Homeಮುಖಪುಟಕಾರ್ಮಿಕ ಕಾನೂನುಗಳ ಅಮಾನತು ತಪ್ಪು ನಿರ್ಧಾರ: ಅಜೀಮ್ ಪ್ರೇಮ್‌ಜಿ

ಕಾರ್ಮಿಕ ಕಾನೂನುಗಳ ಅಮಾನತು ತಪ್ಪು ನಿರ್ಧಾರ: ಅಜೀಮ್ ಪ್ರೇಮ್‌ಜಿ

ಕನಿಷ್ಠ 3 ತಿಂಗಳವರೆಗೆ ತಿಂಗಳಿಗೆ 7,000 ರೂ.ಗಳ ತುರ್ತು ನಗದು ಪರಿಹಾರವನ್ನು ಪ್ರತಿ ಬಡವರ ಮನೆಗೆ ಹಾಗೂ ವಲಸೆ ಕಾರ್ಮಿಕರಿಗೆ ನೀಡಬೇಕು ಎಂದು ಅಜೀಮ್ ಪ್ರೇಮ್‌ಜಿ ಸಲಹೆ ನೀಡಿದ್ದಾರೆ.

- Advertisement -
- Advertisement -

ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುವುದು ತಪ್ಪು ಆಯ್ಕೆಯಾಗಿದೆ ಎಂದು ವಿಪ್ರೋದ ಸಂಸ್ಥಾಪಕ ಅಜೀಮ್ ಪ್ರೇಮ್‌ಜಿ ತಿಳಿಸಿದ್ದಾರೆ. ಅವರು ಎಕನಾಮಿಕ್ಸ್ ಟೈಮ್ಸ್‌ಗೆ ಬರೆದ ಲೇಖನದಲ್ಲಿ ಇದನ್ನು ಪ್ರಸ್ತಾಪಿಸಿದ್ದಾರೆ.

ಕಳೆದ ವಾರ ರೈಲು ಹರಿದು ಹದಿನಾರು ವಲಸೆ ಕಾರ್ಮಿಕರ ಸಾವು ‘ಕ್ಷಮಿಸಲಾಗದ ದುರಂತ’ ಎಂದಿರುವ ಅವರು, ಈ ದುರಂತವು ದೇಶದ ದುರ್ಬಲ ಮತ್ತು ಬಡವರು ಎದುರಿಸುತ್ತಿರುವ ಭೀಕರ ದುಃಖದ ಗುರುತುಗಳಲ್ಲಿ ಒಂದಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾರ್ಮಿಕರ ಕಾಯ್ದೆಗಳ ತಿದ್ದುಪಡಿ, ಕೆಲಸದ ಅವಧಿ ಹೆಚ್ಚಳ, ಕೈಗಾರಿಕಾ ವಿವಾದಗಳು, ಔದ್ಯೋಗಿಕ ಸುರಕ್ಷತೆ, ಕೆಲಸದ ಪರಿಸ್ಥಿತಿಗಳು, ಕಾರ್ಮಿಕ ಸಂಘಗಳು, ವಲಸೆ ಕಾರ್ಮಿಕರು, ಕನಿಷ್ಠ ವೇತನ ಇತ್ಯಾದಿಗಳಿಗೆ ಸಂಬಂಧಿಸಿದ ಕೆಲವು ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುದರ ಬಗ್ಗೆ ಅಜೀಮ್ ಪ್ರೇಮ್‌ಜಿ ಆಘಾತ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುವುದು ತಪ್ಪು ಆಯ್ಕೆ ಎಂದಿರುವ ಅವರು, ಇದು ಕಾರ್ಮಿಕರು ಮತ್ತು ವ್ಯವಹಾರಗಳನ್ನು ಪರಸ್ಪರ ವಿರುದ್ಧವಾಗಿಸುತ್ತದೆ ಎಂದಿದ್ದಾರೆ.

