Homeಮುಖಪುಟಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದಿದ್ದಾರೆ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಅನ್ನದಾತರ ನೆರವಿಗೆ ನಿಂತಿವೆ. ಅವರಿಗೆ ಅವಶ್ಯಕವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಕಂಕಣ ತೊಟ್ಟು ಈ ಸಂಸ್ಥೆಗಳು ಕಳೆದ 50 ದಿನಗಳಿಂದಲೂ ಇಲ್ಲೇ ಠಿಕಾಣಿ ಹೂಡಿವೆ. ಇವುಗಳ ಮಧ್ಯೆ ಸಣ್ಣ-ಸಣ್ಣ ಅಂಗಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸಾಮಾನ್ಯ ಜನ ಕೂಡ ರೈತರ ಸೇವೆಗೆ ಆಗಮಿಸಿದ್ದಾರೆ. ಅವರಲ್ಲಿ ಪಂಜಾಬ್‌ನ ದಲವೀರ್‌ ಸಿಂಗ್‌ ಕೂಡ ಒಬ್ಬರು.

ಪಂಜಾಬ್‌ನ ಬರ್ನಾಲ್‌ ಎಂಬಲ್ಲಿ ಬಟ್ಟೆ ಹೊಲಿಗೆ ಅಂಗಡಿ ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲವೀರ್‌ ಸಿಂಗ್‌, ದುಬೈನಲ್ಲಿ ಕೆಲಸ ಮಾಡಲು ವೀಸಾಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬಿನಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ವೀಸಾ ದೊರೆತಿತ್ತು. ವೀಸಾ ಪಡೆದು ಇನ್ನೇನು ದುಬೈಗೆ ಹಾರಲು ಹೊರಟಿದ್ದ ಇವರಿಗೆ, ರೈತರು ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ದೆಹಲಿಗೆ ಬಂದು ಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆ ಆರಂಭಿಸಿದ್ದು ತಿಳಿಯಿತು. ನಂತರ ಸಿಂಘು ಗಡಿಯಲ್ಲಿ ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ಇವರು, ಮತ್ತೆ ತಮ್ಮ ಹಳೆ ಕೆಲಸವನ್ನು ಸೇವೆ ರೀತಿಯಲ್ಲಿ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

“ವೀಸಾ ದೊರೆತಿದೆ. ಯುಎಇಗೆ ಹೊರಡಬೇಕು. ಅಲ್ಲಿ ಒಳ್ಳೆಯ ಕೆಲಸ ಸಿಕ್ಕಿದೆ. ಆದರೆ ನಮ್ಮ ದೇಶ ರೈತರು ಸಂಕಷ್ಟದಲ್ಲಿ ಇರುವಾಗ ನಾನು ವಿದೇಶಕ್ಕೆ ಹೋಗುವುದು ಸರಿ ಕಾಣಲಿಲ್ಲ. ಮೊದಲು ನಮ್ಮವರ ಸಂಕಷ್ಟಕ್ಕೆ ನಾವಾಗಬೇಕು. ಅದಕ್ಕೆ ನಾನು ಇಲ್ಲಿ ಬಂದು ನನ್ನ ಹಳೆ ಕೆಲಸವನ್ನು ಸೇವೆ ರೀತಿಯಾಗಿ ಮಾಡುತ್ತಿದೇನೆ” ಎಂದಿದ್ದಾರೆ.

“ಜನವರಿ 26 ರಂದು ಬೃಹತ್‌ ಟ್ರ್ಯಾಕ್ಟರ್‌ ರ್ಯಾಲಿ ಆಯೋಜಿಸಿದ್ದೇವೆ. ಅಂದು ರೈತರ ಪರವಾಗಿ ನಿರ್ಣಯ ಆಗಲಿದೆ. ನಾವು ಅಂದು ಈ ಹೋರಾಟದಲ್ಲಿ ವಿಜಯ ಸಾಧಿಸಿ ಪಂಜಾಬ್‌ಗೆ ವಾಪಸ್‌ ತೆರಳುತ್ತೇವೆ. ಅಲ್ಲಿಂದ ನಾನು ದುಬೈಗೆ ಹೋಗಿ ಹೊಸ ಕೆಲಸಕ್ಕೆ ಸೇರುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇವರಂತೆಯೇ ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದು ಈ ದಂಪತಿ ತಿಳಿಸುತ್ತಾರೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...