Homeಮುಖಪುಟಮತಾಂತರ ನಿಷೇಧ ಕಾನೂನಿನಲ್ಲಿ ಬಂಧಿಸಲ್ಪಟ್ಟಿದ್ದ ಯುವತಿ ಮರಳಿ ಗಂಡನ ಮನೆಗೆ

ಮತಾಂತರ ನಿಷೇಧ ಕಾನೂನಿನಲ್ಲಿ ಬಂಧಿಸಲ್ಪಟ್ಟಿದ್ದ ಯುವತಿ ಮರಳಿ ಗಂಡನ ಮನೆಗೆ

ತಾನು ಸ್ವಇಚ್ಛೆಯಿಂದ ರಶೀದ್ ಅಲಿಯನ್ನು ಮದುವೆಯಾಗಿದ್ದಾಗಿ ನ್ಯಾಯಾಲಯದಲ್ಲಿ ತಿಳಿಸಿರುವ ಮೂರು ತಿಂಗಳ ಗರ್ಭಿಣಿಯು ಆಗಿರುವ ಯುವತಿಗೆ ಅಗತ್ಯವಿರುವ ಭದ್ರತೆಯನ್ನು ನೀಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಮುಸ್ಲಿಂ ಯುವಕನನ್ನು ವಿವಾಹವಾಗಿದ್ದಕ್ಕೆ ವಿವಾಹ ಪೂರ್ವ ಮತಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಮೊರಾದಾಬಾದ್ ಜಿಲ್ಲೆಯ ಆಶ್ರಯ ಕೇಂದ್ರಕ್ಕೆ ಕಳುಹಿಸಲ್ಪಟ್ಟಿದ್ದ ಯುವತಿ ಇದೀಗ ತನ್ನ ಗಂಡನ ಕುಟುಂಬಕ್ಕೆ ಮರಳಿದ್ದಾರೆ. ವಿವಾಹ ಪೂರ್ವ ಮತಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಮುಸ್ಲಿಂ ಯುವಕನನ್ನು ಹಾಗೂ ಆತನ ಸಹೋದರನನ್ನು ಬಂಧಿಸಲಾಗಿತ್ತು.

ತಾನು 1998 ರಲ್ಲಿ ಜನಿಸಿದ್ದೇನೆ ಮತ್ತು ರಶೀದ್‌ನೊಂದಿಗೆ ಈ ವರ್ಷದ ಜುಲೈ 24 ರಂದು ಡೆಹ್ರಾಡೂನ್‌‌ನಲ್ಲಿ ನಿಕಾಹ್ ಆಗಿದ್ದೇನೆ. ತಾನು ಮತಾಂತರಗೊಂಡಿದ್ದು ರಶೀದ್‌ ಅಲಿಯ ಕುಟುಂಬದೊಂದಿಗೆ ತೆರಳುತ್ತೇನೆ ಎಂದು 22 ವರ್ಷದ ಪಿಂಕಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾಗಿ ಮೊರಾದಾಬಾದ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಮಿಶ್ರಾ ಹೇಳಿದ್ಧಾರೆ.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ತಾನು ಸ್ವಇಚ್ಛೆಯಿಂದ ರಶೀದ್ ಅಲಿಯನ್ನು ಮದುವೆಯಾಗಿದ್ದಾಗಿ ನ್ಯಾಯಾಲಯದಲ್ಲಿ ತಿಳಿಸಿರುವ ಮೂರು ತಿಂಗಳ ಗರ್ಭಿಣಿಯು ಆಗಿರುವ ಯುವತಿಗೆ ಅಗತ್ಯವಿರುವ ಭದ್ರತೆಯನ್ನು ನೀಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾಹ ಪೂರ್ವ ಮತಾಂತರ ನಿಷೇಧ ಕಾನೂನು ಜಾರಿಗೆ ಬರುವ ಮೊದಲೆ ತಾವು ಮದುವೆಯಾಗಿದ್ದೇವೆಂದು ದೃಢಪಡಿಸಿರುವ ದಂಪತಿಗಳ ಮದುವೆ ಪ್ರಮಾಣಪತ್ರವನ್ನು ನಾವು ಪರಿಶೀಲಿಸಲಿದ್ದೇವೆ ಎಂದು ಮೊರಾದಾಬಾದ್ ಪೊಲೀಸ್ ಅಧೀಕ್ಷಕರು ಹೇಳಿದ್ದಾರೆ.

22 ವರ್ಷದ ಹಿಂದೂ ಯುವತಿ ಜುಲೈನಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡಿದ್ದರು. ಈ ದಂಪತಿ ಡಿಸೆಂಬರ್ 5 ರಂದು ಮದುವೆಯನ್ನು ನೋಂದಾಯಿಸಲು ಹೋಗಿದ್ದಾಗ, ಬಜರಂಗದಳದ ಕಾರ್ಯಕರ್ತರು ಆಕೆಯ ಪತಿ ಮತ್ತು ಪತಿಯ ಸಹೋದರನನ್ನು ಪೊಲೀಸರಿಗೆ ಒಪ್ಪಿಸಿ ಈಕೆಯನ್ನು ಎಳೆದೊಯ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಇದನ್ನೂ ಓದಿ: ಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...