆ ಸಂಬಂಧಿಸಿದ ಕೆಲವು ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುದರ ಬಗ್ಗೆ ಅಜೀಮ್ ಪ್ರೇಮ್‌ಜಿ ಆಘಾತ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುವುದು ತಪ್ಪು ಆಯ್ಕೆ ಎಂದಿರುವ ಅವರು, ಇದು ಕಾರ್ಮಿಕರು ಮತ್ತು ವ್ಯವಹಾರಗಳನ್ನು ಪರಸ್ಪರ ವಿರುದ್ಧವಾಗಿಸುತ್ತದೆ ಎಂದಿದ್ದಾರೆ.

“ಬೃಹತ್‌ ಉದ್ಯಮದಾರರ ಒತ್ತಡಕ್ಕೆ ಮಣಿದು ಕಳೆದ ಕೆಲವು ದಶಕಗಳಲ್ಲಿ ಕಾರ್ಮಿಕ ಕಾನೂನುಗಳು ಬದಲಾಗಿವೆ. ಅದೇ ಸಮಯದಲ್ಲಿ ಸಾಮಾಜಿಕ ಭದ್ರತಾ ಕ್ರಮಗಳು ಹೆಚ್ಚಿಲ್ಲ. ಇದರಿಂದಾಗಿ ಉದ್ಯೋಗಿಗಳ ನಂಬಿಕೆ ಮತ್ತು ಸಾಮರ್ಥ್ಯ ಹದಗೆಡುತ್ತದೆ. ಈಗಾಗಲೇ ಸಡಿಲವಾಗಿರುವ ಈ ಕಾನೂನುಗಳನ್ನು ದುರ್ಬಲಗೊಳಿಸುವುದರಿಂದ ಆರ್ಥಿಕ ಚಟುವಟಿಕೆ ಹೆಚ್ಚಾಗುವುದಿಲ್ಲ, ಇದು ಕಡಿಮೆ ವೇತನ ಪಡೆಯುವವರ ಮತ್ತು ಬಡವರ ಕೆಟ್ಟ ಪರಿಸ್ಥಿತಿಗಳನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ”ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಭದ್ರತೆ ಮತ್ತು ಕಾರ್ಮಿಕರ ರಕ್ಷಣೆಯ ಕೊರತೆಯೇ ಆ ಹದಿನಾರು ಯುವಕರನ್ನು ಕೊಂದಿದೆ ಎಂದಿರುವ ಅವರು, ವಲಸೆ ಕಾರ್ಮಿಕರನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳದೆ ಇರುವುದರಿಂದಲೇ ಸಾಮೂಹಿಕ ವಲಸೆ ಆಗಿದೆ ಎಂದಿದ್ದಾರೆ.

ಆರೋಗ್ಯ ರಕ್ಷಣೆಯಲ್ಲಿ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ಮತ್ತು ಸಮಗ್ರವಾಗಿ ನಿಭಾಯಿಸಬೇಕು. ಜನರು ಮತ್ತು ಆರ್ಥಿಕತೆಯನ್ನು ಬೆಂಬಲಿಸಬೇಕು, ಸಮಾನ ಮಾನವನ ದುಃಖವನ್ನು ನಿವಾರಿಸಲು ಮತ್ತು ದೀರ್ಘಕಾಲೀನ ಹಾನಿಯನ್ನು ಕಡಿಮೆ ಮಾಡಲು ಶ್ರಮಿಸಬೇಕು. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಮುಖ ಪಾತ್ರ ವಹಿಸಬೇಕು ಎಂದಿದ್ದಾರೆ.

ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ಅನ್ನು ಸ್ವಾಗತಿಸುವಾಗ, ಅಜೀಮ್ ಪ್ರೇಮ್ಜಿ ಮುಂದಿನ 1-2 ವರ್ಷಗಳಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಕೆಲವು ಸಲಹೆಗಳನ್ನು ನೀಡಿದರು.

ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪ್ರಧಾನಿ ಮೋದಿ ಘೋಷಿಸಿದ ಜಿಡಿಪಿಯ 10% ಪ್ಯಾಕೇಜ್‌ ಈಗಾಗಲೇ ಘೋಷಿಸಿರುವುದಕ್ಕೆ ಹೆಚ್ಚುವರಿಯಾಗಿರಬೇಕು. ಹಿಂದಿನ ಘೋಷಣೆಗಳನ್ನು ಈ ಪ್ಯಾಕೇಜ್‌ನಲ್ಲಿ ಮರು ವರ್ಗೀಕರಣವಾಗಬಾರದು ಎಂದು ಅವರು ಹೇಳಿದ್ದಾರೆ.

