Homeಫ್ಯಾಕ್ಟ್‌ಚೆಕ್ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

- Advertisement -
- Advertisement -

‘ಹಿಂದೂ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಸ್ಲಿಂ ಯುವಕರು ದುಷ್ಕೃತ್ಯವನ್ನು ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಿ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ, ನಾಲ್ವರು ಹುಡುಗರ ಗುಂಪೊಂದು ಹುಟ್ಟುಹಬ್ಬದ ಪಾರ್ಟಿಯ ಹೆಸರಿನಲ್ಲಿ ಇಬ್ಬರು ಹುಡುಗಿಯರನ್ನು ಆಹ್ವಾನಿಸಿ, ಹುಟ್ಟುಹಬ್ಬದ ಕೇಕ್ ಮೇಲೆ ರಹಸ್ಯವಾಗಿ ಹುಡಿಯನ್ನು ಸುರಿದು, ಯುವತಿಯರನ್ನು ಪ್ರಜ್ಞೆ ತಪ್ಪಿಸುವಂತೆ ತೋರಿಸಲಾಗಿದೆ.

ವೀಡಿಯೊವನ್ನು ಶೇರ್ ಮಾಡುತ್ತಾ, ‘‘ಮುಸ್ಲಿಮರು ನಿಮ್ಮ ಸ್ನೇಹಿತರು, ಅವರು ಹೇಗೆ ಜಿಹಾದ್ ಮಾಡುತ್ತಾರೆ ಎಂದು ನೋಡಿ. ಪ್ರಜ್ಞೆ ತಪ್ಪಿಸಿ ಸೆಕ್ಸ್ ಕ್ಲಿಪ್‌ಗಳನ್ನು ತೆಗೆದು, ನಂತರ ನಿಮ್ಮನ್ನು ಲೈಂಗಿಕ ಗುಲಾಮಗಿರಿ, ಪರಿವರ್ತನೆ ಮತ್ತು ನೀವು ಕನಸು ಕಾಣದಂತಹದನ್ನು ಮಾಡುತ್ತಾರೆ” ಎಂದು ಬರೆಯಲಾಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ, ಇದೇ ರೀತಿಯ ದೃಶ್ಯಗಳಿರುವ ವೀಡಿಯೊವನ್ನು ಕನ್ನಡದ ಜನಪ್ರಿಯ ನಟಿ ಸಂಜನಾ ಗಲ್ರಾನಿ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಪ್ರಕಟಿಸಲಾಗಿದೆ.

ಈ ವೀಡಿಯೊ ವಿವರಣೆಯಲ್ಲಿ, “ಎಚ್ಚರಿಕೆಯಿಂದಿರಿ…ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಲಾಗಿದೆ. ನಟಿ ಸಂಜನಾ ಗಲ್ರಾನಿ ಅವರು ತಾನು ಹಂಚಿರುವ ವಿಡಿಯೊದಲ್ಲಿ ಸ್ನೇಹಿತರನ್ನು ಕುರುಡಾಗಿ ನಂಬದಂತೆ ಹುಡುಗಿಯರಿಗೆ ಶಿಕ್ಷಣ ನೀಡಲು ರಚಿಸಲಾದ ಸ್ಕ್ರಿಪ್ಟ್ ವೀಡಿಯೊ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಅಲ್ಲದೆ, ಮೂಲ ವೀಡಿಯೊದ ಕೊನೆಯಲ್ಲಿ, “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಸಹ ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ!” ಎಂದು ಬರೆಯಾಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್ ಚೆಕ್: ಕಪ್ಪು ಕಲ್ಲಿನ ಮೇಲೆ ಇಟ್ಟ ಕಬ್ಬಿಣದ ಮೊಳೆಗಳು ಕರಗುತ್ತವೆ ಎಂಬುದು ನಿಜವೇ?

ವೈರಲ್‌ ಪೋಸ್ಟ್‌ನಲ್ಲಿರುವ ವಿಡಿಯೊವನ್ನು, ಮೂಲ ವೀಡಿಯೊದಲ್ಲಿನ ಹಕ್ಕು ನಿರಾಕರಣೆ ಭಾಗವನ್ನು ತೆಗೆದುಹಾಕಿ, ಎಡಿಟ್ ಮಾಡಿ ಅದಕ್ಕೆ ಕೋಮು ನಿರೂಪಣೆಯೊಂದಿಗೆ ಹಂಚಲಾಗುತ್ತಿದೆ. ವಾಸ್ತವದಲ್ಲಿ ನಾಟಕೀಯ ವಿಡಿಯೊದಲ್ಲಿ ಕೂಡಾ ಹುಡುಗರನ್ನು ಮುಸ್ಲಿಮರು ಎಂಬಂತೆ ಚಿತ್ರಿಸಿಲ್ಲ.

ಇತ್ತೀಚೆಗೆ, ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ನೈಜ ಘಟನೆಗಳು ಎಂಬಂತೆ ವೈರಲ್ ಆಗಿದೆ. ಈ ವಿಡಿಯೊಗಳ ಪ್ರತಿಪಾದನೆಯನ್ನು ನಿರಾಕರಿಸಿ ಪ್ಯಾಕ್ಟ್‌‌ಲಿ ಹಲವು ಫ್ಯಾಕ್ಟ್‌ಚೆಕ್‌ಗಳನ್ನು ಮಾಡಿದೆ. ಆ ಲೇಖನಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಹಿಂದೂ ಹುಡುಗಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಸ್ಲಿಂ ಯುವಕರು ಮಾಡುತ್ತಿರುವ ದುಷ್ಕೃತ್ಯ ಎಂದು ನಟನೆ ಮಾಡಿರುವ ವಿಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಪ್ರತಿಪಾದನೆ: ಬರ್ತ್‌ಡೇ ಪಾರ್ಟಿಯ ಹೆಸರಿನಲ್ಲಿ ಮುಸ್ಲಿಂ ಸ್ನೇಹಿತರು ಹಿಂದೂ ಹುಡುಗಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮಾಡುತ್ತಿರುವ ದುಷ್ಕೃತ್ಯದ ವಿಡಿಯೋ. ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ನಾಟಕೀಯವಾಗಿ ಮಾಡಲ್ಪಟ್ಟಿದೆ. ಹುಡುಗಿಯರಲ್ಲಿ ಜಾಗೃತಿ ಮೂಡಿಸಲು ಉದ್ದೇಶಪೂರ್ವಕವಾಗಿ ಈ ವೀಡಿಯೊವನ್ನು ತಯಾರಿಸಲಾಗಿದೆ. ಈ ನಾಟಕೀಯ ವೀಡಿಯೊ ಹುಡುಗರನ್ನು ಮುಸ್ಲಿಮರಂತೆ ಚಿತ್ರಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ:Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...