Homeಮುಖಪುಟಕಾರ್ಮಿಕ ಕಾನೂನುಗಳ ಅಮಾನತು ತಪ್ಪು ನಿರ್ಧಾರ: ಅಜೀಮ್ ಪ್ರೇಮ್‌ಜಿ

ಕಾರ್ಮಿಕ ಕಾನೂನುಗಳ ಅಮಾನತು ತಪ್ಪು ನಿರ್ಧಾರ: ಅಜೀಮ್ ಪ್ರೇಮ್‌ಜಿ

ಕನಿಷ್ಠ 3 ತಿಂಗಳವರೆಗೆ ತಿಂಗಳಿಗೆ 7,000 ರೂ.ಗಳ ತುರ್ತು ನಗದು ಪರಿಹಾರವನ್ನು ಪ್ರತಿ ಬಡವರ ಮನೆಗೆ ಹಾಗೂ ವಲಸೆ ಕಾರ್ಮಿಕರಿಗೆ ನೀಡಬೇಕು ಎಂದು ಅಜೀಮ್ ಪ್ರೇಮ್‌ಜಿ ಸಲಹೆ ನೀಡಿದ್ದಾರೆ.

- Advertisement -
- Advertisement -

ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುವುದು ತಪ್ಪು ಆಯ್ಕೆಯಾಗಿದೆ ಎಂದು ವಿಪ್ರೋದ ಸಂಸ್ಥಾಪಕ ಅಜೀಮ್ ಪ್ರೇಮ್‌ಜಿ ತಿಳಿಸಿದ್ದಾರೆ. ಅವರು ಎಕನಾಮಿಕ್ಸ್ ಟೈಮ್ಸ್‌ಗೆ ಬರೆದ ಲೇಖನದಲ್ಲಿ ಇದನ್ನು ಪ್ರಸ್ತಾಪಿಸಿದ್ದಾರೆ.

ಕಳೆದ ವಾರ ರೈಲು ಹರಿದು ಹದಿನಾರು ವಲಸೆ ಕಾರ್ಮಿಕರ ಸಾವು ‘ಕ್ಷಮಿಸಲಾಗದ ದುರಂತ’ ಎಂದಿರುವ ಅವರು, ಈ ದುರಂತವು ದೇಶದ ದುರ್ಬಲ ಮತ್ತು ಬಡವರು ಎದುರಿಸುತ್ತಿರುವ ಭೀಕರ ದುಃಖದ ಗುರುತುಗಳಲ್ಲಿ ಒಂದಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾರ್ಮಿಕರ ಕಾಯ್ದೆಗಳ ತಿದ್ದುಪಡಿ, ಕೆಲಸದ ಅವಧಿ ಹೆಚ್ಚಳ, ಕೈಗಾರಿಕಾ ವಿವಾದಗಳು, ಔದ್ಯೋಗಿಕ ಸುರಕ್ಷತೆ, ಕೆಲಸದ ಪರಿಸ್ಥಿತಿಗಳು, ಕಾರ್ಮಿಕ ಸಂಘಗಳು, ವಲಸೆ ಕಾರ್ಮಿಕರು, ಕನಿಷ್ಠ ವೇತನ ಇತ್ಯಾದಿಗಳಿಗೆ ಸಂಬಂಧಿಸಿದ ಕೆಲವು ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುದರ ಬಗ್ಗೆ ಅಜೀಮ್ ಪ್ರೇಮ್‌ಜಿ ಆಘಾತ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುವುದು ತಪ್ಪು ಆಯ್ಕೆ ಎಂದಿರುವ ಅವರು, ಇದು ಕಾರ್ಮಿಕರು ಮತ್ತು ವ್ಯವಹಾರಗಳನ್ನು ಪರಸ್ಪರ ವಿರುದ್ಧವಾಗಿಸುತ್ತದೆ ಎಂದಿದ್ದಾರೆ.

