Homeಮುಖಪುಟಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದಿದ್ದಾರೆ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಅನ್ನದಾತರ ನೆರವಿಗೆ ನಿಂತಿವೆ. ಅವರಿಗೆ ಅವಶ್ಯಕವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಕಂಕಣ ತೊಟ್ಟು ಈ ಸಂಸ್ಥೆಗಳು ಕಳೆದ 50 ದಿನಗಳಿಂದಲೂ ಇಲ್ಲೇ ಠಿಕಾಣಿ ಹೂಡಿವೆ. ಇವುಗಳ ಮಧ್ಯೆ ಸಣ್ಣ-ಸಣ್ಣ ಅಂಗಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸಾಮಾನ್ಯ ಜನ ಕೂಡ ರೈತರ ಸೇವೆಗೆ ಆಗಮಿಸಿದ್ದಾರೆ. ಅವರಲ್ಲಿ ಪಂಜಾಬ್‌ನ ದಲವೀರ್‌ ಸಿಂಗ್‌ ಕೂಡ ಒಬ್ಬರು.

ಪಂಜಾಬ್‌ನ ಬರ್ನಾಲ್‌ ಎಂಬಲ್ಲಿ ಬಟ್ಟೆ ಹೊಲಿಗೆ ಅಂಗಡಿ ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲವೀರ್‌ ಸಿಂಗ್‌, ದುಬೈನಲ್ಲಿ ಕೆಲಸ ಮಾಡಲು ವೀಸಾಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬಿನಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ವೀಸಾ ದೊರೆತಿತ್ತು. ವೀಸಾ ಪಡೆದು ಇನ್ನೇನು ದುಬೈಗೆ ಹಾರಲು ಹೊರಟಿದ್ದ ಇವರಿಗೆ, ರೈತರು ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ದೆಹಲಿಗೆ ಬಂದು ಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆ ಆರಂಭಿಸಿದ್ದು ತಿಳಿಯಿತು. ನಂತರ ಸಿಂಘು ಗಡಿಯಲ್ಲಿ ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ಇವರು, ಮತ್ತೆ ತಮ್ಮ ಹಳೆ ಕೆಲಸವನ್ನು ಸೇವೆ ರೀತಿಯಲ್ಲಿ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

“ವೀಸಾ ದೊರೆತಿದೆ. ಯುಎಇಗೆ ಹೊರಡಬೇಕು. ಅಲ್ಲಿ ಒಳ್ಳೆಯ ಕೆಲಸ ಸಿಕ್ಕಿದೆ. ಆದರೆ ನಮ್ಮ ದೇಶ ರೈತರು ಸಂಕಷ್ಟದಲ್ಲಿ ಇರುವಾಗ ನಾನು ವಿದೇಶಕ್ಕೆ ಹೋಗುವುದು ಸರಿ ಕಾಣಲಿಲ್ಲ. ಮೊದಲು ನಮ್ಮವರ ಸಂಕಷ್ಟಕ್ಕೆ ನಾವಾಗಬೇಕು. ಅದಕ್ಕೆ ನಾನು ಇಲ್ಲಿ ಬಂದು ನನ್ನ ಹಳೆ ಕೆಲಸವನ್ನು ಸೇವೆ ರೀತಿಯಾಗಿ ಮಾಡುತ್ತಿದೇನೆ” ಎಂದಿದ್ದಾರೆ.

“ಜನವರಿ 26 ರಂದು ಬೃಹತ್‌ ಟ್ರ್ಯಾಕ್ಟರ್‌ ರ್ಯಾಲಿ ಆಯೋಜಿಸಿದ್ದೇವೆ. ಅಂದು ರೈತರ ಪರವಾಗಿ ನಿರ್ಣಯ ಆಗಲಿದೆ. ನಾವು ಅಂದು ಈ ಹೋರಾಟದಲ್ಲಿ ವಿಜಯ ಸಾಧಿಸಿ ಪಂಜಾಬ್‌ಗೆ ವಾಪಸ್‌ ತೆರಳುತ್ತೇವೆ. ಅಲ್ಲಿಂದ ನಾನು ದುಬೈಗೆ ಹೋಗಿ ಹೊಸ ಕೆಲಸಕ್ಕೆ ಸೇರುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇವರಂತೆಯೇ ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದು ಈ ದಂಪತಿ ತಿಳಿಸುತ್ತಾರೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...