Homeಮುಖಪುಟಮತಾಂತರ ನಿಷೇಧ ಕಾನೂನಿನಲ್ಲಿ ಬಂಧಿಸಲ್ಪಟ್ಟಿದ್ದ ಯುವತಿ ಮರಳಿ ಗಂಡನ ಮನೆಗೆ

ಮತಾಂತರ ನಿಷೇಧ ಕಾನೂನಿನಲ್ಲಿ ಬಂಧಿಸಲ್ಪಟ್ಟಿದ್ದ ಯುವತಿ ಮರಳಿ ಗಂಡನ ಮನೆಗೆ

ತಾನು ಸ್ವಇಚ್ಛೆಯಿಂದ ರಶೀದ್ ಅಲಿಯನ್ನು ಮದುವೆಯಾಗಿದ್ದಾಗಿ ನ್ಯಾಯಾಲಯದಲ್ಲಿ ತಿಳಿಸಿರುವ ಮೂರು ತಿಂಗಳ ಗರ್ಭಿಣಿಯು ಆಗಿರುವ ಯುವತಿಗೆ ಅಗತ್ಯವಿರುವ ಭದ್ರತೆಯನ್ನು ನೀಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಮುಸ್ಲಿಂ ಯುವಕನನ್ನು ವಿವಾಹವಾಗಿದ್ದಕ್ಕೆ ವಿವಾಹ ಪೂರ್ವ ಮತಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಮೊರಾದಾಬಾದ್ ಜಿಲ್ಲೆಯ ಆಶ್ರಯ ಕೇಂದ್ರಕ್ಕೆ ಕಳುಹಿಸಲ್ಪಟ್ಟಿದ್ದ ಯುವತಿ ಇದೀಗ ತನ್ನ ಗಂಡನ ಕುಟುಂಬಕ್ಕೆ ಮರಳಿದ್ದಾರೆ. ವಿವಾಹ ಪೂರ್ವ ಮತಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಮುಸ್ಲಿಂ ಯುವಕನನ್ನು ಹಾಗೂ ಆತನ ಸಹೋದರನನ್ನು ಬಂಧಿಸಲಾಗಿತ್ತು.

ತಾನು 1998 ರಲ್ಲಿ ಜನಿಸಿದ್ದೇನೆ ಮತ್ತು ರಶೀದ್‌ನೊಂದಿಗೆ ಈ ವರ್ಷದ ಜುಲೈ 24 ರಂದು ಡೆಹ್ರಾಡೂನ್‌‌ನಲ್ಲಿ ನಿಕಾಹ್ ಆಗಿದ್ದೇನೆ. ತಾನು ಮತಾಂತರಗೊಂಡಿದ್ದು ರಶೀದ್‌ ಅಲಿಯ ಕುಟುಂಬದೊಂದಿಗೆ ತೆರಳುತ್ತೇನೆ ಎಂದು 22 ವರ್ಷದ ಪಿಂಕಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾಗಿ ಮೊರಾದಾಬಾದ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಮಿಶ್ರಾ ಹೇಳಿದ್ಧಾರೆ.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ತಾನು ಸ್ವಇಚ್ಛೆಯಿಂದ ರಶೀದ್ ಅಲಿಯನ್ನು ಮದುವೆಯಾಗಿದ್ದಾಗಿ ನ್ಯಾಯಾಲಯದಲ್ಲಿ ತಿಳಿಸಿರುವ ಮೂರು ತಿಂಗಳ ಗರ್ಭಿಣಿಯು ಆಗಿರುವ ಯುವತಿಗೆ ಅಗತ್ಯವಿರುವ ಭದ್ರತೆಯನ್ನು ನೀಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾಹ ಪೂರ್ವ ಮತಾಂತರ ನಿಷೇಧ ಕಾನೂನು ಜಾರಿಗೆ ಬರುವ ಮೊದಲೆ ತಾವು ಮದುವೆಯಾಗಿದ್ದೇವೆಂದು ದೃಢಪಡಿಸಿರುವ ದಂಪತಿಗಳ ಮದುವೆ ಪ್ರಮಾಣಪತ್ರವನ್ನು ನಾವು ಪರಿಶೀಲಿಸಲಿದ್ದೇವೆ ಎಂದು ಮೊರಾದಾಬಾದ್ ಪೊಲೀಸ್ ಅಧೀಕ್ಷಕರು ಹೇಳಿದ್ದಾರೆ.

22 ವರ್ಷದ ಹಿಂದೂ ಯುವತಿ ಜುಲೈನಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡಿದ್ದರು. ಈ ದಂಪತಿ ಡಿಸೆಂಬರ್ 5 ರಂದು ಮದುವೆಯನ್ನು ನೋಂದಾಯಿಸಲು ಹೋಗಿದ್ದಾಗ, ಬಜರಂಗದಳದ ಕಾರ್ಯಕರ್ತರು ಆಕೆಯ ಪತಿ ಮತ್ತು ಪತಿಯ ಸಹೋದರನನ್ನು ಪೊಲೀಸರಿಗೆ ಒಪ್ಪಿಸಿ ಈಕೆಯನ್ನು ಎಳೆದೊಯ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಇದನ್ನೂ ಓದಿ: ಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...