“ಬೃಹತ್‌ ಉದ್ಯಮದಾರರ ಒತ್ತಡಕ್ಕೆ ಮಣಿದು ಕಳೆದ ಕೆಲವು ದಶಕಗಳಲ್ಲಿ ಕಾರ್ಮಿಕ ಕಾನೂನುಗಳು ಬದಲಾಗಿವೆ. ಅದೇ ಸಮಯದಲ್ಲಿ ಸಾಮಾಜಿಕ ಭದ್ರತಾ ಕ್ರಮಗಳು ಹೆಚ್ಚಿಲ್ಲ. ಇದರಿಂದಾಗಿ ಉದ್ಯೋಗಿಗಳ ನಂಬಿಕೆ ಮತ್ತು ಸಾಮರ್ಥ್ಯ ಹದಗೆಡುತ್ತದೆ. ಈಗಾಗಲೇ ಸಡಿಲವಾಗಿರುವ ಈ ಕಾನೂನುಗಳನ್ನು ದುರ್ಬಲಗೊಳಿಸುವುದರಿಂದ ಆರ್ಥಿಕ ಚಟುವಟಿಕೆ ಹೆಚ್ಚಾಗುವುದಿಲ್ಲ, ಇದು ಕಡಿಮೆ ವೇತನ ಪಡೆಯುವವರ ಮತ್ತು ಬಡವರ ಕೆಟ್ಟ ಪರಿಸ್ಥಿತಿಗಳನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ”ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಭದ್ರತೆ ಮತ್ತು ಕಾರ್ಮಿಕರ ರಕ್ಷಣೆಯ ಕೊರತೆಯೇ ಆ ಹದಿನಾರು ಯುವಕರನ್ನು ಕೊಂದಿದೆ ಎಂದಿರುವ ಅವರು, ವಲಸೆ ಕಾರ್ಮಿಕರನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳದೆ ಇರುವುದರಿಂದಲೇ ಸಾಮೂಹಿಕ ವಲಸೆ ಆಗಿದೆ ಎಂದಿದ್ದಾರೆ.

ಆರೋಗ್ಯ ರಕ್ಷಣೆಯಲ್ಲಿ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ಮತ್ತು ಸಮಗ್ರವಾಗಿ ನಿಭಾಯಿಸಬೇಕು. ಜನರು ಮತ್ತು ಆರ್ಥಿಕತೆಯನ್ನು ಬೆಂಬಲಿಸಬೇಕು, ಸಮಾನ ಮಾನವನ ದುಃಖವನ್ನು ನಿವಾರಿಸಲು ಮತ್ತು ದೀರ್ಘಕಾಲೀನ ಹಾನಿಯನ್ನು ಕಡಿಮೆ ಮಾಡಲು ಶ್ರಮಿಸಬೇಕು. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಮುಖ ಪಾತ್ರ ವಹಿಸಬೇಕು ಎಂದಿದ್ದಾರೆ.

ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ಅನ್ನು ಸ್ವಾಗತಿಸುವಾಗ, ಅಜೀಮ್ ಪ್ರೇಮ್ಜಿ ಮುಂದಿನ 1-2 ವರ್ಷಗಳಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಕೆಲವು ಸಲಹೆಗಳನ್ನು ನೀಡಿದರು.

ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪ್ರಧಾನಿ ಮೋದಿ ಘೋಷಿಸಿದ ಜಿಡಿಪಿಯ 10% ಪ್ಯಾಕೇಜ್‌ ಈಗಾಗಲೇ ಘೋಷಿಸಿರುವುದಕ್ಕೆ ಹೆಚ್ಚುವರಿಯಾಗಿರಬೇಕು. ಹಿಂದಿನ ಘೋಷಣೆಗಳನ್ನು ಈ ಪ್ಯಾಕೇಜ್‌ನಲ್ಲಿ ಮರು ವರ್ಗೀಕರಣವಾಗಬಾರದು ಎಂದು ಅವರು ಹೇಳಿದ್ದಾರೆ.

ಕನಿಷ್ಠ 3 ತಿಂಗಳವರೆಗೆ ತಿಂಗಳಿಗೆ 7,000 ರೂ.ಗಳ ತುರ್ತು ನಗದು ಪರಿಹಾರವನ್ನು ಬಯೋಮೆಟ್ರಿಕ್ ದೃಢೀಕರಣವಿಲ್ಲದೆ ಪ್ರತಿ ಬಡವರ ಮನೆ ಹಾಗೂ ವಲಸೆ ಕಾರ್ಮಿಕರಿಗೆ ನೀಡಬೇಕು ಎಂದು ಅಜೀಮ್ ಪ್ರೇಮ್ಜಿ ಸಲಹೆ ನೀಡಿದರು. ಲಾಕ್‌ಡೌನ್ ಅವಧಿಗೆ ಎಲ್ಲಾ ಬಡ ನಗರವಾಸಿಗಳಿಗೆ ಲಾಕ್‌ಡೌನ್ ನಂತರ ಕನಿಷ್ಠ ಎರಡು ತಿಂಗಳಾದರೂ ತಿಂಗಳಿಗೆ 25 ದಿನಗಳ ಕನಿಷ್ಠ ವೇತನವನ್ನು ಬಿಡುಗಡೆ ಮಾಡಬೇಕು ಎಂದಿದ್ದಾರೆ.


