Homeಮುಖಪುಟಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದಿದ್ದಾರೆ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಅನ್ನದಾತರ ನೆರವಿಗೆ ನಿಂತಿವೆ. ಅವರಿಗೆ ಅವಶ್ಯಕವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಕಂಕಣ ತೊಟ್ಟು ಈ ಸಂಸ್ಥೆಗಳು ಕಳೆದ 50 ದಿನಗಳಿಂದಲೂ ಇಲ್ಲೇ ಠಿಕಾಣಿ ಹೂಡಿವೆ. ಇವುಗಳ ಮಧ್ಯೆ ಸಣ್ಣ-ಸಣ್ಣ ಅಂಗಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸಾಮಾನ್ಯ ಜನ ಕೂಡ ರೈತರ ಸೇವೆಗೆ ಆಗಮಿಸಿದ್ದಾರೆ. ಅವರಲ್ಲಿ ಪಂಜಾಬ್‌ನ ದಲವೀರ್‌ ಸಿಂಗ್‌ ಕೂಡ ಒಬ್ಬರು.

ಪಂಜಾಬ್‌ನ ಬರ್ನಾಲ್‌ ಎಂಬಲ್ಲಿ ಬಟ್ಟೆ ಹೊಲಿಗೆ ಅಂಗಡಿ ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲವೀರ್‌ ಸಿಂಗ್‌, ದುಬೈನಲ್ಲಿ ಕೆಲಸ ಮಾಡಲು ವೀಸಾಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬಿನಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ವೀಸಾ ದೊರೆತಿತ್ತು. ವೀಸಾ ಪಡೆದು ಇನ್ನೇನು ದುಬೈಗೆ ಹಾರಲು ಹೊರಟಿದ್ದ ಇವರಿಗೆ, ರೈತರು ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ದೆಹಲಿಗೆ ಬಂದು ಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆ ಆರಂಭಿಸಿದ್ದು ತಿಳಿಯಿತು. ನಂತರ ಸಿಂಘು ಗಡಿಯಲ್ಲಿ ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ಇವರು, ಮತ್ತೆ ತಮ್ಮ ಹಳೆ ಕೆಲಸವನ್ನು ಸೇವೆ ರೀತಿಯಲ್ಲಿ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

“ವೀಸಾ ದೊರೆತಿದೆ. ಯುಎಇಗೆ ಹೊರಡಬೇಕು. ಅಲ್ಲಿ ಒಳ್ಳೆಯ ಕೆಲಸ ಸಿಕ್ಕಿದೆ. ಆದರೆ ನಮ್ಮ ದೇಶ ರೈತರು ಸಂಕಷ್ಟದಲ್ಲಿ ಇರುವಾಗ ನಾನು ವಿದೇಶಕ್ಕೆ ಹೋಗುವುದು ಸರಿ ಕಾಣಲಿಲ್ಲ. ಮೊದಲು ನಮ್ಮವರ ಸಂಕಷ್ಟಕ್ಕೆ ನಾವಾಗಬೇಕು. ಅದಕ್ಕೆ ನಾನು ಇಲ್ಲಿ ಬಂದು ನನ್ನ ಹಳೆ ಕೆಲಸವನ್ನು ಸೇವೆ ರೀತಿಯಾಗಿ ಮಾಡುತ್ತಿದೇನೆ” ಎಂದಿದ್ದಾರೆ.

“ಜನವರಿ 26 ರಂದು ಬೃಹತ್‌ ಟ್ರ್ಯಾಕ್ಟರ್‌ ರ್ಯಾಲಿ ಆಯೋಜಿಸಿದ್ದೇವೆ. ಅಂದು ರೈತರ ಪರವಾಗಿ ನಿರ್ಣಯ ಆಗಲಿದೆ. ನಾವು ಅಂದು ಈ ಹೋರಾಟದಲ್ಲಿ ವಿಜಯ ಸಾಧಿಸಿ ಪಂಜಾಬ್‌ಗೆ ವಾಪಸ್‌ ತೆರಳುತ್ತೇವೆ. ಅಲ್ಲಿಂದ ನಾನು ದುಬೈಗೆ ಹೋಗಿ ಹೊಸ ಕೆಲಸಕ್ಕೆ ಸೇರುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇವರಂತೆಯೇ ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದು ಈ ದಂಪತಿ ತಿಳಿಸುತ್ತಾರೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...