“ಬೃಹತ್‌ ಉದ್ಯಮದಾರರ ಒತ್ತಡಕ್ಕೆ ಮಣಿದು ಕಳೆದ ಕೆಲವು ದಶಕಗಳಲ್ಲಿ ಕಾರ್ಮಿಕ ಕಾನೂನುಗಳು ಬದಲಾಗಿವೆ. ಅದೇ ಸಮಯದಲ್ಲಿ ಸಾಮಾಜಿಕ ಭದ್ರತಾ ಕ್ರಮಗಳು ಹೆಚ್ಚಿಲ್ಲ. ಇದರಿಂದಾಗಿ ಉದ್ಯೋಗಿಗಳ ನಂಬಿಕೆ ಮತ್ತು ಸಾಮರ್ಥ್ಯ ಹದಗೆಡುತ್ತದೆ. ಈಗಾಗಲೇ ಸಡಿಲವಾಗಿರುವ ಈ ಕಾನೂನುಗಳನ್ನು ದುರ್ಬಲಗೊಳಿಸುವುದರಿಂದ ಆರ್ಥಿಕ ಚಟುವಟಿಕೆ ಹೆಚ್ಚಾಗುವುದಿಲ್ಲ, ಇದು ಕಡಿಮೆ ವೇತನ ಪಡೆಯುವವರ ಮತ್ತು ಬಡವರ ಕೆಟ್ಟ ಪರಿಸ್ಥಿತಿಗಳನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ”ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಭದ್ರತೆ ಮತ್ತು ಕಾರ್ಮಿಕರ ರಕ್ಷಣೆಯ ಕೊರತೆಯೇ ಆ ಹದಿನಾರು ಯುವಕರನ್ನು ಕೊಂದಿದೆ ಎಂದಿರುವ ಅವರು, ವಲಸೆ ಕಾರ್ಮಿಕರನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳದೆ ಇರುವುದರಿಂದಲೇ ಸಾಮೂಹಿಕ ವಲಸೆ ಆಗಿದೆ ಎಂದಿದ್ದಾರೆ.

ಆರೋಗ್ಯ ರಕ್ಷಣೆಯಲ್ಲಿ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ಮತ್ತು ಸಮಗ್ರವಾಗಿ ನಿಭಾಯಿಸಬೇಕು. ಜನರು ಮತ್ತು ಆರ್ಥಿಕತೆಯನ್ನು ಬೆಂಬಲಿಸಬೇಕು, ಸಮಾನ ಮಾನವನ ದುಃಖವನ್ನು ನಿವಾರಿಸಲು ಮತ್ತು ದೀರ್ಘಕಾಲೀನ ಹಾನಿಯನ್ನು ಕಡಿಮೆ ಮಾಡಲು ಶ್ರಮಿಸಬೇಕು. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಮುಖ ಪಾತ್ರ ವಹಿಸಬೇಕು ಎಂದಿದ್ದಾರೆ.

ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ಅನ್ನು ಸ್ವಾಗತಿಸುವಾಗ, ಅಜೀಮ್ ಪ್ರೇಮ್ಜಿ ಮುಂದಿನ 1-2 ವರ್ಷಗಳಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಕೆಲವು ಸಲಹೆಗಳನ್ನು ನೀಡಿದರು.

ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪ್ರಧಾನಿ ಮೋದಿ ಘೋಷಿಸಿದ ಜಿಡಿಪಿಯ 10% ಪ್ಯಾಕೇಜ್‌ ಈಗಾಗಲೇ ಘೋಷಿಸಿರುವುದಕ್ಕೆ ಹೆಚ್ಚುವರಿಯಾಗಿರಬೇಕು. ಹಿಂದಿನ ಘೋಷಣೆಗಳನ್ನು ಈ ಪ್ಯಾಕೇಜ್‌ನಲ್ಲಿ ಮರು ವರ್ಗೀಕರಣವಾಗಬಾರದು ಎಂದು ಅವರು ಹೇಳಿದ್ದಾರೆ.

ಕನಿಷ್ಠ 3 ತಿಂಗಳವರೆಗೆ ತಿಂಗಳಿಗೆ 7,000 ರೂ.ಗಳ ತುರ್ತು ನಗದು ಪರಿಹಾರವನ್ನು ಬಯೋಮೆಟ್ರಿಕ್ ದೃಢೀಕರಣವಿಲ್ಲದೆ ಪ್ರತಿ ಬಡವರ ಮನೆ ಹಾಗೂ ವಲಸೆ ಕಾರ್ಮಿಕರಿಗೆ ನೀಡಬೇಕು ಎಂದು ಅಜೀಮ್ ಪ್ರೇಮ್ಜಿ ಸಲಹೆ ನೀಡಿದರು. ಲಾಕ್‌ಡೌನ್ ಅವಧಿಗೆ ಎಲ್ಲಾ ಬಡ ನಗರವಾಸಿಗಳಿಗೆ ಲಾಕ್‌ಡೌನ್ ನಂತರ ಕನಿಷ್ಠ ಎರಡು ತಿಂಗಳಾದರೂ ತಿಂಗಳಿಗೆ 25 ದಿನಗಳ ಕನಿಷ್ಠ ವೇತನವನ್ನು ಬಿಡುಗಡೆ ಮಾಡಬೇಕು ಎಂದಿದ್ದಾರೆ.


