Homeಮುಖಪುಟಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದಿದ್ದಾರೆ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಅನ್ನದಾತರ ನೆರವಿಗೆ ನಿಂತಿವೆ. ಅವರಿಗೆ ಅವಶ್ಯಕವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಕಂಕಣ ತೊಟ್ಟು ಈ ಸಂಸ್ಥೆಗಳು ಕಳೆದ 50 ದಿನಗಳಿಂದಲೂ ಇಲ್ಲೇ ಠಿಕಾಣಿ ಹೂಡಿವೆ. ಇವುಗಳ ಮಧ್ಯೆ ಸಣ್ಣ-ಸಣ್ಣ ಅಂಗಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸಾಮಾನ್ಯ ಜನ ಕೂಡ ರೈತರ ಸೇವೆಗೆ ಆಗಮಿಸಿದ್ದಾರೆ. ಅವರಲ್ಲಿ ಪಂಜಾಬ್‌ನ ದಲವೀರ್‌ ಸಿಂಗ್‌ ಕೂಡ ಒಬ್ಬರು.

ಪಂಜಾಬ್‌ನ ಬರ್ನಾಲ್‌ ಎಂಬಲ್ಲಿ ಬಟ್ಟೆ ಹೊಲಿಗೆ ಅಂಗಡಿ ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲವೀರ್‌ ಸಿಂಗ್‌, ದುಬೈನಲ್ಲಿ ಕೆಲಸ ಮಾಡಲು ವೀಸಾಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬಿನಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ವೀಸಾ ದೊರೆತಿತ್ತು. ವೀಸಾ ಪಡೆದು ಇನ್ನೇನು ದುಬೈಗೆ ಹಾರಲು ಹೊರಟಿದ್ದ ಇವರಿಗೆ, ರೈತರು ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ದೆಹಲಿಗೆ ಬಂದು ಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆ ಆರಂಭಿಸಿದ್ದು ತಿಳಿಯಿತು. ನಂತರ ಸಿಂಘು ಗಡಿಯಲ್ಲಿ ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ಇವರು, ಮತ್ತೆ ತಮ್ಮ ಹಳೆ ಕೆಲಸವನ್ನು ಸೇವೆ ರೀತಿಯಲ್ಲಿ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

“ವೀಸಾ ದೊರೆತಿದೆ. ಯುಎಇಗೆ ಹೊರಡಬೇಕು. ಅಲ್ಲಿ ಒಳ್ಳೆಯ ಕೆಲಸ ಸಿಕ್ಕಿದೆ. ಆದರೆ ನಮ್ಮ ದೇಶ ರೈತರು ಸಂಕಷ್ಟದಲ್ಲಿ ಇರುವಾಗ ನಾನು ವಿದೇಶಕ್ಕೆ ಹೋಗುವುದು ಸರಿ ಕಾಣಲಿಲ್ಲ. ಮೊದಲು ನಮ್ಮವರ ಸಂಕಷ್ಟಕ್ಕೆ ನಾವಾಗಬೇಕು. ಅದಕ್ಕೆ ನಾನು ಇಲ್ಲಿ ಬಂದು ನನ್ನ ಹಳೆ ಕೆಲಸವನ್ನು ಸೇವೆ ರೀತಿಯಾಗಿ ಮಾಡುತ್ತಿದೇನೆ” ಎಂದಿದ್ದಾರೆ.

“ಜನವರಿ 26 ರಂದು ಬೃಹತ್‌ ಟ್ರ್ಯಾಕ್ಟರ್‌ ರ್ಯಾಲಿ ಆಯೋಜಿಸಿದ್ದೇವೆ. ಅಂದು ರೈತರ ಪರವಾಗಿ ನಿರ್ಣಯ ಆಗಲಿದೆ. ನಾವು ಅಂದು ಈ ಹೋರಾಟದಲ್ಲಿ ವಿಜಯ ಸಾಧಿಸಿ ಪಂಜಾಬ್‌ಗೆ ವಾಪಸ್‌ ತೆರಳುತ್ತೇವೆ. ಅಲ್ಲಿಂದ ನಾನು ದುಬೈಗೆ ಹೋಗಿ ಹೊಸ ಕೆಲಸಕ್ಕೆ ಸೇರುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇವರಂತೆಯೇ ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದು ಈ ದಂಪತಿ ತಿಳಿಸುತ್ತಾರೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...