Homeಮುಖಪುಟಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದಿದ್ದಾರೆ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಅನ್ನದಾತರ ನೆರವಿಗೆ ನಿಂತಿವೆ. ಅವರಿಗೆ ಅವಶ್ಯಕವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಕಂಕಣ ತೊಟ್ಟು ಈ ಸಂಸ್ಥೆಗಳು ಕಳೆದ 50 ದಿನಗಳಿಂದಲೂ ಇಲ್ಲೇ ಠಿಕಾಣಿ ಹೂಡಿವೆ. ಇವುಗಳ ಮಧ್ಯೆ ಸಣ್ಣ-ಸಣ್ಣ ಅಂಗಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸಾಮಾನ್ಯ ಜನ ಕೂಡ ರೈತರ ಸೇವೆಗೆ ಆಗಮಿಸಿದ್ದಾರೆ. ಅವರಲ್ಲಿ ಪಂಜಾಬ್‌ನ ದಲವೀರ್‌ ಸಿಂಗ್‌ ಕೂಡ ಒಬ್ಬರು.

ಪಂಜಾಬ್‌ನ ಬರ್ನಾಲ್‌ ಎಂಬಲ್ಲಿ ಬಟ್ಟೆ ಹೊಲಿಗೆ ಅಂಗಡಿ ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲವೀರ್‌ ಸಿಂಗ್‌, ದುಬೈನಲ್ಲಿ ಕೆಲಸ ಮಾಡಲು ವೀಸಾಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬಿನಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ವೀಸಾ ದೊರೆತಿತ್ತು. ವೀಸಾ ಪಡೆದು ಇನ್ನೇನು ದುಬೈಗೆ ಹಾರಲು ಹೊರಟಿದ್ದ ಇವರಿಗೆ, ರೈತರು ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ದೆಹಲಿಗೆ ಬಂದು ಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆ ಆರಂಭಿಸಿದ್ದು ತಿಳಿಯಿತು. ನಂತರ ಸಿಂಘು ಗಡಿಯಲ್ಲಿ ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ಇವರು, ಮತ್ತೆ ತಮ್ಮ ಹಳೆ ಕೆಲಸವನ್ನು ಸೇವೆ ರೀತಿಯಲ್ಲಿ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

“ವೀಸಾ ದೊರೆತಿದೆ. ಯುಎಇಗೆ ಹೊರಡಬೇಕು. ಅಲ್ಲಿ ಒಳ್ಳೆಯ ಕೆಲಸ ಸಿಕ್ಕಿದೆ. ಆದರೆ ನಮ್ಮ ದೇಶ ರೈತರು ಸಂಕಷ್ಟದಲ್ಲಿ ಇರುವಾಗ ನಾನು ವಿದೇಶಕ್ಕೆ ಹೋಗುವುದು ಸರಿ ಕಾಣಲಿಲ್ಲ. ಮೊದಲು ನಮ್ಮವರ ಸಂಕಷ್ಟಕ್ಕೆ ನಾವಾಗಬೇಕು. ಅದಕ್ಕೆ ನಾನು ಇಲ್ಲಿ ಬಂದು ನನ್ನ ಹಳೆ ಕೆಲಸವನ್ನು ಸೇವೆ ರೀತಿಯಾಗಿ ಮಾಡುತ್ತಿದೇನೆ” ಎಂದಿದ್ದಾರೆ.

“ಜನವರಿ 26 ರಂದು ಬೃಹತ್‌ ಟ್ರ್ಯಾಕ್ಟರ್‌ ರ್ಯಾಲಿ ಆಯೋಜಿಸಿದ್ದೇವೆ. ಅಂದು ರೈತರ ಪರವಾಗಿ ನಿರ್ಣಯ ಆಗಲಿದೆ. ನಾವು ಅಂದು ಈ ಹೋರಾಟದಲ್ಲಿ ವಿಜಯ ಸಾಧಿಸಿ ಪಂಜಾಬ್‌ಗೆ ವಾಪಸ್‌ ತೆರಳುತ್ತೇವೆ. ಅಲ್ಲಿಂದ ನಾನು ದುಬೈಗೆ ಹೋಗಿ ಹೊಸ ಕೆಲಸಕ್ಕೆ ಸೇರುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇವರಂತೆಯೇ ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದು ಈ ದಂಪತಿ ತಿಳಿಸುತ್ತಾರೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...