ಇದನ್ನೂ ಓದಿ: ಬಡವರಿಗೆ ವಾರ್ಷಿಕ 72 ಸಾವಿರ ನೀಡುವ ನ್ಯಾಯ್ ಯೋಜನೆಯನ್ನು ತನ್ನಿ: ರಾಹುಲ್ ಗಾಂಧಿ


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಗೆ 1 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಹಂಚಿಕೆ ಮಾಡಬೇಕು ಹಾಗೂ ಪ್ರತಿ ಮನೆಗೆ ಖಾತರಿಪಡಿಸಿದ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು ಮತ್ತು ದೈನಂದಿನ ವೇತನವನ್ನು ಹೆಚ್ಚಿಸಬೇಕು ಎಂದು  ಅಜೀಮ್ ಪ್ರೇಮ್‌ಜಿ ಅಭಿಪ್ರಾಯಪಟ್ಟಿದ್ದಾರೆ. ಇದರಿಂದಾಗಿ ಕೆಲಸ ಮಾಡುವ ಎಲ್ಲರಿಗೂ ಸಹಾಯವಾಗುತ್ತದೆ ಎಂದರು.

ಮಾನವೀಯ ಬಿಕ್ಕಟ್ಟನ್ನು ತಗ್ಗಿಸುವುದಕ್ಕಾಗಿ ಸಾಮಾಜಿಕ ಭದ್ರತೆ ಮತ್ತು ಆಹಾರ ಭದ್ರತೆ ನೀಡಬೇಕು ಎಂದಿದ್ದಾರೆ. “ಪಡಿತರವನ್ನು 3-6 ತಿಂಗಳುಗಳವರೆಗೆ ಸಾರ್ವತ್ರಿಕಗೊಳಿಸಬೇಕು ಮತ್ತು ದ್ವಿಗುಣಗೊಳಿಸಬೇಕು.  ಅಡುಗೆ ಎಣ್ಣೆ, ದ್ವಿದಳ ಧಾನ್ಯಗಳು, ಉಪ್ಪು, ಮಸಾಲಾ, ಸ್ಯಾನಿಟರಿ ಪ್ಯಾಡ್ ಮತ್ತು ಸಾಬೂನು ಎಲ್ಲರಿಗೂ ಮುಂಚಿತವಾಗಿ ಮನೆ ಬಾಗಿಲಿನ ಮೂಲಕ ಉಚಿತವಾಗಿ ವಿತರಿಸಬೇಕು” ಎಂದು ಅವರು ಬರೆದಿದ್ದಾರೆ.

ಸಿಕ್ಕಿಕೊಂಡ ವಲಸೆ ಕಾರ್ಮಿಕರಿಗೆ ಬಸ್ಸುಗಳು ಮತ್ತು ರೈಲುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ನರೇಗಾ ಗೆ ಹೋಲುವ ಉದ್ಯೋಗ ಖಾತರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿನ್ಯಾಸಗೊಳಿಸಬೇಕು ಹಾಗೂ ವೇತನವನ್ನು ಸಕಾಲಿಕವಾಗಿ ಪಾವತಿಸುವುದನ್ನು ಖಾತ್ರಿಪಡಿಸಬೇಕು ಎಂದು ಹೇಳಿದ್ದಾರೆ.

ಸುಸ್ಥಿರ ಕೃಷಿ ಉಪಕ್ರಮಗಳನ್ನು ಉತ್ತೇಜಿಸಲು ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು  ಹಣವನ್ನು ಮೀಸಲಿಡಬೇಕು ಎಂದು ಪ್ರೇಮ್‌ಜಿ ಬರೆದಿದ್ದಾರೆ.


ಓದಿ: ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಕಾರ್ಮಿಕ ಕಾನೂನು ಸಲಹೆಗಾರ ಫೋನ್ ನಂಬರ್ ಮತ್ತು ವಿಳಾಸ ತಿಳಿಸಿರಿ..

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...