ಕನಿಷ್ಠ 3 ತಿಂಗಳವರೆಗೆ ತಿಂಗಳಿಗೆ 7,000 ರೂ.ಗಳ ತುರ್ತು ನಗದು ಪರಿಹಾರವನ್ನು ಬಯೋಮೆಟ್ರಿಕ್ ದೃಢೀಕರಣವಿಲ್ಲದೆ ಪ್ರತಿ ಬಡವರ ಮನೆ ಹಾಗೂ ವಲಸೆ ಕಾರ್ಮಿಕರಿಗೆ ನೀಡಬೇಕು ಎಂದು ಅಜೀಮ್ ಪ್ರೇಮ್ಜಿ ಸಲಹೆ ನೀಡಿದರು. ಲಾಕ್‌ಡೌನ್ ಅವಧಿಗೆ ಎಲ್ಲಾ ಬಡ ನಗರವಾಸಿಗಳಿಗೆ ಲಾಕ್‌ಡೌನ್ ನಂತರ ಕನಿಷ್ಠ ಎರಡು ತಿಂಗಳಾದರೂ ತಿಂಗಳಿಗೆ 25 ದಿನಗಳ ಕನಿಷ್ಠ ವೇತನವನ್ನು ಬಿಡುಗಡೆ ಮಾಡಬೇಕು ಎಂದಿದ್ದಾರೆ.


ಇದನ್ನೂ ಓದಿ: ಬಡವರಿಗೆ ವಾರ್ಷಿಕ 72 ಸಾವಿರ ನೀಡುವ ನ್ಯಾಯ್ ಯೋಜನೆಯನ್ನು ತನ್ನಿ: ರಾಹುಲ್ ಗಾಂಧಿ


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಗೆ 1 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಹಂಚಿಕೆ ಮಾಡಬೇಕು ಹಾಗೂ ಪ್ರತಿ ಮನೆಗೆ ಖಾತರಿಪಡಿಸಿದ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು ಮತ್ತು ದೈನಂದಿನ ವೇತನವನ್ನು ಹೆಚ್ಚಿಸಬೇಕು ಎಂದು  ಅಜೀಮ್ ಪ್ರೇಮ್‌ಜಿ ಅಭಿಪ್ರಾಯಪಟ್ಟಿದ್ದಾರೆ. ಇದರಿಂದಾಗಿ ಕೆಲಸ ಮಾಡುವ ಎಲ್ಲರಿಗೂ ಸಹಾಯವಾಗುತ್ತದೆ ಎಂದರು.

ಮಾನವೀಯ ಬಿಕ್ಕಟ್ಟನ್ನು ತಗ್ಗಿಸುವುದಕ್ಕಾಗಿ ಸಾಮಾಜಿಕ ಭದ್ರತೆ ಮತ್ತು ಆಹಾರ ಭದ್ರತೆ ನೀಡಬೇಕು ಎಂದಿದ್ದಾರೆ. “ಪಡಿತರವನ್ನು 3-6 ತಿಂಗಳುಗಳವರೆಗೆ ಸಾರ್ವತ್ರಿಕಗೊಳಿಸಬೇಕು ಮತ್ತು ದ್ವಿಗುಣಗೊಳಿಸಬೇಕು.  ಅಡುಗೆ ಎಣ್ಣೆ, ದ್ವಿದಳ ಧಾನ್ಯಗಳು, ಉಪ್ಪು, ಮಸಾಲಾ, ಸ್ಯಾನಿಟರಿ ಪ್ಯಾಡ್ ಮತ್ತು ಸಾಬೂನು ಎಲ್ಲರಿಗೂ ಮುಂಚಿತವಾಗಿ ಮನೆ ಬಾಗಿಲಿನ ಮೂಲಕ ಉಚಿತವಾಗಿ ವಿತರಿಸಬೇಕು” ಎಂದು ಅವರು ಬರೆದಿದ್ದಾರೆ.

ಸಿಕ್ಕಿಕೊಂಡ ವಲಸೆ ಕಾರ್ಮಿಕರಿಗೆ ಬಸ್ಸುಗಳು ಮತ್ತು ರೈಲುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ನರೇಗಾ ಗೆ ಹೋಲುವ ಉದ್ಯೋಗ ಖಾತರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿನ್ಯಾಸಗೊಳಿಸಬೇಕು ಹಾಗೂ ವೇತನವನ್ನು ಸಕಾಲಿಕವಾಗಿ ಪಾವತಿಸುವುದನ್ನು ಖಾತ್ರಿಪಡಿಸಬೇಕು ಎಂದು ಹೇಳಿದ್ದಾರೆ.

ಸುಸ್ಥಿರ ಕೃಷಿ ಉಪಕ್ರಮಗಳನ್ನು ಉತ್ತೇಜಿಸಲು ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು  ಹಣವನ್ನು ಮೀಸಲಿಡಬೇಕು ಎಂದು ಪ್ರೇಮ್‌ಜಿ ಬರೆದಿದ್ದಾರೆ.


ಓದಿ: ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಕಾರ್ಮಿಕ ಕಾನೂನು ಸಲಹೆಗಾರ ಫೋನ್ ನಂಬರ್ ಮತ್ತು ವಿಳಾಸ ತಿಳಿಸಿರಿ..

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...