ಇದನ್ನೂ ಓದಿ: ಬಡವರಿಗೆ ವಾರ್ಷಿಕ 72 ಸಾವಿರ ನೀಡುವ ನ್ಯಾಯ್ ಯೋಜನೆಯನ್ನು ತನ್ನಿ: ರಾಹುಲ್ ಗಾಂಧಿ


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಗೆ 1 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಹಂಚಿಕೆ ಮಾಡಬೇಕು ಹಾಗೂ ಪ್ರತಿ ಮನೆಗೆ ಖಾತರಿಪಡಿಸಿದ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು ಮತ್ತು ದೈನಂದಿನ ವೇತನವನ್ನು ಹೆಚ್ಚಿಸಬೇಕು ಎಂದು  ಅಜೀಮ್ ಪ್ರೇಮ್‌ಜಿ ಅಭಿಪ್ರಾಯಪಟ್ಟಿದ್ದಾರೆ. ಇದರಿಂದಾಗಿ ಕೆಲಸ ಮಾಡುವ ಎಲ್ಲರಿಗೂ ಸಹಾಯವಾಗುತ್ತದೆ ಎಂದರು.

ಮಾನವೀಯ ಬಿಕ್ಕಟ್ಟನ್ನು ತಗ್ಗಿಸುವುದಕ್ಕಾಗಿ ಸಾಮಾಜಿಕ ಭದ್ರತೆ ಮತ್ತು ಆಹಾರ ಭದ್ರತೆ ನೀಡಬೇಕು ಎಂದಿದ್ದಾರೆ. “ಪಡಿತರವನ್ನು 3-6 ತಿಂಗಳುಗಳವರೆಗೆ ಸಾರ್ವತ್ರಿಕಗೊಳಿಸಬೇಕು ಮತ್ತು ದ್ವಿಗುಣಗೊಳಿಸಬೇಕು.  ಅಡುಗೆ ಎಣ್ಣೆ, ದ್ವಿದಳ ಧಾನ್ಯಗಳು, ಉಪ್ಪು, ಮಸಾಲಾ, ಸ್ಯಾನಿಟರಿ ಪ್ಯಾಡ್ ಮತ್ತು ಸಾಬೂನು ಎಲ್ಲರಿಗೂ ಮುಂಚಿತವಾಗಿ ಮನೆ ಬಾಗಿಲಿನ ಮೂಲಕ ಉಚಿತವಾಗಿ ವಿತರಿಸಬೇಕು” ಎಂದು ಅವರು ಬರೆದಿದ್ದಾರೆ.

ಸಿಕ್ಕಿಕೊಂಡ ವಲಸೆ ಕಾರ್ಮಿಕರಿಗೆ ಬಸ್ಸುಗಳು ಮತ್ತು ರೈಲುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ನರೇಗಾ ಗೆ ಹೋಲುವ ಉದ್ಯೋಗ ಖಾತರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿನ್ಯಾಸಗೊಳಿಸಬೇಕು ಹಾಗೂ ವೇತನವನ್ನು ಸಕಾಲಿಕವಾಗಿ ಪಾವತಿಸುವುದನ್ನು ಖಾತ್ರಿಪಡಿಸಬೇಕು ಎಂದು ಹೇಳಿದ್ದಾರೆ.

ಸುಸ್ಥಿರ ಕೃಷಿ ಉಪಕ್ರಮಗಳನ್ನು ಉತ್ತೇಜಿಸಲು ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು  ಹಣವನ್ನು ಮೀಸಲಿಡಬೇಕು ಎಂದು ಪ್ರೇಮ್‌ಜಿ ಬರೆದಿದ್ದಾರೆ.


ಓದಿ: ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಕಾರ್ಮಿಕ ಕಾನೂನು ಸಲಹೆಗಾರ ಫೋನ್ ನಂಬರ್ ಮತ್ತು ವಿಳಾಸ ತಿಳಿಸಿರಿ..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...